Connect with us

bengaluru

ಎಚ್ ಡಿ ದೇವೇಗೌಡರಿಂದ ಕುಕ್ಕೆಯಲ್ಲಿ ತುಲಾಭಾರ

Published

on

ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಇಂದು ಬೆಳಿಗ್ಗೆ ತುಲಾಭಾರ ಸೇವೆಯನ್ನು ಜೆಡಿಎಸ್ ವರಿಷ್ಠ ನಾಯಯಕ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ನೆರವೇರಿಸಿದರು.

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ರಾಶಿಯಲ್ಲಿ ಕಂಡುಬಂದಂತೆ ಸಂಕಲ್ಪ ಮಾಡಿದ್ದು, ಕುಕ್ಕೆಯಲ್ಲಿ ತುಲಾಭಾರ ಮಾಡಿಸುವುದಾಗಿ ಹೇಳಿಕೊಂಡಿದ್ದರು.

ಅಕ್ಕಿ, ಬೆಲ್ಲ, ಕಡ್ಲೆಬೇಳೆ ಧಾನ್ಯಗಳಲ್ಲಿ ತುಲಾಭಾರ ಸೇವೆ ನಡೆಸಲಾಯಿತು. ಈ ಸಂದರ್ಭ ಧರ್ಮಪತ್ನಿ, ಕುಟುಂಬಿಕರು ಉಪಸ್ಥಿತರಿದ್ದರು.

bengaluru

ಮನ್ಸಿಂದ ಯಾರೂನು ಕೆಟ್ಟೋರಲ್ಲ..ಬಿಗ್ ಬಾಸ್ ವಿನಯ್ ಕಣ್ಣೀರು

Published

on

ಬೆಂಗಳೂರು : ಬಿಗ್​ಬಾಸ್ ಮನೆಯಲ್ಲಿ ವಿನಯ್ ಅತ್ಯಂತ ಗಟ್ಟಿ ಸ್ಪರ್ಧಿ ಎಂದು ಕರೆಸಿಕೊಳ್ಳುವ ವಿನಯ್ ಗೌಡ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.ಮಂಗಳವಾರ ಪ್ರಸಾರವಾದ ಎಪಿಸೋಡ್​ನಲ್ಲಿ ಮಾತ್ರ ವಿನಯ್ ಕಣ್ಣೀರು ಹಾಕಿದ್ದಾರೆ.

ಮನೆಗೆ ಇಬ್ಬರು ಹೊಸ ಸ್ಪರ್ಧಿಗಳು ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಬಂದಿದ್ದಾರೆ. ಅವರಲ್ಲಿ ಒಬ್ಬರಾದ ಪವಿ ಪೂವಪ್ಪ ಅವರು ಸ್ನೇಹಿತ್, ವಿನಯ್ ಜೊತೆ ಮಾತನಾಡುತ್ತಿದ್ದಾಗ ಸ್ನೇಹಿತ್ ಬಿಗ್​ಬಾಸ್ ಮನೆಯ ಸ್ಪರ್ಧಿಗಳ ಬಗ್ಗೆ ಹೊರಗಿರುವ ಅಭಿಪ್ರಯಾದ ಬಗ್ಗೆ ತಿಳಿಸುವಂತೆ ಹೇಳ್ತಾರೆ.ಆಗ ಪವಿ ಬಳೆಯ ಎಪಿಸೋಡ್ ಭಾರಿ ಸದ್ದು ಮಾಡಿತು ಎಂದರು.ಆ ವಿಷಯ ಸೋಷಿಯಲ್ ಮೀಡಿಯಾಗಳಲ್ಲಿ ಬಹಳ ಚರ್ಚೆಯಾಯಿತು ಎಂದು ಸಹ ಹೇಳಿದರು.

