LATEST NEWS
ಈ ಶ್ರೀನಿವಾಸನ ವಿಗ್ರಹಕ್ಕೆ ಸೂರ್ಯನ ಕಿರಣಗಳು ಬೀಳುವ ಹಾಗಿಲ್ಲ..!
ಆಂಧ್ರಪ್ರದೇಶ: ತಿರುಪತಿ ತಿಮ್ಮಪ್ಪನಿಗೆ ಇರೋವಷ್ಟು ಭಕ್ತರು ಬಹುಶಃ ಯಾವ ದೇವರಿಗೂ ಇಲ್ಲ ಅಂತಾನೇ ಹೇಳಬಹುದು . ಇದೇ ಕಾರಣದಿಂದ ದೇಶದ ಅತ್ಯಂತ ಶ್ರೀಮಂತ ದೇವಸ್ಥಾನವಾಗಿ ಜಗತ್ಪ್ರಸಿದ್ದಿಯನ್ನು ಪಡೆದುಕೊಂಡಿದೆ. ಆದ್ರೆ ಈ ದೇವಸ್ಥಾನದಲ್ಲಿರೋ ಅದೊಂದು ರಹಸ್ಯ ಮಾತ್ರ ದೇವಸ್ಥಾನಕ್ಕೆ ಬೇಟಿ ನೀಡೋ ಬಹುತೇಕ ಭಕ್ತರಿಗೆ ಗೊತ್ತಿಲ್ಲ. ಸಾಮಾನ್ಯವಾಗಿ ಭಕ್ತರು ಕಾಣುವ ಶ್ರೀನಿವಾಸ ಮಂದಸ್ಮಿತನಾಗಿದ್ದರೆ, ಗರ್ಭಗುಡಿಯಲ್ಲಿರೋ ಶ್ರೀನಿವಾಸ ಕೋಪಿಷ್ಠನಾಗಿದ್ದು, ಹುಬ್ಬುಗಳನ್ನು ಗಂಟು ಹಾಕಿಕೊಂಡಿದ್ದಾನೆ. ವರ್ಷಕ್ಕೊಂದು ಬಾರಿ ಮಾತ್ರ ಹೊರ ಬರುವ ಈತನ ಮೇಲೆ ಸೂರ್ಯ ರಶ್ಮಿ ಬಿದ್ರೆ ಜಗತ್ತಿಗೆ ಅಪಾಯ ಇದೆ ಅಂತಾರೆ.
ತಿರುಪತಿ ದೇವಸ್ಥಾನದ ಗರ್ಭಗುಡಿಯಲ್ಲಿರುವ ಈ ಉತ್ಸವ ಮೂರ್ತಿಯನ್ನು ವರ್ಷಕ್ಕೊಂದು ಬಾರಿ ಮಾತ್ರ ಆಚೆ ತರಲಾಗುತ್ತದೆ. ಸೂರ್ಯೋದಯಕ್ಕೂ ಮೊದಲೇ ಆಚೆ ತಂದು ಹಲವು ದೃವ್ಯಗಳಿಂದ ಶುದ್ದೀಕರಣ ಮಾಡಲಾಗುತ್ತದೆ. ಹಾಲು ಮೊಸರು ತುಪ್ಪ ಅರಶಿನ ಮೊದಲಾದವುಗಳಿಂದ ದೇವರ ವಿಗ್ರಹವನ್ನು ಶುದ್ಧೀಕರಣ ಮಾಡಲಾಗುತ್ತದೆ. ಕೈಕಿಷ ದ್ವಾದಶಿ ದಿನದಂದು ಈ ಪ್ರಕ್ರಿಯೆ ನಡೆಯುವುದು ವಾಡಿಕೆಯಾಗಿದ್ದು, ಸೂರ್ಯನ ಕಿರಣ ಭೂಮಿಯನ್ನು ತಲುಪುವ ಮೊದಲು ಎಲ್ಲಾ ವಿದಿವಿಧಾನಗಳು ಪೂರ್ಣಗೊಂಡು ಮೂರ್ತಿಗಳು ಮತ್ತೆ ಗರ್ಭಗುಡಿ ಸೇರುತ್ತದೆ. ವಿಶೇಷ ಅಂದ್ರೆ ಕೇವಲ ಶ್ರೀನಿವಾಸ ಮಾತ್ರವಲ್ಲದೆ ಆತನ ಅಕ್ಕಪಕ್ಕದಲ್ಲಿರುವ ಶ್ರೀದೇವಿ ಹಾಗೂ ಭೂ ದೇವಿಯ ಮುಖಭಾವ ಕೂಡಾ ಶ್ರೀನಿವಾಸನಂತೆ ಮುಖಭಾವದಂತೆ ಕೋಪದಲ್ಲಿದೆ.
