BANTWAL
ದ್ವಿಚಕ್ರ ವಾಹನಗಳ ಢಿಕ್ಕಿ: ಸಕಾಲಕ್ಕೆ ಸಿಗದ ಚಿಕಿತ್ಸೆಯಿಂದ ಪುಂಜಾಲಕಟ್ಟೆ ಹೆಡ್ಕಾನ್ಸ್ಟೇಬಲ್ ದಾರುಣ ಸಾವು
ಬಂಟ್ವಾಳ: ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿ ಹೊಡೆದು ಪುಂಜಾಲಕಟ್ಟೆ ಪೋಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಅವರು ಮೃತಪಟ್ಟ ಘಟನೆ ಪಿಲಾತಬೆಟ್ಟು ಗ್ರಾಮದ ಮೂರ್ಜೆ ಸಮೀಪದ ನೇರಳಕಟ್ಟೆ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಪುಂಜಾಲಕಟ್ಟೆ ಪೋಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ವೇಣೂರಿನ ಮರೊಳಿ ನಿವಾಸಿ ಅಬೂಬಕ್ಕರ್ (47) ಮೃತಪಟ್ಟ ವರಾಗಿದ್ದಾರೆ.
ಇವರು ವಾಮದಪದವಿನಲ್ಲಿ ನಡೆದ ಗೃಹ ಪ್ರವೇಶ ಕಾರ್ಯಕ್ರಮಕ್ಕೆ ಭಾಗವಹಿಸಿ ವಾಪಾಸಾಗುತ್ತಿದ್ದ ವೇಳೆ ನೇರಳಕಟ್ಟೆ ಬಳಿ
ಎದುರಿನಿಂದ ಬಂದ ಇನ್ನೊಂದು ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ. ಘಟನೆಯಿಂದ ಇನ್ನೊಂದು ಬೈಕಿನ ಸವಾರ ಇರ್ವತ್ತೂರು ನಿವಾಸಿ ದುರ್ಗಾಪ್ರಸಾದ್ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುಂಜಾಲಕಟ್ಟೆಯ ಇತರ ಸಿಬ್ಬಂದಿಯೊಂದಿಗೆ ಗೃಹ ಪ್ರವೇಶಕ್ಕೆ ತೆರಳಿದ್ದು, ಅಬೂಬಕ್ಕರ್ ಅವರು ತನ್ನ ಬೈಕಿನಲ್ಲಿ ವಾಪಸು ಆಗುತ್ತಿದ್ದರೆ ಉಳಿದವರು ಇಲಾಖಾ ಜೀಪಿನಲ್ಲಿ ಹಿಂಬಂದಿಯಿಂದ ಆಗಮಿಸುತ್ತಿದ್ದರು. ನೇರಳಕಟ್ಟೆ ಸಮೀಪ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.
ಈ ಸಂದರ್ಭದಲ್ಲಿ ಹಿಂಬದಿಯಿಂದ ಜೀಪಿನಲ್ಲಿ ಬರುತ್ತಿದ್ದ ಪೋಲೀಸ್ ಸಿಬ್ಬಂದಿ ಗಳು ಗಾಯಳುಗಳನ್ನು ತಕ್ಷಣ ಜೀಪಿನಲ್ಲಿ ಆಸ್ಪತ್ರೆಗೆ ಸಾಗಿಸಿದ್ದು ಆಬೂಬಕ್ಕರ್ ಅವರು ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಆಸ್ಪತ್ರೆಗೆ ಬೀಗ
ಗಾಯಳು ಆಬೂಬಕ್ಕರ್ ಅವರನ್ನು ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತರಲಾಯಿತು. ಈ ವೇಳೆ ಆಸ್ಪತ್ರೆಗೆ ಬೀಗ ಹಾಕಲಾಗಿತ್ತು. ಇಲ್ಲಿನ ವೈದ್ಯರು ರಜೆಯ ಮೇಲೆ ತೆರಳಿದ್ದರೆ ಇತರ ಸಿಬ್ಬಂದಿ ಕೂಡ ಆಸ್ಪತ್ರೆಯಲ್ಲಿ ಇರಲಿಲ್ಲ.
ಚಿಂತಾಜನಕ ಸ್ಥಿತಿಯಲ್ಲಿ ದ್ದ ಅಬೂಬಕ್ಕರ್ ಅವರನ್ನು ತಕ್ಷಣ ಅದೇ ಜೀಪಿನಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ.
ಹೆದ್ದಾರಿ ಯಲ್ಲಿರುವ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಮತ್ತು ಒಬ್ಬನೇ ಒಬ್ಬ ಸಿಬ್ಬಂದಿ ಗಳಿಲ್ಲದೆ ಬೀಗ ಹಾಕಿರುವುದು ಸ್ಥಳೀಯ ರ ಆಕ್ರೋಶ ಕ್ಕೆ ಕಾರಣವಾಗಿದೆ.
ಜೀವ ಉಳಿಸಬೇಕಾದ ಸರಕಾರಿ ಆಸ್ಪತ್ರೆಗಳ ಬೇಜಾವಬ್ದಾರಿತನಕ್ಕೆ ಇದೊಂದು ಉದಾಹರಣೆ ಆಗಿದೆ. ಈ ಹಿಂದೆಯೂ ಕೂಡ ಇದೇ ರೀತಿಯ ಘಟನೆಗಳಾದಗಲೂ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ, ಗಾಯಳುಗಳು,
ರೋಗಿಗಳು ಸೂಕ್ತ ಚಿಕಿತ್ಸೆ ಸಿಗದೆ ಪರದಾಡಿದ ಪ್ರಸಂಗಗಳು ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಶುಕ್ರವಾರ ನಡೆದ ಅಪಘಾತದಿಂದ ಗಂಭೀರ ಗಾಯಗೊಂಡ ಪುಂಜಾಲಕಟ್ಟೆ ಪೋಲೀಸ್ ಠಾಣೆಯ ಎಚ್.ಸಿ.ಆಬೂಬಕ್ಕರ್ ಅವರು ಜೀವನಮ್ಮರಣ ಹೋರಾಟ ನಡೆಸುತ್ತಿದ್ದರು.
ಈ ಸಂದರ್ಭದಲ್ಲಿ ಅವರಿಗೆ ತುರ್ತು ಚಿಕಿತ್ಸೆ ದೊರಕದಿದ್ದು ಅಲ್ಲಿಂದ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬರುವಷ್ಟರಲ್ಲಿ ಪ್ರಾಣ ಪಕ್ಷಿ ಹಾರಿಹೋಗಿದೆ.
ಇವರ ಅಕಾಲಿಕ ಸಾವಿನಿಂದ ಪುಂಜಾಲಕಟ್ಟೆ ಪೋಲೀಸ್ ಠಾಣೆಯ ಸಿಬ್ಬಂದಿ ಗಳ ಕಣ್ಣೆದುರಲ್ಲೆ ಪ್ರಾಣ ಬಿಟ್ಟ ಸಹಪಾಠಿ ಯ ಜೀವ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಕಂಬನಿ ಮಿಡಿದಿದ್ದಾರೆ. ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಸಹೋದ್ಯೋಗಿಯ ಅಕಾಲಿಕ ಸಾವಿನಿಂದ ಪುಂಜಾಲಕಟ್ಟೆ ಠಾಣೆ ಶೋಕತಪ್ತವಾಗಿದೆ. ಮೃತರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.
BANTWAL
ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು
ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.
ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.
ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ
BANTWAL
ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ
ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.
ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.
ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.
BANTWAL
ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!
ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