Connect with us

    DAKSHINA KANNADA

    ಬಹುನಿರೀಕ್ಷಿತ ತುಳು ಸಿನಿಮಾ ‘ತುಡರ್’ ಕರಾವಳಿಯಾದ್ಯಂತ ತೆರೆಗೆ

    Published

    on

    ಮಂಗಳೂರು : ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ ‘ತುಡರ್’ ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆಯಾಗಿದೆ. ನಗರದ ಭಾರತ್ ಸಿನೆಮಾಸ್ ನಲ್ಲಿ ಜರುಗಿದ ಸಮಾರಂಭದಲ್ಲಿ ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು.


    ಈ ಸಂದರ್ಭ ಕರಾವಳಿ ಗ್ರೂಪ್ ಆಫ್ ಎಜುಕೇಷನ್ ಸಂಸ್ಥೆಯ ಚೇರ್ ಮೆನ್ ಗಣೇಶ್ ರಾವ್ ಅವರು, ತುಡರ್ ಅಂದರೆ ಕನ್ನಡದಲ್ಲಿ ಬೆಳಕು ಅಂತ ಅರ್ಥ. ಒಂದು ಬೆಳಕಿನಿಂದ ಎಷ್ಟೋ ದೀಪಗಳನ್ನು ಬೆಳಗಿಸಬಹುದು. ಅದೇ ರೀತಿ ಬಿಡುಗಡೆಯಾಗಿರುವ ತುಳು ಸಿನಿಮಾ ತುಳು ತುಡರ್ ಚಿತ್ರರಂಗದಲ್ಲಿ ಹೊಸ ಬೆಳಕಾಗಿ ಮೂಡಿಬರಲಿ. ಸಿನಿಮಾ ತಂಡವನ್ನು ನೋಡಿದರೆ ಖಂಡಿತ ಈ ಸಿನಿಮಾ ಗೆಲ್ಲುವ ವಿಶ್ವಾಸವಿದೆ. ಸಮಾಜಕ್ಕೆ ಮನೋರಂಜನೆಯ ಜೊತೆಗೆ ಒಳ್ಳೆಯ ಸಂದೇಶ ನೀಡುವ ಸಿನಿಮಾಗಳು ಬರಲಿ. ಚಿತ್ರತಂಡದಿಂದ ಇನ್ನಷ್ಟು ಸದಭಿರುಚಿಯ ಸಿನಿಮಾಗಳು ಬರಲಿ. ಸಂಸ್ಕೃತಿಗೆ ಪೂರಕವಾದ ಜಾತಿ ಧರ್ಮ ದ್ವೇಷವನ್ನು ಪಸರಿಸದೆ ಜನರನ್ನು ಒಂದುಮಾಡುವ ಸಿನಿಮಾಗಳು ಬರಲಿ ಎಂದು ಶುಭ ಹಾರೈಸಿದರು.

    ನಟ ಅರವಿಂದ್ ಬೋಳಾರ್ ಮಾತನಾಡಿ, ತುಳು ಸಿನಿಮಾ ಬಿಡುಗಡೆ ಎಂದರೆ ಭಯವಾಗುತ್ತದೆ. ಯಾಕೆಂದರೆ ಸಿನಿಮಾ ಎಷ್ಟು ದಿನ ನಡೆಯುತ್ತದೆ ಎಂದು ಹೇಳಲು ಆಗುವುದಿಲ್ಲ. ಆದರೆ ತುಡರ್ ಸಿನಿಮಾ ವೀಕ್ಷಿಸಿದವರು ಚಿತ್ರತಂಡವನ್ನು ಮೆಚ್ಚಿ ಬೆನ್ನುತಟ್ಟಿದ್ದಾರೆ. ಹೀಗಾಗಿ ನಮಗೆ ಧೈರ್ಯ ಬಂದಿದೆ. ಈ ಸಿನಿಮಾ ಗೆಲ್ಲಲು ತುಳುವರು ಥಿಯೇಟರ್ ಗೆ ಬಂದು ಸಿನಿಮಾ ನೋಡಬೇಕು ಎಂದರು.
    ವಿಜಯ ಕುಮಾರ್ ಕೊಡಿಯಾಲ್ ಬೈಲ್ ಮಾತಾಡಿ, ಸಿನಿಮಾ ಕುರಿತು ಎಲ್ಲೆಡೆ ಒಳ್ಳೆಯ ಮಾತುಗಳು ಕೇಳಿಬರುತ್ತಿವೆ. ಸಿನಿಮಾ ಗೆಲ್ಲಲು ತುಳುವರ ಆಶೀರ್ವಾದ ಅಗತ್ಯ ಎಂದರು.