ತಿರುಪತಿ ತಿಮ್ಮಪ್ಪನ ಗರ್ಭಗುಡಿಯಲ್ಲಿ ಇರುವ ಶ್ರೀನಿವಾಸನ ಈ ಉತ್ಸವ ಮೂರ್ತಿಯ ಹೆಸರು ವೆಂಟತುರೈವಾರ್. ತಿರುಪತಿಯಲ್ಲಿ ಭಕ್ತರು ಕಾಣವು ಶ್ರೀನಿವಾಸ ವಿಗ್ರಹ ಹೊರತು ಪಡಿಸಿದ್ರೆ ಇಲ್ಲಿರೋ ಅತ್ಯಂತ ಪುರಾತನ ವಿಗ್ರಹ ಇದಾಗಿದೆ. ಸರಿ ಸುಮಾರು 14 ನೇ ಶತಮಾನದ ವರೆಗೂ ಬ್ರಹ್ಮೋತ್ಸವದಲ್ಲಿ ಇದೇ ಮೂರ್ತಿಯನ್ನು ಹೊತ್ತೊಯ್ಯಲಾಗುತ್ತಿತ್ತು. ಆದ್ರೆ ಆ ಕಾಲದಲ್ಲಿ ನಡೆದಿದ್ದ ಒಂದು ಘಟನೆಯಿಂದ ಈ ವಿಗ್ರಹವನ್ನು ಬ್ರಹ್ಮೋತ್ಸವದಲ್ಲಿ ತರುವುದನ್ನು ನಿಲ್ಲಿಸಲಾಯಿತು.
14 ನೇ ಶತಮಾನದಲ್ಲಿ ನಡೆದಿದ್ದ ಬ್ರಹ್ಮೋತ್ಸವದಲ್ಲಿ ಬೆಂಕಿ ಆಕಸ್ಮಿಕ ನಡೆದಿದ್ದು, ಹಲವಾರು ಮನೆಗಳು ಸುಟ್ಟು ಬಸ್ಮವಾಗಿತ್ತಂತೆ. ಈ ವೇಳೆ ಭಕ್ತನೊಬ್ಬನಿಗೆ ಅಶರೀರವಾಣಿಯೊಂದು ಕೇಳಿಸಿದ್ದು, ಅದು ಶ್ರೀನಿವಾಸ ದೇವರದ್ದೇ ಎನ್ನಲಾಗಿದೆ. ಆ ಅಶರೀರವಾಣಿಯಲ್ಲಿ ಕೋಪದಲ್ಲಿ ಉಗ್ರ ಸ್ವರೂಪಿಯಾಗಿ ಕಾಣಿಸುವ ಈ ಶ್ರೀನಿವಾಸ ವಿಗ್ರಹವನ್ನು ಬೆಳಕಿನ ಆಚೆಗೆ ತರದಂತೆ ಎಚ್ಚರಿಕೆ ನೀಡಲಾಗಿತ್ತಂತೆ. ಇನ್ನು ಮುಂದೆ ಸೂರ್ಯನ ಬೆಳಕು ಈ ವಿಗ್ರಹದ ಮೇಲೆ ಬಿದ್ದರೆ ಇಡೀ ಪ್ರಪಂಚಕ್ಕೆ ಬೆಂಕಿ ಹತ್ತಿಕೊಳ್ಳಬಹುದು ಎಂದು ಎಚ್ಚರಿಕೆ ನೀಡಲಾಗಿತ್ತಂತೆ. ಅಂದಿನಿಂದ ಈ ಉಗ್ರ ಸ್ವರೂಪಿ ಶ್ರೀನಿವಾಸನನ್ನು ಸೂರ್ಯನ ಬೆಳಕಿಗೆ ಆಚೆ ತರೋದು ನಿಲ್ಲಿಸಲಾಗಿದೆ. ವರ್ಷಕ್ಕೊಂದು ಬಾರಿ ಶುಚಿ ಮಾಡಲು ಹೊರತಂದ್ರೂ ಸೂರ್ಯೋದಯದ ಮೊದಲೇ ಶುಚಿಗೊಳಿಸಿ ಗರ್ಭಗುಡಿ ಸೇರಿಸಲಾಗುತ್ತದೆ.
