HomeLATEST NEWSಉಡುಪಿ: ಬಿಜೆಪಿಯ ಗುರ್ಮೆ ಸುರೇಶ್ ಶೆಟ್ಟಿಗೆ ಅದ್ದೂರಿಯ ವಿಜಯೋತ್ಸವ 

ಉಡುಪಿ: ಬಿಜೆಪಿಯ ಗುರ್ಮೆ ಸುರೇಶ್ ಶೆಟ್ಟಿಗೆ ಅದ್ದೂರಿಯ ವಿಜಯೋತ್ಸವ 

ಉಡುಪಿಯ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅದ್ದೂರಿ ಗೆಲುವು ಸಾಧಿಸಿ,ಬಿಜೆಪಿಯಿಂದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರ ವಿಜಯೋತ್ಸವ ಕಾರ್ಯಕ್ರಮ ಇಂದು ನಡೆಯಿತು. 

ಉಡುಪಿ: ಉಡುಪಿಯ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅದ್ದೂರಿ ಗೆಲುವು ಸಾಧಿಸಿ, ಬಿಜೆಪಿಯಿಂದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರ ವಿಜಯೋತ್ಸವ ಕಾರ್ಯಕ್ರಮ ಇಂದು ನಡೆಯಿತು.

ಈ ವಿಜಯೋತ್ಸವದಲ್ಲಿ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು.ಇನ್ನು ಕಾಪು ತಾಲೂಕಿನ ಪಡುಕೆರೆಯಿಂದ ಆರಂಭಗೊಂಡ ಈ ವಿಜಯೋತ್ಸವ ಯಾತ್ರೆಯು ಕಟಪಾಡಿ, ಉದ್ಯಾವರ, ಶಿರ್ವ, ಪಡುಬಿದ್ರಿ ಮೂಲಕ ಸಾಗಿ ಬಳಿಕ ಕಾಪುವಿಗೆ ಬರಲಿದೆ.

ನಂತರ ಕಾಪು ಕಳತ್ತೂರು ಸಭಾಭವನದಲ್ಲಿ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಅಭಿನಂದನೆ ನಡೆಯುವ ಮೂಲಕ ಕಾರ್ಯಕ್ರಮ ಸಮಾಪನಗೊಳ್ಳಲಿದೆ.

ಈ ವಿಜಯೋತ್ಸವದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್. ಮೆಂಡನ್. ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ , ಕಾಪು ತಾಲೂಕು ಅಧ್ಯಕ್ಷ ಶ್ರೀಕಾಂತ್ ನಾಯಕ್ , ಮಹಿಳಾ ಮೋರ್ಚಾದ ಅಧ್ಯಕ್ಷ ವೀಣಾ ಶೆಟ್ಟಿ ಸೇರಿದಂತೆ ಹಲವಾರು ಮಂದಿ ಪಕ್ಷದ ಪ್ರಮುಖರು, ಕಾರ್ಯಕರ್ತರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.

Latest articles

ಬಂಟ್ವಾಳ ವಿಟ್ಲದಲ್ಲಿ ರಸ್ತೆಗೆ ಅಡ್ಡ ಬಂದ ದನ : ಆಟೋ ರಿಕ್ಷಾ ಪಲ್ಟಿ-50 ಲೀಟರ್ ಹಾಲು ನಷ್ಟ..!

ಸಾರಡ್ಕ - ಪುಣಚ ರಸ್ತೆಯ ತೋರಣಕಟ್ಟೆಯ ಸೊಸೈಟಿಯ ಸಮೀಪ ಮಂಗಳವಾರ ದನ ರಸ್ತೆಯಲ್ಲಿ ಅಡ್ಡ ಬಂದ ಹಿನ್ನಲೆಯಲ್ಲಿ ಹಾಲು...

ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಎಫೆಕ್ಟ್- ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ..!

ಜೂನ್ ಎರಡನೇ ವಾರಕ್ಕೆ ಕಾಲಿಟ್ಟರೂ ಮುಂಗಾರು ಮಳೆಯ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಹವಾಮಾನ ಇಲಾಖೆಯ ಪ್ರಕಾರ ಈ ಬಾರಿ...

ಮಂಗಳೂರು: ಮಹಿಳಾ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿ ಮಂಗಳೂರಿನಲ್ಲಿ ಪ್ರತಿಭಟನೆ-ಬೃಜ್‌ ಭೂಷಣ್‌ ಬಂಧನಕ್ಕೆ ಆಗ್ರಹ

ಮಹಿಳಾ ಕುಸ್ತಿ ಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅರೋಪ ಹೊತ್ತ ಎಸಗಿದ ಉತ್ತರ ಪ್ರದೇಶದ ಬಿಜೆಪಿ ಸಂಸದ...

ಮಂಗಳೂರು: ಬೀದಿಬದಿ ವ್ಯಾಪಾರಿಗಳ ಮೇಲಿನ ಕಿರುಕುಳ, ಕೇಸುಗಳಿಗೆ ಖಂಡನೆ – ಸುಳ್ಳು ಮೊಕದ್ದಮೆ ವಾಪಾಸ್ ಪಡೆಯಲು ಒತ್ತಾಯಿಸಿ ಪ್ರತಿಭಟನೆ

ಜನಪರ ಹೋರಾಟಗಾರ, ಬೀದಿ ವ್ಯಾಪಾರಿಗಳ ಮುಂದಾಳು ಬಿ ಕೆ ಇಮ್ತಿಯಾಝ್‌ ಮತ್ತು ಮುಖಂಡರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ವಾಪಾಸ್...