    ವಾಲ್ಟರ್ ನಂದಳಿಕೆ ಮಾತನಾಡಿ, “ಸಿನಿಮಾ ನೋಡಿದವರು ಬಹಳ ಸಮಯದ ಬಳಿಕ ಒಳ್ಳೆಯ ಸಿನಿಮಾ ನೋಡಿದ್ದಾಗಿ ಹೇಳುತ್ತಿದ್ದಾರೆ. ಸಿನಿಮಾ ಖಂಡಿತ ಗೆಲ್ಲಲಿದೆ” ಎಂದರು.

    ವೇದಿಕೆಯಲ್ಲಿ ಭಾರತ್ ಸಿನೆಮಾಸ್ ನ ಬಾಲಕೃಷ್ಣ ಶೆಟ್ಟಿ, ರವೀಂದ್ರ ಶೆಟ್ಟಿ ಉಳಿದೊಟ್ಟು, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಮನೋಹರ್ ಶೆಟ್ಟಿ, ಉದಯ ಪೂಜಾರಿ ಬಲ್ಲಾಳ್ ಬಾಗ್, ಉಮೇಶ್ ರೈ ಪದವು ಮೇಗಿನ‌ಮನೆ, ಸ್ವರಾಜ್ ಶೆಟ್ಟಿ, ನಟ ಸಿದ್ದಾರ್ಥ್ ಶೆಟ್ಟಿ, ನಟಿ ದೀಕ್ಷಾ ಭಿಸೆ, ರೂಪಾ ವರ್ಕಾಡಿ, ನಿರ್ದೇಶಕ ತೇಜೇಶ್ ಪೂಜಾರಿ, ಪ್ರಕಾಶ್ ಮಹಾದೇವನ್, ವಿಲ್ಸನ್ ರೆಬೆಲ್ಲೋ, ವಿದ್ಯಾ, ಸಂಪತ್, ಹರೀಶ್ ಶೆಟ್ಟಿ, ವಿಕಾಸ್ ಪುತ್ರನ್, ಮೋಹನ್ ರಾಜ್, ಪ್ರೇಮ್ ಶೆಟ್ಟಿ ಸುರತ್ಕಲ್, ಹಂಚಿಕೆದಾರ ಸಚಿನ್ ಎಸ್. ಉಪ್ಪಿನಂಗಡಿ ಮತ್ತಿತರರು ಉಪಸ್ಥಿತರಿದ್ದರು. ಚಿರಾಗ್ ಬಜಾಲ್ ಕಾರ್ಯಕ್ರಮ ನಿರ್ವಹಿಸಿದರು.

    ಕರಾವಳಿಯಾದ್ಯಂತ ತೆರೆಗೆ :

    ತುಡರ್ ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಕಲ್ಪನ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಕಾರ್ಕಳದಲ್ಲಿ ಪ್ಲಾನೆಟ್, ರಾಧಿಕಾ, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ ಬೆಳ್ತಂಗಡಿಯಲ್ಲಿ ಭಾರತ್ ಚಿತ್ರಮಂದಿರದಲ್ಲಿ ಬಿಡುಗಡೆಯಾಯಿತು.

