Connect with us

    BIG BOSS

    Bigg Boss: ಕ್ರೇನ್ ಮೂಲಕ ನುಗ್ಗಿದ ಮುಸುಕುಧಾರಿಗಳು.. ಬಿಗ್​​ಬಾಸ್​ ಮನೆಯ ವಸ್ತುಗಳೆಲ್ಲ ಪೀಸ್​ ಪೀಸ್…

    Published

    on

    ಆಯುಧ ಪೂಜೆಯ ಸಡಗರದಲ್ಲಿರುವ ಬಿಗ್​ಬಾಸ್​​ ಅಭಿಮಾನಿಗಳಿಗೆ ಇಂದು ರಾತ್ರಿ ಸಖತ್ ಥ್ರಿಲ್ಲಿಂಗ್ ಇದೆ. ಇಂದು ರಾತ್ರಿ 9.30ಕ್ಕೆ ಪ್ರಸಾರವಾಗುವ ಎಪಿಸೋಡ್​ನ ಪ್ರೊಮೋ ಒಂದು ರಿಲೀಸ್ ಆಗಿದ್ದು, ಅಭಿಮಾನಿಗಳ ಎಕ್ಸೈಟ್​ಮೆಂಟ್​ ಇನ್ನಷ್ಟು ಹೆಚ್ಚಿಸಿದೆ.

    ಬಿಗ್​​ಬಾಸ್ ಮನೆಗೆ ಅಪರಿಚಿತರ ಎಂಟ್ರಿಯಾಗಿದೆ. ಆರಂಭದಲ್ಲಿ ದೊಡ್ಡ ಸೈರನ್ ಆಗುತ್ತದೆ. ಕೂಡಲೇ ಬಿಗ್​ಬಾಸ್​ ಸ್ಪರ್ಧಿಗಳು ಗಾಬರಿಯಾಗಿ ಕೂಗಿಕೊಂಡಿದ್ದಾರೆ. ಎಲ್ಲಿ ಏನಾಗುತ್ತಿದೆ ಅನ್ನುವಷ್ಟರಲ್ಲಿ ಸೈರನ್ ಜೋರಾಗಿದೆ. ಕೊನೆಗೆ ಗಾರ್ಡನ್ ಏರಿಯಾಗೆ ಕ್ರೇನ್ ಮೂಲಕ ಮುಸುಕುಧಾರಿಗಳು ಎಂಟ್ರಿಯಾಗಿದ್ದಾರೆ. ಇದನ್ನು ನೋಡಿದ ಸ್ಪರ್ಧಿಗಳು ಏನಾಯ್ತು? ಯಾರವರು ಅಂದ್ಕೊಂಡು ಗಾಬರಿಯಾಗಿದ್ದಾರೆ.

    ಕಪ್ಪು ಬಣ್ಣದ ಬಟ್ಟೆ ತೊಟ್ಟ ಉಗ್ರಗಾಮಿಗಳಂತೆ ಮುಸುಕು ಧರಿಸಿ ಬಂದ 10 ಜನರ ತಂಡ, ಬಿಗ್​ಬಾಸ್​ ಮನೆಯಲ್ಲಿದ್ದ ಕೆಲವು ವಸ್ತುಗಳನ್ನು ಕುಟ್ಟಿ ಪುಡಿಮಾಡಿದ್ದಾರೆ. ಈ ಪ್ರೋಮೋ ನೊಡಿದ ಅಭಿಮಾನಿಗಳು ಸ್ವರ್ಗ-ನರಕ ಇಂದಿಗೆ ಕೊನೆಗೊಂಡಿದೆ ಎಂದು ಮಾತನಾಡಿಕೊಳ್ತಿದ್ದಾರೆ. ಸ್ವರ್ಗ-ನರಕ ಕಾನ್ಸೆಪ್ಟ್​ಗೆ ಏನಾಯ್ತು? ಎರಡೇ ವಾರಕ್ಕೆ ನಿಂತು ಹೋಯ್ತಾ ಎಂದು ಕೆಲವರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಾರೆ ಇಂದು ನಡೆಯುವ ಎಪಿಸೋಡ್ ತುಂಬಾ ಕುತೂಹಲಕಾರಿಯಾಗಿದ್ದು, ವೀಕ್ಷಕರು ಎಕ್ಸೈಟ್ ಆಗಿದ್ದಾರೆ.

