Connect with us

    LATEST NEWS

    25ಕ್ಕೂ ಅಧಿಕ ಪ್ರಯಾಣಿಕರಿದ್ದ ಸಾರಿಗೆ ಬಸ್ ಪಲ್ಟಿ..! ಚಾಲಕ ಸೇರಿದಂತೆ ಮೂವರು ಗಂಭೀ*ರ

    Published

    on

    ಮೈಸೂರು/ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದು ಚಾಲಕ ಸೇರಿ ಮೂವರು ಗಂಭೀ*ರ ಗಾಯಗೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.

    ನಂಜನಗೂಡು ತಾಲೂಕಿನ ಮರಡಿಹುಂಡಿ ಗ್ರಾಮದ ಬಳಿ ಚಾಲಕ ವೇಗವಾಗಿ ಬಂದು ತಿರುವು ಪಡೆದುಕೊಳ್ಳುತ್ತಿದ್ದಾಗ ಈ ದುರಂತ ನಡೆದಿದೆ. ಘಟನೆಯಿಂದ ಚಾಲಕ ಸೇರಿದಂತೆ ಮೂವರು ಗಂಭೀರ ಗಾಯಗೊಂಡಿದ್ದಾರೆ. 25 ಕ್ಕೂ ಹೆಚ್ಚು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಮೈಸೂರಿನ ಕೆಆರ್ ಆಸ್ಪತ್ರೆಗೆ  ದಾಖಲಿಸಲಾಗಿದೆ. ಸಾರಿಗೆ ಬಸ್ ಬಿಳುಗಲಿ ಗ್ರಾಮದಿಂದ ಎಸ್.ಹೊಸಕೋಟೆ ಮಾರ್ಗವಾಗಿ ಮೈಸೂರಿಗೆ ತೆರಳುವಾಗ ಈ ಅಪಘಾತ ಸಂಭವಿಸಿದೆ. ವರುಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಗುಟ್ಕಾ ತಿಂದು ಉಗುಳಲು ಲಾರಿಯಿಂದ ತಲೆ ಹೊರಗೆ ಹಾಕಿದವನ ತಲೆಯೇ ಇಲ್ಲ..!!

     ಪ

    Click to comment

    Leave a Reply

    Your email address will not be published. Required fields are marked *

    LATEST NEWS

    ಪ್ರತಿಭಟನೆ ವೇಳೆ ಮೆಣಸಿನಕಾಯಿ ಬೆಳೆಗಾರರಿಂದ ಆತ್ಮಹತ್ಯೆಗೆ ಯತ್ನ..!

    Published

    on

    ಬಳ್ಳಾರಿ:  ಕೆಂಪು ಮೆಣಸು ಖರೀದಿಸಿದ ಖಾಸಗಿ ಕಂಪೆನಿಯು ಒಂದೂವರೆ ವರ್ಷದಿಂದ ಹಣವನ್ನು ಪಾವತಿ ಮಾಡದೆ ಬಾಕಿ ಇರಿಸಿಕೊಂಡಿರುವ ಹಿನ್ನೆಲೆಯಲ್ಲಿ ನಾಲ್ವರು ಮೆಣಸಿನಕಾಯಿ ರೈತರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದಲ್ಲಿ ನಡೆದಿದೆ.

    ರುದ್ರೇಶ್ (55), ಹನುಮಂತ್ (40), ಶೇಖರ್ (45) ಮತ್ತು ಕುನೇಶ್ (50) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತರು. ಹಣ ಪಾವತಿ ಮಾಡಲು ವಿಳಂಬ ಮಾಡಿದ್ದನ್ನು ವಿರೋಧಿಸಿ ಇತರ ರೈತರೊಂದಿಗೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ವಿಷ ಸೇವಿಸಿದ್ದಾರೆ. ಅಸ್ವಸ್ಥರಾಗಿದ್ದ ಅವರನ್ನು ಕೂಡಲೇ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

    ಬಾವನಿಂದಲೇ ಬಾಮೈದನ ಹ*ತ್ಯೆ..! ಮಗನ ಅಗಲಿಕೆ ನೋವಿನಿಂದ ತಾಯಿ ಆತ್ಮಹ*ತ್ಯೆ..!!

