Connect with us

BANTWAL

ಚೆನ್ನೆ ಫಾರೂಕ್ ಕಲ್ಲಡ್ಕ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ..! 

Published

on

ಚೆನ್ನೆ ಫಾರೂಕ್ ಕಲ್ಲಡ್ಕ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ..!

ಬಂಟ್ವಾಳ: ಫಾರೂಕ್ ಯಾನೆ ಚೆನ್ನೆ ಫಾರೂಕ್ ಕಲ್ಲಡ್ಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ಎಸ್.ಐ ಅವಿನಾಶ್ ನೇತೃತ್ವದ ತಂಡ ಗುರುವಾರ ಸಂಜೆ ತೊಕ್ಕೊಟ್ಟು ಎಂಬಲ್ಲಿ ಬಂಧಿಸಿದ್ದಾರೆ.

ಮೂಲತಃ ನಂದಾವರ ನಿವಾಸಿ ಪ್ರಸ್ತುತ ತೊಕ್ಕೊಟ್ಟು ವಿನಲ್ಲಿ ವಾಸವಾಗಿರುವ ಹಫೀಸ್ ಯಾನೆ ಅಪ್ಪಿ ಹಾಗೂ ಅಕ್ಕರಂಗಡಿ ನಿವಾಸಿ ಇರ್ಶಾದ್ ಬಂಧಿತ ಆರೋಪಿಗಳು.

ಅ.22 ರಂದು ಮೆಲ್ಕಾರ್ ಸಮೀಪದ ಗುಡ್ಡೆ ಅಂಗಡಿ ಎಂಬಲ್ಲಿ ಕಲ್ಲಡ್ಕ ನಿವಾಸಿ ಫಾರೂಕ್ ಯಾನೆ ಚೆನ್ನಫಾರೂಕ್ ಎಂಬಾತ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ಸ್ನೇಹಿತ ಖಲೀಲ್ ಮತ್ತು ತಂಡ ಡಿಕ್ಕಿ ಹೊಡೆಸಿ ಅಟ್ಟಾಡಿಸಿಕೊಂಡು ಕೊಚ್ಚಿ ಕೊಲೆ ನಡೆಸಿದ್ದರು..

ಸ್ನೇಹಿತರ ನಡುವೆ ಹಣದ ಮತ್ತು ವೈಯಕ್ತಿಕ ವಿಚಾರದಲ್ಲಿ ಮನಸ್ತಾಪ ಉಂಟಾಗಿ ಕೊಲೆ ನಡೆದಿರುವುದಾಗಿ ತಿಳಿದು ಬಂದಿತ್ತು
ಖಲೀಲ್ ಮತ್ತು ಆತನ ಸ್ನೇಹಿತರಾದ ಹಫೀಸ್ ಯಾನೆ ಅಪ್ಪಿ ಹಾಗೂ ಇರ್ಶಾದ್ ಕೊಲೆ ನಡೆಸಿ ಪರಾರಿಯಾಗಿದ್ದನ್ನು ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದ್ದರು. ಕೊಲೆ ನಡೆಸಿದವರ ಬಗ್ಗೆ ಮಾಹಿತಿ ಪಡೆದ ಪೋಲೀಸರು ಆರೋಪಿಗಳ ಬಂಧನಕ್ಕೆ ಎರಡು ತಂಡ ರಚಿಸಿದ್ದರು.

ಕೊಲೆ ನಡೆಸಿ ಬಳಿಕ ಬೆಂಗಳೂರು ಕಡೆಗೆ ಪರಾರಿಯಾಗಲು ಯತ್ನಿಸುತ್ತಿರುವ ಬಗ್ಗೆ ಪೋಲೀಸರಿಗೆ ಮಾಹಿತಿ ಲಭ್ಯವಾಗಿತ್ತು.
ಕೂಡಲೇ ಕಾರ್ಯಪ್ರವೃತ್ತರಾದ ನಗರ ಠಾಣಾ ಎಸ್.ಐ. ಅವಿನಾಶ್ ಹಾಗೂ ಗ್ರಾಮಾಂತರ ಠಾಣಾ ಎಸ್.ಐ ಪ್ರಸನ್ನ ಬಿಸಿರೋಡಿನಿಂದ ಗುಂಡ್ಯ ವರೆಗೆ ವಾಹನವನ್ನು ಬೆನ್ನಟ್ಟಿಕೊಂಡು ಹೋಗಿ ಗುಂಡ್ಯ ತಲುಪುತ್ತಿದ್ದಂತೆ ಖಲೀಲ್ ನ ವಾಹನಕ್ಕೆ ಅಡ್ಡಲಾಗಿ ಇರಿಸಿ ಬಂಧಿಸಲು ಮುಂದಾಗುತ್ತಾರೆ.

ಆದರೆ ಖಲೀಲ್ ಮತ್ತು ಆತನ ಸಹಚರರಾದ ಹಫೀಸ್ ಮತ್ತು ಇರ್ಶಾದ್ ಪೋಲೀಸರ ಮೇಲೆ ಹಲ್ಲೆಗೆ ಮುಂದಾಗುತ್ತಾರೆ.
ಬಂಧನದ ಪೋಲೀಸ್ ಮತ್ತು ಆರೋಪಿಗಳ ನಡುವೆ ಗಲಾಟೆ ಯಲ್ಲಿ ಗ್ರಾಮಾಂತರ ಎಸ್.ಐ. ಪ್ರಸನ್ನ ಅವರು ಗಾಯಗೊಂಡಿದ್ದರು.

ಪೋಲೀಸರ ಮೇಲೆ ಹಲ್ಲೆಗೆ ಮುಂದಾಗಿ ಪರಾರಿಯಾಗಲು ಯತ್ನಿಸಿದಾಗ ನಗರ ಠಾಣಾ ಎಸ್.ಐ.ಅವಿನಾಶ್ ಆರೋಪಿ ಖಲೀಲ್ ಮೇಲೆ ಗುಂಡು ಹಾರಿಸಿ ಬಂಧಿಸಿದ್ದರು.ಆದರೆ ಉಳಿದ ಇಬ್ಬರು ಆರೋಪಿಗಳು ಗುಂಡ್ಯ ದ ಗುಡ್ಡೆಯಲ್ಲಿ ಪರಾರಿಯಾಗಿದ್ದರು.

ಉಪ್ಪಿನಂಗಡಿ ಎಸ್.ಐ. ಈರಯ್ಯ ನೇತೃತ್ವದ ತಂಡ ಗುಡ್ಡೆ ಯಲ್ಲಿ ಆರೋಪಿಗಳ ಹುಡುಕಾಟ ನಡೆಸಿದ್ದರು ಆದರೆ ಅವರು ಅಲ್ಲಿಂದ ಪರಾರಿಯಾಗಿದ್ದರು.ಗಾಯಗೊಂಡ ಖಲೀಲ್ ಹಾಗೂ ಘಟನೆಯಲ್ಲಿ ಗಾಯಗೊಂಡ ಎಸ್.ಐ. ಪ್ರಸನ್ನ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಗುಂಡೇಟಿನಿಂದ ಗಾಯಗೊಂಡ ಆರೋಪಿ ಖಲೀಲ್ ಇನ್ನೂ ಕೂಡ ಆಸ್ಪತ್ರೆಯ ಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಇದೇ ಸಂದರ್ಭದಲ್ಲಿ ಪರಾರಿಯಾಗಿದ್ದ ಹಫೀಸ್ ಯಾನೆ ಅಪ್ಪಿ ಹಾಗೂ ಇರ್ಶಾದ್ ಇಬ್ಬರು ಆರೋಪಿಗಳನ್ನು ಗುರುವಾರ ಸಂಜೆ ತೊಕ್ಕೊಟ್ಟುವಿನಲ್ಲಿ ಬಂಧಿಸಿದ್ದಾರೆ..

Click to comment

Leave a Reply

Your email address will not be published. Required fields are marked *

BANTWAL

Bantwala: ಅಕ್ಕಪಕ್ಕ ಮನೆಯ ಯುವಕ-ಯುವತಿ ಒಂದೇ ದಿನ ನಾಪತ್ತೆ..!

