Connect with us

    FILM

    ಸೌಂದರ್ಯ ಜಗದೀಶ್ ಆತ್ಮಹ*ತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಡೆ*ತ್ ನೋಟ್ ನಲ್ಲಿತ್ತು ಸ್ಫೋಟಕ ಮಾಹಿತಿ

    Published

    on

    ಬೆಂಗಳೂರು : ಸೌಂದರ್ಯ ಜಗದೀಶ್ ಆತ್ಮಹ*ತ್ಯೆ ಪ್ರಕರಣ ಇಡೀ ಸಿನಿಮಾರಂಗವನ್ನೇ ಬೆಚ್ಚಿ ಬೀಳಿಸಿತ್ತು. ನಿರ್ಮಾಪಕನಾಗಿ ಭಾರಿ ಯಶಸ್ಸನ್ನು ಬಾಚಿಕೊಂಡಿದ್ದ ಸೌಂದರ್ಯ ಜಗದೀಶ್ ಸಾವು ಆತಂಕ ಸೃಷ್ಟಿಸಿದ್ದು ಸುಳ್ಳಲ್ಲ. ಯಾಕೆ ಸೌಂದರ್ಯ ಜಗದೀಶ್ ಇಂತಹ ನಿರ್ಧಾರ ಕೈಗೊಂಡ್ರು ಅನ್ನೋ ಪ್ರಶ್ನೆಯೊಂದು ಹುಟ್ಟುಕೊಂಡಿತ್ತು. ಇದೀಗ ಡೆ*ತ್ ನೋಟ್ ಸಿಕ್ಕಿರುವ ಬಗ್ಗೆ ಸೌಂದರ್ಯ ಜಗದೀಶ್ ಪತ್ನಿ ರೇಖಾ ತಿಳಿಸಿದ್ದಾರೆ. ಈ ಡೆ*ತ್ ನೋಟ್ ಮೂಲಕ ಕೆಲವೊಂದು ಸ್ಫೋಟಕ ಮಾಹಿತಿ ಲಭ್ಯವಾಗಿದೆ.


    ತಮ್ಮ ಪತಿಯ ನಿಧ*ನಕ್ಕೆ ಅವರ ಬಿಸ್ ನೆಸ್ ಪಾರ್ಟ್ನರ್ ಗಳಾಗಿದ್ದ ಸುರೇಶ್, ಹೊಂಬಣ್ಣ ಹಾಗೂ ಸುಧೀಂದ್ರ ಅವರೇ ಕಾರಣ ಎಂದು ರೇಖಾ ಆರೋಪಿಸಿದ್ದಾರೆ.
    ಸೌಂದರ್ಯ ಜಗದೀಶ್ ಇಹಲೋಕ ತ್ಯಜಿಸಿದ ಕಾರಣ ಸೌಂದರ್ಯ ಜಗದೀಶ್ ಅವರಿಗೆ ಆದ ನಷ್ಟ ಹಾಗೂ ಮೋಸ ಎಂಬುದಾಗಿ ರೇಖಾ ಹೇಳಿದ್ದಾರೆ.

    ಡೆ*ತ್ ನೋಟ್ ನಲ್ಲಿ ಏನಿತ್ತು? ರೇಖಾ ಆಪಾದನೆ ಏನು?

    ಈಗ ಶ್ರೀರಂಗಪಟ್ಟಣದಲ್ಲಿ ಪೂಜೆ ಮಾಡಿ ಅವರ ಬಟ್ಟೆಗಳನ್ನು ಅಲ್ಲಿ ಬಿಡಬೇಕು ಅಂತ ಅರ್ಚಕರು ಹೇಳಿದ್ದಾರೆ. ಹಾಗಾಗಿ ಹಳೇ ಬಟ್ಟೆಗಳನ್ನು ತೆಗೆಯಲು ವಾರ್ಡ್ ರೋಬ್ ತೆಗೆದಾಗ ಡೆ*ತ್ ನೋಟ್ ಸಿಕ್ಕಿದೆ ಎಂದಿದ್ದಾರೆ.

