LATEST NEWS
ಹೊಟ್ಟೆ ಮೇಲೆ ಟ್ರಕ್ ಹರಿದ್ರೂ ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿ ಪ್ರಾಣ ಬಿಟ್ಟ 8 ತಿಂಗಳ ಗರ್ಭಿಣಿ..!
ಫಿರೋಜಾಬಾದ್: ಪತಿ ಜೊತೆ ಬೈಕ್ನಲ್ಲಿ ತೆರಳುತ್ತಿದ್ದ 8 ತಿಂಗಳ ತುಂಬು ಗರ್ಭಿಣಿ ಮೇಲೆ ಟ್ರಕ್ ಹರಿದ ಭಯಾನಕ ಘಟನೆ ಉತ್ತರಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಗಂಭೀರ ಗಾಯಗೊಂಡಿದ್ದ ಮಹಿಳೆ, ಈ ಮಧ್ಯೆ ರಸ್ತೆ ಮಧ್ಯೆಯೇ ಮಗುವಿಗೆ ಜನ್ಮ ನೀಡಿದ ಕೂಡಲೇ ಮೃತಪಟ್ಟಿದ್ದಾರೆ.
ಕಳೆದ ಬುಧವಾರ ಗರ್ಭಿಣಿ ಮಹಿಳೆ ಮತ್ತು ಆಕೆಯ ಪತಿ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬರುತ್ತಿದ್ದ ಕಾರನ್ನು ತಪ್ಪಿಸಲು ಹೋದಾಗ ಹಿಂದೆ ಕುಳಿತಿದ್ದ ಪತ್ನಿ ಆಯತಪ್ಪಿ ರಸ್ತೆಗೆ ಬಿದ್ದಿದ್ದಾಳೆ. ಇದೇ ವೇಳೆ ಹಿಂದಿನಿಂದ ಬರುತ್ತಿದ್ದ ಟ್ರಕ್ ಆಕೆಯ ಮೇಲೆ ಹರಿದಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಗೆ ನಡುರಸ್ತೆಯಲ್ಲಿ ಹೆರಿಗೆ ನೋವು ಬಂದು ಅಲ್ಲೇ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ಮಗು ಜನಿಸಿದ ಕೆಲವೇ ಹೊತ್ತಿನಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಸದ್ಯ ಮಹಿಳೆಯ ಪತಿ ಮತ್ತು ಮಗು ಇಬ್ಬರೂ ಸುರಕ್ಷಿತವಾಗಿದ್ದಾರೆ.
ಮಗುವಿನ ಆರೋಗ್ಯದ ಬಗ್ಗೆ ಅನೇಕ ಪರೀಕ್ಷೆಗಳನ್ನು ನಡೆಸಿದ್ದೇವೆ. ಆಕೆ ಸಂಪೂರ್ಣ ಆರೋಗ್ಯದಿಂದ ಇದ್ದಾಳೆ ಎಂದು ಹೆಣ್ಣು ಮಗುವನ್ನು ದಾಖಲು ಮಾಡಿರುವ ವೈದ್ಯಕೀಯ ಕಾಲೇಜಿನ ಪ್ರಿನ್ಸಿಪಾಲ್ ಡಾ. ಸಂಗೀತಾ ಅನೇಜಾ ತಿಳಿಸಿದ್ದಾರೆ.
ಘಟನೆಯಲ್ಲಿ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಆತನ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆ ಬಗ್ಗೆ ಸಿಸಿಟಿವಿ ಕ್ಯಾಮೆರಾಗಳಲ್ಲಿನ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದ್ದಾರೆ.
DAKSHINA KANNADA
ಮೇ 9 ರಂದು SSLC ಫಲಿತಾಂಶ ಪ್ರಕಟ…!
ಮಂಗಳೂರು : 2023-24 ರ SSLC ಪರೀಕ್ಷೆಯ ಫಲಿತಾಂಶ ಮೇ 9 ರ ಬೆಳಗ್ಗೆ 10.30ಕ್ಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಮಾರ್ಚ್ 25 ರಿಂದ ಎಪ್ರಿಲ್ 6 ರ ವರೆಗೆ ಪರೀಕ್ಷೆ ನಡೆಸಲಾಗಿದ್ದು, ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದೆ. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಈ ಬಾರಿ ಫಲಿತಾಂಶ ಬಿಡುಗಡೆಗೆ ವಿಳಂಭವಾಗಿದೆ ಎಂದು ಹೇಳಿದೆ
2023- 24ರ SSLC ಪರೀಕ್ಷೆಯಲ್ಲಿ ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು ಮತ್ತು 41,375 ವಿದ್ಯಾರ್ಥಿಗಳು ರೀ ಎಕ್ಸಾಂ ಬರೆದಿದ್ದಾರೆ. ಇದರಲ್ಲಿ 4.41 ಲಕ್ಷ ಬಾಲಕರು ಮತ್ತು 4.28 ಲಕ್ಷ ಬಾಲಕಿಯರು ಇದ್ದಾರೆ.