    ಇದನ್ನೂ ಓದಿ : ತಂದೆಯ ಬಂಧನದ ಬಗ್ಗೆ ವಿನೀಶ್ ಭಾವುಕ ಪೋಸ್ಟ್; ನಿಂದಿಸಿದವರಿಗೆ ಧನ್ಯವಾದ ಎಂದ ದರ್ಶನ್ ಪುತ್ರ

    ಈಗಾಗಲೇ ತುಡರ್ ಸಿನಿಮಾ ವಿದೇಶ ಸಹಿತ ಮಂಗಳೂರು, ಉಡುಪಿ, ಪುತ್ತೂರು, ಸುರತ್ಕಲ್, ಪಡುಬಿದ್ರೆಯಲ್ಲಿ ಪ್ರೀಮಿಯರ್ ಶೋ ಪ್ರದರ್ಶನಗೊಂಡು ಪ್ರೇಕ್ಷಕರ ವ್ಯಾಪಕ ಶ್ಲಾಘನೆಗೆ ಪಾತ್ರವಾಗಿದೆ.

    ಉತ್ತಮ ಚಿತ್ರಕತೆಯನ್ನೊಳಗೊಂಡ ಸಿನಿಮಾ ಕುಟುಂಬ ವರ್ಗದವರನ್ನು ಆಕರ್ಷಿಸಿದೆ. ನಾಯಕ ನಟ ಸಿದ್ದಾರ್ಥ್ ಶೆಟ್ಟಿ ಮೊದಲ ಪ್ರಯತ್ನದಲ್ಲೇ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ‌.

    DAKSHINA KANNADA

    ಇನ್ಮುಂದೆ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

    Published

    on

    ಬೆಂಗಳೂರು: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ ಅಂದ್ರೆ ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ.

    ಗಣ್ಯವ್ಯಕ್ತಿಗಳು ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಸಿಹಿ ಇತ್ಯಾದಿ ಹಂಚುವ ಅದ್ದೂರಿ ಕಾರ್ಯಕ್ರಮಗಳನ್ನು ಸಂಸ್ಥೆಯಲ್ಲಿ ಆಚರಿಸುವುದರಿಂದ ಮಕ್ಕಳಿಗೆ ಅವರ ಹುಟ್ಟು ಹಬ್ಬವನ್ನು ಈ ರೀತಿ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲವಲ್ಲ ಅಂತ ಬೇಜಾರು ಮಾಡಿಕೊಳ್ಳುತ್ತವೆ. ಇದರಿಂದ ಮನಸ್ಸಿಗೆ ಆಘಾತವಾಗಿ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ. ಹೀಗಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ತೊಳೆದ್ರು ಬಿಳಿ ಬಟ್ಟೆ ಮೇಲಿನ ಕಲೆ ಹೋಗ್ತಿಲ್ವಾ? ಹೀಗೆ ಮಾಡಿ

    Published

    on

    ಮಂಗಳೂರು: ಬಿಳಿ ಬಟ್ಟೆಯನ್ನು ಕಲೆಯಾಗದಂತೆ ನೋಡಿಕೊಳ್ಳುವುದು ಕಷ್ಟದ ಕೆಲಸ. ಕೆಲವೊಮ್ಮೆ ಕೈ ತಪ್ಪಿ ಟೀ ಕಾಫಿ ಚೆಲ್ಲಿಯೋ, ಪೆನ್ನಿನ ಇಂಕ್ ತಾಗಿಯೋ ಬಿಳಿ ಬಟ್ಟೆಯ ಅಂದವನ್ನು ಹಾಳು ಮಾಡುತ್ತದೆ. ಈ ವೇಳೆ ಯಾವುದೇ ಡಿಟರ್ಜೆಂಟ್, ಸೋಪ್ ಬಳಸಿ ತಿಕ್ಕಿ ತೊಳೆದರೂ ಪ್ರಯೋಜನವಂತೂ ಆಗುವುದೇ ಇಲ್ಲ. ಬಟ್ಟೆಯನ್ನು ಜಾಸ್ತಿ ಉಜ್ಜಿದರೆ, ಆ ಬಟ್ಟೆಗಳು ಹಾಳಾಗುವ ಸಾಧ್ಯತೆ ಇರುತ್ತದೆ. ನಿಮಗೂ ಈ ರೀತಿ ಅನುಭವವಾಗಿದ್ದರೆ ಟೆನ್ಶನ್ ಮಾಡಿಕೊಳ್ಬೇಡಿ, ಈ ವಸ್ತುಗಳನ್ನು ಬಳಸಿ ಕಲೆಯನ್ನು ನಿವಾರಿಸಿಕೊಳ್ಳಬಹುದು.

