ಬಹುನಿರೀಕ್ಷಿತ “ಇಂಗ್ಲಿಷ್”ಗೂ ಕೊರೊನಾ ಕಂಟಕ: ಬಿಡುಗಡೆ ದಿನಾಂಕ ಮುಂದೂಡಿಕೆ
Published
5 years agoon
By
Adminಬಹುನಿರೀಕ್ಷಿತ “ಇಂಗ್ಲಿಷ್“ಗೂ ಕೊರೊನಾ ಕಂಟಕ: ಬಿಡುಗಡೆ ದಿನಾಂಕ ಮುಂದೂಡಿಕೆ
ಮಂಗಳೂರು: ಅಕ್ಮೆ ಮೂವೀಸ್ ಇಂಟರ್ನ್ಯಾಷನಲ್ ಲಾಂಛನದಲ್ಲಿ ತಯಾರಾಗಿರುವ, ದುಬೈಯ ಖ್ಯಾತ ಉದ್ಯಮಿ, ಕನ್ನಡ ಚಲನಚಿತ್ರದ ನಿರ್ಮಾಪರಾದ ಹರೀಶ್ ಶೇರಿಗಾರ್ ಮತ್ತು ಶ್ರೀಮತಿ ಶರ್ಮಿಳಾ ಶೇರಿಗಾರ್ ನಿರ್ಮಿಸಿರುವ ಕೆ. ಸೂರಜ್ ಶೆಟ್ಟಿ ನಿರ್ದೇಶನದ “ಇಂಗ್ಲಿಷ್” – ಎಂಕ್ಲೆಗ್ ಬರ್ಪುಜಿ Bro ತುಳು ಸಿನಿಮಾ ಬಿಡುಗಡೆ ದಿನಾಂಕವನ್ನು ಇದೀಗ ಮುಂದೂಡಲಾಗಿದೆ.
ಮಂಗಳವಾರ (ಮಾರ್ಚ್ 17) ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚಿತ್ರದ ನಿರ್ದೇಶಕ ಕೆ. ಸೂರಜ್ ಶೆಟ್ಟಿ,
‘ಕೊರೊನ ವೈರಸ್ ದೇಶವ್ಯಾಪಿ ಹರಡುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಮಾಲ್ ಹಾಗೂ ಚಿತ್ರಮಂದಿರಗಳನ್ನು ತಾತ್ಕಾಲಿಕ ಬಂದ್ ಮಾಡುವಂತೆ ಆದೇಶ ನೀಡಿದೆ’.
ಈ ಹಿನ್ನೆಲೆಯಲ್ಲಿ ಮಾರ್ಚ್ 20ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಗಲ್ಫ್ ರಾಷ್ಟ್ರಗಳಲ್ಲಿ ಬಿಡುಗಡೆಯಾಗ ಬೇಕಾಗಿದ್ದ “ಇಂಗ್ಲಿಷ್” ತುಳು ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿದೆ.
ಚಿತ್ರದ ನಿರ್ಮಾಪರಾದ ಹರೀಶ್ ಶೇರಿಗಾರ್ ಇಚ್ಚೆಯಂತೆ ಚಿತ್ರಮಂದಿರದ ವಿಚಾರದಲ್ಲಿ ಯಾರಿಗೂ ತೊಂದರೆಯಾಗದಂತೆ ನೋಡಿಕೊಂಡು ಚಿತ್ರ ಬಿಡುಗಡೆಯ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದರು.
“ಇಂಗ್ಲಿಷ್” – ಎಂಕ್ಲೆಗ್ ಬರ್ಪುಜಿ Bro ತುಳು ಸಿನಿಮಾದ ವರ್ಲ್ಡ್ ಪ್ರಿಮಿಯರ್ ಶೋ ಇತ್ತೀಚಿಗೆ ದುಬೈಯಲ್ಲಿ ನಡೆದಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಚಿತ್ರ ನೋಡಿದ ಪ್ರತಿಯೊಬ್ಬರು ಚಿತ್ರವನ್ನು ಮುಕ್ತ ಕಂಠದಿಂದ ಹಾಡಿ ಹೊಗಳಿದ್ದಾರೆ.