    ಸುರೇಶ್‌ ಹಾಗೂ ಹೊಂಬಣ್ಣ ಮತ್ತು ಸೌಂದರ್ಯ ಜಗದೀಶ್ ಸೇರಿಕೊಂಡು ಸೌಂದರ್ಯ ಕನ್‌ಸ್ಟ್ರಕ್ಷನ್ಸ್‌ ಕಂಪೆನಿಯನ್ನು ನಡೆಸಿಕೊಂಡು ಹೋಗುತ್ತಿದ್ದರು. ಈ ವೇಳೆ ಕಂಪನಿಯು ಲಾಭದಲ್ಲಿದ್ದರೂ ನಷ್ಟದಲ್ಲಿದೆ ಎಂದು ಸುಳ್ಳು ಹೇಳಿ ತಮ್ಮ ಪತಿ ಜಗದೀಶ್‌ ಅವರಿಂದ ಹಣವನ್ನು ಹೂಡಿಕೆ ಮಾಡಿಸಿದ್ದರು. ಇಷ್ಟೇ ಅಲ್ಲದೇ, ಸುಳ್ಳು ಹೇಳಿ ಕುಟುಂಬದ ಆಸ್ತಿಗಳನ್ನು ಬ್ಯಾಂಕ್‌ ನಲ್ಲಿ ಅಡಮಾನ ಇರಿಸಿದ್ದಾರೆ. ಅದರ ಹಣವನ್ನು ವೈಯಕ್ತಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
    ತಮಗೆ ತುಂಬ ಕಾಟ, ಕಿರುಕುಳ ಕೊಡುತ್ತಾರೆ ಅಂತ ಈ ಮೊದಲು ಒಮ್ಮೆ ನನ್ನ ಬಳಿ ಹೇಳಿದ್ದರು. ಆದರೆ ಈ ಮಟ್ಟಕ್ಕೆ ಆಗುತ್ತೆ ಅಂತ ನಮಗೆ ಗೊತ್ತಿರಲಿಲ್ಲ. ಏನೇ ಇದ್ದರೂ ನಮ್ಮ ಜೊತೆ ಹಂಚಿಕೊಳ್ಳಿ ಅಂತ ಧೈರ್ಯ ತುಂಬಿದ್ದೆವು ಎಂದಿದ್ದಾರೆ.

    ನಮಗೂ ಬೆದರಿಕೆ ಇದೆ ಎಂದ ರೇಖಾ

    ನನಗೆ ಮತ್ತು ನನ್ನ ಮಗನಿಗೆ ಬೆದರಿಕೆ ಇದೆ ಎಂದಿರುವ ಅವರು, ಹುಲಿ ರೀತಿ ಇದ್ದ ಅವರನ್ನೇ ಕೊನೆ ಕೊನೆಗೆ ಇಷ್ಟು ಸೈಲೆಂಟ್​ ಆಗುವಂತೆ ಮಾಡಿ ಈ ಹಂತಕ್ಕೆ ತೆಗೆದುಕೊಂಡು ಬಂದವರು. ನಾಳೆ ನನಗೆ ಮತ್ತು ನನ್ನ ಮಗನಿಗೆ ಏನು ಮಾಡುತ್ತಾರೋ ಗೊತ್ತಿಲ್ಲ. ನನಗೆ ಆ ಭಯ ಇದೆ.
    ಪತಿ ಸೌಂದರ್ಯ ಜಗದೀಶ್‌ ಆತ್ಮಹ*ತ್ಯೆ ಮಾಡಿಕೊಳ್ಳುವ ಮುಂಚೆ ಒಂದು ವಾರದ ಹಿಂದೆ ಸುರೇಶ್‌ ಹಾಗೂ ಹೊಂಬಣ್ಣ ನಿರಂತರವಾಗಿ ಫೋನ್‌ ಮಾಡಿದ್ದರು. ಅವರ ಕರೆ ಬಂದಾಗ ಸಂಪೂರ್ಣವಾಗಿ ಕುಗ್ಗಿ ಹೋಗಿದ್ದು, ಇದರಿಂದ ಮನನೊಂದು ಡೆ*ತ್‌ನೋಟ್‌ ಬರೆದಿಟ್ಟು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ ಎಂದು ಜಗದೀಶ್‌ ಪತ್ನಿ ರೇಖಾ ಆರೋಪಿಸಿದ್ದಾರೆ.

