ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಅಪ್ರಾಪ್ತ ಬಾಲಕರು ನಾಪತ್ತೆ : ಅಪಹರಣ ಶಂಕೆ..!
ಉಡುಪಿ : ಉಡುಪಿಯಲ್ಲಿ ಇಬ್ಬರು ಬಾಲಕರು ಅಪಹರಣಕ್ಕೆ ಒಳಗಾಗಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯಾದ ಬಾಲಕರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಪೇಟೆಯ ನಿವಾಸಿ ನಾಗರಾಜ ಎಂಬವರ ಮಗ ಸಂತೋಷ (11) ನಾಗರಾಜರ ನಾದಿನಿಮಂಗಳ ಎಂಬವರ ಪುತ್ರ ವಿಷ್ಣು (9) ಎಂದು ಗುರುತಿಸಲಾಗಿದೆ.
ಈ ಘಟನೆ ಡಿಸೆಂಬರ್ 3 ರಂದು ಸಂಭವಿಸಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಾಜರಾಜ ಅವರು ಡಿ. 7ರಂದು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿರುವ ಮಹಿಳಾ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಗರದ ಸಿಟಿ ಬಸ್ ನಿಲ್ದಾಣದ ಬಳಿ ಆಟವಾಡುತ್ತಿದ್ದ ಸಂತೋಷ್ ಹಾಗೂ ವಿಷ್ಣು ಏಕಾಏಕಿ ನಾಪತ್ತೆಯಾಗಿದ್ದು, ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ.
ಈ ಇಬ್ಬರು ಬಾಲಕರನ್ನು ದುಷ್ಕರ್ಮಿಗಳು ಅಮೀಷ ನೀಡಿ ಕರಕೊಂಡು ಹೋಗಿರಬಹುದು ಅಥವಾ ಅಪಹರಣಕ್ಕೆ ಒಳಾಗಿರಬಹುದು ಎಂದು ಶಂಕಿಸಲಾಗಿದೆ.