LATEST NEWS
ಉಡುಪಿ : ಪ್ರಸಾದ್ ರಾಜ್ ಕಾಂಚನ್ ಅಭ್ಯರ್ಥಿ ಘೋಷಣೆಯ ಬೆನ್ನಲ್ಲೇ ಕೈ ಪಾಳಯದಲ್ಲಿ ಬಂಡಾಯದ ಅಲೆ – ಕೃಷ್ಣಮೂರ್ತಿ ಆಚಾರ್ಯ ಬಹಿರಂಗ ಅಸಮಾಧಾನ.!
ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಪ್ರಸಾದ್ ರಾಜ್ ಕಾಂಚನ್ ಅಭ್ಯರ್ಥಿ ಎಂದು ಘೋಷಿಸಿರುವ ಪಕ್ಷದ ನಿಲುವನ್ನು ಖಂಡಿಸಿ, ಉಡುಪಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಕೃಷ್ಣಮೂರ್ತಿ ಆಚಾರ್ಯ ಬಂಡಾಯ ಎದ್ದಿದ್ದಾರೆ.
ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಪ್ರಸಾದ್ ರಾಜ್ ಕಾಂಚನ್ ಅಭ್ಯರ್ಥಿ ಎಂದು ಘೋಷಿಸಿರುವ ಪಕ್ಷದ ನಿಲುವನ್ನು ಖಂಡಿಸಿ, ಉಡುಪಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಕೃಷ್ಣಮೂರ್ತಿ ಆಚಾರ್ಯ ಬಂಡಾಯ ಎದ್ದಿದ್ದಾರೆ.
ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಸಹಿ ಹಾಕಿದ ಪ್ರಾರ್ಥಮಿಕ ಸದಸ್ಯತ್ವದ ರಾಜೀನಾಮೆ ಪತ್ರವನ್ನು ರವಾನೆ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಗುರುವಾರ ಸಂಜೆ ನಗರದ ಮಥುರಾ ಹೊಟೇಲಿನಲ್ಲಿ ಕೃಷ್ಣಮೂರ್ತಿಯವರ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಕೃಷ್ಣಮೂರ್ತಿ, ಕಳೆದ ಎರಡು ದಶಕಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ನಾನು ತ್ಯಾಗ ಮಾಡಿದ್ದೇನೆ.
ಆದರೆ ಬುಧವಾರ ರಾತ್ರಿಯವರೆಗೆ ನನ್ನ ಹೆಸರಿದ್ದ ಪಟ್ಟಿಯನ್ನು ಬದಲಾಯಿಸಿ, ಪರಿಚಯವೇ ಇಲ್ಲದ ವ್ಯಕ್ತಿಗೆ ಟಿಕೇಟ್ ನೀಡಿರುವುದು ಖಂಡನೀಯ.
ಆಸ್ಕರ್ ಫೆರ್ನಾಂಡೀಸ್ ಅವರಿದ್ದಿದ್ದರೇ ನನಗೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. 2 ಬಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, 3 ಬಾರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗುವುದನ್ನು ತಪ್ಪಿಸಿದ್ದಾರೆ.
2 ಬಾರಿ ಜೈಲಿಗೂ ಹೋಗಿದ್ದೇನೆ. ಆದರೆ ಡಿ.ಕೆ.ಶಿವಕುಮಾರ್ ಅವರು ಆಸ್ಕರ್ ಫೆರ್ನಾಂಡಿಸ್ ಅವರ ಮರಣದ ದಿನ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇನ್ನೊಬ್ಬ ವ್ಯಕ್ತಿಯನ್ನು ನೇಮಕ ಮಾಡಿ ಸಹಿ ಹಾಕಿದ್ದಾರೆ.
ಇದಕ್ಕೆಲ್ಲಾ ಕಾರಣ ಪ್ರಮೋದ್ ಮಧ್ವರಾಜ್ ಎಂಬ ಸ್ವಾರ್ಥಿ ಎಂದು ಆರೋಪಿಸಿದರು.
ಇಟ್ಟ ಹೆಜ್ಜೆಯನ್ನು ಹಿಂದೆ ಇಡುವ ಮಾತಿಲ್ಲ. ಹೋರಾಟದ ಮೂಲಕವೇ ಜೀವನದಲ್ಲಿ ಯಶಸ್ಸನ್ನು ಸಾಧಿಸಿದ್ದೇನೆ. ಈ ಬಾರಿ ಉಡುಪಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರನಾಗಿ ಸ್ಪರ್ಧಿಸಿ ಗೆದ್ದೇ ಸಿದ್ದ ಎಂದು ಶಪಥ ಮಾಡಿದರು.