ಫಲಿತಾಂಶವನ್ನು ನೋಡಲು ಈ ವೆಬ್ಸೈಟ್ ಬಳಸಿ..!
ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಬಹುದು. kseab.karnataka.gov.in ಹಾಗೂ karresults.nic.in ವೆಬ್ಸೈಟ್ನಲ್ಲೂ ಫಲಿತಾಂಶ ವೀಕ್ಷಿಸಬಹುದಾಗಿದೆ.
LATEST NEWS
ಕ್ಯಾನ್ಸರ್ ಬಗ್ಗೆ ಇರಲಿ ಎಚ್ಚರ..! WHO ಈ ಬಗ್ಗೆ ಹೇಳಿದ್ದೇನು ?
ಮಂಗಳೂರು : ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಅನ್ನೋದು ಸಾಮಾನ್ಯವಾಗಿದೆಯಾದ್ರೂ, ಕ್ಯಾನ್ಸರ್ ಪೀಡಿತರ ಕಷ್ಟ, ನೋವು ಸಹಿಸಲು ಅಸಾದ್ಯವಾಗಿದೆ. ಇನ್ನು ಭಾರತದ ವಿಚಾರಕ್ಕೆ ಬಂದ್ರೆ ವರ್ಷದಿಂದ ವರ್ಷಕ್ಕೆ ಕ್ಯಾನ್ಸರ್ ಪೀಡಿತರ ಸಂಖ್ಯೆ ಅತ್ಯಧಿಕ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಇತ್ತೀಚಿಗೆ ಹೆಸರಾಂತ ಆಸ್ಪತ್ರೆಯೊಂದು ಈ ಬಗ್ಗೆ ಸಂಶೋಧನೆ ನಡೆಸಿದ್ದು, ಭಾರತೀಯರ ಒಟ್ಟಾರೆ ಆರೋಗ್ಯ ಕ್ಷೀಣಿಸುತ್ತಿದೆ ಅನ್ನೋ ಆತಂಕಕಾರಿ ವಿಚಾರವನ್ನು ಬಹಿರಂಗ ಪಡಿಸಿದೆ.
2020 ರಲ್ಲಿ ಭಾರತದಲ್ಲಿ 14 ಲಕ್ಷ ಜನರಿಗೆ ಕ್ಯಾನ್ಸರ್ ರೋಗ ಇದ್ದ ಬಗ್ಗೆ ಅಪೋಲೋ ಆಸ್ಪತ್ರೆಗಳ ವರದಿ ತಿಳಿಸಿತ್ತು. ಆದ್ರೆ, ಇದು 2025 ರ ವೇಳೆಗೆ ಅಂದರೆ ಐದು ವರ್ಷದಲ್ಲಿ ಸುಮಾರು 15.8 ಲಕ್ಷಕ್ಕೆ ಏರಲಿದೆ ಎಂದು ಅಂದಾಜಿಸಲಾಗಿದೆ.
ಪಬ್ಲಿಕ್ ಹೆಲ್ತ್ ಫೌಂಡೇಶನ್ ಆಫ್ ಇಂಡಿಯಾದ ಮಾಜಿ ಅಧ್ಯಕ್ಷ ಕೆ. ಶ್ರೀನಾಥ್ ರೆಡ್ಡಿ ಅವರು ಜರ್ಮನ್ ಸುದ್ದಿ ಸಂಸ್ಥೆಯಾದ ಡಾಯ್ಜ್ ವೆಲ್ಲೆ ( ಡಿಡಬ್ಲ್ಯೂ) ಗೆ ನೀಡಿದ ಸಂದರ್ಶನದಲ್ಲಿ “ಕ್ಯಾನ್ಸರ್ ಪ್ರಕರಣಗಳು ಮತ್ತು ಸಾವುಗಳು ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಹೆಚ್ಚಾಗಲಿದೆ” ಎಂದಿದ್ದಾರೆ.
ಕ್ಯಾನ್ಸರ್ನ ಸಾಮಾನ್ಯ ವಿಧಗಳು ಯಾವುವು?
