LATEST NEWS
ಭೂಕಂಪಕ್ಕೆ ನಲುಗಿದ ಟರ್ಕಿ-ಸಿರಿಯಾ: 15,000 ದಾಟಿದ ಮೃತರ ಸಂಖ್ಯೆ-ಏರುತ್ತಲೇ ಇದೆ ಸಾವಿನ ಲೆಕ್ಕ..!
ಟರ್ಕಿ: ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 15,000ಕ್ಕೆ ಏರಿಕೆಯಾಗಿ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,391 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 2,992 ಮಂದಿ ಸಾವನ್ನಪ್ಪಿದ್ದಾರೆ.
ಈ ಅಂಕಿ ಅಂಶ ಇನ್ನೂ ಏರುತ್ತಲೇ ಇದೆ.
ಟರ್ಕಿ-ಸಿರಿಯಾ ಭೂಕಂಪದಿಂದ ಸಾವಿನ ಸಂಖ್ಯೆ 15,000 ದಾಟಿದ ಎಂದು ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರು ದೃಢಪಡಿಸಿದ್ದಾರೆ. ಹವಾಮಾನ ಪರಿಸ್ಥಿತಿಗಳು ಭೂಕಂಪದಿಂದ ಉಂಟಾದ ವಿನಾಶದ ಪ್ರಮಾಣವನ್ನು ಹೆಚ್ಚಿಸಿವೆ ಎಂದು ಅವರು ಹೇಳಿದ್ದಾರೆ.
ಸಿರಿಯಾದಲ್ಲಿ ಒಟ್ಟು ಸಾವಿನ ಸಂಖ್ಯೆ 2,992 ಕ್ಕೆ ತಲುಪಿದೆ. ವಾಯುವ್ಯದಲ್ಲಿ ಬಂಡುಕೋರರ ಹಿಡಿತದಲ್ಲಿರುವ ಪ್ರದೇಶಗಳಲ್ಲಿ 1,730 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.
2011ರಲ್ಲಿ ಜಪಾನ್ ನಲ್ಲಿ ಭೂಕಂಪನ ಹಾಗೂ ಅದರಿಂದ ಸೃಷ್ಟಿಯಾದ ಸುನಾಮಿಗೆ 20000 ಮಂದಿ ಬಲಿಯಾಗಿದ್ದರು. ಅದಾದ ನಂತರ ಕಳೆದೊಂದು ದಶಕದ ಅವಧಿಯಲ್ಲಿ ಸಂಭವಿಸಿದ ಘೋರ ಪ್ರಕೃತಿ ವಿಕೋಪ ಈ ಭೂಕಂಪವಾಗಿದೆ.
ಈ ನಡುವೆ ಭೂಕಂಪನದಿಂದಾಗಿ ನೆಲಕಚ್ಚಿರುವ ಸಹಸ್ರಾರು ಕಟ್ಟಡಗಳ ಅವಶೇಷಗಳಡಿ ಸಿಲುಕಿರುವ ಜರನ್ನು ರಕ್ಷಣಾ ಸಿಬ್ಬಂದಿ ಹಗಲು-ರಾತ್ರಿ ಎನ್ನದೆ ರಕ್ಷಿಸಲು ಟರ್ಕಿಯಲ್ಲಿ ಅತೀವ ಪ್ರಯತ್ನ ಮುಂದುರೆಸಿದ್ದಾರೆ. ಆದರೆ, ಇಂತಹ ಸಿಬ್ಬಂದಿ ಸಂಖ್ಯೆ ಕೇವಲ 60 ಸಾವಿರದಷ್ಟಿದೆ. ಭೂಕಂಪದಿಂದ ಹಾನಿಗೆ ಒಳಗಾದ ಪ್ರದೇಶಗಳು ಅಪಾರವಾಗಿರುವುದರಿಂದ ಕಟ್ಟಡಗಳ ಅವಶೇಷಗಳಡಿ ಸಿಲುಕಿರುವ ಜನರು ನೆರವಿಗಾಗಿ ಮೊರೆ ಇಡುತ್ತಿದ್ದಾರೆ.
ಅವರ ಆಕ್ರಂದನ ಮುಗಿಲು ಮುಟ್ಟಿದೆ. ಇದೀಗ ಎರಡು ಡಜನ್ ರಾಷ್ಟ್ರಗಳಿಂದ ರಕ್ಷಣಾ ಸಿಬ್ಬಂದಿ ಟರ್ಕಿ ಹಾಗೂ ಸಿರಿಯಾಗೆ ತೆರಳಿ, ಜನರ ರಕ್ಷಣೆಗೆ ನೆರವಾಗುತ್ತಿದ್ದಾರೆ.
