DAKSHINA KANNADA
ತುಳುನಾಡಿನಲ್ಲಿ ಪತ್ತನಾಜೆ ಆರಂಭ..! ಇನ್ನು ನಡೆಯುವುದಿಲ್ಲ ಶುಭಕಾರ್ಯ…!
ಮಂಗಳೂರು: ತುಳುನಾಡಿನ ಸಂಪ್ರದಾಯದ ಪ್ರಕಾರ ವೃಷಭ ಮಾಸದ ಹತ್ತನೇ ದಿನ ಪತ್ತನಾಜೆ ಮಹತ್ವದ ದಿನ. ಈ ವರ್ಷ ಮೇ 24 ರಂದು ಪತ್ತನಾಜೆ ಬರುತ್ತಿದ್ದು, ಅಂದಿನಿಂದ ಮಳೆಗಾಲ ಮುಗಿಯುವವರೆಗೆ ಯಾವುದೇ ಉತ್ಸವಗಳು ನಡೆಯುದಿಲ್ಲ. ಯಕ್ಷಗಾನ ಮೇಳಗಳ ಕಲಾವಿದರು ಪ್ರದರ್ಶನ ಮುಗಿಸಿ ಕಾಲಗೆಜ್ಜೆಯನ್ನು ವಿಧಿವತ್ತಾಗಿ ಬಿಚ್ಚುವುದು ಪತ್ತನಾಜೆಯಂದು.
ಸೀಮೆಯ ಪ್ರಧಾನ ದೇವಸ್ಥಾನಗಳ ಕೊಡಿಮರ ಇಳಿಸುವ ಕಾರ್ಯಕ್ರಮವೂ ಪತ್ತನಾಜೆಯ ದಿನವೇ ನಡೆಯುತ್ತದೆ. ಮಳೆಗಾಲದಲ್ಲಿ ಯಾವೂದೇ ಜಾತ್ರೆ, ಅಂಕ ಆಯನ, ಉತ್ಸವಾದಿಗಳನ್ನು ನಡೆಸಲು ಸಾಧ್ಯವಾಗದ ಕಾರಣ ಹಾಗೂ ಕೃಷಿ ಸಂಸ್ಕೃತಿ ಮೂಲವಾಗಿರುವ ತುಳುನಾಡಿನಲ್ಲಿ ಮಳೆಗಾಲ ಪ್ರಾರಂಭಕ್ಕೆ ಮುನ್ನ ಉತ್ಸವಾದಿಗಳನ್ನು ಪೂರೈಸಿ ಕೃಷಿ ಚಟುವಟಿಕೆಗಳಿಗೆ ತಯಾರಿ ಮಾಡಲು ಪತ್ತನಾಜೆ ದಿನವನ್ನು ಉತ್ಸವಗಳ ಕೊನೆಯ ದಿನವನ್ನಾಗಿ ಆಯ್ಕೆ ಮಾಡಲಾಗಿತ್ತು. ಆ ಸಂಪ್ರದಾಯ ಈಗಲೂ ಮುಂದುವರಿದಿದೆ.
ಯಕ್ಷಗಾನ ಮೇಳಗಳ ಒಡ್ಡೋಲಗಕ್ಕೆ ಮಂಗಳ
ಕರಾವಳಿ ಜಿಲ್ಲೆಗಳಲ್ಲಿ ಈ ವರ್ಷ ಸುಮಾರು 40 ಕ್ಕೂ ಅಧಿಕ ಮೇಳಗಳು ಈ ವರ್ಷ ತಿರುಗಾಟ ನಡೆಸಿವೆ. ಸಾವಿರಾರು ಕಲಾವಿದರು ಹಾಗೂ ಇತರರು ಇಲ್ಲಿ ತೊಡಗಿಸಿಕೊಂಡಿದ್ದಾರೆ. ಹೆಚ್ಚಿನ ಮೇಳಗಳು ಈಗಾಗಲೇ ತಮ್ಮ ತಿರುಗಾಟ ನಿಲ್ಲಿಸಿದ್ದರೆ, ಧರ್ಮಸ್ಥಳ, ಕಟೀಲು, ಸಾಲಿಗ್ರಾಮ, ಮಂದಾರ್ತಿ, ಪಾವಂಜೆ, ಹನುಮಗಿರಿ, ಮಾರಣಕಟ್ಟೆ, ಹಾಲಾಡಿ, ಬಪ್ಪನಾಡು ಸಹಿತ ವಿವಿಧ ಮೇಳಗಳ ಆಟ ಇಂದು-ನಾಳೆ ಮುಕ್ತಾಯವಾಗಲಿದೆ.
