DAKSHINA KANNADA
ಟೋಲ್ ಕೇಳಿದ ಸಿಬ್ಬಂದಿ ಮೇಲೆ ಕಿಡಿಗೇಡಿಗಳಿಂದ ಹಲ್ಲೆ;ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ..!
ಟೋಲ್ ಕೇಳಿದ ಸಿಬ್ಬಂದಿ ಮೇಲೆ ಕಿಡಿಗೇಡಿಗಳಿಂದ ಹಲ್ಲೆ;ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ..!
ಮಂಗಳೂರು:ಟೋಲ್ ಸಿಬ್ಬಂದಿಯೋರ್ವ ಕಾರು ಚಾಲಕನಲ್ಲಿ ಟೋಲ್ ಕೇಳಿದ್ದಕ್ಕೆ ಕಾರಿನಲ್ಲಿದ್ದ ಏಳು ಎಂಟು ಮಂದಿ ಟೋಲ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಘಟನೆ ಸುರತ್ಕಲ್ ನ ಟೋಲ್ ಗೇಟ್ ನಲ್ಲಿ ರವಿವಾರ ರಾತ್ರಿ ನಡೆದಿದೆ.ಘಟನೆಯಲ್ಲಿ ಟೋಲ್ ಸಿಬ್ಬಂದಿಯ ಕೈ ಮೂಳೆ ಮುರಿತಕ್ಕೊಳಗಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ರವಿವಾರ ರಾತ್ರಿ ಟೋಲ್ ಗೇಟ್ ಗೆ ಬಿಳಿ ಬಣ್ಣದ ಕೆ.ಎ.47 ರಿಜಿಸ್ಟ್ರೇಷನ್ ನಂಬರಿನ ಸ್ವಿಫ್ಟ್ ಕಾರು ಬಂದಿದ್ದು ಈ ವೇಳೆ ಸಿಬ್ಬಂದಿ ಕಾರಿನ ಚಾಲಕನಲ್ಲಿ ಟೋಲ್ ಕೇಳಿದ್ದಾನೆ.
ಅಷ್ಟಕ್ಕೆ ಸಿಟ್ಟಾದ ಕಾರಿನಲ್ಲಿದ್ದ ಸುಮಾರು 7-8 ಮಂದಿ ಕಾರಿನಿಂದಿಳಿದು ಟೋಲ್ ಸಿಬ್ಬಂದಿಯ ಜೊತೆ ಜಗಳವಾಡಿದ್ದಾರೆ ಅಲ್ಲದೆ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ.
ಅಷ್ಟೇ ಅಲ್ಲದೆ ಟೋಲ್ ಕೇಂದ್ರದ ಒಳಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಅಷ್ಟ್ಹೊತ್ತಿಗಾಗಲೇ ಟೋಲ್ ಸಿಬ್ಬಂದಿ ಪೊಲೀಸರಿಗೆ ಕರೆ ಮಾಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸುವ ಮೊದಲೇ ಹಲ್ಲೆ ನಡೆಸಿದ ಕಿಡಿಗೇಡಿಗಳು ಸ್ಥಳದಿಂದ ಕಾರು ಸಮೇತ ಪರಾರಿಯಾಗಿದ್ದಾರೆ.
ಸದ್ಯ ಟೋಲ್ ಗೇಟ್ ನಲ್ಲಿ ಅಳವಡಿಸಿದ ಸಿಸಿ ಕ್ಯಾಮರಾದಲ್ಲಿ ಹಲ್ಲೆ ನಡೆಸಿದ ದೃಶ್ಯ ಸೆರೆಯಾಗಿದ್ದು ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Ancient Mangaluru
ಮಂಗಳೂರು ವಿಮಾನ ನಿಲ್ದಾಣವಿನ್ನು ನಿಶ್ಶಬ್ದ ವಲಯ!
ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಇನ್ನು ಮುಂದೆ ನಿಶ್ಶಬ್ದ ವಲಯವಾಗಿರಲಿದೆ. ಹೌದು, ಇನ್ನು ಮುಂದೆ ವಿಮಾನ ನಿಲ್ದಾಣದಲ್ಲಿ ಏರ್ಲೈನರ್ಗಳಿಂದ ಯಾವುದೇ ಪ್ರಯಾಣಿಕರ ಮಾಹಿತಿ ಕುರಿತ ಅನೌನ್ಸ್ ಮೆಂಟ್ ಇರುವುದಿಲ್ಲ. ಪ್ರಯಾಣಿಕರು ಫ್ಲೈಟ್ ಇನ್ಫಾರ್ಮೇಶನ್ ಡಿಸ್ಪ್ಲೇ ಸಿಸ್ಟಂ ಫಲಕಗಳನ್ನು ನೋಡಿ ಮಾಹಿತಿ ಪಡೆದುಕೊಳ್ಳ ಬೇಕಾಗಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.
ಸಹಾಯಕ್ಕಾಗಿ ಯಾರನ್ನು ಸಂಪರ್ಕಿಸಬೇಕು?
ವಿಮಾನ ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಕಿರಿಕಿರಿಯಾಗುವುದನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ಇನ್ನು ಮುಂದೆ ವಿಮಾನಗಳ ಹಾರಾಟದ ಮಾಹಿತಿಗಳು ಫ್ಲೈಟ್ ಇನ್ಫಾರ್ಮೇಶನ್ ಡಿಸ್ಪ್ಲೇ ಸಿಸ್ಟಂ ಫಲಕಗಳಲ್ಲಿ ಅನಾವರಣಗೊಳ್ಳಲಿದೆ. ವಿಮಾನ ನಿಲ್ದಾಣದ ಹಲವು ಕಡೆಗಳಲ್ಲಿ ಈ ಡಿಸ್ಪ್ಲೇಗಳನ್ನು ಇರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಇದಲ್ಲದೆ, ವಿಮಾನ ನಿಲ್ದಾಣದ ಟರ್ಮಿನಲ್ನಲ್ಲಿ ‘ಮೇ ಐ ಹೆಲ್ಪ್ ಯು’ ಡೆಸ್ಕ್ ನಿರ್ವಹಿಸುವ ಸಿಬಂದಿ, ಗ್ರಾಹಕ ಸೇವೆ ಮತ್ತು ಅತಿಥಿ ಸಂಬಂಧಗಳ ಕಾರ್ಯನಿರ್ವಾಹಕರು, ಪ್ರಣಾಮ್ ಸಿಬಂದಿ ಕೂಡಾ ಮಾಹಿತಿಯೊಂದಿಗೆ ಪ್ರಯಾಣಿಕರಿಗೆ ಸಹಾಯ ಮಾಡಲು ಸಿದ್ಧರಿರುತ್ತಾರೆ.
ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮ ಬೀರಲಿದೆ; ಸತ್ಯ ಒಪ್ಪಿಕೊಂಡ ಆಸ್ಟ್ರಾಜೆನಿಕಾ! ಏನಿದರ ಪರಿಣಾಮ?
ಎಸ್.ಎಂ.ಎಸ್ ಮೂಲಕ ಮಾಹಿತಿ :
ಎಲ್ಲಾ ಏರ್ಲೈನ್ ಚೆಕ್-ಇನ್ ಕೌಂಟರ್ಗಳು, ಬೋರ್ಡಿಂಗ್ ಗೇಟ್ಗಳಲ್ಲಿ ವಿಮಾನದ ಮಾಹಿತಿಯನ್ನು ವೀಕ್ಷಿಸ ಬಹುದು. ಬೋರ್ಡಿಂಗ್ ಗೇಟ್ ಬದಲಾವಣೆಗಳು/ ವಿಮಾನ ಮರು ವೇಳಾಪಟ್ಟಿ ವಿವರಗಳನ್ನು ಎಸ್.ಎಂ.ಎಸ್. ಮೂಲಕ ಪ್ರಯಾಣಿಕರ ನೋಂದಾಯಿತ ಇಮೇಲ್ ಮತ್ತು ಮೊಬೈಲ್ ಸಂಖ್ಯೆಯಲ್ಲೂ ಕೂಡಾ ಏರ್ಲೈನ್ ಹಂಚಿಕೊಳ್ಳಲಿದೆ ಎಂದು ವಿವರಿಸಿದ್ದಾರೆ.
DAKSHINA KANNADA
ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿ ಹೆಸರು ಉಲ್ಲೇಖಿಸಿದ್ದ ವರ..! ವರನ ಮೇಲೆ ದೂರು ದಾಖಲು..!
