ದಾರಿ ಯಾವುದಯ್ಯ ಮನೆಗೆ ಹೋಗಲು ದಾರಿ ಮಾಡಿ ಕೊಡಿ ಅಂತ ಪಟ್ಟು ಹಿಡಿದ ಕಾಲುನೋವಿನ ವ್ಯಕ್ತಿ..
ದಾರಿ ಯಾವುದಯ್ಯ ಮನೆಗೆ ಹೋಗಲು ದಾರಿ ಮಾಡಿ ಕೊಡಿ ಅಂತ ಪಟ್ಟು ಹಿಡಿದ ಕಾಲುನೋವಿನ ವ್ಯಕ್ತಿ..
ಬಂಟ್ವಾಳ: ಮನೆಗೆ ಹೋಗಲು ದಾರಿ ಮಾಡಿಕೊಡಿ ಇಲ್ಲದಿದ್ದರೆ ರಸ್ತೆಯಲ್ಲಿಯೇ ಕೂರುತ್ತೇನೆ ಎಂದು ಹಠ ಹಿಡಿದು ರಸ್ತೆಯಲ್ಲಿ ಕಾಲು ನೋವಿಗೆ ಶಸ್ತ್ರಚಿಕಿತ್ಸೆಗೊಳಪಟ್ಟ ವ್ಯಕ್ತಿಯೋರ್ವರು ಕುರ್ಚಿ ಹಾಕಿ ಕುಳಿತ ಘಟನೆ ಬಂಟ್ವಾಳದಲ್ಲಿ ಇಂದು (ಮೇ 20) ನಡೆದಿದೆ.
ಬಂಟ್ವಾಳ ಮೈಯರಬೈಲು ನಿವಾಸಿ ಉದಯಕುಮಾರ್ ರಾವ್ ಅವರು ಒಬ್ಬಂಟಿಯಾಗಿ ರಸ್ತೆಯಲ್ಲಿ ಕುಳಿತುಕೊಂಡು ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿದರು.
ಬಂಟ್ವಾಳದಿಂದ ಪುಂಜಾಲಕಟ್ಟೆಯವರೆಗೆ ನಡೆಯುತ್ತಿರುವ ರಸ್ತೆ ಕಾಮಗಾರಿಗಾಗಿ ಎಲ್ಲಾ ನೀರು ಹರಿದು ಹೋಗುವ ಚರಂಡಿಗಳನ್ನು ಮುಚ್ಚಲಾಗಿತ್ತು.
ಆ ಬಳಿಕ ಲಾಕ್ ಡೌನ್ ಹಿನ್ನಲೆಯಲ್ಲಿ ರಸ್ತೆ ಕಾಮಗಾರಿಯು ನಿಂತು ಹೋಯಿತು.
ಮಳೆಗಾಲ ಆರಂಭವಾಗುವ ಮೊದಲು ಈ ಚರಂಡಿಯನ್ನು ತೆರವು ಮಾಡಿಕೊಡುವಂತೆ ಉದಯಕುಮಾರ್ ರಾವ್ ಅವರು ಕಾಮಗಾರಿ ಗುತ್ತಿಗೆದಾರರಲ್ಲಿ ಮನವಿ ಮಾಡಿಕೊಂಡಿದ್ದರು.
‘ಮಳೆ ಬರಲು ಆರಂಭವಾದರೆ ನಿಮ್ಮ ಬೇಜವಾಬ್ದಾರಿ ಕಾಮಗಾರಿಯಿಂದ ಮಳೆ ನೀರು ಹರಿದು ಹೋಗಲು ವ್ಯವಸ್ಥೆ ಇಲ್ಲದೆ ನನ್ನ ಮನೆಯಂಗಳಕ್ಕೆ ನೀರು ನುಗ್ಗುತ್ತದೆ’ ಎಂದು ಕಳೆದ ಒಂದೂವರೆ ತಿಂಗಳಿನಿಂದಲೂ ಹೇಳುತ್ತಲೆ ಬಂದಿದ್ದರು.