    BIG BOSS

    ಬಿಗ್ ಬಾಸ್ ಮನೆಯ ಸ್ವರ್ಗ ನರಕ ಇನ್ನಿಲ್ಲ.. ಕಾರಣ ಏನು ಗೊತ್ತಾ ?

    Published

    on

    ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್​ 11 ಗ್ರ್ಯಾಂಡ್​ ಆಗಿ ಓಪನಿಂಗ್​ ಪಡೆದುಕೊಂಡು ಎರಡು ವಾರ ಕಳೆದಿದೆ. ಇದೇ ಎರಡು ವಾರದಲ್ಲಿ ಬಿಗ್​ಬಾಸ್​ ಮನೆಯಲ್ಲಿ ನಡೆಯಬಾರದ ಘಟನೆಯೊಂದು ನಡೆದು ಹೋಗಿದೆ.

    ಹೌದು, ಸೆಪ್ಟೆಂಬರ್ 29ರಂದು ಬಹಳ ಅದ್ಧೂರಿಯಾಗಿ ಬಿಗ್​ಬಾಸ್​ ಓಪನಿಂಗ್ ಪಡೆದುಕೊಂಡಿತ್ತು. ಆದರೆ ಇದೀಗ ಬಿಗ್​ಬಾಸ್​ ಮನೆ ಪೂರ್ತಿಯಾಗಿ ಬದಲಾಗಿ ಬಿಟ್ಟಿದೆ. ಇಷ್ಟು ದಿನ ನರಕ ಸ್ವರ್ಗ ಎಂಬ ಎರಡು ಕಾನ್ಸೆಪ್ಟ್​ಗಳನ್ನು ಒಳಗೊಂಡಿತ್ತು. ಆದರೆ ಬಿಗ್​ಬಾಸ್ ಮನೆಯ ಆಟದ ಶೈಲಿ ಈಗ ಬದಲಾಗಿ ಬಿಟ್ಟಿದೆ.

    ನರಕದ ಮನೆಯನ್ನೇ ಬಿಗ್​ಬಾಸ್ ತಂಡ ಒಡೆದು ಹಾಕಿದೆ. ಮಹಿಳಾ‌‌ ಆಯೋಗ ಎಂಟ್ರಿ ಬೆನ್ನಲ್ಲೇ ನರಕವನ್ನು ಡೆಮಾಲಿಷ್​ ಮಾಡಲಾಗಿದೆ. ಮಹಿಳೆಯರ ಖಾಸಗಿತನಕ್ಕೆ ಧಕ್ಕೆ ಸಂಬಂಧ ಬಿಗ್​ಬಾಸ್​ ಕಾರ್ಯಕ್ರಮದ ವಿರುದ್ಧ ದೂರು ದಾಖಲಾಗಿತ್ತು. ಹೀಗಾಗಿ ಮಹಿಳಾ ಆಯೋಗವು 5 ದಿನದ ಡೆಡ್ ಲೈನ್ ಕೊಟ್ಟಿತ್ತು. ಅದರಂತೆ ಇಂದಿನ ಎಪಿಸೋಡ್​​ನಲ್ಲಿ ಬಿಗ್​ಬಾಸ್​ ತಂಡ ಬಿಗ್​ ಮನೆಗೆ ಹೋಗಿ ನರಕದ ಬೇಲಿ ತೆರವು ಮಾಡಿದ್ದಾರೆ.