    • ಅರ್ಧ ಕಪ್ ನೀರಿಗೆ ಅರ್ಧ ಕಪ್ ವಿನೆಗರ್ ಮಿಶ್ರಣ ಮಾಡಿ ಬಿಳಿ ಬಟ್ಟೆಯ ಮೇಲೆ ಇರುವ ಕಲೆಗೆ ಸ್ಪ್ರೇ ಮಾಡಿ, ಸ್ವಲ್ಪ ಸಮಯ ಹಾಗೆ ಬಿಡಬೇಕು. ತದನಂತರದಲ್ಲಿ ಅದೇ ನೀರಿನಿಂದ ತಿಕ್ಕಿ ತೊಳೆದರೆ ಕಲೆ ಬಿಡುತ್ತದೆ.
    • ಬಿಳಿ ಬಟ್ಟೆ ಮೇಲಿನ ಕಲೆಯನ್ನು ತೆಗೆದು ಹಾಕಲು ಅಡುಗೆ ಸೋಡಾ ಬೆಸ್ಟ್ ಎನ್ನಬಹುದು. ನೀರಿಗೆ ಅಡುಗೆ ಸೋಡಾ ಸೇರಿಸಿ, ಕಲೆಯಾದ ಬಟ್ಟೆಯನ್ನು ಆ ನೀರಿನಲ್ಲಿ ನೆನೆಸಿಡಬೇಕು. ಸ್ವಲ್ಪ ಸಮಯದ ಬಳಿಕ ಬಟ್ಟೆಯನ್ನು ತೊಳೆದರೆ ಕಲೆಯೂ ಹೋಗುತ್ತದೆ.
    • ಬಿಳಿ ಬಟ್ಟೆಯಲ್ಲಿ ಕಲೆಯಿದ್ದರೆ ಆ ಜಾಗಕ್ಕೆ ನಿಂಬೆರಸ ಹಾಕಿ ಉಪ್ಪು ಮತ್ತು ಸೋಪಿನಿಂದ ಚೆನ್ನಾಗಿ ತೊಳೆದರೆ ಕಲೆಯೂ ಇಲ್ಲದಂತಾಗುತ್ತದೆ.
      ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಸೇರಿಸಿ ಉಜ್ಜುವುದರಿಂದ ಬಿಳಿ ಬಟ್ಟೆ ಮೇಲಿನ ಕಲೆಯೂ ನಿವಾರಣೆಯಾಗುತ್ತದೆ.
    • ಬಿಳಿ ಬಟ್ಟೆಯಲ್ಲಿ ಕಲೆಯಿದ್ದರೆ ಸ್ವಲ್ಪ ಬಿಸಿ ನೀರನ್ನು ಆ ಜಾಗಕ್ಕೆ ಹಾಕಿ, ಡಿರ್ಟಜೆಂಟ್‌ ನಿಂದ ಉಜ್ಜಿ ಕಲೆಯನ್ನು ತೆಗೆದು ಹಾಕಬಹುದು.
    • ಬಿಳಿ ಬಟ್ಟೆ ಮೇಲಿನ ಕಲೆ ನಿವಾರಣೆಗೆ ಟೂತ್ ಪೇಸ್ಟ್ ಬಳಸುವುದು ಪರಿಣಾಮಕಾರಿಯಾಗಿದೆ. ಕಲೆ ಮೇಲೆ ಟೂತ್ಪೇಸ್ಟ್ ಅನ್ವಯಿಸಿ, ಹತ್ತರಿಂದ ಹದಿನೈದು ನಿಮಿಷಗಳ ಕಾಲ ಹಾಗೆ ಬಿಡಬೇಕು. ಆ ಬಳಿಕ ಡಿಟೆರ್ಜಂಟ್ ಬಳಸಿ ಸ್ವಚ್ಛಗೊಳಿಸಿದರೆ ಕಲೆ ಉಳಿಯುವುದಿಲ್ಲ.
    Continue Reading