    ಇದನ್ನೂ ಓದಿ : ತುಳುನಾಡನ್ನು ಹಾಡಿ ಹೊಗಳಿದ ಸುನಿಲ್ ಶೆಟ್ಟಿ.. ಮಾವನ ಪೋಸ್ಟನ್ನು ರಿ ಪೋಸ್ಟ್‌ ಮಾಡಿ ಗಮನ ಸೆಳೆದ ಕೆ.ಎಲ್ ರಾಹುಲ್

    ಸದ್ಯಕ್ಕೆ ರೇಖಾ ಜಗದೀಶ್ ಅವರು ನೀಡಿದ ಡೆ*ತ್ ನೋಟ್ ಆಧರಿಸಿ ಸೌಂದರ್ಯ ಜಗದೀಶ್ ಅವರ ಪಾರ್ಟ್ನರ್ಸ್ ಸುರೇಶ್, ಹೊಂಬಣ್ಣ ಹಾಗೂ ಸುಧೀಂದ್ರ ಮೇಲೆ ಎಫ್ ಐ ಆರ್ ದಾಖಲಾಗಿದೆ.

    ಏ.14ರಂದು ಬೆಂಗಳೂರಿನ ಮಹಾಲಕ್ಷ್ಮೀ ಲೇ ಔಟ್‌ನಲ್ಲಿರುವ ನಿವಾಸದಲ್ಲಿ ಸೌಂದರ್ಯ ಜಗದೀಶ್ ಜೀವಾಂತ್ಯಗೊಳಿಸಿದ್ದರು. ಇದರಿಂದ ಇಡೀ ಚಿತ್ರರಂಗ ಶಾಕ್ ಗೆ ಒಳಗಾಗಿತ್ತು. ಇದಾದ ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿ, ಅವರ ಇಚ್ಛೆಯಂತೆ ಚನ್ನರಾಯಪಟ್ಟಣದ ಹಿರಿಸಾವೆ ಗ್ರಾಮದಲ್ಲಿ ಅಂತ್ಯಕ್ರಿ*ಯೆ ನೆರವೇರಿಸಲಾಗಿತ್ತು.

    FILM

    ಅಪ್ಪಂದಿರ ದಿನ : ತಂದೆಯನ್ನು ನೆನೆದು ಭಾವುಕ ಪೋಸ್ಟ್ ಹಂಚಿಕೊಂಡ ವಿನೀಶ್ ದರ್ಶನ್

    Published

    on

    ಬೆಂಗಳೂರು : ಇಂದು ವಿಶ್ವ ಅಪ್ಪಂದಿರ ದಿನ. ನಟ ದರ್ಶನ್ ಪುತ್ರ ಕೂಡಾ ತಂದೆಯನ್ನು ನೆನೆದಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ನಟ ದರ್ಶನ್‌ ಜೈಲು ಪಾಲಾಗಿದ್ದರೂ ಮಗ ವಿನೀಶ್‌ ಅಪ್ಪಂದಿರ ದಿನದ ಶುಭಾಶಯ ತಿಳಿಸಿದ್ದಾರೆ.
    ತನ್ನ ತಂದೆಯೊಂದಿಗೆ ಅಪಾರ ಪ್ರೀತಿ ಹೊಂದಿರುವ ವಿನೀಶ್‌, ಈ ದಿನ ಅಪ್ಪನನ್ನು ಮಿಸ್‌ ಮಾಡಿಕೊಳ್ಳುತ್ತಾ ಭಾವುಕ ಪೋಸ್ಟ್‌ವೊಂದನ್ನು ಶೇರ್‌ ಮಾಡಿಕೊಂಡಿದ್ದಾರೆ.


    ತಾಯಿ ವಿಜಯಲಕ್ಷ್ಮಿ ಹಾಗೂ ತಂದೆ ದರ್ಶನ್‌ ಜೊತೆಗಿನ ವಿಶೇಷವಾದ ಫೋಟೋಗಳನ್ನು ಹಂಚಿಕೊಂಡಿರುವ ವಿನೀಶ್‌, ನಿಮ್ಮನ್ನು ನಾನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಐ ಲವ್‌ ಯು, ಯಾವತ್ತಿಗೂ ನೀವೇ ನನ್ನ ಹೀರೋ ಅಪ್ಪ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾನೆ.

    ಅತ್ತ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪೊಲೀಸರ ವಶದಲ್ಲಿದ್ದಾರೆ. ಇತ್ತ ಪತ್ನಿ ವಿಜಯಲಕ್ಷ್ಮಿ ಮತ್ತು ಮಗ ವಿನೀಶ್ ನೋವು ಅನುಭವಿಸುತ್ತಿದ್ದಾರೆ. ಅತ್ತ ವಿಜಯಲಕ್ಷ್ಮಿ ಅವರು ಸೋಶಿಯಲ್ ಮೀಡಿಯಾ ಖಾತೆಗಳನ್ನು ಡಿಲೀಟ್ ಮಾಡಿಕೊಂಡಿದ್ದು, ಇತ್ತ ವಿನೀಶ್ ಇನ್ಸ್ಟಾಗ್ರಾಮ್‌ ಪೋಸ್ಟ್‌ ಹಾಕುವ ಮೂಲಕ ತಮ್ಮ ವೇದನೆ ಹಂಚಿಕೊಳ್ಳುತ್ತಿದ್ದಾರೆ.