FILM
ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ‘ಸ್ಯಾಂಡಲ್ ವುಡ್ ಸಲಗ’
ಬೈಂದೂರು : ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ರಾಜಕೀಯ ಮುಖಂಡರು, ನಟ ನಟಿಯರು ಭೇಟಿ ನೀಡುತ್ತಿರುತ್ತಾರೆ. ಇದೀಗ ದುನಿಯಾ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಶ್ರೀ ಮೂಕಾಂಬಿಕೆ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ತಮ್ಮ ಸ್ನೇಹಿತರೊಂದಿಗೆ ದುನಿಯಾ ವಿಜಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭ ಅವರ ಅಭಿಮಾನಿಗಳು ಅವರೊಂದಿಗೆ ಫೋಟೋ ತೆಗೆಸಿಕೊಂಡರು.
ಕಾಲ್ನಡಿಗೆಯಲ್ಲಿ ನಂಜನಗೂಡು ಕ್ಷೇತ್ರಕ್ಕೆ ಹೋಗಿದ್ದ ನಟ:
ದುನಿಯಾ ವಿಜಿ ಇತ್ತೀಚೆಗೆ ಬೆಂಗಳೂರಿನಿಂದ ಕಾಲ್ನಡಿಗೆಯಲ್ಲಿ ಹೊರಟು ನಂಜನಗೂಡಿನ ನಂಜುಂಡೇಶ್ವರ ದರ್ಶನ ಪಡೆದಿದ್ದರು. ಸತತ ಐದು ದಿನಗಳ ಕಾಲ ತಮ್ಮ ಸಂಗಡಿಗರ ಜೊತೆ ನಡೆದುಕೊಂಡೇ ನಂಜನಗೂಡು ತಲುಪಿದ್ದರು. ಹಗಲು ರಾತ್ರಿ ಲೆಕ್ಕಿಸದೇ ಪಾದಯಾತ್ರೆ ಮಾಡಿದ್ದರು.
ಸಿನಿಮಾಗಳಲ್ಲಿ ಬ್ಯುಸಿ :
ದುನಿಯಾ ವಿಜಯ್ ಸಾಲು ಸಾಲು ಸಿನಿಮಾಗಳಲ್ಲಿ ಬಿಝಿಯಾಗಿದ್ದಾರೆ. ನಟನೆಯ ಜೊತೆಗೆ ನಿರ್ದೇಶಕನ ಕ್ಯಾಪ್ ಕೂಡ ಅವರು ಹಾಕಿದ್ದಾರೆ.’ಸಲಗ’ ಚಿತ್ರದ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆದಿದ್ದ ಅವರು, ‘ಭೀಮ’ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ನಿಖಿಲ್ ಕುಮಾರ್ ಸಿನಿಮಾದಲ್ಲೂ ದುನಿಯಾ ವಿಜಯ್ ನಟಿಸುತ್ತಿದ್ದಾರೆ.
ಇದನ್ನೂ ಓದಿ : ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
ಚಿತ್ರರಂಗಕ್ಕೆ ವಿಜಿ ಮಗಳು ಎಂಟ್ರಿ :
ದುನಿಯಾ ವಿಜಯ್ ತಮ್ಮ ಮಗ ಸಾಮ್ರಾಟ್ ನನ್ನು ಈಗಾಗಲೇ ಭೀಮ ಚಿತ್ರದ ಮೂಲಕ ಪರಿಚಯಿಸುವ ತಯಾರಿಯಲ್ಲಿದ್ದಾರೆ. ಇದೀಗ ಮಗಳನ್ನೂ ಚಿತ್ರರಂಗಕ್ಕೆ ಕರೆತರುತ್ತಿದ್ದಾರೆ. ಕಾಟೇರ ಚಿತ್ರಕ್ಕೆ ಕಥೆ ಬರೆದಿದ್ದ ಜಡೇಶ್ ಹಂಪಿ ನಿರ್ದೇಶನದಲ್ಲಿ ಮೂಡಿ ಬರಲಿರುವ ಹೊಸ ಸಿನಿಮಾದಲ್ಲಿ ತಂದೆ – ಮಗಳು ಇಬ್ಬರೂ ಕಾಣಿಸಿಕೊಳ್ಳುತ್ತಿದ್ದಾರೆ.