ಕ್ಯಾನ್ಸರ್ ಕಾಯಿಲೆ ಹೇಗೆ ಬರುತ್ತದೆ ಅನ್ನೋದು ಇನ್ನೂ ನಿಖರವಾಗಿ ಹೇಳಲು ಸಾಧ್ಯವಿಲ್ಲವಾಗಿದೆ. ಆದ್ರೆ ದೇಹದ ಕೆಲವು ಜೀವಕೋಶಗಳು ಅನಿಯಂತ್ರಿತವಾಗಿ ಬೆಳೆಯುವುದು ಹಾಗೂ ಅದು ದೇಹದ ಇತರ ಭಾಗಗಳಿಗೆ ಹರಡುವುದು ಈ ರೋಗದ ಲಕ್ಷಣವಾಗಿದೆ. ಇದು ದೇಹದ ಯಾವ ಭಾಗದಲ್ಲಿ ಬೇಕಾದ್ರೂ ಕಾಣಿಸಿಕೊಂಡು ದೇಹಕ್ಕೆ ವ್ಯಾಪಿಸಿಕೊಳ್ಳಬಹುದು. ಪ್ರಮುಖವಾಗಿ ಸ್ತನ ಕ್ಯಾನ್ಸರ್, ಗರ್ಭಕಂಠ ಮತ್ತು ಅಂಡಾಶಯದ ಕ್ಯಾನ್ಸರ್ ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಇನ್ನು ಶ್ವಾಸಕೋಶ, ಬಾಯಿ, ಪ್ರಸ್ಟ್ರೇಟ್ ಪುರುಷರಲ್ಲಿ ಸಾಮಾನ್ಯವಾಗಿ ಕಾಣಿಸುವ ಕ್ಯಾನ್ಸರ್ ಆಗಿದೆ.
ಗ್ಲೋಬಲ್ ಕ್ಯಾನ್ಸರ್ ಅಬ್ಸರ್ವೇಟರಿ 2022 ರಲ್ಲಿ ನಡೆಸಿದ ಸರ್ವೇ ಪ್ರಕಾರ ಭಾರತದಲ್ಲಿ ಮಹಿಳೆಯರಿಗಿಂತ ಪುರಷರಲ್ಲಿ ಕ್ಯಾನ್ಸರ್ ಹೆಚ್ಚಾಗಿ ಕಾಣಸಿದೆ. ಸುಮಾರು 7,22,138 ಪುರುಷರು ಕ್ಯಾನ್ಸರ್ಗೆ ತುತ್ತಾಗಿದ್ದರೆ, 6,19,178 ಮಹಿಳೆಯರಲ್ಲಿ ಕ್ಯಾನ್ಸರ್ ಪತ್ತೆಯಾಗಿದೆ. ಪತ್ತೆಯಾಗಿರೋ ಕ್ಯಾನ್ಸರ್ ಪ್ರಕರಣಗಳಲ್ಲಿ ಶೇಕಡಾ 32 ಪ್ರಕರಣಗಳು ಸ್ತನ, ಬಾಯಿ ಮತ್ತು ಗರ್ಭಕಂಠದ ಕ್ಯಾನ್ಸರ್ ಅನ್ನೋದು ಗಮನಾರ್ಹ.
ಇದರಲ್ಲಿ 1,92,020 (26.6%) ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಪ್ರಮುಖ ಕ್ಯಾನ್ಸರ್ ಆಗಿದ್ರೆ, 1,27,526 ಗರ್ಭಕಂಠದ ಕ್ಯಾನ್ಸರ್ ಪ್ರಕರಣಗಳು (17.7%) ಗುರುತಿಸಲಾಗಿದೆ. ಇನ್ನು ಶೇಕಡಾ 6.6 ರಷ್ಟು ಮಹಿಳೆಯರು ಅಂಡಾಶಯ ಕ್ಯಾನ್ಸರ್ಗೆ ತುತ್ತಾಗಿದ್ದಾರೆ.
ಪುರುಷರಲ್ಲಿ ಬಾಯಿಯ ಕ್ಯಾನ್ಸರ್ 1,07,812 (15.6%) , ಶ್ವಾಸಕೋಶದ ಕ್ಯಾನ್ಸರ್ 58,970 (8.5%),ಅನ್ನನಾಳದ ಕ್ಯಾನ್ಸರ್ 45608- (6.6%).
ಇದನ್ನೂ ಓದಿ : ಖಾಸಗಿ ಕಾಲೇಜಿನ ಮಹಿಳಾ ಟಾಯ್ಲೆಟ್ ನಲ್ಲಿ ಮೊಬೈಲ್ ಪತ್ತೆ; ಆರೋಪಿ ಬಂಧನ
ಇನ್ನು ಕ್ಯಾನ್ಸರ್ ಸಾವಿನ ಪ್ರಕರಣದಲ್ಲಿ ಸ್ತನ ಕ್ಯಾನ್ಸರ್ಗೆ 98,337 – (13.7%) ಜನ ಸಾವಿಗೀಡಾಗಿದ್ದರೆ, ಬಾಯಿಯ ಕ್ಯಾನ್ಸರ್ ಗೆ 79,979 (5.6%) ಮತ್ತು ಗರ್ಭಕಂಠದ ಕ್ಯಾನ್ಸರ್ 79,906 ( 11.2%).ಜೀವ ಕಳೆದುಕೊಂಡಿದ್ದಾರೆ.
WHO ಪ್ರಕಾರ ಜಗತ್ತಿನ ಶೇಕಡಾ 30 ರಿಂದ 40 ಕ್ಯಾನ್ಸರ್ ಪ್ರಕರಣಗಳು ಜನರ ಜೀವನ ಶೈಲಿಯಿಂದ ಬರುತ್ತಿದೆಯಂತೆ. ತಂಬಾಕು ಸೇವನೆ, ಅಲ್ಕೋಹಾಲ್ ಸೇವನೆ, ಹಣ್ಣು ತರಕಾರಿಗಳಲ್ಲಿನ ಪೌಷ್ಠಿಕಾಂಶದ ಪ್ರಮಾಣ ಇಳಿಕೆಯಾಗಿರುವುದು ಇದಕ್ಕೆ ಕಾರಣ ಎಂದು ಹೇಳಿದೆ. ಹೀಗಾಗಿ ಜನರು ಹೆಚ್ಚಾಗಿ ತಜ್ಞ ವೈದ್ಯರ ಬಳಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ವರ್ಲ್ಡ್ ಹೆಲ್ತ್ ಆರ್ಗನೈಸೇಶನ್ ಸಲಹೆ ನೀಡಿದೆ.
LATEST NEWS
KARKALA : ಸಿಡಿದ ಸುಡುಮದ್ದು ತಯಾರಿಕಾ ಘಟಕ; ಮಹಿಳೆಯರಿಗೆ ಗಂಭೀರ ಗಾಯ
ಕಾರ್ಕಳ : ಸುಡುಮದ್ದು ತಯಾರಿಕಾ ಘಟಕ ಸಿಡಿದು ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಾಜೆ ಎಂಬಲ್ಲಿ ನಡೆದಿದೆ.
ಇಲ್ಲಿ ಹಲವಾರು ವರ್ಷಗಳಿಂದ ಸುಡುಮದ್ದು ತಯಾರಿಕಾ ಘಟಕ ಕಾರ್ಯ ನಿರ್ವಹಿಸುತ್ತಿದೆ. ಎಂದಿನಂತೆ ಇಂದು ಬೆಳಗ್ಗೆ ಸುಡುಮದ್ದು ತಯಾರಿಕೆ ಆರಂಭಿಸಲಾಗಿತ್ತು. ಈ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಸ್ಫೋಟಗೊಂಡಿದೆ.
ಇದನ್ನೂ ಓದಿ : ಖಾಸಗಿ ಕಾಲೇಜಿನ ಮಹಿಳಾ ಟಾಯ್ಲೆಟ್ ನಲ್ಲಿ ಮೊಬೈಲ್ ಪತ್ತೆ; ಆರೋಪಿ ಬಂಧನ
ಘಟನೆಯಲ್ಲಿ ಅಲ್ಲೇ ಕೆಲಸ ಮಾಡುತ್ತಿದ್ದ ಮಹಿಳೆಯರಿಬ್ಬರು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ತೀವ್ರತೆಗೆ ಕಟ್ಟಡದ ಮೇಲ್ಛಾವಣಿ ಹೊತ್ತಿ ಉರಿದಿದ್ದು, ಕಟ್ಟಡಕ್ಕೆ ಸಂಪೂರ್ಣ ಹಾನಿಯಾಗಿದೆ. ಈ ಸುಡುಮದ್ದು ತಯಾರಿಕಾ ಘಟಕದಲ್ಲಿ 3 ಬೇರೆ ಬೇರೆ ಕಟ್ಟಡಗಳಿದ್ದು, ಒಂದು ಕಟ್ಟಡದಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.
- DAKSHINA KANNADA5 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- dehali6 days ago
ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
- BELTHANGADY6 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು
- DAKSHINA KANNADA7 days ago
ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