ಇವರ ಮನೆಯಂಗಳದಲ್ಲಿ ಲಕ್ಷಾಂತರ ರೂ ಬೆಲೆ ಬಾಳುವ ಮದುವೆ ಮಂಟಪ ಅಲಂಕಾರದ ಉಪಕರಣಗಳು ಇವೆ.
ಆದರೆ ಕಳೆದ ಎರಡು ದಿನಗಳಿಂದ ಸುರಿದ ಮಳೆಗೆ ಮನೆಯಂಗಳಕ್ಕೆ ಕೆಸರು ನೀರು ನುಗ್ಗಿ ಬೆಲೆ ಬಾಳುವ ಸ್ವತ್ತುಗಳು ನೀರು ಪಾಲಾಗಿವೆ.
ಈ ದೂರಿನ ಹಿನ್ನಲೆಯಲ್ಲಿ ಸೋಮವಾರ ಬೆಳಿಗ್ಗೆ ಗುತ್ತಿಗೆದಾರರು ಬಂದು ನೀರು ಹರಿದು ಹೋಗಲು ಚರಂಡಿ ನಿರ್ಮಿಸಿ ಅದಕ್ಕೆ ಮೋರಿ ಹಾಕಿಕೊಡುವ ಭರವಸೆ ನೀಡಿ ಅರ್ಧ ಚರಂಡಿ ಅಗೆದು ವಾಪಾಸು ಹೋಗಿದ್ದರು.
ಚರಂಡಿ ಆಳವಾಗಿ ಅಗೆದು ಹೋಗಿದ್ದರಿಂದ ಮೊದಲೇ ಕಾಲು ಶಸ್ತ್ರಚಿಕಿತ್ಸೆಯಾಗಿ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಆಸ್ಪತ್ರೆಗೆ ಹೋಗಲು ಚರಂಡಿ ದಾಟಿ ಬರಲು ಕಷ್ಟವಾಗಿತ್ತು.
ಹೇಗೋ ಮಾಡಿ ಬೆಳಿಗ್ಗೆ ಮಂಗಳೂರು ಕಂಕನಾಡಿ ಆಸ್ಪತ್ರೆಗೆ ವೈದ್ಯರನ್ನು ಕಾಣಲು ಚರಂಡಿಯ ಮೇಲೆ ತಾತ್ಕಾಲಿಕ ಸೀಟು ಹಾಕಿ ಹೋಗಿದ್ದರು.
ವೈದ್ಯರಲ್ಲಿ ಹೋಗಿ ವಾಪಾಸು ಮನೆಗೆ ಬರುವ ವೇಳೆ ಚರಂಡಿಯ ಮೇಲೆ ದಾಟಲು ಹಾಕಿದ್ದ ಸಿಮೆಂಟ್ ಸೀಟು ಕಾಣೆಯಾಗಿತ್ತು.
ಕಾಲು ನೋವಿನಿಂದ ವೈದ್ಯರು ನೀಡಿರುವ ಕೋಲು ಬಳಸಿ ನಡೆಯುವ ಉದಯರಾವ್ ಅವರಿಗೆ ಮನೆಗೆ ಹೋಗಲು ಅಸಾಧ್ಯವಾಗಿದ್ರಿಂದ ರೊಚ್ಚಿಗೆದ್ದ ಉದಯ್ ಈ ರೀತಿ ಪ್ರತಿಭಟನೆ ನಡೆಸಿದ್ದಾರೆ.
LATEST NEWS
ಇನ್ಮುಂದೆ ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ…!
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೊರನಾಡಿನಲ್ಲಿ ನೆಲೆಸಿರುವ ಅನ್ನಪೂರ್ಣೇಶ್ವರಿ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯ ಮಾಡಿದ್ದು, ಭಕ್ತರು ಈ ನಿಯಮವನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಅಡಳಿತ ಮಂಡಳಿ ಮನವಿ ಮಾಡಿಕೊಂಡಿದೆ.