    ಇದನ್ನೂ ಓದಿ :  ಐಸ್‌ಕ್ರೀಂ ಪ್ರಿಯರೇ ಎಚ್ಚರ! ಆನ್‌ಲೈನ್‌ನಲ್ಲಿ ತರಿಸಿದ ಐಸ್‌ಕ್ರೀಂನಲ್ಲಿ ಸತ್ತ ಹುಳಗಳು ಪತ್ತೆ!

    ನನಗೆ ಶಾಪ ಹಾಕುವುದರಿಂದ ಯಾವ ಪ್ರಯೋಜನವಿಲ್ಲ :

    ತಂದೆ ದರ್ಶನ್‌ ಅರೆಸ್ಟ್ ಆದ ಬಳಿಕ ವಿನೀಶ್ ಇನ್ಸ್ಟಾಗ್ರಾಮ್‌ನಲ್ಲಿ ಭಾವನಾತ್ಮಕ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು. ಈ ಮೂಲಕ ತಮ್ಮ ನೋವನ್ನು ಹಂಚಿಕೊಂಡಿದ್ದರು. ನನ್ನ ತಂದೆ ಬಗ್ಗೆ ಕೆಟ್ಟ ಕಾಮೆಂಟ್ಸ್ ಹಾಗೂ ಅಸಭ್ಯ ಭಾಷೆಯಲ್ಲಿ ನಿಂದಿಸುತ್ತಿರುವವರಿಗೆ ಧನ್ಯವಾದ. ನನಗೀಗ 15 ವರ್ಷ, ನನಗೂ ಮನಸ್ಸಿದೆ. ಈ ಕಷ್ಟದ ಸಮಯದಲ್ಲಿ ನನ್ನ ತಾಯಿ ಮತ್ತು ತಂದೆಗೆ ನಿಮ್ಮ ಬೆಂಬಲ ಬೇಕಾಗಿದೆ. ನನಗೆ ಶಾಪ ಹಾಕುವುದರಿಂದ ಯಾವ ಪ್ರಯೋಜನವಿಲ್ಲ ಎಂದು ಇನ್‌ಸ್ಟಾ ಸ್ಟೋರಿಯಲ್ಲಿ ಬರೆದುಕೊಂಡಿದ್ದರು.

    ವಿನೀಶ್ ಇನ್ಸ್ಟಾಗ್ರಾಮ್‌ನ ಸ್ಟೋರಿ ಸದ್ಯ ಭಾರೀ ವೈರಲ್ ಆಗುತ್ತಿದೆ.

    Continue Reading

    FILM

    ಯಶ್ ಜೊತೆ ಲಂಡನ್‌ಗೆ ಹಾರಿದ ನಯನತಾರಾ-ಕಿಯಾರ..!

    Published

    on

    ಮುಂಬೈ/ಮಂಗಳೂರು:  ಪ್ಯಾನ್ ಇಂಡಿಯಾ ಸ್ಟಾರ್ ಯಶ್ ರವರ ಬಹು ನಿರೀಕ್ಷಿತ ಟಾಕ್ಸಿಕ್ ಸಿನೆಮಾ ಬಹಳಷ್ಟು ಕುತೂಹಲವನ್ನು ಮೂಡಿಸಿದೆ. ಕೆಜಿಎಫ್ ಸಿನೆಮಾದಿಂದ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡ ಯಶ್ ಇದೀಗ ಟಾಕ್ಸಿಕ್ ಸಿನೆಮಾ ಮೂಲಕ ನೆಕ್ಸ್ಟ್‌ ಲೆವೆಲ್‌ನಲ್ಲಿ ಸಿನೆಮಾ ಮಾಡುವಲ್ಲಿ ತೊಡಗಿಕೊಂಡಿದ್ದಾರೆ. ಕೆಜಿಎಫ್-1, 2 ಸೂಪರ್‌ ಹಿಟ್‌ ಬಳಿಕ ಯಶ್ ಚಿತ್ರರಂಗದಲ್ಲೇ ತನ್ನ ಸ್ಟ್ಯಾಂಡ್ ಕ್ರಿಯೇಟ್ ಮಾಡಿದ್ದಾರೆ. ಹಾಗಾಗಿ ನಿರೀಕ್ಷೆಗಳೂ ಕೂಡಾ ಹೆಚ್ಚಾಗಿದೆ ಎನ್ನಬಹುದು.