‘ಜಾನಿ ಮೇರಾ ನಾಮ್ ಪ್ರೀತಿ ಮೇರಾ ಕಾಮ್’ ಚಿತ್ರದಲ್ಲಿ ಜೊತೆಯಾಗಿದ್ದ ದುನಿಯಾ ವಿಜಯ್ ಮತ್ತು ರಚಿತಾ ರಾಮ್ ಮತ್ತೆ ಈ ಚಿತ್ರದ ಮೂಲಕ ಒಂದಾಗುತ್ತಿದ್ದಾರೆ. ಇದರಲ್ಲಿ ವಿಜಿ ಮಗಳು ಮೋನಿಕಾ/ರಿತನ್ಯಾ ನಟಿಸುತ್ತಿದ್ದಾರೆ. ಇದು ದುನಿಯಾ ವಿಜಯ್ ಅವರ 29 ನೇ ಸಿನಿಮಾ.
DAKSHINA KANNADA
ವೈರಲ್ ವಿಡಿಯೋ: ಕಲ್ಲಂಗಡಿ ಚಿಕನ್ ಬಿರಿಯಾನಿ ತಿಂದಿದ್ದೀರಾ?
ಮಂಗಳೂರು(ವೈರಲ್ ವಿಡಿಯೋ): ಬಿರಿಯಾನಿ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಬಹುಜನರ ಬೇಡಿಕೆಯ ಖಾದ್ಯವಾದ ಬಿರಿಯಾನಿ ಹಲವು ಮಾದರಿಗಳಲ್ಲಿ ಸಿಗುತ್ತದೆ. ಚಿಕನ್ ಬಿರಿಯಾನಿ, ಮಟನ್ ಬಿರಿಯಾನಿ ತಿನ್ನಲು ಜನರಂತೂ ದೂರ ಸರಿಯುದೇ ಇಲ್ಲ. ಆದರೆ ಈಗ ಬಿರಿಯಾನಿ ಹೊಸ ಹೊಸ ಮಾದರಿಯಲ್ಲಿ ತುಂಬಾ ವೈರಟಿ ಆಗಿ ಸಿಗುತ್ತಾ ಇದೆ. ಬಾರ್ಬಿ ಬಿರಿಯಾನಿ ವೈರಲ್ ಆದ ಬಳಿಕ ಇದೀಗ ಇನ್ನೊಂದು ಹೊಸ ಬಿರಿಯಾನಿ ವೈರಲ್ ಆಗ್ತಾ ಇದೆ.
ಕಲ್ಲಂಗಡಿ ಚಿಕನ್ ಬಿರಿಯಾನಿ
ಹೌದು, ಈ ಬಿರಿಯಾನಿಯ ಹೆಸರು ಕಲ್ಲಂಗಡಿ ಚಿಕನ್ ಬಿರಿಯಾನಿ. ಇದು ವಿಚಿತ್ರವಾದರೂ ಸತ್ಯ. ಕಲ್ಲಂಗಡಿ ಹಾಕಿ ಮಾಡಿರುವ ಈ ಚಿಕನ್ ಬಿರಿಯಾನಿ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗ್ತಾ ಇದೆ. ಇನ್ಸ್ಟಾಗ್ರಾಮ್ನ villagefoodchannel_official ಪೇಜ್ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ಈ ವಿಚಿತ್ರ ಬಿರಿಯಾನಿ ವೈರಲ್ ಆಗಿದೆ.