ಇದರಿಂದಾಗಿ ವಿನಯ್‌ ತೀರಾ ಡಲ್‌ ಆಗ್ಬಿಟ್ಟರು. ಬಾತ್‌ರೂಮ್‌ ಒಳಗೆ ಹೋಗಿ ವಿನಯ್ ಗಳಗಳನೆ ಅತ್ತುಬಿಟ್ಟರು. ಬಳಿಕ ‘ಬಿಗ್ ಬಾಸ್‌’ ಬಳಿ ಮಾತನಾಡಿದ್ಮೇಲೆ ವಿನಯ್ ಸಮಾಧಾನಗೊಂಡರು.

Continue Reading

bangalore

ಕ್ಷೀಣಿಸುತ್ತಿದೆ ಹಿರಿಯ ನಟಿ ಲೀಲಾವತಿ ಆರೋಗ್ಯ-ಡಿಕೆಶಿ, ನಟ ಶಿವಣ್ಣ ಆರೋಗ್ಯ ವಿಚಾರಣೆ

Published

on

ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದು ಅವರ ಆರೋಗ್ಯ ವಿಚಾರಿಸುವುದಕ್ಕಾಗಿ ಅನೇಕ ನಟ ನಟಿಯರು ಲೀಲಾವತಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.ಜೊತೆಗೆ ನಿನ್ನೆ ನಟ ಶಿವಣ್ಣ ದಂಪತಿ ಕೂಡ ಮನೆಗೆ ಭೆಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.


ಮನೆಗೆ ಆಗಮಿಸಿದ ಶಿವಣ್ಣ ಅವರನ್ನು ವಿನೋದ್‌ ರಾಜ್‌ಕುಮಾರ್‌ ಹೆಚ್ಚು ಆತ್ಮೀಯವಾಗಿ ಬರಮಾಡಿಕೊಂಡು ತಾಯಿಯ ಆರೋಗ್ಯದ ಕುರಿತು ವಿವರಣೆ ನೀಡಿದ್ದಾರೆ..


ಇನ್ನು ಮೊನ್ನೆಯಷ್ಟೇ ನಟ ಅರ್ಜುನ್‌ ಸರ್ಜಾ ಲೀಲಾವತಿ ಅವರ ಮನೆಗೆ ತೆರಳಿ ಅವರ ಆರೋಗ್ಯ ವಿಚಾರಸಿದ್ದರು.. ಅಲ್ಲದೇ ದರ್ಶನ್‌ ಸಹ ಅವರ ಮನೆಗೆ ಭೇಟಿ ನೀಡಿದ್ದರು.. ಡಿಕೆಶಿ ಕೂಡ ಆರೋಗ್ಯ  ವಿಚಾರಿಸಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಲೀಲಾವತಿ ಅವರ ಆರೋಗ್ಯ ವಿಚಾರಿಸಲು ಅನೇಕ ಕಲಾವಿದರು ಮತ್ತು ತಂತ್ರಜ್ಞರು ಸೋಲದೇವನಹಳ್ಳಿಯಲ್ಲಿನ ಅವರ ಮನೆಗೆ ಭೇಟಿ ನೀಡುತ್ತಿದ್ದಾರೆ..

Continue Reading

bangalore

ನ. 29ಕ್ಕೆ ಮಳೆ ಹುಡುಗಿ ಪೂಜಾ ಗಾಂಧಿ ಮದುವೆ…

Published

on

ಬೆಂಗಳೂರು : ಮಳೆ ಹುಡುಗಿ ಪೂಜಾ ಗಾಂಧಿ ಕೊನೆಗೂ ಮದುವೆ ಆಗುತ್ತಿದ್ದಾರೆ. ಬಹು ದಿನಗಳ ಗೆಳೆಯ ಉದ್ಯಮಿ ವಿಜಯ್ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮದುವೆ, ಮಕ್ಕಳು, ಸಂಸಾರ ಅನ್ನುವ ವಿಚಾರದ ಬಗ್ಗೆ ಪೂಜಾ ಯೋಚನೆ ಮಾಡಿದ್ದರು. ಆದರೆ ಅದು ಈಗಲೇ ಅಲ್ಲ ಅನ್ನುವ ಮಾತನ್ನು ಹೇಳಿಕೊಳ್ಳುತ್ತಿದ್ದರು. ಅದರ ಮಧ್ಯೆ ಆನಂದ್ ಗೌಡ ಜೊತೆಗೆ ನಿಶ್ಚಿತಾರ್ಥವೂ ಆಗಿತ್ತು. ಅದು ಅಷ್ಟೇ ಬೇಗ ಮುರಿದು ಬಿತ್ತು. ಆದರೆ ಇದೀಗ ಪೂಜಾ ಗಾಂಧಿ ದಾಂಪತ್ಯ ಜೀವನಕ್ಕೆ ಕಾಲಿಡಲು ಡಿಸೈಡ್ ಮಾಡಿದ್ದಾರೆ.