ಕಾಂಗ್ರೆಸ್ ನ ಹಿರಿಯ ಮುಖಂಡ ಸದಾನಂದ ಕಾಂಚನ್ ಮಾತನಾಡಿ, ಕಾಂಗ್ರೆಸ್ ಪಕ್ಷದ ವಿರುದ್ದ ಈ ಸಭೆಯನ್ನು ಕರೆದಿಲ್ಲ. ಕೃಷ್ಣಮೂರ್ತಿಯವರ ಮೇಲಿನ ಅನುಕಂಪದಿಂದ ಸಭೆ ಸೇರಿದ್ದೇವೆ.
ಕೃಷ್ಣಮೂರ್ತಿಯವರಿಗೆ ರಾಜ್ಯ ಕೆಪಿಸಿಸಿಯ ಕಾರ್ಯದರ್ಶಿ, ಅಥವಾ ವಿಧಾನ ಪರಿಷತ್ ಸದಸ್ಯನಾಗಿ ಮಾಡುತ್ತೇನೆ ಎಂದು ಡಿ.ಕೆ.ಶಿವಕುಮಾರ್ ತಕ್ಷಣ ಘೋಷಣೆ ಮಾಡಬೇಕು ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಕೃಷ್ಣಮೂರ್ತಿ ಅವರಿಗೆ ಅವಕಾಶವಿದ್ದು, ಪಕ್ಷೇತರವಾಗಿ ಸ್ಪರ್ಧಿಸುವುದು ಬೇಡ ಎಂದು ಸಲಹೆ ನೀಡಿದರು.
ಸಭೆಯಲ್ಲಿ ಕಾಂಗ್ರೆಸ್ ಮುಖಂಡರಾದ ಜಯ ಶೆಟ್ಟಿ ಬನ್ನಂಜೆ, ಗಣೇಶ್ ಕೋಟ್ಯಾನ್, ಗಾಯತ್ರಿ, ಶಿವರಾಜ್ ಮಲ್ಲಾರ್, ವಿಜಯ ಪೂಜಾರಿ, ಯಶೋಧರ ಮಲ್ಪೆ, ಅಮೃತಾ ಕೃಷ್ಣಮೂರ್ತಿ ಸೇರಿದಂತೆ ನೂರಾರು ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಆಚಾರ್ಯ, ಮಾಜಿ ಜಿ.ಪಂ ಸದಸ್ಯ ದಿವಾಕರ ಕುಂದರ್, ಉದ್ಯಮಿಗಳಾದ ಪ್ರಸಾದ್ ರಾಜ್ ಕಾಂಚನ್ ಮತ್ತು ಅಮೃತ್ ಶೆಣೈ ಅವರು ಟಿಕೆಟ್ ಆಕಾಂಕ್ಷಿಗಳಾಗಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದು, ಕೊನೆಯ ಹಂತದಲ್ಲಿ ಉದ್ಯಮಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕಿ ಸರಳಾ ಕಾಂಚನ್ ಅವರ ಪುತ್ರ ಪ್ರಸಾದ್ ರಾಜ್ ಕಾಂಚನ್ ಅವರನ್ನು ಪಕ್ಷ ಅಧಿಕೃತ ಅಭ್ಯರ್ಥಿ ಎಂದು ಘೋಷಿಸಿತ್ತು.
LATEST NEWS
ಕಂಬಳ ಕ್ಷೇತ್ರಕ್ಕೆ ಮತ್ತೊಂದು ಅಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ
ಮಣಿಪಾಲ: ಕೆಲವು ದಿನಗಳ ಹಿಂದಷ್ಟೇ ಕಂಬಳ ಕ್ಷೇತ್ರದ ಉದಯೋನ್ಮುಖ ತಾರೆ ‘ಲಕ್ಕಿ’ಯ ಅಗಲುವಿಕೆಯಿಂದ ಬೇಸರಗೊಂಡಿದ್ದ ಕಂಬಳಾಭಿಮಾನಿಗಳಿಗೆ ಮತ್ತೊಂದು ಅಘಾ*ತ ಎದುರಾಗಿದೆ. ಉಭಯ ಜಿಲ್ಲೆಯ ಕೂಟಗಳಲ್ಲಿ ಹೆಸರು ಮಾಡಿದ್ದ ‘ನಾಗು’ ಎಂಬ ಕೋಣ ಹೃದಯಾಘಾ*ತದಿಂದ ಕೊನೆ*ಯುಸಿರೆಳೆದಿದೆ.
‘ನಾಗು’ ಕೋಣವು ಜಪ್ಪು ಮಂಕು ತೋಟ ಅನಿಲ್ ಶೆಟ್ಟಿಯವರ ಯಜಮಾನಿಕೆಯಲ್ಲಿ ಹಲವು ಕಂಬಳಗಳಲ್ಲಿ ಭಾಗವಹಿಸಿ ಪ್ರಶಸ್ತಿ ಗೆದ್ದುಕೊಂಡಿತ್ತು.