ಗಂಡಸರು ಶಲ್ಯ, ಪ್ಯಾಂಟ್, ಪಂಚೆ ಧರಿಸಬೇಕು. ಹೆಣ್ಣು ಮಕ್ಕಳು ಸೀರೆ ಹಾಗೂ ಚೂಡಿದಾರ ಧರಿಸುವಂತೆ ದೇವಾಲಯದ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಸಾಂಪ್ರದಾಯಿಕ ಉಡುಗೆಯಲ್ಲಿ ಬರದಿದ್ದರೆ ದೇವಸ್ಥಾನದ ಒಳಗೆ ಪ್ರವೇಶವಿಲ್ಲ ಅಂತ ಅಡಳಿತ ಮಂಡಳಿ ತಿಳಿಸಿದೆ.
LATEST NEWS
ಎಂಟು ಕಾಲುಗಳೊಂದಿಗೆ ಜನಿಸಿದ ಕರು..! ಈ ವಿಚಿತ್ರ ನೋಡಲು ಮುಗಿಬಿದ್ದ ಜನ..!!
ಉತ್ತರಪ್ರದೇಶ/ಮಂಗಳೂರು: ಇಲ್ಲಿನ ಗ್ರಾಮದ ರೈತರೊಬ್ಬರ ಮನೆಯಲ್ಲಿ ಎಮ್ಮೆಯೊಂದು ಎಂಟು ಕಾಲುಗಳಿರುವ ಕರುವಿಗೆ ಜನ್ಮ ನೀಡುವ ಮೂಲಕ ವಿಸ್ಮಯವನ್ನುಂಟುಮಾಡಿದೆ. ಅಲ್ಲದೇ ಈ ವಿಚಿತ್ರ ಕರುವನ್ನು ನೋಡಲು ಊರವರೆಲ್ಲಾ ಮನೆಗೆ ದೌಡಾಯಿಸಿದ್ದಾರೆ.
ಎರಡು ಬೆನ್ನು ಹಾಗೂ ಎಂಟು ಕಾಲು ಹಾಗೂ ಒಂದು ತಲೆಯೊಂದಿಗೆ ಜನಿಸಿದ ಈ ಕರುವನ್ನು ನೋಡಿ ಎಲ್ಲರೂ ಬೆಚ್ಚಿ ಬಿದ್ದಿದ್ದಾರೆ. ಕರುವನ್ನು ಪರೀಕ್ಷಿಸಿದ ವೈದ್ಯರು ಆನುವಂಶಿಕ ದೋಷದಿಂದ ಇಂತಹ ಕರುಗಳು ಜನಿಸುತ್ತವೆ ಎಂದು ಹೇಳಿದ್ದಾರೆ. ಈ ಘಟನೆ ಸ್ಥಳೀಯರು ಹಾಗೂ ನೆಟ್ಟಿಗರ ಗಮನ ಸೆಳೆದಿದೆ.
ಕರುವಿನ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
FILM
‘ಬಿಗ್ ಬಾಸ್’ ಟೀಮ್ ಜೊತೆ ಅಪ್ಡೇಟ್ ಹೊತ್ತು ತರುತ್ತಿದ್ದಾರೆ ಸುದೀಪ್- ಏನದು?
‘ಬಿಗ್ ಬಾಸ್ ಕನ್ನಡ 11’ಕ್ಕೆ ಕೌಂಟ್ ಡೌನ್ ಶುರುವಾಗಿದೆ. ಇದೇ ಸೆ.29ಕ್ಕೆ ಶೋ ಅದ್ಧೂರಿಯಾಗಿ ಆಗಿ ಲಾಂಚ್ ಆಗಲಿದೆ. ಶೋ ಚಾಲನೆಗೂ ಮುನ್ನ ಬಿಗ್ ಬಾಸ್ ತಂಡದ ಜೊತೆ ಬಿಗ್ ಅಪ್ಡೇಟ್ವೊಂದನ್ನು ಸುದೀಪ್ ಹೊತ್ತು ತರುತ್ತಿದ್ದಾರೆ.