BELTHANGADY
ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!
ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ 8 ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ಏ.19ರಂದು ನಡೆದಿದೆ. ಉಪ್ಪಿನಂಗಡಿಯ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8 ನೇ ತರಗತಿ ವಿದ್ಯಾರ್ಥಿಯಾಗಿದ್ದ ನಂದನ್ (13) ಎಂಬಾತ ಆತ್ಮಹತ್ಯೆಗೆ ಶರಣಾದ ಬಾಲಕ.
Read More..; ನಗರ ಸಭೆ ಉಪಾಧ್ಯಕ್ಷೆ ಮಗ ಸೇರಿ ನಾಲ್ವರ ಹ*ತ್ಯೆ! ಹಂ*ತಕರ ಪತ್ತೆಗೆ ವಿಶೇಷ ತಂಡ ರಚನೆ
ಪಂಜದ ದಿವಂಗತ ರೋಹಿತ್ ಗೌಡ ಎಂಬವರ ಮಗನಾಗಿದ್ದ ಈತ ತನ್ನ ತಂದೆಯ ನಿಧನದ ನಂತರ ದುಗಲಾಡಿಯ ಮಾವನ ಮನೆಯಲ್ಲಿದ್ದ. ಅಲ್ಲಿಂದಲೆ ಉಪ್ಪಿನಂಗಡಿಯ ಖಾಸಗಿ ಶಾಲೆಗೆ ಹೋಗುತ್ತಿದ್ದ. ಈತ ಈ ಬಾರಿ ಏಳನೇ ತರಗತಿ ಉತ್ತೀರ್ಣನಾಗಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ 8 ನೇ ತರಗತಿಗೆ ತೇರ್ಗಡೆ ಹೊಂದಿದ್ದ. ಏ.19ರಂದು ತನ್ನ ಕೆಟ್ಟು ಹೋಗಿದ್ದ ಸೈಕಲ್ ಅನ್ನು ರಿಪೇರಿ ಮಾಡಿಕೊಡಬೇಕೆಂದು ಮನೆಯಲ್ಲಿ ಒತ್ತಾಯಿಸಿದ್ದ. ಮನೆಯ ಇನ್ವಾರ್ಟರ್ ರಿಪೇರಿಗೆ ಬಂದಿರುವುದರಿಂದ ಇವತ್ತು ಬೇಡ ನಾಳೆ ಸೈಕಲ್ ರಿಪೇರಿ ಮಾಡಿಕೊಡಲಾಗುವುದೆಂದು ಮನೆಯವರು ಹೇಳಿದ್ದಾರೆ ಎನ್ನಲಾಗಿದೆ. ಇದೇ ನೆಪವನ್ನು ಇಟ್ಟುಕೊಂಡು ಮನನೊಂದ ಬಾಲಕ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಎಲ್ಲಾ ವಿಚಾರವನ್ನು ಮನೆಯವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಸದ್ಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.
FILM
ನೇಹಾ ಹ*ತ್ಯೆ ಪ್ರಕರಣ : ಆಕ್ರೋಶ ಹೊರ ಹಾಕಿದ ಸಿನಿತಾರೆಯರು
ಬೆಂಗಳೂರು : ಹುಬ್ಬಳ್ಳಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾ ಹ*ತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಪೊಲೀಸರು ಈಗಾಗಲೇ ಆರೋಪಿ ಫಯಾಜ್ ನನ್ನು ಬಂಧಿಸಿದ್ದಾರೆ. ಈ ಘಟನೆಗೆ ರಾಜ್ಯವ್ಯಾಪಿ ಆಕ್ರೋಶ ಕೇಳಿ ಬಂದಿದೆ.
ಇದೀಗ ಸಿನಿ ತಾರೆಯರೂ ಕೂಡ ಘಟನೆಗೆ ಕಿಡಿಕಾರಿದ್ದಾರೆ. ಈ ಬಗ್ಗೆ ಆಕ್ರೋಶ ಹೊರಹಾಕುತ್ತಿದ್ದಾರೆ.
ಅತ್ಯಂತ ಹೀನ ಕೃತ್ಯ
ನಟ ಧ್ರುವ ಸರ್ಜಾ ಅವರು ಟ್ವೀಟ್ ಮಾಡಿ, ಸಹೋದರಿ ನೇಹಾ ಹಿರೇಮಠ್ ರ ಹ*ತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್ ಲಿ ಹ*ತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರದಲ್ಲೇ ತ್ವರಿತಗತಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಹಾಗು ಇದನ್ನ ಎಲ್ಲಾ ಆಯಮದಲ್ಲೂ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡುವಂತಾಗಬೇಕು. ಜೈ ಆಂಜನೇಯ ಎಂದಿದ್ದಾರೆ.