ಇದೇ ನವೆಂಬರ್ 29ರಂದು ಬೆಂಗಳೂರಿನ ಯಲಂಹಕದ ಸಮೀಪ ನಟಿ ಪೂಜಾ ಗಾಂಧಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ವಿಶೇಷ ಅಂದರೆ, ಮಂತ್ರ ಮಾಂಗಲ್ಯ ಪದ್ಧತಿಯ ಪ್ರಕಾರ ಈ ಮದುವೆ ನಡೆಯಲಿದೆ ಎಂದು ವರದಿಯಾಗಿದೆ.ಪೂಜಾಗಾಂಧಿ ಮೂಲತ: ಉತ್ತರ ಪ್ರದೇಶದ ಮೀರತ್‌ನವರು. ಪಂಜಾಬಿ ಕುಟುಂಬದಲ್ಲಿ ಜನಿಸಿದ್ದ ಪೂಜಾ ಗಾಂಧಿ ದೆಹಲಿಯಲ್ಲಿ ನೆಲೆಸಿದ್ದರು. ಜಾಹೀತಾರು ಹಾಗೂ ಮಾಡಲಿಂಗ್ ಮೂಲಕ ಜನಪ್ರಿಯರಾಗಿದ್ದ ನಟಿ ‘ಮುಂಗಾರು ಮಳೆ’ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಿದ್ದರು. ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಂತೆ ಒಂದರ ಹಿಂದೊಂದರಂತೆ ಯಶಸ್ಸು ಇವರನ್ನು ಹಿಂಬಾಲಿಸಿಕೊಂಡು ಬಂದಿತ್ತು.


2012ರಲ್ಲಿ ಪೂಜಾ ಗಾಂಧಿ ಅವರಿಗೆ ಉದ್ಯಮಿ ಆನಂದ್ ಗೌಡ ಜತೆ ನಿಶ್ಚಿತಾರ್ಥವಾಗಿ, ನಂತರ ಮುರಿದು ಬಿದ್ದಿತ್ತು. ಆದರೆ, ಈಗ ಹರಿದಾಡುತ್ತಿರುವ ಮದುವೆ ವಿಷಯದ ಬಗ್ಗೆ ನಟಿ ಎಲ್ಲಿಯೂ ಮಾಹಿತಿ ಹಂಚಿಕೊಂಡಿಲ್ಲ.ಕನ್ನಡವನ್ನು ಕಲಿತು ಕನ್ನಡಿಗರಿಂದ ಬೇಷ್ ಎನಿಸಿಕೊಂಡಿರೋ ಮುಂಗಾರು ಮಳೆ ಬೆಡಗಿ ಹಾಗೂ ವಿಜಯ್ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಯಲ್ಲಿದ್ದರು, ಇದೀಗ ಮದುವೆಗೆ ರೆಡಿ ಆಗಿದ್ದಾರೆ. ಕನ್ನಡ ಕಲಿತು ಕನ್ನಡಿಗನನ್ನು ಮದುವೆಯಾಗುವ ಮೂಲಕ ಕರ್ನಾಟಕದ ಸೊಸೆ ಆಗಲು ಪೂಜಾ ಸಿದ್ಧವಾಗುತ್ತಿದ್ದಾರೆ ಎನ್ನಲಾಗಿದೆ

Continue Reading

LATEST NEWS

Trending