ಮಳೆಗಾಲದ ಸಂದರ್ಭ ಮೇಳ ತಿರುಗಾಟ ಇಲ್ಲದಿದ್ದರೂ ಕಲಾವಿದರ ಕೂಡುವಿಕೆಯೊಂದಿಗೆ ಯಕ್ಷಗಾನ ಪ್ರದರ್ಶನ ಕರಾವಳಿಯ ವಿವಿಧ ಕಡೆಗಳಲ್ಲಿ ನಡೆಯುತ್ತವೆ. ಚಿಕ್ಕ ಮೇಳದ ತಿರುಗಾಟ ಮನೆ ಮನೆ ವ್ಯಾಪ್ತಿಗೆ ಬರಲಿದೆ.
DAKSHINA KANNADA
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ..!
ಮಂಗಳೂರು: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರವಿವಾರ(ಜೂ.16) ಕಮ್ಮಾಜೆ-ಕಾಗುಡ್ಡೆ ಬಳಿ ನಡೆದಿದೆ.
Read More..; ವಿದ್ಯುತ್ ಶಾಕ್ ನಿಂದ 7ನೇ ತರಗತಿ ಬಾಲಕ ಸಾ*ವು
ಬಿಸಿರೋಡು-ಪೊಳಲಿ ಮಂಗಳೂರು ಸಂಚರಿಸುತ್ತಿದ್ದ ಖಾಸಗಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಿಂದ ಚಾಲಕ ಹಾಗೂ ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ರವಿವಾರವಾದ ಕಾರಣ ಬಸ್ಸಿನಲ್ಲಿ ಕೇವಲ ಇಬ್ಬರೇ ಪ್ರಯಾಣಿಕರಿದ್ದು, ಅವರಿಗೆ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ. ಬಸ್ ಬಿಸಿ ರೋಡಿನಿಂದ ಕೊಳತ್ತಮಜಲಿಗೆ ತೆರಳುವ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
DAKSHINA KANNADA
ವಿಟ್ಲ : ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ : 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತಿನ ಚುನಾವಣೆ
ವಿಟ್ಲ : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತಿನ ಚುನಾವಣೆ ನಡೆಯಿತು. ಈ ಚುನಾವಣೆಯ ಪೂರ್ವಭಾವಿಯಾಗಿ ಜೂನ್ 3 ರಂದು ಶಾಲಾ ಸಂಸತ್ತಿನ ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಯಿತು. ಜೂನ್ 6 ರಂದು ಶಾಲೆಯ ಚುನಾವಣಾ ಅಭ್ಯರ್ಥಿಗಳು ಶಾಲಾ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರಗಳನ್ನು ಸಲ್ಲಿಸಿದರು.
ಜೂನ್ 11 ರಿಂದ ಜೂನ್ 13 ರ ವರೆಗೆ ಅಭ್ಯರ್ಥಿಗಳು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ 5 ರಿಂದ 10ನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಕೆಲವು ಆಶ್ವಾಸನೆಗಳನ್ನು ನೀಡಿ ಮತ ಯಾಚಿಸಿದರು. ಜೂನ್ 15 ರಂದು ಡಿಜಿಟಲ್ ತಂತ್ರಜ್ಞಾನದ ಮುಖೇನ ನಡೆದ ಮತದಾನ ಪ್ರಕ್ರಿಯೆಯಲ್ಲಿ ಶಾಲಾ ವಿದ್ಯಾರ್ಥಿಗಳು ಅತೀ ಉತ್ಸಾಹದಿಂದ ಪಾಲ್ಗೊಂಡಿದ್ದರು.
ಚುನಾಯಿತರಾದವರು :
ಶಾಲಾ ಸಂಸತ್ತಿನ ಪ್ರಧಾನ ಮಂತ್ರಿಯಾಗಿ ಹತ್ತನೇ ತರಗತಿಯ ಸಾಕ್ಷಿ, ಗೃಹ ಮಂತ್ರಿಯಾಗಿ ಅಬೂಬಕರ್ ನವವಿ (10ನೇ ತರಗತಿ), ಸಂವಹನ ಮಂತ್ರಿಯಾಗಿ ಖತಿಜಾ ಇಫ್ಹಾ (10ನೇ ತರಗತಿ), ಕ್ರೀಡಾ ಮಂತ್ರಿಯಾಗಿ ಶುಭಂ ಶೆಟ್ಟಿ (10ನೇ ತರಗತಿ ), ಶಿಕ್ಷಣ ಮಂತ್ರಿಯಾಗಿ ನಿಧಿಶಾ (9ನೇ ತರಗತಿ), ಸಾಂಸ್ಕೃತಿಕ ಮಂತ್ರಿಯಾಗಿ ಪ್ರಗತಿ (9ನೇ ತರಗತಿ), ಆರೋಗ್ಯ ಮತ್ತು ಸ್ವಚ್ಛತಾ ಮಂತ್ರಿಯಾಗಿ ಲಿಖಿತ್ ಕುಮಾರ್ ಎಲ್ (9ನೇ ತರಗತಿ) ಹಾಗೂ ನೀರಾವರಿ ಮತ್ತು ವಿದ್ಯುತ್ ಮಂತ್ರಿಯಾಗಿ ದೀಪಿತ್ (8ನೇ ತರಗತಿ) ಚುನಾಯಿತರಾದರು.
