Connect with us

DAKSHINA KANNADA

ತುಳು ಇಂಡಸ್ಟ್ರಿ ಮರೆತರಾ ನಟಿ ಸೋನಲ್‌ ಮೊಂಥೆರೋ…?

Published

on

ಮಂಗಳೂರು ಮೂಲದ ನಟಿ ಸೋನಲ್‌ ಮೊಂಥೆರೋ ಇತ್ತೀಚಿನ ದಿನಗಲ್ಲಿ ತುಳು ಸಿನೆಮಾಗಳಲ್ಲಿ ಕಾಣಿಸಿಕೊಳ್ಳದೇ ಇರೋದು ತುಳು ಅಭಿಮಾನಿಗಳಿಗೆ ಬೇಸರ ತಂದಿದೆ.

 

ಮಂಗಳೂರು : ಮಂಗಳೂರು ಮೂಲದ ನಟಿ ಸೋನಲ್‌ ಮೊಂಥೆರೋ ಅಲ್ಪ ಸಮಯದಲ್ಲಿಯೇ ಸ್ಟಾರ್‌ ನಟರು ಹಾಗೂ ನಿರ್ದೇಶಕರ ಜತೆ ಕೆಲಸ ಮಾಡಿದ ಅನುಭವವನ್ನು ಹೊಂದಿದಾಕೆ.

ಮಂಗಳೂರಿನ ಚೆಲುವೆ ಸೋನಲ್ ಮೊಂತೇರೋ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದೇ ಮಾಡೆಲಿಂಗ್ ಲೋಕದ ಮುಖಾಂತರ.

ಮಂಗಳೂರು ಮಂದಿಗೆ ಯಕ್ಷಗಾನ, ನಾಟಕ ಮತ್ತು ಸಿನಿಮಾ ಗೀಳು ಇದ್ದೇ ಇರುತ್ತದೆ. ಅಂಥಾ ವಾತಾವರಣದಲ್ಲಿಯೇ ಬೆಳೆದು ಬಂದಿದ್ದ ಸೋನಲ್ ಮನಸು ಕಲಿಕೆಯ ದಿನಗಳಲ್ಲಿಯೇ ಬಣ್ಣದ ಲೋಕದತ್ತ ವಾಲಿಕೊಂಡಿತ್ತು.


ನಂತರ ಮಾಡೆಲಿಂಗ್ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ್ದವರು ತುಳುವಿನ ಚಿತ್ರದಲ್ಲಿ ನಾಯಕಿಯಾಗೋ ಅವಕಾಶ ಪಡೆದುಕೊಂಡಿದ್ದರು.

ಮೊದಲ ಚಿತ್ರ ಎಕ್ಕಾ ಸಕ್ಕಾ ನೂರು ದಿನ ಯಶಸ್ವೀ ಪ್ರದರ್ಶನ ಕಾಣುವ ಮೂಲಕ ತುಳು ನಾಡಿನ ತುಂಬ ಸೋನಲ್ ಹೆಸರುವಾಸಿಯಾಗಿದ್ದರು. ಇದಾದ ಬಳಿಕ ಜೈ ತುಳುನಾಡ್ ಹಾಗೂ ಪಿಲಿಬೈಲ್ ಯಮುನಕ್ಕ ಸಿನೆಮಾ ಬಿಟ್ರೆ ತುಳುವಿನ ಬೆರಾವ ಸಿನೆಮಾಗಳಲ್ಲೂ ಸೋನಲ್ ಕಾಣಿಸಿಕೊಂಡಿಲ್ಲ.


ನಂತರ ನೇರವಾಗಿ ಕನ್ನಡ ಸಿನೆಮಾ ಲೋಕಕ್ಕೆ ಹಾರಿದ ಸನಲ್ ಅಲ್ಲಿಂದ ಮುಂದೆ ಅಭಿಸಾರಿಕೆ, ಮದುವೆ ದಿಬ್ಬಣ, ಪಂಚತಂತ್ರ, ಶಾಸಕ, ಡೆಮೊ ಪೀಸ್, ರಾಬರ್ಟ್, ಬನಾರಸ್ ಸಿನೆಮಾಗಳಲ್ಲಿ ಅಭಿನಯಿಸಿ ತಮ್ಮ ಪ್ರತಿಭೆಯನ್ನು ತೋರಿಸಿದ್ರು.


ಈಗ ಸದ್ಯಕ್ಕೆ ಬುದ್ಧಿವಂತ 2 ಸಿನೆಮಾ ಪೋಸ್ಟ್ ಪ್ರೋಡಕ್ಷನ್ ಹಂತದಲ್ಲಿದ್ದು, ಸಕ್ಕರೆ ಕಾರ್ಖಾನೆ, ಮಾರ್ಗರೆಟ್ ಲವರ್ ಆಫ್ ರಾಮಾಚಾರಿ ಸಿನೆಮಾ ಶೂಟಿಂಗ್ ಹಂತದಲ್ಲಿದೆ.