Published

on

ಬಂಟ್ವಾಳ: ಅಕ್ಕ ಪಕ್ಕದ ಮನೆಯ ಯುವಕ ಮತ್ತು ಯುವತಿ ಒಂದೇ ದಿನ ನಾಪತ್ತೆ ಯಾದ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದಲ್ಲಿ ನಡೆದಿದ್ದು, ಈ ಕುರಿತಂತೆ ಎರಡೂ ಮನೆಯವರು ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಆಯಿಷತ್‌ ರಸ್ಮಾ (18) ಮತ್ತು  ಮಹಮ್ಮದ್‌ ಸಿನಾನ್‌ (23) ನಾಪತ್ತೆಯಾದವರು. ರಸ್ಮಾ ನಡುಪದವು ಖಾಸಗಿ ಕಾಲೇಜಿನಲ್ಲಿ ಫಾರ್ಮಸಿ ವಿದ್ಯಾರ್ಥಿನಿಯಾಗಿದ್ದಾರೆ. ಅವರು ನ. 23ರ ರಾತ್ರಿ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದು, ಮರುದಿನ ಬೆಳಗ್ಗೆ ಎದ್ದು ನೋಡಿದಾಗ ನಾಪತ್ತೆಯಾಗಿದ್ದರು. ಸಿನಾನ್‌ ಕೆಲವು ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಬಳಿಕ ಊರಿಗೆ ಬಂದು ಕೂಲಿ ಕೆಲಸ ಮಾಡಿಕೊಂಡಿದ್ದರು. ಅವರು ನ. 23ರ ರಾತ್ರಿ ಊಟ ಮಾಡಿ ಮಲಗಿದವರು ಮರುದಿನ ಬೆಳಗಾಗುವಷ್ಟರಲ್ಲಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ಎರಡೂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

Continue Reading

BANTWAL

Bantwala: ಅಕ್ರಮ ಮರ ಸಾಗಾಟ-ಇಬ್ಬರು ಆರೋಪಿಗಳು ವಶ..!

Published

on

ಬಂಟ್ವಾಳ: ಅಕ್ರಮ ಮರ ಸಾಗಟ ಮಾಡುತ್ತಿದ ಸ್ಥಳಕ್ಕೆ ಖಚಿತ ಮಾಹಿತ ಪಡೆದ ಬಂಟ್ವಾಳ ಅರಣ್ಯ ಇಲಾಖೆಯವರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಹಾಗೂ ಉಳ್ಳಾಲ ತಾಲೂಕಿನ ಸಜೀಪಪಡು ಗ್ರಾಮದ ಕೋಟೆಕಣಿಯಲ್ಲಿ ನಡೆದಿದೆ.

ಮರ ಹಾಗೂ ವಿವಿಧ ಜಾತಿಯ ದಿಮ್ಮಿಗಳನ್ನು ಪಿಕಪ್ ಮೂಲಕ ಆಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹಾಗೂ 2 ಪಿಕಪ್ ವಾಹನ,6 ಲಕ್ಷ ರೂ ಮೌಲ್ಯದ ದಿಮ್ಮಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಗಲು ಪಾಲ್ಗೊಂಡಿದ್ದರು. ವಲಯ ಅರಣ್ಯ ಅಧಿಕಾರಿ ಪ್ರಪುಲ್ ಶೆಟ್ಟಿ ಪಿ.ಅವರು ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ.

Continue Reading

BANTWAL

ಇಂಡೋನೇಷ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಬಂಟ್ವಾಳದ ಧನೇಶ್‌ ಶೆಟ್ಟಿ ಆಯ್ಕೆ

Published

on

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕ ಇಂಡೋನೇಶ್ಯಾದ ರಾಷ್ಟ್ರೀಯ ಕ್ರಿಕೆಟ್‌ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಕುಕ್ಕಿಪ್ಪಾಡಿ ಹುಣಸೆಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಅವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಶ್ಯಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರು. ವಿವಾಹಿತರಾಗಿರುವ ಧನೇಶ್ ಅವರು ತನ್ನ ಪತ್ನಿಯೊಂದಿಗೆ ಇಂಡೋನೇಶ್ಯಾದಲ್ಲಿ ನೆಲೆಸಿದ್ದು, ಆರೋಗ್ಯ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ನಲ್ಲಿ ಆಸಕ್ತಿ ಹೊಂದಿದ್ದ ಇವರು ಇದೀಗ ಇಂಡೋನೇಸ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

Continue Reading

LATEST NEWS

Trending