    ಇನ್ನು, ಬಿಗ್​ಬಾಸ್​ ಮನೆಗೆ ಎಂಟ್ರಿ ಕೊಟ್ಟಿದ್ದ 17 ಸ್ಪರ್ಧಿಗಳು ಎಂಟ್ರಿ ಕೊಟ್ಟಿದ್ದರು. ಅದರಲ್ಲಿ 7 ಮಂದಿ ಬಿಗ್​ಬಾಸ್​ ನರಕಕ್ಕೆ ಸೇರಿದ್ದರು. ಉಳಿದ 10 ಮಂದಿ ಸ್ವರ್ಗಕ್ಕೆ ಸೇರಿದ್ದರು. ನರಕದಲ್ಲಿ ಇರೋ ಸ್ಪರ್ಧಿಗಳಿಗೆ ಸರಿಯಾದ ಊಟ ನೀಡುತ್ತಿರಲಿಲ್ಲ. ಜೊತೆಗೆ ಶೌಚಾಲಯದ ಸಮಸ್ಯೆ ಕೂಡ ಇದೆ ಅಂತ ಸ್ಪರ್ಧಿಗಳು ಕ್ಯಾಮೆರಾ ಮುಂದೆ ಬಂದು ಹೇಳುತ್ತಿದ್ದರು. ಈಗ ಬಿಗ್​ಬಾಸ್​ ಮನೆಯಲ್ಲಿ ಬಿಗ್​ ಟ್ವಿಸ್ಟ್​ ಪಡೆದುಕೊಂಡಿದೆ. ಇಂದಿನ ಎಪಿಸೋಡ್​ನಲ್ಲಿ ಏನೆಲ್ಲಾ ಆಯ್ತು ಅಂತ ಗೊತ್ತಾಗಲಿದೆ.

    Continue Reading

    BIG BOSS

    ಕನ್ನಡ ಮರೆತ ಸ್ಪರ್ಧಿಗಳು.. ಮೌನಕ್ಕೆ ಶರಣಾದ್ರ ಬಿಗ್‌ಬಾಸ್ ?

    Published

    on

    ‘ಬಿಗ್ ಬಾಸ್’ನಲ್ಲಿ ಹಲವು ಮೂಲ ನಿಯಮಗಳು ಇವೆ. ಅದನ್ನು ಮೀರಿ ಯಾರು ನಡೆದುಕೊಳ್ಳುವಂತಿಲ್ಲ. ನಿದ್ದೆ ಮಾಡಿದರೆ ಅದು ನಿಯಮ ಬ್ರೇಕ್ ಮಾಡಿದಂತೆಯೇ. ಆಗ ಬಿಗ್ ಬಾಸ್ ಎಚ್ಚರಿಸುತ್ತಾರೆ. ಅದೇ ರೀತಿ ಮತ್ತೊಂದು ನಿಯಮ ಇದೆ. ಆದರೆ, ಈ ನಿಯಮವನ್ನು ಯಾರೂ ಅಷ್ಟು ಗಂಭೀರವಾಗಿ ಸ್ವೀಕರಿಸಿದಂತಿಲ್ಲ. ಬಿಗ್ ಬಾಸ್ ಕೂಡ ಈ ಬಗ್ಗೆ ಎಚ್ಚರಿಕೆ ನೀಡುತ್ತಿಲ್ಲವೇಕೆ ಎನ್ನುವ ಪ್ರಶ್ನೆ ಅನೇಕರಿಗೆ ಮೂಡಿದೆ.

    ಬಿಗ್ ಬಾಸ್ ಮನೆಯಲ್ಲಿ ಕನ್ನಡವನ್ನು ಬೆಳೆಸುವ ಕೆಲಸ ಆಗುತ್ತಿದೆ ಎಂದು ವಾಹಿನಿಯವರು ಹೇಳಿಕೊಂಡಿದ್ದಾರೆ. ಈ ಕಾರಣದಿಂದ ಇಂಗ್ಲಿಷ್ ಬಳಕೆ ಮಾಡದೆ ಕೇವಲ ಕನ್ನಡ ಬಳಕೆ ಮಾಡಬೇಕು ಎನ್ನುವ ನಿಯಮ ಇದೆ. ಈ ಮೊದಲಿನ ಸೀಸನ್​ಗಳಲ್ಲಿ ಇಂಗ್ಲಿಷ್ ಮಾತನಾಡಿದಾಗ ಬಿಗ್ ಬಾಸ್ ಎಚ್ಚರಿಕೆ ನೀಡುತ್ತಿದ್ದರು. ಆದರೆ, ಈಗ ಎಲ್ಲವೂ ಬದಲಾಗಿದೆ. ಎಷ್ಟೇ ಇಂಗ್ಲಿಷ್ ಬಳಕೆ ಆದರೂ ಬಿಗ್ ಬಾಸ್ ಮಾತನಾಡುತ್ತಿಲ್ಲ, ಎಚ್ಚರಿಕೆಯನ್ನೂ ನೀಡುತ್ತಿಲ್ಲ. ಬಿಗ್ ಬಾಸ್ ಕಡೆಯಿಂದ ಮೌನವೇಕೆ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

