ಹರಿಯಾಣ: ಟ್ರಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ, ದಂಪತಿ ಸೇರಿದಂತೆ ಮೂವರು ಸ್ಥಳದಲ್ಲೇ ಸಜೀವ ದಹನವಾದ ಘಟನೆ ಹರಿಯಾಣದ ಪಾಣಿಪತ್ನ ರೋಹ್ಟಕ್ ಹೆದ್ದಾರಿಯಲ್ಲಿ ನಡೆದಿದೆ.
ಮೃತಪಟ್ಟ ದುರ್ದೈವಿಗಳನ್ನು ಕರ್ನಾಲ್ನ ನಿವಾಸಿಗಳು ಎಂದು ಗುರುತಿಸಲಾಗಿದೆ.
ಪಾಣಿಪತ್ನಿಂದ ಗೊಹಾನಾ ಕಡೆಗೆ ತೆರಳುತ್ತಿದ್ದ ಕಾರಿಗೆ ಇಸ್ರಾನಾ ಅನಾಜ್ ಮಂಡಿ ಬಳಿ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದ್ದು ಇದೇ ವೇಳೆಗೆ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, 8 ವರ್ಷದ ಮಗು ಸೇರಿ ದಂಪತಿ ಸಜೀವ ದಹನವಾಗಿದ್ದಾರೆ. ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಪ್ರತಾಪ್ ವಾಯುಸೇನೆಯುಲ್ಲಿ ಫ್ಲೈಯಿಂಗ್ ಆಫೀಸರ್ ಆಗಿ ಈಗಾಗಲೇ ನಿವೃತ್ತರಾಗಿದ್ದಾರೆ. ಇವರಿಗೆ ಮೂವರು ಪುತ್ರರು ಮತ್ತು ಓರ್ವ ಪುತ್ರಿ ಇದ್ದಾರೆ.
ಪತ್ನಿ ಖಾಜಾಗೆ ಹೃದಯದಲ್ಲಿ ಸಮಸ್ಯೆ ಇದ್ದ ಕಾರಣ ಚಿಕಿತ್ಸೆಗೋಸ್ಕರ ಪಾಣಿಪತ್ಗೆ ತೆರಳಬೇಕಾಗಿತ್ತು. ಅಲ್ಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಗಾಯಗೊಂಡಿರುವ ಡ್ರೈವರ್ ಜಗ್ಬೀರ್ಗೆ ಚಿಕಿತ್ಸೆ ಮುಂದುವರೆದಿದೆ.