Connect with us

    LATEST NEWS

    ಉಡುಪಿ ; ಕಾರು – ಬೈಕ್ ಮುಖಾ ಮುಖಿಯಾಗಿ ವಿದ್ಯಾರ್ಥಿ ಸಾ*ವು

    Published

    on

    ಉಡುಪಿ: ಕಾರು ಡಿ*ಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತ*ಪಟ್ಟ ಘಟನೆ ಅ.7 ರ ಸೋಮವಾರ ರಾತ್ರಿ ಎಂಜಿಎಂ ಕಾಲೇಜು ಎದುರು ನಡೆದಿದೆ.

    ಮೃ*ತರನ್ನು ಹಿರಿಯಡ್ಕ ನಿವಾಸಿ, ತೆಂಕನಿಡಿಯೂರು ಕಾಲೇಜಿನ ಪದವಿ ವಿದ್ಯಾರ್ಥಿ ವೀರಜ್ (18) ಎಂದು ಗುರುತಿಸಲಾಗಿದೆ.
    ಉಡುಪಿ ಕಡೆಯಿಂದ ತಿರುವು ಪಡೆದು ಮಣಿಪಾಲ ಕಡೆಗೆ ಹೋಗುತ್ತಿದ್ದ ಬೈಕ್‌ಗೆ ಮಣಿಪಾಲ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.
    ಈ ಘಟನೆಯಿಂದಾಗಿ ವೀರಜ್ ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಬಳಿಕ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃ*ತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ.
    ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ವರದಕ್ಷಿಣೆ ಕಿರುಕುಳ – ಕೆರೆಗೆ ಹಾರಿ ಮಹಿಳೆ ಆತ್ಮ*ಹತ್ಯೆ

    Published

    on

    ಮಂಗಳೂರು/ಕೊಲಾರ: ಪತಿ ಮತ್ತು ಆತನ ಕುಟುಂಬಸ್ಥರಿ0ದ ನಿರಂತರ ವರದಕ್ಷಿಣಿ ಕಿರುಕುಳದಿಂದಾಗಿ ಬೇಸತ್ತು ಮಹಿಳೆ ಕೆರೆಗೆ ಹಾರಿ ಆತ್ಮ*ಹತ್ಯೆಗೆ ಶರಣಾದ ಘಟನೆ ಬಂಗಾರಪೇಟೆ ಪಟ್ಟಣದಲ್ಲಿ ನಡೆದಿದೆ.

    ಆತ್ಮ*ಹತ್ಯೆಗೆ ಶರಣಾದ ಮಹಿಳೆಯನ್ನು ಕೊಲಾರದ ಕೆಜಿಎಫ್‌ನ ಕಂಗನಲ್ಲೂರು ಗ್ರಾಮದ ಸೌಮ್ಯ (25) ಎಂದು ಗುರುತಿಸಲಾಗಿದೆ.
    ಅ. 6ರ ಭಾನುವಾರ ಬಂಗಾರಪೇಟೆ ಪಟ್ಟಣದ ಅಮರಾವತಿ ಬಡಾವಣೆಯಲ್ಲಿರುವ ತಾಯಿಯ ಮನೆಗೆ ಬಂದಿದ್ದ ಸೌಮ್ಯ, ರಾತ್ರಿ ಮನೆಯಿಂದ ಹೊರ ಬಂದು ಕೆರೆಗೆ ಹಾರಿ ಆತ್ಮ*ಹತ್ಯೆಗೆ ಶರಣಾಗಿದ್ದಾರೆ. ಎರಡು ವರ್ಷದ ಹಿಂದೆ ಸುನಿಲ್ ಕುಮಾರ್ ಎಂಬಾತನ ಜೊತೆ ಸೌಮ್ಯ ಮದುವೆಯಾಗಿದ್ದರು.
    ಮೃ*ತ ಮಹಿಳೆಯ ಪೋಷಕರು ಆಕೆಯ ಪತಿ ಸುನಿಲ್ ಕುಮಾರ್ ಹಾಗೂ ಕುಟುಂಬಸ್ಥರ ಕಿರುಕುಳದಿಂದ ಸೌಮ್ಯ ಆತ್ಮ*ಹತ್ಯೆಗೆ ಶರಣಾಗಿದ್ದಾಳೆ ಎಂದು ಆರೋಪಿಸಿ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    Continue Reading

    LATEST NEWS

    ವಿದ್ಯುತ್ ತಂತಿ ಸ್ಪರ್ಶಿಸಿ ಮಗು ಸಹಿತ ಎರಡು ಕರಡಿ ಮೃ*ತ್ಯು

    Published

    on

    ಮಂಗಳೂರು/ಹಾಸನ: ವಿದ್ಯುತ್ ತಂತಿ ಸ್ಪರ್ಶಿಸಿ 3 ಕರಡಿಗಳು ಮೃ*ತಪಟ್ಟ ಘಟನೆ ಅರಸೀಕೆರೆ ತಾಲೂಕಿನ ಕಲ್ಲುಸಾಗರಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ತಡವಾಗಿ ಸ್ಥಳೀಯರ ಗುರುತಿಸಿದ್ದಾರೆ.