ಹೊಸ ಸೀಸನ್ ಪ್ರಾರಂಭಕ್ಕೆ ಬಿಗ್ ಬಾಸ್ ತಂಡ ತೆರೆಮರೆಯಲ್ಲಿ ಎಲ್ಲ ರೀತಿಯಲ್ಲೂ ತಯಾರಿ ಮಾಡಿಕೊಳ್ಳುತ್ತಿದೆ. ಈಗ ಬಿಗ್ ಬಾಸ್ ತಂಡದಿಂದ ಸುದ್ದಿಗೋಷ್ಠಿ ಆಯೋಜಿಸಲಾಗಿದೆ. ಇಂದು 3 ಗಂಟೆ ಸುಮಾರಿಗೆ ಬಿಗ್ ಬಾಸ್ ಸೀಸನ್ 11ರ ಬಗ್ಗೆ ಅಧಿಕೃತ ಚಾಲನೆ ಸಿಗಲಿದೆ. ಈ ಸುದ್ದಿಗೋಷ್ಠಿಯಲ್ಲಿ ಸುದೀಪ್ ಕೂಡ ಭಾಗಿಯಾಗಲಿದ್ದಾರೆ. ಹಲವು ವಿಚಾರಗಳ ಕುರಿತು ನಟ ಮಾತನಾಡಲಿದ್ದಾರೆ.
ಮೊದಲ ಸೀಸನ್ನಿಂದ ಹಿಡಿದು ಹತ್ತು ಸೀಸನ್ಗಳು ಯಶಸ್ವಿಯಾಗಿ ಪ್ರಸಾರ ಕಂಡಿದೆ. ಇದೀಗ ಬಿಗ್ ಬಾಸ್ ಶೋ 11ನೇ ಸೀಸನ್ಗೆ ಕಾಲಿಟ್ಟಿದೆ. ಈಗಾಗಲೇ ಪ್ರೋಮೋಗಳ ಮೂಲಕ ಬಿಗ್ ಬಾಸ್ ಸೀಸನ್ 11ರ ಮೇಲೆ ಫ್ಯಾನ್ಸ್ಗೆ ಸಾಕಷ್ಟು ನಿರೀಕ್ಷೆಯಿದೆ. ಜೊತೆಗೆ ಈ ಬಾರಿ ಸುದೀಪ್ ಕಾರ್ಯಕ್ರಮ ನಿರೂಪಣೆ ಮಾಡ್ತಿಲ್ಲ ಅನ್ನೋ ಸುದ್ದಿಯೂ ಹರಿದಾಡಿತ್ತು. ಆ ನಂತರ ಪ್ರೋಮೋದಲ್ಲಿ ನಟನ ಆಗಮನದ ಮೂಲಕ ವದಂತಿಗಳಿಗೆ ಬ್ರೇಕ್ ಬಿದ್ದಿತ್ತು.
ಅಂದಹಾಗೆ, ಬಿಗ್ ಬಾಸ್ಗೆ ಬರಲಿರುವ ಕೆಲ ಸ್ಪರ್ಧಿಗಳ ಹೆಸರು ಸದ್ದು ಮಾಡುತ್ತಿದೆ. ಮೋಕ್ಷಿತಾ ಪೈ, ಹುಲಿ ಕಾರ್ತಿಕ್, ಸುಕೃತಾ ನಾಗ್, ಕಿರುತೆರೆ ನಟಿ ಅಮೂಲ್ಯ, ಭವ್ಯಾ ಗೌಡ, ವರ್ಷಾ ಕಾವೇರಿ ಸೇರಿದಂತೆ ಅನೇಕರು ಹೆಸರು ಚಾಲ್ತಿಯಲ್ಲಿದೆ. ಯಾರೆಲ್ಲಾ ದೊಡ್ಮನೆ ಬರುತ್ತಾರೆ ಎಂಬುದನ್ನು ಕಾದುನೋಡಬೇಕಿದೆ. ಶೋ ಶುರುವಾದ್ಮೇಲೆ ಎಲ್ಲದ್ದಕ್ಕೂ ಉತ್ತರ ಸಿಗಲಿದೆ.