ಕಡಬ: ವ್ಯಕ್ತಿಯೊಬ್ಬರು ತಮ್ಮ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿಯ ಕುರಿತಾಗಿ ಉಲ್ಲೇಖಿಸಿದ್ದು ಇದೀಗ ಇಕ್ಕಟ್ಟಿಗೆ ಸಿಲುಕಿರುವ ಘಟನೆ ನಡೆದಿದೆ. ಕಡಬ ತಾಲೂಕಿನ ಆಲಂತಾಯ ನಿವಾಸಿ ಶಿವಪ್ರಸಾದ್ ಎಂಬವರು ತಮ್ಮ ಮದುವೆಯ ಆಮಂತ್ರನ ಪತ್ರಿಕೆಯಲ್ಲಿ ಪ್ರಧಾನಿ ಮೋದಿಯನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡುವುದು ನಮಗೆ ನೀವು ನೀಡುವ ಉಡುಗೊರೆ ಎಂದು ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉಲ್ಲೇಖಿಸಿದ್ದರು.
ಮುಂದೆ ಓದಿ..; ಮಕ್ಕಳ ಮುಂದೆಯೇ ದಾಂಪತ್ಯಕ್ಕೆ ಕಾಲಿಟ್ಟ ವೃದ್ದರು..!! ಅಚ್ಚರಿಯಾದ್ರು ಇದು ಸತ್ಯ..!!
ಮದುವೆ ನಡೆದ ಬಳಿಕ ವರನ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರನ್ನು ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಮಾರ್ಚ್1 ರಂದು ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಿ ಶಿವಪ್ರಸಾದ್ರವರು ಹಂಚಿದ್ದರು. ನೀತಿ ಸಂಹಿತಿ ಘೋಷಣೆಗೆ ಮೊದಲೇ ಈ ಆಮಂತ್ರಣ ಪತ್ರಿಕೆ ಮುದ್ರಣಗೊಂಡಿತ್ತಾದರೂ ಇದೀಗ ಚುನಾವಣಾ ಅಧಿಕಾರಿಗಳಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ಮೇ 3 ರಂದು ಗಬ್ಬರ್ ಸಿಂಗ್ ತುಳು ಸಿನಿಮಾ ತೆರೆಗೆ
ಮಂಗಳೂರು: ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಸತೀಶ್ ಬಾರ್ಕೂರು ನಿರ್ಮಾಣದ ಗಬ್ಬರ್ ಸಿಂಗ್ ತುಳು ಚಲನ ಚಿತ್ರ ಮೇ 3 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.
ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಗಬ್ಬರ್ ಸಿಂಗ್ ತುಳು ಸಿನಿಮಾ ಕಥೆಯನ್ನು ಹೆಣೆಯಲಾಗಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಈ ಚಿತ್ರವನ್ನುಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ನಾಯಕ ನಟನಾಗಿ ಶರಣ್ ಶೆಟ್ಟಿ ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಗಬ್ಬರ್ ಸಿಂಗ್ ಸಿನಿಮಾ ಈಗಾಗಲೇ ಮಸ್ಕತ್ ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.
“ಗಬ್ಬರ್ ಸಿಂಗ್” ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದೆ. ಈ ಸಿನಿಮಾದ ಕಥೆ, ಚಿತ್ರಕಥೆ, ನಿರ್ಮಾಪಕರು ಸತೀಶ್ ಪೂಜಾರಿ ಬಾರ್ಕೂರ್ , ನಿರ್ದೇಶನದ ಜವಾಬ್ದಾರಿಯನ್ನು ಪ್ರದೀಪ್ ವಹಿಸಿದ್ದಾರೆ. ಮಧು ಸುರತ್ಕಲ್ ಸಂಭಾಷಣೆ ರಚಿಸಿದ್ದಾರೆ.
ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಾಯಿಕೃಷ್ಣ, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್, ಉದಯ ಆಳ್ವ ಇಡ್ಯಾ, ಸಂದೀಪ್ ಭಕ್ತ, ಕಿರಣ್ ಮಲ್ಪೆ, ಪೂರ್ಣಿಮಾ ಶೆಟ್ಟಿ, ಪವಿತ್ರ ಶೆಟ್ಟಿ,ಚಂದ್ರಹಾಸ ಶೆಟ್ಟಿ ಮಾಣಿ, ಸಂಪತ್ ಲೋಬೋ, ಆಶಾ ಶೆಟ್ಟಿ ಶಿಬರೂರು, ಲಹರಿ ಶೆಟ್ಟಿ ಪಡ್ರೆ, ಶಿಲ್ಪಾ ಶೆಟ್ಟಿ, ಭವ್ಯಾ ಶೆಟ್ಟಿ ಸುರತ್ಕಲ್ ಸಂತೋಷ್, ಚಂದ್ರಹಾಸ ಶೆಟ್ಟಿ ಕಪ್ಪೆಟ್ಟು, ಫ್ರಾಂಕಿ ಕೊಳಲಗಿರಿ, ಉಮೇಶ್ ಶೆಟ್ಟಿ ಹಾವಂಜೆ, ಬೇಬಿ ಆಧ್ಯಾ ಉಡುಪಿ ಮೊದಲಾದವರಿದ್ದಾರೆ.
ಛಾಯಾಗ್ರಹಣ: ರವಿ ಸುವರ್ಣ, ಸಂಕಲನ: ಪ್ರಜ್ವಲ್ ಸುವರ್ಣ, ಕಲೆ: ವೆಂಕಟೇಶ್ ಬೆಂಗಳೂರು, ಸಂಗೀತ: ಡೊಲ್ಪಿನ್ ಕೊಳಲಗಿರಿ. ಹಿನ್ನಲೆ ಸಂಗೀತ: ಕಾರ್ತಿಕ್ ಮುಲ್ಕಿ, ಸಾಹಸ: ಅಲ್ಟಿಮೆಟ್ ಶಿವ್ ನೃತ್ಯ: ಅವಿನಾಶ್ ಬಂಗೇರ, ಶುಭಕಿರಣ್, ಮೇಕಪ್ ಪ್ರದೀಪ್, ವಸ್ತ್ರಾಲಂಕಾರ : ಶರತ್ ಬರ್ಕೆ, ಸಹ ನಿರ್ದೇಶನ: ಪುಷ್ಪರಾಜ ರೈ, ಜಯರಾಜ್, ಸಹಾಯ: ಭಾಗ್ಯರಾಜ್ ಮಾಡಿದ್ದಾರೆ.
ಪ್ರೀಮಿಯರ್ ಶೋ
ಈಗಾಗಲೇ ಮಸ್ಕತ್, ಕತಾರ್ ಉಡುಪಿ, ಸುರತ್ಕಲ್ ನಲ್ಲಿ ಗಬ್ನರ್ ಸಿಂಗ್ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಸಾಂಸಾರಿಕ ಕತೆಯ ಜೊತೆ ಇಲ್ಲಿ ಹಾಸ್ಯವೂ ಚೆನ್ನಾಗಿ ವಕ್೯ಹೌಟ್ ಆಗಿದೆ. ನವೀನ್ ಪಡೀಲ್, ಬೋಜರಾಜ್ ವಾಮಂಜೂರು, ಅರವಿಂದ ಬೋಳಾರ್, ಸಾಯಿಕೃಷ್ಣ, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು, ರವಿರಾಮ ಕುಂಜ ಇವರ ಹಾಸ್ಯ ಸಕ್ಕತ್ತಾಗಿದೆ. ಜೊತೆಗೆ ಗಿರೀಶ್ ಶೆಟ್ಟಿ ಕಟೀಲು, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್ ಮೊದಲಾದವರ ಪಾತ್ರಗಳೂ ಕೂಡಾ ಇಲ್ಲಿ ಪ್ರಾಮುಖ್ಯತೆಯನ್ನು ಪಡೆದಿದೆ ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು, ನಟ ಭೋಜರಾಜ ವಾಮಂಜೂರು, ಮಧು ಸುರತ್ಕಲ್, ಚಂದ್ರ ಶೇಖರ ನಾನಿಲ್ ಹಳೆಯಂಗಡಿ, ನಟ ಶರಣ್ ಶೆಟ್ಟಿ
ನಟಿ ವೆನ್ಸಿಟಾ ಇದ್ದರು.
- FILM6 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA6 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- DAKSHINA KANNADA5 days ago
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ
- LATEST NEWS6 days ago
ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ!