Connect with us

    LATEST NEWS

    ದೆಹಲಿ ಸಿಎಂ ಕಚೇರಿಯಲ್ಲಿ ಎರಡು ಕುರ್ಚಿ..! ನಾನು ಭರತನಂತೆ ಎಂದ ಸಿಎಂ ಅತಿಶಿ

    Published

    on

    ಮಂಗಳೂರು/ನವದೆಹಲಿ : ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಎಎಪಿ ನಾಯಕಿ ಅತಿಶಿ ಸೋಮವಾರ(ಸೆ.23)ದಂದು ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಆದ್ರೆ, ಈ ವೇಳೆ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್‌ ಉಪಯೋಗಿಸುತ್ತಿರುವ ಕುರ್ಚಿಯ ಪಕ್ಕದಲ್ಲಿ ಪ್ರತ್ಯೇಕ ಕುರ್ಚಿಯಲ್ಲಿ ಕುಳಿತು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ತನ್ನನ್ನು ರಾಮಾಯಣದ ಭರತನಿಗೆ ಹೋಲಿಸಿಕೊಂಡಿರುವ ಹಾಲಿ ಮುಖ್ಯಮಂತ್ರಿ ಅತಿಶಿ, ರಾಮನ ಅನುಪಸ್ಥಿತಿಯಲ್ಲಿ ಭರತ ಆಡಳಿತ ನಡೆಸಿದಂತೆ ನಾಲ್ಕು ತಿಂಗಳು ನಾನು ಆಡಳಿತ ನಡೆಸುವುದಾಗಿ ಹೇಳಿದ್ದಾರೆ.

    “ಈ ಕುರ್ಚಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸೇರಿದ್ದು, ಫೆಬ್ರವರಿ ಚುನಾವಣೆಯಲ್ಲಿ ದೆಹಲಿಯ ಜನರು ಮತ್ತೊಮ್ಮೆ ಅವರನ್ನು ತಮ್ಮ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುತ್ತಾರೆ ಎಂದು ನನಗೆ ಖಾತ್ರಿಯಿದೆ. ಅಲ್ಲಿಯವರೆಗೆ, ಈ ಕುರ್ಚಿ ಈ ಕಚೇರಿಯಲ್ಲಿ ಉಳಿಯುತ್ತದೆ. ಅವರು ಹಿಂದಿರುಗುವ ವರೆಗೆ ಕಾಯುತ್ತದೆ.” ಎಂದು ಅತಿಶಿ ಹೇಳಿದ್ದಾರೆ.

    ಶನಿವಾರ ದೆಹಲಿಯ ಕಾಂಗ್ರೆಸ್‌ನ ಶೀಲಾ ದೀಕ್ಷಿತ್ ಮತ್ತು ಬಿಜೆಪಿಯ ಸುಷ್ಮಾ ಸ್ವರಾಜ್ ನಂತರ ಅತಿಶಿ ಮೂರನೇ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ದೆಹಲಿಯ ಎಂಟನೇ ಮುಖ್ಯಮಂತ್ರಿಯಾಗಿ ಐದು ಕ್ಯಾಬಿನೆಟ್ ಸಚಿವರ ಜೊತೆಗೆ ಪ್ರಮಾಣ ವಚನ ಸ್ವೀಕರಿಸಿದರು.

    ಇದನ್ನೂ ಓದಿ : ಕಾಸರಗೋಡು: ಮೆದುಳು ಜ್ವರಕ್ಕೆ ಯುವಕ ಬಲಿ

    ಅತಿಶಿ ಅವರು ಕೇಜ್ರಿವಾಲ್ ಸರ್ಕಾರದಲ್ಲಿ ಶಿಕ್ಷಣ, ಆದಾಯ, ಹಣಕಾಸು, ವಿದ್ಯುತ್ ಮತ್ತು PWD ಸೇರಿದಂತೆ 13 ಖಾತೆಗಳನ್ನು ನಿಭಾಯಿಸಿದ್ದರು.

    ದೆಹಲಿ ಹೊಸ ಸಿಎಂ ವರ್ತನೆಗೆ ಬಿಜೆಪಿ ಟೀಕೆ :

    ನೂತನ ಮುಖ್ಯಮಂತ್ರಿ ಅತಿಶಿಯ ಈ ನಡೆಯನ್ನು ಬಿಜೆಪಿ ಟೀಕಿಸಿದ್ದು, ಇದು ಸಾಂವಿಧಾನಿಕ ನಿಯಮಗಳ ಉಲ್ಲಂಘನೆ ಮಾತ್ರವಲ್ಲದೆ, ಸಿಎಂ ಕಚೇರಿಗೆ ಮಾಡಿದ ಅವಮಾನ ಎಂದು ಹೇಳಿದೆ. ಈ ವಿಚಾರವಾಗಿ ಬಿಜೆಪಿ ದೆಹಲಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಸಿಎಂ ಕಚೇರಿಯಲ್ಲಿ ಎರಡು ಕುರ್ಚಿಗಳನ್ನು ಇಡುವುದು ನಿಯಮಗಳಿಗೆ ವಿರೋಧವಾಗಿದೆ. ಇದು ಆದರ್ಶವಲ್ಲ. ಇದು ನಿಯಮಕ್ಕೆ ತೋರಿದ ಅಗೌರವ ಎಂದಿದ್ದಾರೆ. ಫೆಬ್ರವರಿಯಲ್ಲಿ ದೆಹಲಿಯ ಚುನಾವಣೆ ನಡೆಯಲಿದ್ದು, ಇದರಲ್ಲಿ ಜನ ಸರಿಯಾದ ಉತ್ತರ ನೀಡಲಿದ್ದಾರೆ ಎಂದು ಹೇಳಿದ್ದಾರೆ

    DAKSHINA KANNADA

    ಬಸ್‌ ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ..! ಧರ್ಮದೇಟು ತಿಂದ ಮುಸ್ಲಿಂ ಯುವಕ..!

    Published

    on

    ಮಂಗಳೂರು ( ಸುಳ್ಯ ) : ಬೆಂಗಳೂರಿನಿಂದ ಸುಬ್ರಹ್ಮಣ್ಯ ಮಾರ್ಗವಾಗಿ ಸುಳ್ಯಕ್ಕೆ ಬರುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಯುವಕನೊಬ್ಬ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾನೆ. ಈ ವಿಚಾರ ತಿಳಿದ ವಿದ್ಯಾರ್ಥಿನಿಯ ಸಹಪಾಠಿಗಳು ಯುವಕನನ್ನು ಹಿಡಿದು ಹಲ್ಲೆ ನಡೆಸಿದ ಘಟನೆ ಸುಳ್ಯದಲ್ಲಿ ನಡೆದಿದೆ.

    ಸುಬ್ರಹ್ಮಣ್ಯ ಸಮೀಪದ ಬಿಸಲೆ ಘಾಟ್‌ ಬಳಿ ವಿದ್ಯಾರ್ಥಿನಿ ಬೆಂಗಳೂರಿನಿಂದ ಬಂದಿದ್ದ ಬಸ್ ಹತ್ತಿದ್ದಳು. ಈ ವೇಳೆ ಯುವಕೊನೊಬ್ಬ ಕುಳಿತಿದ್ದ ಸೀಟ್‌ ಪಕ್ಕದ ಸೀಟ್ ಖಾಲಿ ಇದ್ದ ಕಾರಣ ಆಕೆ ಆತನ ಪಕ್ಕದಲ್ಲೇ ಕುಳಿತಿದ್ದಾಳೆ. ಆದ್ರೆ ವಿದ್ಯಾರ್ಥಿನಿ ಪಕ್ಕದಲ್ಲಿ ಕುಳಿತ ಸ್ವಲ್ಪ ಸಮಯದಲ್ಲೇ ಯುವಕ ಅನುಚಿತವಾಗಿ ವರ್ತಿಸಲು ಆರಂಭಿಸಿದ್ದಾನೆ. ಈ ವಿಚಾರವನ್ನು ಬಸ್ ನಿರ್ವಾಹಕನಿಗೆ ತಿಳಿಸಿದಾಗ ನಿರ್ವಾಹಕ ಹಾಗೂ ಬಸ್‌ ಪ್ರಯಾಣಿಕರು ಆರೋಪಿ ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ವಿದ್ಯಾರ್ಥಿನಿ ಈ ವಿಚಾರವನ್ನು ಸುಳ್ಯದ ತನ್ನ ಕಾಲೇಜು ಸಹಪಾಠಿಗಳ ಗಮನಕ್ಕೂ ತಂದಿದ್ದಾಳೆ. ಈ ನಡುವೆ ಯುವಕ ಸುಬ್ರಹ್ಮಣ್ಯದಲ್ಲಿ ಬಸ್‌ನಿಂದ ಇಳಿದು ಬೇರೆ ಬಸ್ ಮೂಲಕ ಸುಳ್ಯದತ್ತ ಪ್ರಯಾಣ ಮಾಡಿದ್ದಾನೆ. ಬೆಂಗಳೂರಿನ ಬಸ್‌ನಲ್ಲಿ ಪ್ರಯಾಣಿಸಿ ಸುಳ್ಯ ತಲುಪಿದ್ದ ವಿದ್ಯಾರ್ಥಿನಿ ಈ ವಿಚಾರವನ್ನು ತನ್ನ ಸಹಪಾಠಿಗಳಿಗೆ ತಿಳಿಸಿದ್ದಾಳೆ. ತಕ್ಷಣ ಸುಳ್ಯದ ಪೈಚಾರು ಎಂಬಲ್ಲಿಗೆ ಕಾರಿನಲ್ಲಿ ತೆರಳಿದ ವಿದ್ಯಾರ್ಥಿಗಳು ಅಲ್ಲಿ ಯುವಕ ಪ್ರಯಾಣಿಸುತ್ತಿದ್ದ ಬಸ್‌ನಿಂದ ಆತನನ್ನು ಇಳಿಸಿದ್ದಾರೆ. ಬಳಿಕ ಆತನನ್ನು ಕಾರಿನಲ್ಲಿ ಸುಳ್ಯ ಬಸ್ ನಿಲ್ದಾಣಕ್ಕೆ ಕರೆತಂದು ಬಸ್ ನಿಲ್ದಾಣದಲ್ಲಿ ಹಿಗ್ಗಾ ಮುಗ್ಗ ಥಳಿಸಿದ್ದಾರೆ.

    ವಿದ್ಯಾರ್ಥಿಗೆ ಕಿರುಕುಳ ನೀಡಿದ ಯುವಕ ಕೇರಳ ಮೂಲದವನಾಗಿದ್ದು, ಆತನ ಹೆಸರು ನಿಯಾಜ್‌ ಎಂದು ಗೊತ್ತಾಗಿದೆ. ಘಟನೆಯ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿದ್ಯಾರ್ಥಿಗಳಿಂದ ಹಲ್ಲೆಗೊಳಗಾದ ನಿಯಾಜ್‌ನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಕೆ ನಡೆಸುತ್ತಿದ್ದಾರೆ.

    Continue Reading

    BIG BOSS

    Bigg Boss Kannada 11: ದೊಡ್ಮನೆಯಲ್ಲಿ ಸ್ವರ್ಗ, ನರಕ ಎನ್ನುವ ಎರಡು ಥೀಮ್

    Published

    on

    ‘ಬಿಗ್ ಬಾಸ್ ಕನ್ನಡ 11’ಕ್ಕೆ ಕೌಂಟ್ ಡೌನ್ ಶುರುವಾಗಿದೆ. ದೊಡ್ಮನೆ 2ನೇ ಪ್ರೋಮೋ ರಿಲೀಸ್ ಆಗಿ ಮೆಚ್ಚುಗೆ ಗಳಿಸಿತ್ತು. ಈ ಬಾರಿ ಬಿಗ್ ಬಾಸ್‌ನಲ್ಲಿ ಸ್ವರ್ಗ ಮತ್ತು ನರಕ ಎಂದು ಥೀಮ್ ಇರಲಿದೆ ಎಂದು ಸುದೀಪ್‌ ಇಂಟರೆಸ್ಟಿಂಗ್ ಮಾಹಿತಿ  ತಿಳಿಸಿದ್ದಾರೆ.

    ನಾವು ಮಾಡಿ ಕಳುಹಿಸಲಿಲ್ಲ ಅಂದರೆ ಒಳಗೆ ಹೋಗಿರುವ ಸ್ಪರ್ಧಿಗಳೇ ಟೀಮ್ ಮಾಡಿಕೊಳ್ಳುತ್ತಾರೆ. ಹಾಗಾಗಿ ಈ ಬಾರಿ ದೊಡ್ಮನೆಗೆ ಎಂಟ್ರಿ ಕೊಡುವಾಗಲೇ 2 ತಂಡ ಮಾಡುವುದೇ ಈ ಸೀಸನ್‌ನ ಸ್ಪೆಷಾಲಿಟಿ ಎಂದು ಸುದೀಪ್ ತಿಳಿಸಿದರು.

    ಕಳೆದ ಬಾರಿ ಬಿಗ್ ಬಾಸ್ ಸೀಸನ್ 10 ಪ್ರಾರಂಭವಾದ ವೇಳೆ, ಸ್ಪರ್ಧಿಗಳಿಗೆ ಸಮರ್ಥರು ಮತ್ತು ಅಸಮರ್ಥರು ಎಂದು ಪರಿಗಣಿಸಿ ತಂಡಗಳಾಗಿ ವಿಂಗಡಿಸಿದ್ದರು. ಅದರಂತೆಯೇ ಈ ಬಾರಿಯು ಕೂಡ ಹೊಸ ರೀತಿಯಲ್ಲಿ ಸ್ವರ್ಗ ಮತ್ತು ನರಕ ಎಂದು ಎರಡು ತಂಡ ಮಾಡಿ ಸ್ಪರ್ಧಿಗಳನ್ನು ಕಳುಹಿಸಲಾಗುತ್ತದೆ.

    ಸುದೀಪ್ ನಿರೂಪಣೆಯಲ್ಲಿ ಇದೇ ಸೆ.29ಕ್ಕೆ ಬಿಗ್ ಬಾಸ್ ಗ್ರ್ಯಾಂಡ್ ಆಗಿ ಲಾಂಚ್ ಆಗುತ್ತಿದೆ. ಪ್ರತಿದಿನ ರಾತ್ರಿ 9:30ಕ್ಕೆ ಶೋ ಪ್ರಸಾರವಾಗಲಿದೆ.

    Continue Reading

    BANTWAL

    ವಗ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಬಸ್; ಹಲವರಿಗೆ ಗಾಯ

    Published

    on

    ಬಂಟ್ವಾಳ ತಾಲೂಕಿನ ವಗ್ಗದ ಸಮೀಪ ಕೊಪ್ಪಳ ಎಂಬಲ್ಲಿ ಸರ್ಕಾರಿ ಬಸ್‌ ಉರುಳಿ ಬಿದ್ದಿದ್ದು, ಹಲವರು ಗಾಯಗೊಂಡಿದ್ದಾರೆ.

    ಧರ್ಮಸ್ಥಳ ಮಂಗಳೂರು ನಡುವೆ ಸಂಚರಿಸುವ ಸರ್ಕಾರಿ ಬಸ್ ಇದಾಗಿದ್ದು, ಕೊಪ್ಪಳ ಎಂಬಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ರಸ್ತೆಯ ಪಕ್ಕದ ಗುಂಡಿಗೆ ಬಸ್ ಉರುಳಿ ಬಿದ್ದಿದ್ದು ಬಸ್‌ನಲ್ಲಿದ್ದ ಹಲವರಿಗೆ ಗಾಯಗಳಾಗಿದೆ. ತಕ್ಷಣ ಸ್ಥಳೀಯ ಯುವಕರು ಸೇರಿ ಬಸ್‌ ಒಳಗಿದ್ದ ಪ್ರಯಾಣಿಕರನ್ನು ಬಸ್‌ ನಿಂದ ಹೊರ ತೆಗೆದಿದ್ದಾರೆ.

    ಗಾಯಾಳುಗಳನ್ನು ಖಾಸಗಿ ವಾಹನಗಳ ಮೂಲಕ ಸಮೀಪದ ಆಸ್ಪತ್ರೆಗೆ ರವಾನಿಸುವ ಕೆಲಸ ಮಾಡಿದ್ದಾರೆ. ಬಸ್ ಬರುತ್ತಿರುವ ವೇಳೆ ಬೈಕ್‌ ಒಂದು ಅಡ್ಡ ಬಂದಿದ್ದು ಈ ವೇಳೆ ಬಸ್ ನಿಯಂತ್ರಿಸುವ ವೇಳೆ ರಸ್ತೆಯಿಂದ ಪಕ್ಕಕ್ಕೆ ಉರುಳಿದೆ ಎಂದು ಬಸ್ ಚಾಲಕ ಮಾಹಿತಿ ನೀಡಿದ್ದಾರೆ . ಆದರೆ ಸ್ಥಳಿಯರು ಇದನ್ನು ನಿರಾಕರಿಸಿದ್ದು ಬಸ್ ಚಾಲಕನ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎಂದು ಹೇಳಿದ್ದಾರೆ.

    ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿದ್ದು, ಮಾಹಿತಿ ಪಡೆದುಕೊಂಡು ಘಟನೆಗೆ ಕಾರಣ ಏನು ಎಂಬ ಬಗ್ಗೆ ವಿಚಾರಣೆ ಮುಂದುವರೆಸಿದ್ದಾರೆ.

    Continue Reading

    LATEST NEWS

    Trending