Connect with us

    DAKSHINA KANNADA

    ಟೋಲ್ ಗೇಟ್ ಕಿತ್ತೆಸೆಯಲು ನಾಳೆ ನಿರ್ಣಯಕ ಹೋರಾಟಕ್ಕೆ ಕರೆ : ಸುರತ್ಕಲ್ ಟೋಲ್ ಪ್ರದೇಶದಲ್ಲಿ ಪೊಲೀಸ್ ಸರ್ಪಗಾವಲು..!

    Published

    on

    ಮಂಗಳೂರು : ಹಲವು ವರ್ಷಗಳಿಂದ ಭಾರೀ ವಿವಾದ ಸೃಷ್ಟಿಸಿದ್ದ ಮಂಗಳೂರಿನ ಸುರತ್ಕಲ್ ಟೋಲ್ ಗೇಟ್ ಗಲಾಟೆ ನಾಳೆ( ಅ.18) ಮತ್ತಷ್ಟು ತಾರಕಕ್ಕೇರುವ ಸಾಧ್ಯತೆ ಇದ್ದು ಟೋಲ್ ಗೇಟ್ ಮುತ್ತಿಗೆಗೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿದೆ.

    ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಭಾರಿ ಪೊಲೀಸ್ ಬಂದೋಬಸ್ತನ್ನು ನಾಳೆ ಪ್ರತಿಭಟನೆ ನಡೆಯುವ ಸುರತ್ಕಲ್ ಪ್ರದೇಶದಲ್ಲಿ ನಿಯೋಜನೆ ಮಾಡಲಾಗಿದೆ.

    ಟೋಲ್ ವಿರೋಧಿ ಹೋರಾಟ ಸಮಿತಿ ಸುರತ್ಕಲ್ ಟೋಲ್ ಗೇಟ್ ಮುತ್ತಿಗೆಗೆ ಕರೆ ನೀಡಿದ್ದು, ಕಾಂಗ್ರೆಸ್, ಡಿವೈಎಫ್ಐ, ಸಿಪಿಐಎಂ ಹೀಗೆ ಹತ್ತಾರು ಸಂಘಟನೆಗಳು, ಸಮಾನ ಮನಸ್ಕ ಸಂಘಟನೆಗಳು ಈಗಾಗಲೇ ತಮ್ಮ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ.

    2015 ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟೋಲ್ ಗೇಟ್ ಆರಂಭಗೊಂಡಿತ್ತು.‌ ಆದರೆ ಹೈವೆಯಲ್ಲಿ 60 ಕಿಲೋಮೀಟರ್ ಅಂತರದಲ್ಲಿ ಟೋಲ್ ಇರಬೇಕಾದದ್ದು ಹೆದ್ದಾರಿ ಪ್ರಾಧಿಕಾರದ ನಿಯಮ. ಆದರೆ ಸುರತ್ಕಲ್ ಟೋಲ್ ಆ ನಿಯಮವನ್ನು ಮೀರಿದೆ ಎಂಬ ಆರೋಪ ಇದೆ.

    ಈಗಾಗಲೇ ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ‌ಭಾರೀ ಪ್ರಚಾರ ನಡೆಸಿರುವ ಟೋಲ್ ವಿರೋಧಿ ಸಮಿತಿ, ನಾಳೆ ಬೆ.10 ಗಂಟೆಗೆ ಸುರತ್ಕಲ್ ಟೋಲ್ ಗೇಟ್ ಗೆ ಮುತ್ತಿಗೆಗೆ ಸಿದ್ದತೆ ನಡೆಸಿದೆ.

    ಮುತ್ತಿಗೆ ವೇಳೆ ಪೊಲೀಸ್ ಇಲಾಖೆ ಮತ್ತು ಹೋರಾಟಗಾರರ ಜೊತೆ ಸಂಘರ್ಷ ನಡೆಯುವ ಸಾಧ್ಯತೆಗಳೂ ದಟ್ಟವಾಗಿವೆ. ಈಗಾಗಲೇ ಟೋಲ್ ಗೇಟ್ ವಿರೋಧಿ ಹೋರಾಟಗಾರರಿಗೆ ಪೊಲೀಸ್ ನೋಟೀಸ್ ಜಾರಿಯಾಗಿದೆ.

    ಸಂಚಾಲಕ ಮುನೀರ್ ಕಾಟಿಪಳ್ಳ, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಸೇರಿ 16 ಜನರಿಗೆ ‌ನೋಟೀಸ್ ನೀಡಿದ್ದು, ಅಹಿತಕರ ‌ಘಟನೆ ನಡೆದರೆ ಹೋರಾಟಗಾರರೇ ಜವಾಬ್ದಾರಿ ಅಂತ ಮುಚ್ಚಳಿಕೆ ಬರೆಸಲು ನೋಟೀಸ್ ಕೊಡಲಾಗಿದೆ, ಆದ್ರೂ ನಾಳಿನ ನಿರ್ಣಾಯಕ ಹೋರಾಟಕ್ಕೆ ಸಂಘಟನೆಗಳು ಮುಂದಾಗಿವೆ.