    ಲಾಯರ್ ಜಗದೀಶ್ ಅವರು ಹೆಚ್ಚೆಚ್ಚು ಇಂಗ್ಲಿಷ್ ಬಳಕೆ ಮಾಡುತ್ತಿದ್ದಾರೆ. ಅವರು 10 ಸಾಲುಗಳನ್ನು ಹೇಳಿದರೆ ಇದರಲ್ಲಿ ಅರ್ಧಕ್ಕಿಂತ ಹೆಚ್ಚಿನದ್ದು ಇಂಗ್ಲಿಷ್ ಇರುತ್ತದೆ. ಇದು ವೀಕ್ಷಕರಿಗೆ ಸಾಕಷ್ಟು ಕಿರಿಕಿರಿ ಎನಿಸುತ್ತಿದೆ. ಅವರಿಗೆ ಕನ್ನಡ ಮಾತನಾಡೋಕೆ ಬರುತ್ತದೆ. ಹೀಗಿರುವಾಗ ಕನ್ನಡದಲ್ಲಿ ಮಾತನಾಡಲು ಸಮಸ್ಯೆ ಏನು ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

    ಕೇವಲ ಜಗದೀಶ್ ಮಾತ್ರವಲ್ಲ ಐಶ್ವರ್ಯಾ ಸೇರಿ ಮೊದಲಾದವರು ಇಂಗ್ಲಿಷ್ ಪದ ಬಳಕೆ ಮಾಡುತ್ತಿದ್ದಾರೆ. ಮೋಕ್ಷಿತಾ, ಚೈತ್ರಾ ಕುಂದಾಪುರ ಸೇರಿದಂತೆ ಕೆಲವೇ ಕೆಲವರು ಸಂಪೂರ್ಣವಾಗಿ ಕನ್ನಡದಲ್ಲಿ ಮಾತನಾಡಲು ಪ್ರಯತ್ನಿಸುತ್ತಿದ್ದಾರೆ. ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಹೇಳುವ ಜಗದೀಶ್ ಅವರೇ ಇಂಗ್ಲಿಷ್​ನಲ್ಲಿ ಮಾತನಾಡೋದು ಎಷ್ಟು ಸರಿ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.

    Continue Reading

    BIG BOSS

    ಬಿಗ್‌ಬಾಸ್ ಮನೆಯಲ್ಲಿ ಎಮರ್ಜೆನ್ಸಿ ಸೈರನ್; ಭಾರೀ ಟ್ವಿಸ್ಟ್​.. ಬೆಚ್ಚಿಬಿದ್ದ ಸ್ಪರ್ಧಿಗಳು..!

