ದ.ಕ ದಲ್ಲಿ ಇಂದು ಕೊರೊನಾ ಮಹಾಸ್ಪೋಟ : ಇಂದು 311 ಪಾಸಿಟಿವ್ ..!?
ದ.ಕ ದಲ್ಲಿ ಇಂದು ಕೊರೊನಾ ಮಹಾಸ್ಪೋಟ : ಇಂದು 311 ಪಾಸಿಟಿವ್ ..!?
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡ ಕೊರೋನಾ ಮಹಾ ಸ್ಪೋಟವಾಗಿದೆ. ದ.ಕ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅತೀ ಹೆಚ್ಚು ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಮಂಗಳೂರಿನಲ್ಲಿ ಇಂದು 311 ಪಾಸಿಟಿವ್ ಪ್ರಕರಣ ದಾಖಲಾಗಿದೆ. ದಿನೇ ದಿನೇ ಕರಾವಳಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಪ್ರಾಥಮಿಕ ಸಂಪರ್ಕದಿಂದಲೇ ಹಲವರಲ್ಲಿ ಸೋಂಕು ಹರಡಿರುವುದು ಧೃಡಪಟ್ಟಿದೆ .
ಅತ್ತ ಕಡೆ ILE ಮತ್ತು SARI ಪ್ರಕರಣಗಳಲ್ಲೂ ಪಾಸಿಟಿವ್ ಹೆಚ್ಚಳವಾಗಿದೆ. ದ.ಕ ಜಿಲ್ಲೆಯಲ್ಲಿ ಒಬ್ಬರಿಂದ ಒಬ್ಬರಿಗೆ ಕೊರೊನಾ ಸೊಂಕು ವೇಗವಾಗಿ ಹರಡುತ್ತಿರುವುದು ಸಾಬೀತಾಗಿದೆ.
ಪ್ರಮುಖವಾಗಿ ಸಾರ್ವಜನಿಕ ಸಾರಿಗೆಮತ್ತು ಮಾರುಕಟ್ಟೆ ಪ್ರದೇಶಗಳು ಕೊರೊನಾ ಸೋಂಕು ಹರಡುವುದಕ್ಕೆ ಕಾರಣವಾಗಿವೆ.
LATEST NEWS
ಹೆಣ್ಣು ಕೊಟ್ಟ ಅತ್ತೆ-ಮಾಮನನ್ನೇ ಕೊಂ*ದ ಪಾಪಿ ಅಳಿಯ
ಚಿತ್ರದುರ್ಗ: ಅಳಿಯನೇ ತನ್ನ ಅತ್ತೆ ಮಾವನನ್ನು ಕೊಚ್ಚಿ ಕೊ*ಲೆ ಮಾಡಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಬೊಮ್ಮಕ್ಕನ ಹಳ್ಳಿಯಲ್ಲಿ ನಡೆದಿದೆ.
ಅಳಿಯ ಮಂಜುನಾಥ ಕೊ*ಲೆ ಮಾಡಿದ ಆರೋಪಿ. ಹನುಮಂತಪ್ಪ ಹಾಗೂ ಆತನ ಪತ್ನಿ ತಿಪ್ಪಮ್ಮ ಕೊ*ಲೆಯಾದವರು. ಅವರದೇ ಜಮೀನಿನಲ್ಲಿ ಹ*ತ್ಯೆ ಮಾಡಲಾಗಿದೆ. ಹನುಮಂತಪ್ಪ ಹಾಗೂ ಪತ್ನಿ ತಿಪ್ಪಮ್ಮ ಜಮೀನಿಗೆ ತೆರಳಿದ್ದರು. ಜಮೀನಿನಲ್ಲಿನ ಈರುಳ್ಳಿ ಬೆಳೆಗೆ ನೀರು ಹಾಯಿಸಲು ಹೋಗಿದ್ದಾಗ ಹ*ತ್ಯೆ ಮಾಡಲಾಗಿದೆ.
ಒಂದು ವರ್ಷದ ಹಿಂದೆ ಪುತ್ರಿ ಹರ್ಷಿತಾಳನ್ನು ಅದೇ ಗ್ರಾಮದ ತಮ್ಮ ಸಂಬಂಧಿ ಮಂಜುನಾಥ್ ಎಂಬಾತನಿಗೆ ಕೊಟ್ಟು ವಿವಾಹ ಮಾಡಿದ್ದರು. ಪಿಯುಸಿ ವ್ಯಾಸಂಗ ಮಾಡಿದ ಹರ್ಷಿತಾ ಓದಿನ ಕಡೆಗೆ ಹೆಚ್ಚಿನ ಆಸಕ್ತಿ ಹೊಂದಿದ್ದರು. ಹಾಗಾಗಿ ಹೊಲ ಮನೆ ಕೆಲಸದ ಬಗ್ಗೆ ಗಮನ ನೀಡುತ್ತಿರಲಿಲ್ಲ ಎಂದು ಪತಿ ಮಂಜುನಾಥ್ ಆಗಾಗ ಜಗಳ ಮಾಡುತ್ತಿದ್ದ.
ಇದೇ ವಿಚಾರವಾಗಿ ಮಂಜುನಾಥ್ ತನ್ನ ಪತ್ನಿ ಹರ್ಷಿತಾಗೆ ಪದೇ ಪದೇ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಬೇಸತ್ತ ದಂಪತಿ ತಮ್ಮ ಪುತ್ರಿ ಹರ್ಷಿತಾಳನ್ನು ತವರು ಮನೆಗೆ ಕರೆತಂದಿದ್ದರು. ಇದರಿಂದ ಸಿಟ್ಟಿಗೆದ್ದ ಮಂಜುನಾಥ್ ಕೊ*ಲೆ ಮಾಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
LATEST NEWS
ದಸರಾ ಸಂಭ್ರಮ: ಅಕ್ಟೋಬರ್ 3 ರಿಂದ 20 ರವರೆಗೆ ಶಾಲೆಗಳಿಗೆ ರಜೆ
ಬೆಂಗಳೂರು: ದಸರಾ ಹಬ್ಬ ಹಿನ್ನೆಲೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದೆ.