ಮಹಿಳೆಯರಿಗೆ ಸುರಕ್ಷತೆ ಎಲ್ಲಿದೆ?
ಘಟನೆ ಬಗ್ಗೆ ನಟಿ, ನಿರ್ಮಾಪಕಿ ರಕ್ಷಿತಾ ಪ್ರೇಮ್ ಆಕ್ರೋಶ ಹೊರ ಹಾಕಿದ್ದಾರೆ. ನೇಹಾ ಹಿರೇಮಠ್ಗೆ ನ್ಯಾಯ ಸಿಗಲೇಬೇಕು. ಮಹಿಳೆಯರಿಗೆ ಸುರಕ್ಷತೆ ಎಲ್ಲಿದೆ? ಕಾಲೇಜಿಗೆ ಹೋಗುವ ಯುವತಿಯರಿಗೂ ಕೂಡ ರಕ್ಷಣೆ ಇಲ್ಲ. ಶೇಮ್ ಶೇಮ್ ಎಂದಿದ್ದಾರೆ.
ಪ್ರೀತಿಸಬೇಕು ಅಂತ ಅದ್ಹೇಗೆ ಒತ್ತಾಯಿಸಲು ಸಾಧ್ಯ? ಪ್ರೀತಿಯನ್ನ ಒಪ್ಪಿಕೊಳ್ಳಲಿಲ್ಲ ಅಂತ ಬರ್ಬರವಾಗಿ ಹುಬ್ಬಳ್ಳಿ ಕಾಲೇಜ್ ಕ್ಯಾಂಪಸ್ನಲ್ಲೇ ಹ*ತ್ಯೆ ಮಾಡಿದ್ದಾನೆ. ಅದೆಂಥಾ ಮೈಂಡ್ ಸೆಟ್ ಹೊಂದಿದ್ದಾರೆ ಆ ವಯಸ್ಸಿನ ಹುಡುಗರು? ಪೋಷಕರಾಗಿ ನಮ್ಮ ಗಂಡು ಮಕ್ಕಳಿಗೆ ಕೆಲವು ಬೇಸಿಕ್ ಸಂಗತಿಗಳನ್ನ ನಾವು ಹೇಳಿಕೊಡಲೇಬೇಕು. ಅದನ್ನೆಲ್ಲಾ ಶಾಲಾ ಕಾಲೇಜುಗಳಲ್ಲಿ ಕಲಿಸುವುದಿಲ್ಲ. ಇದನ್ನ ಸಹಿಸಲು ಸಾಧ್ಯವೇ ಇಲ್ಲ. ಶೇಮ್ ಶೇಮ್. ಪೋಷಕರಾಗಿ ನನ್ನ ಹೃದಯ ಛಿದ್ರವಾಗುತ್ತಿದೆ ಎಂದು ರಕ್ಷಿತಾ ಪ್ರೇಮ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ : ನಗರ ಸಭೆ ಉಪಾಧ್ಯಕ್ಷೆ ಮಗ ಸೇರಿ ನಾಲ್ವರ ಹ*ತ್ಯೆ! ಹಂ*ತಕರ ಪತ್ತೆಗೆ ವಿಶೇಷ ತಂಡ ರಚನೆ
ಎನ್ಕೌಂಟರ್ ಮಾಡಬೇಕು :
ನಟಿ ಕಾವ್ಯಾ ಶಾಸ್ತ್ರಿಯೂ ತಮ್ಮ ಇನ್ಸ್ಟಾ ಗ್ರಾಂ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ಹಂ*ತಕ ಫಯಾಜ್ನನ್ನು ಎನ್ಕೌಂಟರ್ ಮಾಡಬೇಕು. ಅವನಿಗೆ ಯಾವುದೇ ಕರುಣೆ ಬೇಕಾಗಿಲ್ಲ. ನೇಹಾ ಹಿರೇಮಠ್ ಕೊ*ಲೆ ಖಂಡನೀಯ. ಕೊ*ಲೆಗಾರನಿಗೆ ಸಿಗುವ ಶಿಕ್ಷೆ ಎಲ್ಲರಿಗೂ ಪಾಠವಾಗಬೇಕು ಎಂದು ಬರೆದುಕೊಂಡಿದ್ದಾರೆ.
ಘಟನೆ ಏನು ?
ಹುಬ್ಬಳ್ಳಿ ಕಾರ್ಪೋರೇಟರ್ ನಿರಂಜನ್ ಹಿರೇಮಠ ಅವರ ಮಗಳು ನೇಹಾ ಹಿರೇಮಠಳನ್ನು ಫಯಾಜ್ ಎಂಬಾತ ಕಾಲೇಜ್ ಕ್ಯಾಂಪಸ್ ನಲ್ಲಿ ಚಾಕುವಿನಿಂದ ಇರಿದು ಎಪ್ರಿಲ್ 18 ರಂದು ಹ*ತ್ಯೆ ಮಾಡಿದ್ದ. ಹುಬ್ಬಳ್ಳಿಯ ಕೆಎಲ್ ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನೇಹಾ ಪ್ರಥಮ ವರ್ಷದ ಎಂಸಿಎ ಓದುತ್ತಿದ್ದಳು. ಸದ್ಯ ಪ್ರಕರಣದ ಬಗ್ಗೆ ತೀವ್ರ ಆಕ್ರೋಶ ಕೇಳಿ ಬಂದಿದೆ. ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು ಎಂಬ ಆಗ್ರಹ ಕೇಳಿ ಬಂದಿದೆ.
LATEST NEWS
ಮೋದಿ ಹಾಡು ಶೇರ್ ಮಾಡಿ ಎಂದಿದಕ್ಕೆ ಹಿಗ್ಗಾಮುಗ್ಗ ಯುವಕನಿಗೆ ಥಳಿತ..! ಏನಿದು ಪ್ರಕರಣ?
ಮೈಸೂರು: ಯುವಕನೊಬ್ಬ ಪ್ರಧಾನಿ ನರೇಂದ್ರ ಮೋದಿ ಕುರಿತಾದ ಹಾಡೊಂದನ್ನು ಶೇರ್ ಮಾಡುವಂತೆ ಹೇಳಿದ್ದಕ್ಕೆ ಅನ್ಯಕೋಮಿನ ಯುವಕರು ಹಿಗ್ಗಾಮುಗ್ಗ ಥಳಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಪ್ರಕರಣದ ಕುರಿತು ನಜರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read More..; ಚುನಾವಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿ.. 40 ಮಂದಿಗೆ ಗಾಯ
ಏನಿದು ಪ್ರಕರಣ?
ರೋಹಿತ್ ರಮಣ ಎಂಬ ಯುವಕ ಮೋದಿಗೆ ಸಂಬಂಧಪಟ್ಟ ಹಾಡನ್ನು ಎಲ್ಲೆಡೆ ಶೇರ್ ಮಾಡುತ್ತಿದ್ದರು. ಮೈಸೂರಿನ ಸರಕಾರಿ ಗೆಸ್ಟ್ ಹೌಸ್ನಲ್ಲಿ ರೋಹಿತ್ ಕುಳಿತಿದ್ದಾಗ, ಈ ವೇಳೆ ಅಲ್ಲಿಗೆ ಬಂದ ಯುವಕನೊಬ್ಬನಿಗೆ ಮೋದಿಯ ಹಾಡನ್ನು ತೋರಿಸುತ್ತಾನೆ. ಆತ ಸಾಂಗ್ ಬಹಳ ಚೆನ್ನಾಗಿದೆ. ನನ್ನ ಸ್ನೇಹಿತರಿಗೂ ತೋರಿಸು ಎಂದು ಹೇಳಿ ನಿರ್ಜನ ಪ್ರದೇಶಕ್ಕೆ ರೋಹಿತ್ನನ್ನು ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಅನ್ಯಕೋಮಿನ ಯುವಕರ ತಂಡ ರೋಹಿತ್ನನ್ನು ಹಿಗ್ಗಾಮುಗ್ಗ ಥಳಿಸಿ, ಮುಖಕ್ಕೆ ಬಿಯರ್ ಸುರಿದರು. ನನ್ನ ಕೈ ಕೊಯ್ದು ಮೈಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮಿಪುರಂ ಪೊಲೀಸ್ ನೇತೃತ್ವದಲ್ಲಿ ಹಲ್ಲೆಗೊಳಗಾದ ಯುವಕ ರೋಹಿತ್ನ ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಪ್ರಕರಣ ನಜರಬಾದ್ ಠಾಣೆ ವ್ಯಾಪ್ತಿಗೆ ಬರುವುದರಿಂದ ಅಲ್ಲಿಗೆ ವರ್ಗಾಯಿಸಲಾಗಿದೆ.