    150 ದಿನಗಳ ಕಾಲ ಲಂಡನ್‌ನಲ್ಲಿ ಶೂಟಿಂಗ್..!

    ಇದೀಗ ಯಶ್ ಜೊತೆ ನಯನತಾರಾ-ಕಿಯಾರ ಅಡ್ವಾನಿ ಕೂಡಾ ಲಂಡನ್ ಗೆ ಹಾರಿದ್ದಾರಂತೆ. ಹೌದು, ಸಿನೆಮಾ ಶೂಟಿಂಗ್ ಗಾಗಿ ಯಶ್ ನಿರ್ದೇಶಕಿ ಗೀತಾ ಮೋಹನ್ ದಾಸ್ ಜೊತೆ ಲಂಡನ್‌ಗೆ ತೆರಳಿದ್ದಾರೆ. ಇನ್ನು ಸಿನೆಮಾ ಬರೋಬ್ಬರಿ 200 ದಿನಗಳ ಕಾಲ ಚಿತ್ರೀಕರಣ ಮಾಡಲಾಗುತ್ತಿದ್ದು ಅದರಲ್ಲಿ 150 ದಿನಗಳ ಕಾಲ ಲಂಡನ್‌ನಲ್ಲಿ ಚಿತ್ರೀಕರಣಗೊಳ್ಳಲಿದೆ ಎಂದು ಹೇಳಲಾಗಿದೆ.

    Read More..;  ಯಶ್ ಅಭಿನಯದ “ಟಾಕ್ಸಿಕ್” ಗೆ ಹಿರೋಯಿನ್‌ ಫಿಕ್ಸ್..!!

    ಯಶ್‌ ಪರಫೆಕ್ಟ್ ಮ್ಯಾನ್ ಎಂಬುದು ಅವರ ಈ ಹಿಂದಿನ ಸಿನಿಮಾಗಳಲ್ಲಿ ನೋಡಿದ್ದೇವೆ. ಟಾಕ್ಸಿಕ್ ಚಿತ್ರ ತಂಡದಲ್ಲೂ ಅದು ಮುಂದುವರಿಯಲಿದೆ. ಎಷ್ಟು ಹಂತದ ಚಿತ್ರೀಕರಣ ಆಗಿದೆ ಎಂಬುವುದರ ಬಗ್ಗೆ ಚಿತ್ರ ತಂಡ ಗೌಪ್ಯತೆ ಕಾಪಾಡಿಕೊಂಡು ಬಂದಿದೆ. ಇದು ಅಭಿಮಾನಿಗಳ ಕುತೂಹಲಕ್ಕೂ ಕಾರಣವಾಗಿದೆ. ಚಿತ್ರೀಕರಣದ ನಿಖರ ಸಮಯವನ್ನು ಗೌಪ್ಯವಾಗಿ ಇಡಲಾಗಿದೆ. ಇಂಟರ್‌ನ್ಯಾಷನಲ್ ಡಾನ್ ಪಾತ್ರದಲ್ಲಿ ಯಶ್ ಕಾಣಿಸುತ್ತಿದ್ದಾರೆ ಎನ್ನಲಾಗಿದೆ. ಇದರಲ್ಲಿ ಅನೇಕ ಸಾಹಸಮಯ ದೃಶ್ಯಗಳು ಇರಲಿದ್ದು. ಸಿನಿಮಾ ಅಂದುಕೊಂಡಂತೆ ಶೂಟಿಂಗ್ ಮುಗಿಸಿ ಮುಂದಿನ ವರ್ಷ 2025 ರಂದು ಏ. 10ಕ್ಕೆ ಬಿಡುಗಡೆಗೊಳ್ಳಲಿದೆ. ಇನ್ನೂ ಚಿತ್ರದಲ್ಲಿ ಯಶ್, ನಯನತಾರಾ ಮತ್ತು ಕಿಯಾರಾ ಅಡ್ವಾಣಿ ಜೊತೆಗೆ ಅನೇಕ ಕಲಾವಿದರ ದಂಡೇ ಇರಲಿದೆ. ಅವರೊಂದಿಗೆ ಇತರ ಕೆಲವು ನಟರು ಸಹ ಸೇರಿಕೊಳ್ಳಲಿದ್ದಾರೆ. ಯಶ್ ಟಾಕ್ಸಿಕ್ ಸಿನಿಮಾವು ದೊಡ್ಡ ತಾರಾಗಣ ಹೊಂದಿರುವ ಸಿನಿಮಾ ಆಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