    Published

    on

    ಬಿಗ್​ಬಾಸ್ ಮನೆಯಲ್ಲಿ ಎಮರ್ಜನ್ಸಿ ಸೈರನ್ ಮೊಳಗಿದೆ. ಒಂದು ಕ್ಷಣಕ್ಕೆ ಎಲ್ಲಾ ಸ್ಪರ್ಧಿಗಳು ಬೆಚ್ಚಿಬಿದ್ದಿದ್ದು, ಮನೆಯಲ್ಲಿ ಏನಾಗ್ತಿದೆ ಅನ್ನೋ ಆತಂಕದಿಂದ ಕಿರುಚಾಡಿದ್ದಾರೆ! ಹೌದು, ಇಂದು ಬೆಳ್ಳಂಬೆಳಗ್ಗೆ ಕಲರ್ಸ್‌ ಕನ್ನಡ ಪೇಜ್‌ನಲ್ಲಿ ಪ್ರೊಮೋ ಮೂಲಕ ಬಿಗ್​ಬಾಸ್ ವೀಕ್ಷಕರ ಕುತೂಹಲವನ್ನು ಹೆಚ್ಚಿದ್ದಾರೆ.

    ಪ್ರೊಮೋದಲ್ಲಿ ಏನಿದೆ..?

    ಬಿಗ್​​ಬಾಸ್​ ಮನೆಯಲ್ಲಿ ಸೈರನ್ ಆಗಿದೆ. ಇದರಿಂದ ಸ್ಪರ್ಧಿಗಳು ಗಾಬರಿಯಾಗಿ ಓಡಿ ಬಂದು ಒಟ್ಟಿಗೆ ನಿಂತಿದ್ದಾರೆ. ‘ಏನೋ ಎಂಟ್ರಿ ಆಗ್ತಿದೆ. ಕ್ರೇನ್​ನಿಂದ ಏನೋ ತೆಗಿತಾ ಇದ್ದಾರೆ, ಏಯ್ ಯಾರು? ಏನಿದು’ ಅಂತಾ ಆತಂಕದಿಂದ ಮಾತನಾಡಿಕೊಂಡಿದ್ದಾರೆ. ಅಷ್ಟರಲ್ಲೇ ಬಿಗ್​ಬಾಸ್​ ಮನೆಗೆ ಎಂಟ್ರಿಯಾಗಿರುವ ಮುಸುಕುಧಾರಿಗಳು ಮನೆಯಲ್ಲಿದ್ದ ಕೆಲವು ವಸ್ತುಗಳನ್ನು ಹಾನಿ ಮಾಡಿದ್ದಾರೆ. ನಂತರ ಸ್ವರ್ಗ-ನರಕ ಎಂದು ವಿಭಾಗ ಮಾಡಿದ್ದ ಗೇಟ್​ಗಳನ್ನು ಬೇಧಿಸಿದ್ದಾರೆ. ನಂತರ ಬಿಗ್​ಬಾಸ್​ನ ಧ್ವನಿ ಮೊಳಗಿದೆ. 11ನೇ ವೇದಿಕೆಯಲ್ಲಿ ನೀವೆಲ್ಲರೂ ಎರಡು ವಾರ ಜೀವಿಸಿದ್ದೀರಿ. ಇಲ್ಲಿನ ಪ್ರತಿ ಕ್ಷಣವನ್ನೂ ಅನುಭವಿಸಿದ್ದೀರಿ ಎಂಬ ಧ್ವನಿ ಬಂದು ಹೋಗಿದೆ.

    ಈ ಪ್ರೋಮೋ ನೊಡಿದ ಅಭಿಮಾನಿಗಳು ಸ್ವರ್ಗ-ನರಕ ಇಂದಿಗೆ ಕೊನೆಗೊಂಡಿದೆ ಎಂದು ಮಾತನಾಡಿಕೊಳ್ತಿದ್ದಾರೆ. ಸ್ವರ್ಗ-ನರಕ ಕಾನ್ಸೆಪ್ಟ್​ಗೆ ಏನಾಯ್ತು? ಎರಡೇ ವಾರಕ್ಕೆ ನಿಂತು ಹೋಯ್ತಾ ಎಂದು ಕೆಲವರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಾರೆ ಇಂದು ನಡೆಯುವ ಎಪಿಸೋಡ್ ತುಂಬಾ ಕುತೂಹಲಕಾರಿಯಾಗಿದ್ದು, ವೀಕ್ಷಕರು ಎಕ್ಸೈಟ್ ಆಗಿದ್ದಾರೆ.

    Continue Reading

    LATEST NEWS

    Trending