ಸಹಾಯಕ ಮಂತ್ರಿಗಳಾಗಿ ಪ್ರಾಥಮಿಕ ವಿಭಾಗದಿಂದ ಯಶಸ್ವಿ ಟಿ ಎಮ್ (7ನೇ ತರಗತಿ), ದಿಯಾ ವೈ ಶೆಟ್ಟಿ (7ನೇ ತರಗತಿ), ಸನ್ನಿಧಿ ಎಲ್ ಎಸ್ (5ನೇ ತರಗತಿ), ಮುಹಮ್ಮದ್ ಫಹ್ಮಾನ್ (7ನೇ ತರಗತಿ), ಸಾತ್ವಿಕ್ ಕೆ (6ನೇ ತರಗತಿ), ಕೌಶಲ್ ಬಿ (5ನೇ ತರಗತಿ), ಸುಶಾನ್ (6ನೇ ತರಗತಿ) ಹಾಗೂ ಜಿ ಎಸ್ ರಿಷಿಕ್ ಅಂಚನ್ (5ನೇ ತರಗತಿ ಚುನಾಯಿತರಾದರು.
ಇದನ್ನೂ ಓದಿ : ಹಕ್ಕಿ ಜ್ವರ ಬಂದಿದೆ, ಮೊಟ್ಟೆ, ಕೋಳಿ ತಿನ್ನುವುದು ಸುರಕ್ಷಿತವೇ?
ಚುನಾವಣಾ ಫಲಿತಾಂಶ ಘೋಷಣೆಯ ನಂತರ ಬಾಲವಿಕಾಸ ಟ್ರಸ್ಟಿನ ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ ಹಾಗೂ ಸಂಸ್ಥೆಯ ಪ್ರಾಚಾರ್ಯರಾದ ರವೀಂದ್ರ ದರ್ಬೆ ವಿಜೇತ ಅಭ್ಯರ್ಥಿಗಳನ್ನು ಅಭಿನಂದಿಸಿದರು. ಈ ಚುನಾವಣಾ ಪ್ರಕ್ರಿಯೆಯಲ್ಲಿ ಶಿಕ್ಷಕಿಯರಾದ ಲೀಲಾ ಮುಖ್ಯ ಚುನಾವಣಾ ಅಧಿಕಾರಿಯಾಗಿ ಹಾಗೂ ಶೋಭಾ ಎಂ ಶೆಟ್ಟಿ ಉಪ ಚುನಾವಣಾ ಅಧಿಕಾರಿಯಾಗಿ ಜವಾಬ್ದಾರಿಯನ್ನು ನಿರ್ವಹಸಿದರು.
ಶಿಕ್ಷಕಿ ರಶ್ಮಿ ಕೆ ಫೆರ್ನಾಂಡೀಸ್ ಚುನಾವಣಾ ಫಲಿತಾ0ಶ ಘೋಷಿಸಿದರು. ಶಾಲಾ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗ ಸಹಕರಿಸಿದರು.
DAKSHINA KANNADA
ಏಕಕಾಲಕ್ಕೆ ಅರಳಿ ನಿಂತ 42 ಬ್ರಹ್ಮಕಮಲ ಪುಷ್ಪ; ಮಧ್ಯರಾತ್ರಿಯೇ ವಿಶೇಷ ಪೂಜೆ ಸಲ್ಲಿಕೆ!