    Continue Reading

    FILM

    ‘ನನ್ನಿಂದ ಹೀಗೆ ಆಗೋಯ್ತಲ್ಲ’ ತಂದೆ ಶವದ ಮುಂದೆ ಕಣ್ಣೀರಿಟ್ಟ ದರ್ಶನ್ ಕೇಸ್‌ ಆರೋಪಿ..!

    Published

    on

    ಚಿತ್ರದುರ್ಗ/ಮಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದರ್ಶನ್ ಗ್ಯಾಂಗ್‌ನ ಕೊಲೆ ಆರೋಪಿ  ಎ-7 ಅನಿಲ್ ಅಲಿಯಾಸ್ ಅನು ತಂದೆ ಸಾವನಪ್ಪಿದ್ದು, ಅವರ ಆಂತ್ಯಕ್ರಿಯೆಯನ್ನು ತಡರಾತ್ರಿ ನೆರವೇರಿಸಲಾಗಿದೆ.

    Read More..;  ರೇಣುಕಾಸ್ವಾಮಿ ಹ*ತ್ಯೆ ಪ್ರಕರಣ : ಅನುಕುಮಾರ್ ಬಂಧನದ ಸುದ್ದಿ ಕೇಳಿ ತಂದೆ ಹೃದಯಾ*ಘಾತದಿಂದ ಸಾ*ವು

    ರೇಣುಕಾಸ್ವಾಮಿ ಕೊಲೆಯಿಂದಾಗಿ ಅನೇಕ ಕುಟುಂಬಗಳು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ. ದರ್ಶನ್ ಗ್ಯಾಂಗ್‌ನಲ್ಲಿದ್ದ ಎ-7 ಕೊಲೆ ಆರೋಪಿ ಅನಿಲ್ ಅಲಿಯಾಸ್ ಅನು ರೇಣುಕಾಸ್ವಾಮಿ ಕೊಲೆ ನಡೆದ ಮರುದಿನವೇ ಪೊಲೀಸರಿಗೆ ಸರಂಡರ್‌ ಆಗಿದ್ದ. ಈ ವಿಷಯ ತಿಳಿದ ಅನು ತಂದೆ ಚಂದ್ರಪ್ಪ ಆಘಾತಕ್ಕೊಳಗಾಗಿ ನಿಂತಲ್ಲೇ ಕುಸಿದು ಬಿದ್ದು, ಹೃದಯಾಘಾತದಿಂದ ಸಾವನಪ್ಪಿದ್ದರು. ಸಾವನ್ನಪ್ಪಿದ 24 ಗಂಟೆಗಳ ಬಳಿಕ ಅವರ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಅನು ಬಂದ ಬಳಿಕವೇ ಶವ ಸಂಸ್ಕಾರ ಮಾಡುವುದಾಗಿ ಕುಟುಂಬಸ್ಥರು ತೀರ್ಮಾನಿಸಿದ್ದರು. ಶವದ ಮುಂದೆ ಕುಟುಂಬಸ್ಥರು ಅನು ಬರುವಿಕೆಗಾಗಿ ಕಾದು ಕುಳಿತಿದ್ದರು.

    ನ್ಯಾಯಾಧೀಶರ ಆದೇಶದಂತೆ ಆರೋಪಿ ಅನಿಲ್‌ನನ್ನು ಪೊಲೀಸರು ಚಿತ್ರದುರ್ಗಕ್ಕೆ ಕರೆತಂದರು.  ಮಗ ಬರುತ್ತಿದ್ದಂತೆಯೇ ಅನು ತನ್ನ ತಾಯಿ, ಅಕ್ಕನನ್ನು ತಬ್ಬಿ ಕಣ್ಣೀರು ಇಟ್ಟಿದ್ದಾನೆ. ತಂದೆಯ ಶವದ ಮುಂದೆ ಕೂತು ನನ್ನಿಂದ ಹೀಗೆ ಆಗೋಯ್ತಲ್ಲ ಎಂದು ಕಣ್ಣೀರು ಇಟ್ಟಿದ್ದಾನೆ.

    Continue Reading

    LATEST NEWS

    Trending