    DAKSHINA KANNADA

    ಕಟೀಲು ಶ್ರೀದುರ್ಗಾ ಪರಮೇಶ್ವರಿ ಕ್ಷೇತ್ರಕ್ಕೆ ಸ್ವರ್ಣಪಾದುಕೆ ಸಮರ್ಪಣೆ

    Published

    on

    ಮಂಗಳೂರು: ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ 36ನೆಯ ಅಧಿಪತಿಗಳಾದ ಜಗದ್ಗುರು ಶ್ರೀಭಾರತೀ ತೀರ್ಥ ಮಹಾಸ್ವಾಮಿಗಳವರ ಸನ್ಯಾಸ ಸ್ವೀಕಾರ ಸುವರ್ಣಮಹೋತ್ಸವದ ಸ್ಮರಣಾರ್ಥ ಕಟೀಲು ಶ್ರೀದುರ್ಗಾ ಪರಮೇಶ್ವರಿ ಕ್ಷೇತ್ರಕ್ಕೆ ಶೃಂಗೇರಿ ಶಾರದಾಪೀಠದ ವತಿಯಿಂದ 40 ಲಕ್ಷ ರೂಪಾಯಿ ಮೌಲ್ಯದ ಸ್ವರ್ಣಪಾದುಕೆ ಹಾಗೂ ಒಡ್ಯಾಣವನ್ನು ಸಮರ್ಪಿಸಲಾಗಿದೆ.

    ಶ್ರೀಭಾರತೀ ತೀರ್ಥ ಮಹಾಸ್ವಾಮಿಗಳವರು 1974 ರಲ್ಲಿ ಸನ್ಯಾಸ ಸ್ವೀಕರಿಸಿದ್ದು, 2024 ಕ್ಕೆ 50 ವರ್ಷಗಳಾಗುತ್ತಿವೆ. ಶೃಂಗೇರಿಯಲ್ಲಿ ಉಭಯ ಜಗದ್ಗುರುಗಳು ಈ ಪಾದುಕೆ ಹಾಗೂ ಒಡ್ಯಾಣವನ್ನು ಕಟೀಲು ದೇವಳದ ಆನುವಂಶಿಕ ಅರ್ಚಕ ಶ್ರೀಹರಿನಾರಾಯಣದಾಸ ಅಸ್ರಣ್ಣ ಅವರಿಗೆ ಹಸ್ತಾಂತರಿಸಿದರು. ಇದನ್ನು ಜೂ.19 ರಂದು ಶ್ರೀದೇವಿಗೆ ತೊಡಿಸಿ ಅಲಂಕಾರ ಮಾಡಲಾಯಿತು. ಈ ಸೇವೆಯನ್ನು ಶೃಂಗೇರಿ ಶ್ರೀಮಠದ ಶಿಷ್ಯರಾದ ಆಂಧ್ರಪ್ರದೇಶದ ಶ್ರೀಪೋಲಿಸೆಟ್ಟಿ ಶ್ಯಾಮ್ ಸುಂದರ್ ಅವರು ನೀಡಿರುತ್ತಾರೆ.

    Read More..; ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕ್ರಿಕೆಟಿಗ ಮಯಂಕ್ ಅಗರವಾಲ್ ಭೇಟಿ

    Continue Reading

    LATEST NEWS

    Trending