ಉತ್ತರ ಕನ್ನಡ: ಶ್ರಾವಣದ ಸಂಜೆಗಳಲ್ಲಿ ಬ್ರಹ್ಮ ಕಮಲ ಅರಳುವುದು ವಾಡಿಕೆ. ಒಮ್ಮೊಮ್ಮೆ ಅದಕ್ಕೆ ವ್ಯತಿರಿಕ್ತವಾಗಿ ಬೇಗವೂ ಬ್ರಹ್ಮ ಕಮಲ ಅರಳುತ್ತದೆ. ಆದರೆ ಒಮ್ಮೆಲೆ ಪುಷ್ಪಗುಚ್ಛದಷ್ಟು ಅಂದವಾಗಿ ಒಂದೆಡೆಗೇ ಅರಳುವ ಬ್ರಹ್ಮಕಮಲದ ಸೊಬಗನ್ನು ನೋಡುವ ಅನುಭವವೇ ಬೇರೆ! ಬ್ರಹ್ಮಕಮಲವು ಅಧ್ಯಾತ್ಮಿಕ ಸ್ಥಾನವನ್ನು ಹಿಂದೂ ಹಾಗೂ ಜೈನ, ಬೌದ್ಧ ಧರ್ಮಗಳಲ್ಲಿ ಹೊಂದಿದೆ. ಹೀಗಾಗಿ ಬ್ರಹ್ಮಕಮಲ ಬರೀ ಹೂವಾಗದೇ ಈ ಹೂವೇ ಆರಾಧನೆಯ ವಸ್ತುವಾಗಿರುವುದು ವಿಶೇಷ!
ಏಕಕಾಲಕ್ಕೆ 42 ಹೂಗಳು!
ಯಲ್ಲಾಪುರ ಪಟ್ಟಣದ ರಾಮಾಪುರ ವ್ಯಾಪ್ತಿಯಲ್ಲಿ ವಾಸಿಸುವ ಗಣೇಶ್ ಪಂಡರಾಪುರ ಅವರ ಮನೆಯ ವಿಶೇಷವಾದ ಬ್ರಹ್ಮಕಮಲದ ಹೂವುಗಳು! ಯಾಕೆ ವಿಶೇಷ ಎಂದರೆ, ಹೋದ ವರ್ಷ ಇವರ ಮನೆಯಲ್ಲಿ ಸುಮಾರು 84 ಬ್ರಹ್ಮಕಮಲಗಳು ಒಟ್ಟಿಗೆ ಅರಳಿದ್ದವು. ಈ ವರ್ಷ 42 ಬ್ರಹ್ಮಕಮಲ ಏಕಕಾಲಕ್ಕೆ ಅರಳಿ ನಿಂತಿವೆ.
ಪುಷ್ಪಕ್ಕೆ ಪೂಜೆ!
ಮಧ್ಯರಾತ್ರಿ 12: 40 ರ ಸುಮಾರಿಗೆ ಈ ಹೂವುಗಳೆಲ್ಲಾ ಅರಳಿದ್ದವು ತಕ್ಷಣ ಗಣೇಶ್ ಪಂಡರಾಪುರ ಅವರ ಕುಟುಂಬ ವಾಡಿಕೆಯಂತೆ ಪೂಜೆ ಮಾಡಿ ನಂತರ ಮನೆಯವರಿಗೆ ಜನರಿಗೆ ಪ್ರಸಾದ ಹಂಚಿ ಹೂವುಗಳ ಮುಂದೆ ಭಕ್ತಿ ಭಾವದಿಂದ ಪ್ರಾರ್ಥನೆ ಸಲ್ಲಿಸಿದರು, ಬ್ರಹ್ಮಕಮಲ ಅರಳುವ ವೇಳೆ ಕೇಳಿದ ಕೋರಿಕೆಗಳು ಈಡೇರುತ್ತವೆ ಎಂಬುದು ಪ್ರಸಿದ್ಧ ಲೋಕಾರೂಢಿಯ ನಂಬಿಕೆ.
- LATEST NEWS6 days ago
ನಿವೇದಿತಾಗೆ ಡಿವೋರ್ಸ್ ಕೊಟ್ಟಿದ್ದು ಯಾಕಂದ್ರೆ.. ಕೊನೆಗೂ ಕಾರಣ ಹೇಳಲು ಮುಂದೆ ಬಂದ ಚಂದನ್!
- LATEST NEWS3 days ago
ಅಡುಗೆ ಮನೆಯಿಂದ ಹಲ್ಲಿಗಳನ್ನು ಓಡಿಸಲು ಈ ಟಿಪ್ಸ್ ಅನುಸರಿಸಿ
- LATEST NEWS4 days ago
ಅಡುಗೆಯಲ್ಲಿ ಉಪ್ಪು ಜಾಸ್ತಿ ಆಯ್ತಾ? ಯೋಚನೆ ಬೇಡ, ಈ ಟಿಪ್ಸ್ ಫಾಲೋ ಮಾಡಿ
- FILM3 days ago
ಡ್ರೋನ್ ಪ್ರತಾಪ್ ಹುಟ್ಟು ಹಬ್ಬಕ್ಕೆ ಸಿಕ್ತು ಬ್ಯೂಟಿಫುಲ್ ಗಿಫ್ಟ್