    ಹಾಸನದ ಗುಡ್ಡಗಾಡು ಪ್ರದೇಶಗಳಲ್ಲಿ ಕರಡಿಗಳು ಹೆಚ್ಚಾಗಿದ್ದು, ಕಳೆದ 6 ತಿಂಗಳಲ್ಲಿ ಸುಮಾರು ಐದಾರು ಮಂದಿ ದಾಳಿ ಮಾಡಿ ಗಾಯ**ಗೊಳಿಸಿದ್ದವು.


    ಅರಣ್ಯ ಪ್ರದೇಶದ ಬಳಿ ವಿದ್ಯುತ್ ಕಂಬದಿಂದ ತಂಡಾಗಿ ಬಿದ್ದಿದ್ದ ತಂತಿ ತುಳಿದ ಹಿನ್ನಲೆ ತಾಯಿ ಮತ್ತು ಮರಿ ಕರಡಿಯ ಜೊತೆ ಗಂಡು ಕರಡಿ ಸಾವಿಗೀಡಾಗಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ.

    Continue Reading

    LATEST NEWS

    ಕೇಕ್‌ಗಳಲ್ಲಿ ಕಾರ್ಸಿನೋಜೆನಿಕ್ ಅಂಶ ಪತ್ತೆ – ಎಫ್‌ಎಸ್‌ಎಸ್‌ಎಐ ಎಚ್ಚರಿಕೆ

    Published

    on

    ಬೆಂಗಳೂರು: ರಾಜ್ಯಾದ್ಯಂತ ಪರೀಕ್ಷೆಗೆ ಒಳಪಡಿಸಲಾದ 235 ಕೇಕ್ ಮಾದರಿಗಳ ಪೈಕಿ 12ರಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಕರ್ನಾಟಕದ ಕೇಕ್ ಪ್ರಿಯರಿಗೆ ಎಚ್ಚರಿಕೆ ನೀಡಿದೆ.

    ರೆಡ್ ವೆಲ್ವೆಟ್ ಮತ್ತು ಬ್ಲ್ಯಾಕ್ ಫಾರೆಸ್ಟ್ ಸೇರಿದಂತೆ ಜನಪ್ರಿಯ ಕೇಕ್ ಪ್ರಭೇದಗಳಲ್ಲಿ ಹಾನಿಕಾರಕ ಪದಾರ್ಥಗಳು ಪತ್ತೆಯಾಗಿವೆ ಎಂದು FSSAI ಬಹಿರಂಗಪಡಿಸಿದೆ.ಬೇಕರಿ ಮಾಲೀಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿರುವ ಆಹಾರ ಸುರಕ್ಷತಾ ಆಯುಕ್ತ ಶ್ರೀನಿವಾಸ್ ಕೆ, ಕ್ಯಾನ್ಸರ್ ಗೆ ಕಾರಣವಾಗುವ ಯಾವುದೇ ರಾಸಾಯನಿಕ ಅಥವಾ ಬಣ್ಣಗಳನ್ನು ಕೇಕ್ ಗಳಲ್ಲಿ ಬಳಸಬಾರದು. ರಾಜ್ಯಾದ್ಯಂತ ಕೇಕ್‌ಗಳಲ್ಲಿ ಕ್ಯಾನ್ಸರ್ ಉಂಟುಮಾಡುವ ಪದಾರ್ಥಗಳನ್ನು ಬಳಸಲಾಗುತ್ತಿದೆ ಎಂಬ ಶಂಕೆಯಿಂದಾಗಿ 235 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಇವುಗಳಲ್ಲಿ 12 ಮಾದರಿಗಳಲ್ಲಿ ಅಲೂನಾ ರೆಡ್, ಸನ್‌ಸೆಟ್ ಯೆಲ್ಲೋ, ಪೊನ್ಸೆಯು 4ಆರ್ ಮತ್ತು ಕಾರ್ಮೋಸಿನ್‌ನಂತಹ ಹಾನಿಕಾರಕ ಅಂಶಗಳು ಕಂಡುಬಂದಿವೆ.

    ಈ ಹಿಂದೆ ಆಹಾರ ಸುರಕ್ಷತಾ ಇಲಾಖೆಯು ಗೋಬಿ ಮಂಚೂರಿಯನ್, ಕಬಾಬ್, ಪಾನಿ ಪುರಿಯಂತಹ ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣಗಳನ್ನು ಬಳಸುವುದನ್ನು ನಿಷೇಧಿಸಿತ್ತು. ಕೇಕ್ ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಹೆಚ್ಚಾಗಿ ಬಳಸುವುದರಿಂದ, ಇಲಾಖೆಯು ಈಗ ರೆಡ್ ವೆಲ್ವೆಟ್ ಮತ್ತು ಬ್ಲ್ಯಾಕ್ ಫಾರೆಸ್ಟ್ ಕೇಕ್‌ಗಳಲ್ಲಿ ಅವುಗಳ ಬಳಕೆಯನ್ನು ನಿಷೇಧಿಸಿದೆ. ಆಹಾರ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೇಕ್ ತಯಾರಕರಿಗೆ ಎಚ್ಚರಿಕೆ ನೀಡಲಾಗಿದೆ.

    Continue Reading

    LATEST NEWS

    Trending