ಚಿತ್ರ ಉತ್ತಮವಾಗಿ ಮೂಡಿ ಬಂದಿದ್ದು, ಚಿತ್ರ ಬಿಡುಗಡೆಯ ಬಳಿಕ ಪ್ರತಿಯೊಬ್ಬರು ಚಿತ್ರವನ್ನು ವೀಕ್ಷಿಸಿ ಚಿತ್ರಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಸೂರಜ್ ಶೆಟ್ಟಿ ಮನವಿ ಮಾಡಿಕೊಂಡರು.
ನಟ ನವೀನ್ ಡಿ.ಪಡೀಲ್ ಮಾತನಾಡಿ, ಕೊರೊನ ಬಗ್ಗೆ ಮುಂಜಾಗೃತೆ ವಹಿಸುವ ನಿಟ್ಟಿನಲ್ಲಿ ಸರ್ಕಾರದ ಆದೇಶ ಬಂದಿದ್ದು, ಇದಕ್ಕೆ ನಾವೆಲ್ಲಾ ಸಹಕಾರ ನೀಡಬೇಕಾದದ್ದು ಅನಿವಾರ್ಯ.
ಜನರ ಆರೋಗ್ಯದ ದೃಷ್ಠಿಯಿಂದ ಸರ್ಕಾರದ ಆದೇಶಕ್ಕೆ ಗೌರವ ನೀಡಿ ಚಿತ್ರ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ.
ಮುಂದಿನ ದಿನಾಂಕವನ್ನು ಶೀಘ್ರದಲ್ಲೆ ತಿಳಿಸುತ್ತೇವೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ನಿರ್ಮಾಪಕ ಹರೀಶ್ ಶೇರಿಗಾರ್ ಅವರ ಸಹೋದರ ಶ್ರೀನಿವಾಸ್ ಶೇರಿಗಾರ್, ಕೊರೊನ ವೈರಸ್ ದೇಶವ್ಯಾಪಿ ಹರಡುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳ ಜೊತೆ ಕೈಜೋಡಿಸಿಕೊಂಡು ಜನಜಾಗೃತಿ ಮೂಡಿಸುವ ಕೆಲಸವನ್ನು ಮಾಧ್ಯಮದವರು ಮಾಡುತ್ತಿರುವುದು ಶ್ಲಾಘನೀಯ ಎಂದರು.
You may like
LATEST NEWS
ಪ್ರೀತಿ ಗುಟ್ಟು ರಟ್ಟು: ಆ*ತ್ಮಹ*ತ್ಯೆಗೆ ಶರಣಾದ ಪಿಯುಸಿ ವಿದ್ಯಾರ್ಥಿನಿ
Published
16 hours agoon
22/01/2025ಮಂಗಳೂರು/ಹೈದರಾಬಾದ್: ಬಾಯ್ಫ್ರೆಂಡ್ ಜೊತೆ ಚಾಟ್ ಮಾಡುತ್ತಿದ್ದ ವಿಷಯ ಮನೆಯವರಿಗೆ ಗೊತ್ತಾಯಿತು ಎಂದು ಹೆದರಿ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆ*ತ್ಮಹ*ತ್ಯೆಗೆ ಶರಣಾಗಿರುವ ಘಟನೆ ಮಂಗಳವಾರ (ಜ.21ರಂದು) ಹೈದರಾಬಾದ್ನಲ್ಲಿ ನಡೆದಿದೆ.
ಭಾರ್ಗವಿ (19) ಆ*ತ್ಮಹ*ತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ಇಂಟರ್ ಮೀಡಿಯೇಟ್ ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿದ್ದ ಭಾರ್ಗವಿ ಹೈದರಬಾದ್ನ ಸಿದ್ದಿಪೇಟೆ ಜಿಲ್ಲೆಯ ಹಾಸ್ಟೆಲ್ನಲ್ಲಿ ವಾಸವಾಗಿದ್ದಳು.
ಇದನ್ನೂ ಓದಿ : ಶ್ವೇತಾ ಜ್ಯುವೆಲರ್ಸ್ನ ಮಾಲಿಕ ಅಶೋಕ್ ಶೇಟ್ ನಿ*ಧನ
ಭಾರ್ಗವಿ ಪ್ರಿಯಕರನ ಜತೆ ಮೊಬೈಲ್ನಲ್ಲಿ ಚಾಟ್ ಮಾಡುತ್ತಿದ್ದ ವಿಚಾರವನ್ನು ಆಕೆಯ ಸಹೋದರಿ ನೋಡಿದ್ದಾಳೆ. ಸಹೋದರಿ ಇದನ್ನು ಅಪ್ಪ – ಅಮ್ಮನಿಗೆ ಹೇಳುತ್ತಾಳೆ ಎನ್ನುವ ಭೀತಿಯಲ್ಲಿ ಭಾರ್ಗವಿ ಚಲಿಸುತ್ತಿರುವ ರೈಲಿನಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾಳೆ.
ಜಮೈ ಉಸ್ಮಾನಿಯಾ ರೈಲು ಹಳಿಯಲ್ಲಿ ಈ ಘಟನೆ ಸಂಭವಿಸಿದ್ದು, ಪೊಲೀಸರು ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಆದರೂ, ಏನು ನಡೆಯದೆಯೇ ಕ್ಷುಲ್ಲಕ ಕಾರಣಕ್ಕೆ ಸು*ಸೈಡ್ ಮಾಡಿಕೊಂಡ ಭಾರ್ಗವಿ ಕಥೆ ದುಡುಕಿನ ಫಲವೇ ಸರಿ.
BIG BOSS
ಗೌತಮಿ-ಧನರಾಜ್ ಬೆನ್ನಲ್ಲೇ ಈ ವಾರ ಫಸ್ಟ್ ಎಲಿಮಿನೇಟ್ ಆಗೋದ್ಯಾರು ?
Published
17 hours agoon
22/01/2025By
NEWS DESK3ಮಂಗಳೂರು/ಬೆಂಗಳೂರು : ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಅದ್ದೂರಿ ಗ್ರ್ಯಾಂಡ್ ಫಿನಾಲೆ ಇದೇ ವಾರದಲ್ಲಿ ನಡೆಯಲಿದೆ. ಸದ್ಯ ಬಿಗ್ ಮನೆಯಲ್ಲಿ ಒಟ್ಟು 6 ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಇವರಲ್ಲಿ ಒಬ್ಬರು ಬಿಗ್ ಬಾಸ್ನ ಫಿನಾಲೆ ವಾರದಲ್ಲೇ ಹೊರಬರ್ತಾರೆ ಎಂಬ ಕುತೂಹಲ ಮನೆ ಮಾಡಿದೆ.
ಸದ್ಯ ಅತಿ ದೊಡ್ಡ ಬಿಗ್ ಬಾಸ್ ಮನೆಯಲ್ಲಿ ಕೇವಲ ಆರು ಸ್ಪರ್ಧಿಗಳು ಮಾತ್ರ ಉಳಿದುಕೊಂಡಿದ್ದಾರೆ. ಈ ಆರು ಸ್ಪರ್ಧಿಗಳಲ್ಲಿ ಮೊದಲು ಬಿಗ್ಬಾಸ್ ಮನೆಯಿಂದ ಆಚೆ ಬರೋರು ಯಾರು ಅಂತ ಚರ್ಚೆ ಶುರುವಾಗಿದೆ.
ಹನುಮಂತ ಟಾಸ್ಕ್ ಗೆದ್ದು ನೇರವಾಗಿ ಫಿನಾಲೆಗೆ ತಲುಪಿದ್ದರು. ಈ ಬೆನ್ನಲ್ಲೇ ಹನುಮಂತು ಸೇಫ್ ಮಾಡಿರುವ ಕಾರಣದಿಂದ ಮೋಕ್ಷಿತಾ ಕೂಡ ಫಿನಾಲೆಗೆ ತಲುಪಿದ್ದರು. ಅದಾದ ಬಳಿಕ ತ್ರಿವಿಕ್ರಮ್ ಅವರು ಕೂಡ ಫಿನಾಲೆಗೆ ಎಂಟ್ರಿ ಕೊಟ್ಟರು.
ಆದರೆ ಇನ್ನು ಉಳಿದಿರುವ ಭವ್ಯಾ, ಉಗ್ರಂ ಮಂಜು ಹಾಗೂ ರಜತ್ ನಡುವೆ ಯಾರು ಫಿನಾಲೆ ವಾರದಲ್ಲಿರುವಾಗಲೇ ಹೊರ ಹೋಗುತ್ತಾರೆ ಎಂದು ಕಾದು ನೋಡಬೇಕಿದೆ.
ಇದನ್ನೂ ಓದಿ: ಸ್ಯಾಂಡಲ್ವುಡ್ ಸ್ಟಾರ್ ನಟನ ಜೊತೆ ನಟಿಸಲಿರುವ ಮೊನಾಲಿಸಾ
ಇದರಲ್ಲಿ ಹೆಚ್ಚಾಗಿ ಕೇಳಿಬರುತ್ತಿರುವ ಹೆಸರು ಭವ್ಯಾ. ಧನರಾಜ್ ಹೊರ ಹೋದಾಗಲೂ ವೀಕ್ಷಕರು ಅಸಮಾಧಾನ ಹೊರ ಹಾಕಿದ್ದರು. ಧನರಾಜ್ ಬದಲು ಭವ್ಯಾ ಹೊರಹೋಗಬೇಕಿತ್ತು ಎನ್ನುವ ಮಾತುಗಳು ಕೇಳಿಬರುತ್ತಿತ್ತು.
ಹೀಗಾಗಿ ಫಿನಾಲೆ ವಾರದಲ್ಲಿ ಭವ್ಯಾ ಅವರು ಹೊರ ಬರಬಹುದು ಎಂಬುದು ಬಿಗ್ ಬಾಸ್ ವೀಕ್ಷಕರ ಅಭಿಪ್ರಾಯವಾಗಿದೆ. ಇಷ್ಟು ದಿನ ಬಿಗ್ಬಾಸ್ ಮನೆಯಲ್ಲಿ ಇದ್ದುಕೊಂಡು ಇನ್ನೇನೂ ಕೊನೆಯ ಕ್ಷಣದಲ್ಲಿ ಎಲಿಮಿನೇಟ್ ಆಗೋದು ಯಾರು ಅಂತ ಭಾನುವಾರದ ಎಪಿಸೋಡ್ನಲ್ಲಿ ಗೊತ್ತಾಗಲಿದೆ.
LATEST NEWS
ಮಹಾಕುಂಭ ಮೇಳ : ಪುಣ್ಯಸ್ನಾನದಲ್ಲಿ ಭಾಗಿಯಾದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್
Published
17 hours agoon
22/01/2025ಮಂಗಳೂರು/ಉತ್ತರ ಪ್ರದೇಶ : ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮುಸ್ಲೀಮರು ಬಂದು ನದಿಯಲ್ಲಿ ಮಿಂದರೆ ಅದರ ಪಾವಿತ್ರ್ಯತೆ ಹಾಳಾಗುತ್ತದೆ ಎಂದು ನಿಷಿದ್ಧವಿತ್ತು. ಈ ನಡುವೆಯೂ ಮೊಹಮ್ಮದ್ ಕೈಫ್ ತ್ರಿವೇಣಿ ಸಂಗಮದ ಪುಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ್ದು, ಆ ವೇಳೆ ಯಮನಾ ನದಿಯಲ್ಲಿ ಸ್ನಾನ ಮಾಡಿದ್ದು ಸಾಧು ಸಂತರೇ ಇದಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
ಪ್ರಯಾಗರಾಜ್ ನಲ್ಲಿ ವಿಶ್ವದ ಅತೀ ದೊಡ್ಡ ಧಾರ್ಮಿಕ ಹಬ್ಬ ಮಹಾಕುಂಭ ಮೇಳ ಆರಂಭವಾಗಿದ್ದು, ಬಹಳ ಸಂಭ್ರಮದಿಂದ ಸಾಗುತ್ತಿದೆ. ಅನೇಕ ನಟ-ಟಿಯರು, ಸಾಧು-ಸಂತರು ಆಗಮಿಸಿ ಪುಣ್ಯಸ್ನಾನದಲ್ಲಿ ಬಾಗಿಯಾಗುತ್ತಿದ್ದಾರೆ. ಈ ನಡೆವೆ ಮಾಜಿ ಕ್ರಿಕೆಟರ್ ಮೊಹಮ್ಮದ್ ಕೈಫ್ ಯಮುನಾ ನದಿಯಲ್ಲಿ ಮಿಂದ ಸುದ್ಧಿ ಭಾರೀ ವೈರಲ್ ಆಗುತ್ತಿದೆ. “ಏ.. ಇದೇ ಯಮುನಾ ನದಿಯಲ್ಲಿ ನಾನು ಈಜು ಕಲಿತದ್ದು’ ಎಂಬ ಶೀರ್ಷಿಕೆ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಯಮುನಾ ನದಿ ಮತ್ತು ತಮ್ಮ ಬಾಲ್ಯದ ನೆನಪನ್ನು ಸ್ಮರಿಸಿಕೊಂಡು ಕೈಫ್, ನದಿಯಲ್ಲಿ ಈಜಾಡುವ ಪೋಸ್ಟ್ ಸಾಕಷ್ಟು ಜನರ ಮೆಚ್ಚುಗೆಗೂ ಕಾರಣವಾಗಿದೆ.
ಇದನ್ನೂ ಓದಿ : ಸ್ಯಾಂಡಲ್ವುಡ್ ಸ್ಟಾರ್ ನಟನ ಜೊತೆ ನಟಿಸಲಿರುವ ಮೊನಾಲಿಸಾ
LATEST NEWS
ಸ್ಯಾಂಡಲ್ವುಡ್ ಸ್ಟಾರ್ ನಟನ ಜೊತೆ ನಟಿಸಲಿರುವ ಮೊನಾಲಿಸಾ
ಶ್ವೇತಾ ಜ್ಯುವೆಲರ್ಸ್ನ ಮಾಲಿಕ ಅಶೋಕ್ ಶೇಟ್ ನಿ*ಧನ
ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಬಿಗ್ ಬಾಸ್ ಸ್ಪರ್ಧಿ ಕೀರ್ತಿ ಮತ್ತು ಜೈತ್ರಾ ಕುಂದಾಪುರ: ಆಶೀಶ್ ಮೈಕಾಲ
ಡಾಲಿ ಚಾಯ್ ವಾಲಾ ಮಂಗಳೂರಿನವನಲ್ಲ, ಇಲ್ಲದಿದ್ದರೆ ಅವನ ಅಂಗಡಿ ಮೇಲೆ ಬುಲ್ಢೋಝರ್ ಹೋಗ್ತಿತ್ತು-ರಾಜ್ ಬಿ ಶೆಟ್ಟಿ
ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ಇನ್ಮುಂದೆ ಹಾಯಾಗಿ ಕಳೆಬಹುದು ನಿವೃತ್ತಿ ಜೀವನ
ಟರ್ಕಿಯ ಸ್ಕಿ ರೆಸಾರ್ಟ್ನಲ್ಲಿ ಅಗ್ನಿ ಅವಘಡ; ಮೃತರ ಸಂಖ್ಯೆ 76ಕ್ಕೆ ಏರಿಕೆ
Trending
- BIG BOSS17 hours ago
ಗೌತಮಿ-ಧನರಾಜ್ ಬೆನ್ನಲ್ಲೇ ಈ ವಾರ ಫಸ್ಟ್ ಎಲಿಮಿನೇಟ್ ಆಗೋದ್ಯಾರು ?
- BIG BOSS3 days ago
ಬಿಗ್ ಬಾಸ್ ತೊರೆಯುವ ಬಗ್ಗೆ ಮತ್ತೊಮ್ಮೆ ಘೋಷಣೆ ಮಾಡಿದ ಕಿಚ್ಚ
- BIG BOSS3 days ago
ಬಿಗ್ ಬಾಸ್ ಸೀಸನ್ 11ರ ವಿನ್ನರ್ ಒಬ್ಬರಲ್ಲ ಇಬ್ಬರು… ಅಷ್ಟಕ್ಕೂ ಟ್ರೋಫಿ ನೀಡಿದ ಸುಳಿವೇನು ?
- FILM3 days ago
ಕಾಂತಾರ ಚಿತ್ರತಂಡಕ್ಕೆ ಎಚ್ಚರಿಕೆ ಕೊಟ್ಟ ಗ್ರಾಮಸ್ಥರು