ಅಕ್ಟೋಬರ್ 3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ದಸರಾ ರಜೆ ಸಿಗಲಿದೆ. ಅಕ್ಟೋಬರ್ 21 ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ನಡೆಯಲಿದೆ.
2024-2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ. ಈಗ ದಸರಾ ರಜೆ ಹಿನ್ನೆಲೆಯಲ್ಲಿ ಅಕ್ಟೋಬರ್ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ.
ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ.
LATEST NEWS
ದಸರಾ ಆನೆಗಳ ಕಾದಾಟ..! ಬೆಚ್ಚಿಬಿದ್ದ ಜನರು, ಅಧಿಕಾರಿಗಳು..!!
ಮೈಸೂರು/ಮಂಗಳೂರು: ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿರುವ ಗಜಪಡೆಯ ಆನೆಗಳು ಶುಕ್ರವಾರ(ಸೆ.20) ರಾತ್ರಿ ದಿಢೀರ್ ಕಾದಾಟಕ್ಕೆ ಇಳಿದಿದ್ದು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ದಸರಾ ಹಬ್ಬದ ಪ್ರಯುಕ್ತ ಆನೆಗಳಿಗೆ ತಾಲೀಮು ನಡೆಸಲಾಗುತ್ತಿದೆ. ಮಳೆಯಿರುವ ಕಾರಣ ಅರಮನೆ ಮೈದಾನದಲ್ಲೇ ಆನೆಗಳಿಗೆ ತಾಲೀಮನ್ನು ಕೈಗೊಳ್ಳಲಾಗಿತ್ತು. ನಿನ್ನೆ ರಾತ್ರಿ 8 ಗಂಟೆಯ ಸುಮಾರಿಗೆ ಧನುಂಜಯ್ ಹಾಗೂ ಕಂಜನ್ ಆನೆಗಳ ಮಧ್ಯೆ ಗುದ್ದಾಟ ಆಋಂಭವಾಗಿದೆ. ಊಟದ ಸಮಯದಲ್ಲಿ ಈ ಜಗಳ ಶುರುವಾಗಿದ್ದು ಧನುಂಜಯ್ ಆನೆ ಕಂಜನ್ನನ್ನು ಅರಮನೆಯಿಂದ ಹೊರಗೆ ಓಡಿಸಿಕೊಂಡು ಬಂದಿದೆ. ಈ ವೇಳೆ ಕಜನ್ ತನನ್ ಮಾವುತನನನ್ಉ ಕೆಳಗೆ ಬೀಳಿಸಿದೆ. ಧನುಂಜಯ್ ಆನೆ ಕಂಜನ್ನನ್ನು ಓಡಿಸಿಕೊಂಡು ಹೋಗಿದ್ದು ಜಯಮಾರ್ತಾಂಡ ದ್ವಾರದಿಂದ ಹೊರಗೆ ಬಂದಿದೆ. ಇದರಿಂದ ಕೆಲಕಾಲ ಜನ, ಮಾವುತರು, ಅಧಿಕಾರಿಗಳಲ್ಲಿ ಆತಂಕ ಸೃಷ್ಟಿಯಾಯಿತು. ಆನೆಗಳು ದೊಡ್ಡಕೆರೆ ಮೈದಾನ ಬಳಿ ಬ್ಯಾರಿಕೇಡ್ ತಳ್ಳಿಕೊಂಡು ರಸ್ತೆಗೆ ಪ್ರವೇಶಿಸುತ್ತಿದ್ದಂತೆ ಜನರು ಭಯದಿಂದ ದಿಕ್ಕಾಪಾಲಾಗಿ ಓಡಿಹೋದರು.
ಸಾಹಿತಿ ಹಂಪ ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ : ಸಿಎಂ ಸಿದ್ಧರಾಮಯ್ಯ
ದೊಡ್ಡಕೆರೆ ಮೈದಾನದ ಬೆಂಗಳೂರು- ನೀಲಗಿರಿ ರಸ್ತೆಯಲ್ಲಿನ ವಾಹನಗಳನ್ನು ನೋಡುತ್ತಿದ್ದಂತೆ ಕಂಜನ್ ಬೆದರಿ ನಿಂತಿತು. ಮಾವುತರು ಕಾವಾಡಿಗರು ಸಮಾಧಾನ ಪಡಿಸಿದರು. ಯಾವುದೇ ಅನಾಹುತ ಸಂಭವಿಸಿಲ್ಲ. ಕಾವಾಡಿಗಳ ಚಾಣಾಕ್ಷತದಿಂದ ಆನೆಗಳ ಆಟೋಟಕ್ಕೆ ಬ್ರೇಕ್ ಬಿದ್ದಿದೆ. ಬಳಿಕ ಅರಮನೆಗೆ ಆನೆಗಳನ್ನು ಸಿಬ್ಬಂದಿ ಕರೆತಂದಿದ್ದಾರೆ. ಸದ್ಯ ಕೋಡಿಸೋಮೇಶ್ವರ ದೇವಸ್ಥಾನ ಸಮೀಪ ಇರುವ ಆನೆಗಳು ಬಿಡಾರ ಬಿಟ್ಟಿವೆ.