    ಈ ಮಧ್ಯೆ ಆಡಳಿತ ರೂಢ ಸಂಸದ ನಳಿನ್ ಕುಮಾರ್ ಕಟೀಲ್ ಶಾಂತಿಯುತ ಹೋರಾಟಕ್ಕೆ ‌ನನ್ನ ವಿರೋಧ ‌ಇಲ್ಲ. ಆದರೆ ಕಾನೂನು ಕೈಗೆತ್ತಿಕೊಂಡರೆ ಸರ್ಕಾರ ತನ್ನದೇ ಆದ ನಿಯಮದಡಿ‌ ಕ್ರಮ ಕೈಗೊಳ್ಳುತ್ತದೆ.

    ಹೆದ್ದಾರಿ ಪ್ರಾಧಿಕಾರ 20 ದಿನ ಸಮಯ ಕೇಳಿದೆ, ನಾವು ಸಮಯ ಕೊಡುವ. ನಾನು ಹೋರಾಟಗಾರರ ಜೊತೆ ಮಾತನಾಡಿದ್ರೆ ರಾಜಕೀಯ ಬರುತ್ತೆ. ಹಾಗಾಗಿ ಡಿಸಿ ಸೇರಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿ ಅವರ ಜೊತೆ ಮಾತನಾಡಿಸಿದ್ದೇನೆ.

    ಈಗ ಮತ್ತೆ ವಿನಂತಿ ‌ಮಾಡ್ತೇನೆ, 20 ದಿನಗಳ ಕಾಲಾವಕಾಶ ಕೊಡಿ. ಹೋರಾಟವನ್ನ ಶಾಂತಿಯುತವಾಗಿ ‌ಮಾಡಲು ನನ್ನ ಅಭ್ಯಂತರ ಇಲ್ಲ.‌

    ನಾನು ಟೋಲ್ ಗೇಟ್ ತೆಗೆಯಲು ಕಠಿಬದ್ದನಾಗಿದ್ದೇನೆ, ತೆಗೆದೇ ತೆಗೆಸ್ತೀನಿ.‌

    ಕೆಲ ತಾಂತ್ರಿಕ ಸಮಸ್ಯೆಗಳಿಂದ ಟೋಲ್ ಗೇಟ್ ತೆರವು ವಿಳಂಬವಾಗಿದೆ. ಹೀಗಾಗಿ 20 ದಿನಗಳ ಕಾಲ ಹೋರಾಟ ಮುಂದೂಡಿ ಅಂತ ವಿನಂತಿ ಮಾಡ್ತೇನೆ ಎಂದಿದ್ದಾರೆ.

    ಆದರೆ ಇದಕ್ಕೆ ಪ್ರತಿಕ್ರೀಯಿಸಿರುವ ಹೋರಾಟ ಸಮಿತಿಯ ಮುನೀರ್ ಕಾಟಿಪಳ್ಳ ನಾಳೆ ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ಪ್ರತಿಭಟನೆಯನ್ನು ಪೊಲೀಸರ ಮೂಲಕ ನಿರ್ದಯವಾಗಿ ಹತ್ತಿಕ್ಕುವ ಯತ್ನವನ್ನು ಬಿಜೆಪಿ ಸರಕಾರ ನಡೆಸುತ್ತಿದೆ.

    ಅದರ ಭಾಗವಾಗಿ ಹೋರಾಟ ಸಮಿತಿಯ 50 ಕ್ಕೂ ಹೆಚ್ಚು ಪ್ರಮುಖರ ಮೇಲೆ ಶಾಂತಿಭಂಗ ಕಾಯ್ದೆ ಅಡಿ ನೋಟೀಸು ಜಾರಿ ಮಾಡಲಾಗಿದೆ. ನೋಟೀಸು ನೀಡುವ ನೆಪದಲ್ಲಿ ಮಧ್ಯರಾತ್ರಿ ಮನೆಗಳಿಗೆ ಬಂದು ಮಾನಸಿಕವಾಗಿ ಹಿಂಸಿಸಲಾಗಿದೆ.

    ಆ ಮೂಲಕ ಟೋಲ್ ಗೇಟ್ ವಿರೋಧಿ ಹೋರಾಟವನ್ನು ಹತ್ತಿಕ್ಕುವ, ಟೋಲ್ ಗೇಟ್ ಸುಲಿಗೆಯನ್ನು ಶಾಶ್ವತಗೊಳಿಸುವ ಹುನ್ನಾರ ನಡೆಸಲಾಗಿದೆ.

    ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಬಿಜೆಪಿ ಸರಕಾರದ ಈ ಸರ್ವಾಧಿಕಾರಿ ಧೋರಣೆಯನ್ನು ಬಲವಾಗಿ ಖಂಡಿಸುತ್ತಿದ್ದು, ಪೊಲೀಸರು ಹೊರಡಿಸಿರುವ ನೋಟೀಸನ್ನು ತಿರಸ್ಕರಿಸಿ ಬಂಧನಕ್ಕೆ ಒಳಗಾಗಗಲು ಸಿದ್ದ.

    ನಾಳೆ ಹೋರಾಟವನ್ನು ಮತ್ತಷ್ಟು ಉತ್ಸಾಹದಿಂದ ಶಾಂತಿಯುತವಾಗಿ ನಡೆಸಲು ನಿರ್ಧರಿಸಿದೆ ಎಂದಿದ್ದಾರೆ. ಒಟ್ಟಿನಲ್ಲಿ ನಾಳೆಯ ಪ್ರತಿಭಟನೆ ಯಾವ ಹಂತಕ್ಕೆ ಮುಟ್ಟುತ್ತೆ ಕಾದು ನೋಡಬೇಕಿದೆ.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending