Tuesday, May 30, 2023

ಚಪ್ಪಲಿ ಹಾಕಿಕೊಂಡೇ ದೈವದ ದೀವಟಿಗೆ ಹಿಡಿದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ತುಳುವರು ಗರಂ

ಬೆಂಗಳೂರು: ‘ಕಾಂತಾರ’ ಸಿನಿಮಾ ಬಿಡುಗಡೆಗೊಂಡ ಬಳಿಕ ದೈವಾರಾಧನೆಗೆ ಸಂಬಂಧಪಟ್ಟಂತೆ ಅನೇಕ ವಾದ ವಿವಾದಗಳು ವಿಭಿನ್ನವಾದ ಮಜಲುಗಳನ್ನು ಪಡೆದುಕೊಳ್ಳುತ್ತಿದೆ. ಇದೇ ಸಂದರ್ಭ ಬೆಂಗಳೂರಿನ ಸಂಸದ ತೇಜಸ್ವಿ ಸೂರ್ಯ ದೈವಾರಾಧನೆಗೆ ಅವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬರುತ್ತಿದ್ದು ಕರಾವಳಿಗರು ಸಿಡಿದೆದ್ದಿದ್ದಾರೆ.

ಫೋಟೋ: ಪಬ್ಲಿಕ್ ಟಿವಿ ಕೃಪೆ

ನಿನ್ನೆ ಬೆಂಗಳೂರಿನಲ್ಲಿ ರಾಷ್ಟ್ರೋತ್ಥಾನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದೈವರಾಧನೆಯ ಕಾರ್ಯಕ್ರಮವಿತ್ತು. ಇದರಲ್ಲಿ ತೇಜಸ್ವಿ ಅವರು ಚಪ್ಪಲಿ ಧರಿಸಿ ದೈವದ ದೀವಟಿಕೆ ಹಿಡಿದು ಪೋಸ್ ಕೊಟ್ಟಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.


ಈ ಬಗ್ಗೆ ದೈವವನ್ನು ಪೂಜ್ಯ ಭಾವದಿಂದ ಆರಾಧಿಸಿಕೊಂಡು ಬರುತ್ತಿರುವ ತುಳುನಾಡಿನ ಜನರೂ ಕೂಡಾ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಫೋಟೋ ವೈರಲ್ ಬೆನ್ನಲ್ಲೇ ದೈವಾರಾಧನೆಗೆ ತೇಜಸ್ವಿ ಅವಮಾನ ಮಾಡಿದ್ದಾರೆ ಎನ್ನುವ ಆಕ್ರೋಶಭರಿತ ಹೇಳಿಕೆಗಳು ಹೊರಬಿದ್ದಿದೆ.

ಸದ್ಯ ಈ ಫೋಟೊವನ್ನು ಸಾಮಾಜಿಕ ಜಾಲತಾಣದಿಂದ ಸಂಸದರು ಡಿಲೀಟ್ ಮಾಡಿದ್ದಾರೆ.

2 COMMENTS

  1. ದೋಸೆ ಸೂರ್ಯ, ದೋಸೆ ಸೂರ್ಯಾ, ದೂಸೇ ಸೂರ್ಯಾ, ದೋಸೇ ಸೂರ್ಯಾ

LEAVE A REPLY

Please enter your comment!
Please enter your name here

Hot Topics