    ಬೆಂಗಳೂರು ಮೂಲದ ಅಗ್ರಿಗ್ರೀಡ್ ಪ್ರೈವೇಟ್ ಲಿಮಿಟೆಡ್ 100 ರೈತರಿಂದ 1.9 ಕೋಟಿ ರೂಪಾಯಿ ಮೌಲ್ಯದ ಮೆಣಸಿನಕಾಯಿ ಖರೀದಿಸಿದೆ ಎಂದು ರೈತರು ತಿಳಿಸಿದ್ದಾರೆ. 54 ರೈತರ ಬಿಲ್ ಕ್ಲಿಯರ್ ಆಗಿದ್ದು, ಉಳಿದ 46 ರೈತರಿಗೆ ಇನ್ನೂ ಹಣ ಬಂದಿಲ್ಲ. ಬಿಲ್ ಬಾಕಿ ಉಳಿದಿರುವ ರೈತರಲ್ಲಿ ಒಬ್ಬರಾದ ಹನುಮಂತಪ್ಪ ವಡ್ಡರ ಮಾತನಾಡಿ, ‘ಕಂಪೆನಿಯಲ್ಲಿ ಜಿಲ್ಲೆಯ ಹೆಸರಾಂತ ವ್ಯಕ್ತಿಗಳು ಷೇರುದಾರರಾಗಿದ್ದಾರೆ. ಅವರನ್ನು ನಂಬಿ 220 ಟನ್ ಮೆಣಸಿನಕಾಯಿಯನ್ನು ಕಂಪೆನಿಗೆ ಮಾರಾಟ ಮಾಡಿದೆವು. ಸಾಮಾನ್ಯವಾಗಿ ಬ್ಯಾಡಗಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದು, ಖಾಸಗಿ ಕಂಪನಿಗೆ ನೀಡಿದ್ದು ಇದೇ ಮೊದಲು ಎಂದು ತಿಳಿಸಿದ್ದಾರೆ.

    ಬಳ್ಳಾರಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಆದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸುವಂತೆ ಮನವಿ ಮಾಡಿದ್ದಾರೆ. ಕಲ್ಯಾಣ-ಕರ್ನಾಟಕದಲ್ಲಿ ಕುರುಗೋಡು ತಾಲೂಕು ಮೆಣಸಿನಕಾಯಿ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿದೆ.

     

     

     

     

     

    Continue Reading

    LATEST NEWS

    ಜು.15ರಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ

    Published

    on

    ಬೆಂಗಳೂರು : ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನವನ್ನು ಜು.15ರಿಂದ 26ರವರೆಗೆ ಕರೆಯಲು ರಾಜ್ಯಪಾಲರಿಗೆ ರಾಜ್ಯ ಸರಕಾರ ಶಿಫಾರಸ್ಸು ಮಾಡಿದೆ.

    ಜೂ.20ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಅಧಿವೇಶನದ ದಿನಾಂಕ ಅಂತಿಮಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಧಿಕಾರ ನೀಡಲಾಗಿತ್ತು. ಅದರಂತೆ, ಮುಖ್ಯಮಂತ್ರಿ ಅಧಿವೇಶನದ ದಿನಾಂಕವನ್ನು ಅಂತಿಮಗೊಳಿಸಿದ್ದು, ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲಾಗಿದೆ.

    Continue Reading

    FILM

    ಕೊನೆಗೂ ಮೌನ ಮುರಿದ್ರಾ ಸುಮಲತಾ..! ವೈರಲ್ ಪೋಸ್ಟ್‌ನಲ್ಲಿ ಏನಿದೆ ಗೊತ್ತಾ?

    Published

    on

    ಬೆಂಗಳೂರು/ಮಂಗಳೂರು:  ನಟ ದರ್ಶನ್ ಜೈಲು ಸೇರಿದ ಮೇಲೆ ಸುಮಲತಾ ಅಂಬರೀಶ್ ಮೌನಕ್ಕೆ ಜಾರಿದ್ದರು. ಚಿತ್ರರಂಗದ ಕೆಲವು ಗಣ್ಯರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರೆ ಇನ್ನು ಕೆಲವರು ಮೌನಕ್ಕೆ ಜಾರಿದ್ದಾರೆ. ಅದರಲ್ಲೂ ದರ್ಶನ್ ಆಪ್ತರು ಎಣಿಸಿಕೊಂಡವರು, ದರ್ಶನ್‌ನಿಂದ ಸಹಾಯ ಪಡೆದುಕೊಂಡವರು ಈಗ ಬೆಂಬಲ ನೀಡುತ್ತಿಲ್ಲ ಎಂದು ಕೆಲವರು ಆರೋಪ ಮಾಡುತ್ತಿದ್ದಾರೆ.

    ದರ್ಶನ್ ನನ್ನ ದೊಡ್ಡ ಮಗ ಎಂದೇ ಕರೆಯುತ್ತಿದ್ದರು ಸುಮಲತಾ. ಇನ್ನು ದರ್ಶನ್ ಕೂಡಾ ಸುಮಲತಾರವರನ್ನು ಮದರ್ ಇಂಡಿಯಾ ಎಂದೇ ಹೇಳುತ್ತಿದ್ದರು. ಇಷ್ಟೆಲ್ಲಾ ಇರುವಾಗ ದರ್ಶನ್ ಕೊಲೆ ಕೇಸ್ ನಲ್ಲಿ ಜೈಲು ಸೇರಿದ ಮೇಲೆ ಸುಮಲತಾ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

    ತಾಯಿಯಾಗುವ ಸಂಭ್ರಮದಲ್ಲಿ ಹರ್ಷಿಕಾ ಪೂಣಚ್ಚ..! ಹೊಸ ಅತಿಥಿ ಆಗಮನ ಯಾವ್ಯಾಗ?

    ಈ ಹಿಂದೆ ಸುಮಲತಾ ಪರ ಮಂಡ್ಯ ಕ್ಷೇತ್ರದಲ್ಲಿ ಪ್ರಚಾರ ಸಭೆಯಲ್ಲಿ”ಅಮ್ಮ ಕಣ್ಣು ಮುಚ್ಚಿ ಹಾಳು ಬಾವಿಗೆ ಬೀಳು ಅಂದ್ರೂ ನಾನು ಬೀಳುತ್ತೇನೆ. ಅಮ್ಮ ಏನು ಹೇಳಿದರೂ ಶಿರಸಾವಹಿಸಿ ಪಾಲಿಸುವುದು ನನ್ನ ಹಾಗೂ ನನ್ನ ತಮ್ಮನ ಕೆಲಸ. ಅಷ್ಟೊಂದು ಗಾಢವಾದ ಬಾಂಧವ್ಯವಿದೆ ಆ ಮನೆಗೂ ನನಗೂ” ಎಂದು ಹೇಳಿದ್ದರು. ಆದರೆ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದರೂ ಸುಮಲತಾ ಯಾಕೆ ಅವರ ಪರ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಅಭಿಮಾನಿಗಳು ಬೇಸರ ಹೊರ ಹಾಕಿದ್ದರು.

    ಇದೀಗ ಸುಮಲತಾ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್‌ ಭಾರೀ ವೈರಲ್ ಆಗುತ್ತಿದೆ. ಭಗವದ್ಗೀತೆಯಲ್ಲಿದ್ದ ಕೃಷ್ಣನ ಸಾಲುಗಳನ್ನು ಪೋಸ್ಟ್ ಮಾಡಿಕೊಂಡಿದ್ದಾರೆ. “ಎಲ್ಲವೂ ಸರಿ ಹೋಗುವ ಮೊದಲು ಬಹಳಷ್ಟು ತಪ್ಪಾಗುತ್ತದೆ. ಕೇವಲ ನಂಬಿಕೆ ಇರಲಿ” ಎನ್ನುವ ಸಾಲುಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ನಟ ದರ್ಶನ್ ಗೆ ಬಂದಿರುವ ಸಂಕಷ್ಟಕ್ಕೆ ಪರೋಕ್ಷವಾಗಿ ಸುಮಲತಾ ಈ ಪೋಸ್ಟ್ ಮಾಡಿದ್ದಾರೆ ಎಂದು ಹಲವರು ಅಂದುಕೊಂಡಿದ್ದಾರೆ.

    Continue Reading

    LATEST NEWS

    Trending