ಕಲ್ಲಂಗಡಿ ಬಿಕನ್ ಬಿರಿಯಾನಿ ತಯಾರಿಸುವ ವಿಧಾನ
ಮೊದಲಿಗೆ ಇಬ್ಬರು ಕಲ್ಲಂಗಡಿ ಹಣ್ಣನ್ನು ತುಂಡು ಮಾಡುವ ಮೂಲಕ ವಿಡಿಯೋ ಆರಂಭವಾಗುತ್ತದೆ. ಬಳಿಕ ಹಣ್ಣಿನ ತುಂಡುಗಳನ್ನು ದೊಡ್ಡ ಪಾತ್ರೆಗೆ ಹಾಕಿ ಅದರಲ್ಲಿ ಗುದ್ದಿ ರಸವನ್ನು ತೆಗೆಯುತ್ತಾರೆ. ಬಳಿಕ ಮತ್ತೊಂದು ಪಾತ್ರೆಯಲ್ಲಿ ಚಿಕನ್ ಬಿರಿಯಾನಿ ತಯಾರಿಸಲು ಪ್ರಾರಂಭಿಸುತ್ತಾರೆ.
ದೊಡ್ಡ ಪಾತ್ರೆಯನ್ನು ಇಟ್ಟು ಅದಕ್ಕೆ ಎಣ್ಣೆ, ನೀರುಳ್ಳಿ, ಬೆಳ್ಳುಳ್ಳಿ, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಮಸಾಲೆಗಳು, ಗರಂ ಮಸಾಲೆ ಹಾಕಿ ಮಸಾಲೆ ತಯಾರಿಸುತ್ತಾರೆ. ಬಳಿಕ ಅದಕ್ಕೆ ಶುಚಿಗೊಳಿಸಿದ ಕೋಳಿ ತುಂಡುಗಳನ್ನು ಹಾಕಿ ಮಿಕ್ಸ್ ಮಾಡಿ ಬೇಯಿಸುತ್ತಾರೆ.
ಕೋಳಿ ಮಾಂಸ ಬೆಂದ ನಂತರ ಅದಕ್ಕೆ ಪ್ರಮುಖ ಅಂಶವಾದ ಕಲ್ಲಂಗಡಿ ಹಣ್ಣಿನ ರಸವನ್ನು ಸೇರಿಸುತ್ತಾರೆ. ನಂತರ ಅದಕ್ಕೆ ಬಾಸುಮತಿ ಅಕ್ಕಿ ಹಾಕಿ ಮತ್ತೆ ಬೇಯಿಸುತ್ತಾರೆ. ಸ್ವಲ್ಪ ಕೊತ್ತಂಬರಿ ಸೊಪ್ಪನ್ನು ಮೇಲಿಗೆ ಹಾಕಿ ಮುಚ್ಚಿಡುತ್ತಾರೆ. ಈ ರೀತಿ ಮಾಡಿದಾಗ ಕಲ್ಲಂಗಡಿ ಚಿಕನ್ ಬಿರಿಯಾನಿ ತಯಾರಾಗುತ್ತದೆ.
ಈ ವಿಡಿಯೋ ಬಾರಿ ವೈರಲ್ ಆಗಿದ್ದು, ಇದುವರೆಗೆ ಆರು ಲಕ್ಷಕ್ಕೂ ಹೆಚ್ಚು ಮಂದಿ ವಿಡಿಯೋ ಲೈಕ್ ಮಾಡಿದ್ದಾರೆ. ಹಾಗೆಯೇ 21 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಕಲ್ಲಂಗಡಿ ಚಿಕನ್ ಬಿರಿಯಾನಿಯ ಈ ವಿಶಿಷ್ಟ ಸಂಯೋಜನೆಯನ್ನು ವೀಕ್ಷಿಸಿದ ಹಲವಾರು ಜನರು ತಮ್ಮ ಅಭಿಪ್ರಾಯಗಳನ್ನು ಕಮೆಂಟ್ ಮಾಡಿದ್ದಾರೆ.
Ancient Mangaluru
ಮಂಗಳೂರು ವಿಮಾನ ನಿಲ್ದಾಣವಿನ್ನು ನಿಶ್ಶಬ್ದ ವಲಯ!
ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಇನ್ನು ಮುಂದೆ ನಿಶ್ಶಬ್ದ ವಲಯವಾಗಿರಲಿದೆ. ಹೌದು, ಇನ್ನು ಮುಂದೆ ವಿಮಾನ ನಿಲ್ದಾಣದಲ್ಲಿ ಏರ್ಲೈನರ್ಗಳಿಂದ ಯಾವುದೇ ಪ್ರಯಾಣಿಕರ ಮಾಹಿತಿ ಕುರಿತ ಅನೌನ್ಸ್ ಮೆಂಟ್ ಇರುವುದಿಲ್ಲ. ಪ್ರಯಾಣಿಕರು ಫ್ಲೈಟ್ ಇನ್ಫಾರ್ಮೇಶನ್ ಡಿಸ್ಪ್ಲೇ ಸಿಸ್ಟಂ ಫಲಕಗಳನ್ನು ನೋಡಿ ಮಾಹಿತಿ ಪಡೆದುಕೊಳ್ಳ ಬೇಕಾಗಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.
ಸಹಾಯಕ್ಕಾಗಿ ಯಾರನ್ನು ಸಂಪರ್ಕಿಸಬೇಕು?
ವಿಮಾನ ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಕಿರಿಕಿರಿಯಾಗುವುದನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ಇನ್ನು ಮುಂದೆ ವಿಮಾನಗಳ ಹಾರಾಟದ ಮಾಹಿತಿಗಳು ಫ್ಲೈಟ್ ಇನ್ಫಾರ್ಮೇಶನ್ ಡಿಸ್ಪ್ಲೇ ಸಿಸ್ಟಂ ಫಲಕಗಳಲ್ಲಿ ಅನಾವರಣಗೊಳ್ಳಲಿದೆ. ವಿಮಾನ ನಿಲ್ದಾಣದ ಹಲವು ಕಡೆಗಳಲ್ಲಿ ಈ ಡಿಸ್ಪ್ಲೇಗಳನ್ನು ಇರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಇದಲ್ಲದೆ, ವಿಮಾನ ನಿಲ್ದಾಣದ ಟರ್ಮಿನಲ್ನಲ್ಲಿ ‘ಮೇ ಐ ಹೆಲ್ಪ್ ಯು’ ಡೆಸ್ಕ್ ನಿರ್ವಹಿಸುವ ಸಿಬಂದಿ, ಗ್ರಾಹಕ ಸೇವೆ ಮತ್ತು ಅತಿಥಿ ಸಂಬಂಧಗಳ ಕಾರ್ಯನಿರ್ವಾಹಕರು, ಪ್ರಣಾಮ್ ಸಿಬಂದಿ ಕೂಡಾ ಮಾಹಿತಿಯೊಂದಿಗೆ ಪ್ರಯಾಣಿಕರಿಗೆ ಸಹಾಯ ಮಾಡಲು ಸಿದ್ಧರಿರುತ್ತಾರೆ.
ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮ ಬೀರಲಿದೆ; ಸತ್ಯ ಒಪ್ಪಿಕೊಂಡ ಆಸ್ಟ್ರಾಜೆನಿಕಾ! ಏನಿದರ ಪರಿಣಾಮ?
ಎಸ್.ಎಂ.ಎಸ್ ಮೂಲಕ ಮಾಹಿತಿ :
ಎಲ್ಲಾ ಏರ್ಲೈನ್ ಚೆಕ್-ಇನ್ ಕೌಂಟರ್ಗಳು, ಬೋರ್ಡಿಂಗ್ ಗೇಟ್ಗಳಲ್ಲಿ ವಿಮಾನದ ಮಾಹಿತಿಯನ್ನು ವೀಕ್ಷಿಸ ಬಹುದು. ಬೋರ್ಡಿಂಗ್ ಗೇಟ್ ಬದಲಾವಣೆಗಳು/ ವಿಮಾನ ಮರು ವೇಳಾಪಟ್ಟಿ ವಿವರಗಳನ್ನು ಎಸ್.ಎಂ.ಎಸ್. ಮೂಲಕ ಪ್ರಯಾಣಿಕರ ನೋಂದಾಯಿತ ಇಮೇಲ್ ಮತ್ತು ಮೊಬೈಲ್ ಸಂಖ್ಯೆಯಲ್ಲೂ ಕೂಡಾ ಏರ್ಲೈನ್ ಹಂಚಿಕೊಳ್ಳಲಿದೆ ಎಂದು ವಿವರಿಸಿದ್ದಾರೆ.
- FILM6 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA6 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- LATEST NEWS6 days ago
ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ!
- DAKSHINA KANNADA5 days ago
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