ನಮ್ಮ ಊರಿನ ಕಲಾವಿದರು ಬೇರೆ ಭಾಷೆಗಳಲ್ಲೂ ಮಿಂಚುತ್ತಿದ್ದಾರೆ ಎಂಬುದು ಖುಷಿಯ ವಿಚಾರ. ಆದ್ರೆ ಅದರ ಜೊತೆಗೆ ನಮ್ಮ ಭಾಷೆ ಸಿನೆಮಾಗಳಲ್ಲೂ ಅಭಿನಯಿಸದ್ರೆ ಚೆನ್ನಾಗಿರ್ತಿತ್ತು ಅಂತಾರೆ ತುಳು ಸಿನೆಮಾ ಅಭಿಮಾನಿಗಳು

Click to comment

Leave a Reply

Your email address will not be published. Required fields are marked *

BANTWAL

ವೈನ್ ಶಾಪ್ ಗೆ ಬಂದಿದ್ದ ಆಸಾಮಿ ಮೊಬೈಲ್ ಕದ್ದು ಎಸ್ಕೇಪ್..!!

Published

on

ಪುತ್ತೂರು: ವೈನ್ ಶಾಪ್ ಗೆ ಬಂದಿದ್ದ ವ್ಯಕ್ತಿಯೋರ್ವ ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ.

ವ್ಯಕ್ತಿಯೋರ್ವ ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್ ಗೆ ಬಂದಿದ್ದ. ಮೊದಲಿಗೆ ಗ್ರಾಹಕರಂತೆ ಬಂದು ಮದ್ಯ ಖರೀದಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿದ್ದ ಮೊಬೈಲ್ ಗೆ ಕನ್ನ ಹಾಕಿದ್ದಾನೆ. ಬಳಿಕ ಶಾಪ್ ನವರು ಬೇರೆ ಕಡೆ ತಿರುಗುವಾಗ ಈಚೆಯಿಂದ ಈ ಕದೀಮ ಮೊಬೈಲ್ ಅನ್ನು ಎಗರಿಸಿ ಬ್ಯಾಗ್ ಗೆ ಹಾಕಿಕೊಂಡು ಪರಾರಿಯಾಗಿದ್ದಾನೆ.


ವೈನ್ ಶಾಪ್ ನಲ್ಲಿರುವ ರಾಜೇಶ್ ಎಂಬವರ ಮೊಬೈಲ್ ಕಳವು ಆಗಿತ್ತು. ಕೂಡಲೇ ಅವರು ಸಿಸಿ ಕ್ಯಾಮರಾ ಚೆಕ್ ಮಾಡಿದ್ದಾರೆ. ಆಗ ಮೊಬೈಲ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BELTHANGADY

ದ.ಕ ದಲ್ಲಿ ಭಾರಿ ಮಳೆ: ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿದ್ದ ಅಂಗಡಿಗಳಿಗೆ ಹಾನಿ..!!

Published

on

ಧರ್ಮಸ್ಥಳ: ಧರ್ಮಸ್ಥಳದಲ್ಲಿ 3ನೇ ದಿನದ ಲಕ್ಷ ದೀಪೋತ್ಸವದ ವೈಭವ ಒಂದು ಕಡೆಯಾದರೆ, ಇನ್ನೊಂದೆಡೆ ಗುಡುಗು ಸಹಿತ ಬಾರಿ ಮಳೆ ಅವಾಂತರ ತಂದಿದೆ.

ಕೆಲವು ಅಂಗಡಿಗಳಿಗೆ ಬಹಳ ಹಾನಿ ಆಗಿದೆ. ಮಳೆ ಅಂಗಡಿ ಮಾಲೀಕರಿಗೆ ನಷ್ಟವನ್ನುಂಟು ಮಾಡಿದೆ. ಮಳೆಗೆ ಅಂಗಡಿಯೊಳಗಿದ್ದ ಕೆಲವು ವಸ್ತುಗಳು ಮಳೆಗೆ ಕೊಚ್ಚಿಕೊಂಡು ಹೋಗಿದೆ.

ಧರ್ಮಸ್ಥಳ ಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ವಸ್ತು ಪ್ರದರ್ಶನಕ್ಕೆ ಬಹಳ ಸಮಸ್ಯೆ ಆಗಿದೆ. ಸಭಾಂಗಣದ ಬಳಿ ಹಾಕಿದ್ದ ಕುರ್ಚಿಗಳು ಒದ್ದೆಯಾಗಿದೆ.

Continue Reading

DAKSHINA KANNADA

Putturu: ಮುಸ್ಲಿಂ ವಿದ್ಯಾರ್ಥಿ ಜೋಡಿಗಳ ಮೇಲೆ ಹಲ್ಲೆ..!!

Published

on

ಪುತ್ತೂರು: ಮುಸ್ಲಿಂ ವಿದ್ಯಾರ್ಥಿಗಳ ಜೋಡಿಯನ್ನು ತಡೆ ಹಿಡಿದು ಹಲ್ಲೆಗೆ ಯತ್ನಿಸಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಜಾರು ಎಂಬಲ್ಲಿ ನಡೆದಿದ್ದು, ಅದರ ವಿಡಿಯೋ ಇದೀಗ ಸಾಮಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಈ ಘಟನೆಯು ಕೆಲವು ವಾರಗಳ ಹಿಂದೆ ನಡೆದಿದ್ದು, ಅದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮುಸ್ಲಿಂ ವಿದ್ಯಾರ್ಥಿ ಜೋಡಿಯನ್ನು ತಡೆದ ಮುಸ್ಲಿಂ ಸಮುದಾಯದವರೇ ಅವರ ಮೇಲೆ  ಹಲ್ಲೆ ನಡೆಸಿದ್ದಾರೆ. ಈ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಆರೋಪಿಗಳು ಪರಾರಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯ ತಾಯಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಕುರಿತು ಪೊಲೀಸರು ಫೋಕ್ಸೋ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

Continue Reading

LATEST NEWS

Trending