ಬೈಂದೂರಿನಿಂದ ಬಂಢಾರಮನೆ ಸೇರಿದ್ದ ನಾಗು, ಬಳಿಕ ಚಿತ್ಪಾಡಿ ಅಪ್ಪು ಶೆಟ್ಟಿ ಅವರ ಹಟ್ಟಿ ಸೇರಿದ್ದ. ಎರಡು ವರ್ಷಗಳ ಹಿಂದೆ ನಾಗು ಕೋಣವನ್ನು ಜಪ್ಪು ಮಂಕುತೋಟ ಅನಿಲ್ ಶೆಟ್ಟಿ ಅವರು ಖರೀದಿ ಮಾಡಿದ್ದರು.
ಕೂಟಗಳಲ್ಲಿ ಸಕ್ರಿಯವಾಗಿದ್ದ ಎರಡು ಕೋಣಗಳನ್ನು ಎರಡು ವಾರಗಳ ಅಂತರದಲ್ಲಿ ಕಂಬಳ ಕ್ಷೇತ್ರ ಕಳೆದುಕೊಂಡಿದೆ.
LATEST NEWS
WATCH : UDUPI : ಮನೆಯಂಗಳದಲ್ಲಿ ಚಿರತೆ ಪ್ರತ್ಯಕ್ಷ; ರಾತ್ರಿ ಇಡೀ ಕಣ್ಮರೆಯಾಗಿದ್ದ ಸಾಕು ನಾಯಿ ಬದುಕುಳಿದಿದ್ದು ಹೇಗೆ?
ಉಡುಪಿ : ಮನೆಯೊಂದರ ಅಂಗಳದಲ್ಲಿ ಚಿರತೆಯೊಂದು ಕಾಣಿಸಿಕೊಂಡ ಘಟನೆ ಉಡುಪಿ ಪೆರಂಪಳ್ಳಿಯಲ್ಲಿ ಶುಕ್ರವಾರ(ಜು.27) ತಡರಾತ್ರಿ ನಡೆದಿದೆ. ಚಿರತೆ ಓಡಾಟದ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮನೆಯಂಗಳದಲ್ಲಿ ಮಲಗಿದ್ದ ನಾಯಿಯ ಬೇಟೆಗಾಗಿ ಚಿರತೆ ಬಂದಿದ್ದು, ನಾಯಿಯನ್ನು ಅಟ್ಟಿಸಿಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.
ನಾಯಿ ಬೊಗಳಿದರೂ ಮನೆಯವರು ಹೊರಬಂದಿಲ್ಲ. ಕೆಲವು ದಿನಗಳಿಂದ ಮಣಿಪಾಲ ಆಸುಪಾಸಿನಲ್ಲಿ ಚಿರತೆ ಓಡಾಟದ ಮಾಹಿತಿ ತಿಳಿದಿದ್ದ ಮನೆಯವರು ಸುಮ್ಮನಿದ್ದರು ಎನ್ನಲಾಗಿದೆ. ಸ್ವಲ್ಪ ಹೊತ್ತಿನಲ್ಲಿ ನಾಯಿಯ ಶಬ್ದ ಕೂಡ ಕೇಳಿರಲಿಲ್ಲ. ಬೆಳಿಗ್ಗೆ ಮನೆಯ ಸಿಸಿಟಿವಿ ದ್ರಶ್ಯಾವಳಿ ಗಮನಿಸಿದಾಗ ಚಿರತೆ ನಾಯಿಯ ಹಿಂದೆ ಹೋಗುತ್ತಿರುವ ದೃಶ್ಯ ಕಂಡು ಭಯಭೀತರಾಗಿದ್ದಾರೆ.
ಇದನ್ನೂ ಓದಿ : ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವು
ಆದರೆ ಅಚ್ಚರಿ ಎಂಬಂತೆ ರಾತ್ರಿ ಇಡೀ ಕಣ್ಮರೆಯಾಗಿದ್ದ ಸಾಕು ನಾಯಿ ಬೆಳಿಗ್ಗೆ ಪ್ರತ್ಯಕ್ಷವಾಗಿದೆ. ಚಿರತೆಯ ಬಾಯಿಯಿಂದ ತಪ್ಪಿಸಿಕೊಂಡು ಪ್ರಾ*ಣ ಉಳಿಸಿಕೊಂಡಿದೆ. ಈ ಘಟನೆ ಮಣಿಪಾಲ, ಪೆರಂಪಳ್ಳಿ ಭಾಗದಲ್ಲಿ ಆತಂಕ ಸೃಷ್ಟಿಸಿದೆ. ಕೂಡಲೇ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು, ಚಿರತೆಯನ್ನು ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ.
DAKSHINA KANNADA
ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವು
ತೆಲಂಗಾಣ: ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವನ್ನಪ್ಪಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ಚಿಂತಕಣಿಲ್ಲಿ ಶುಕ್ರವಾರ ನಡೆದಿದೆ.
ಅಂಜಲಿ ಕಾರ್ತಿಕಾ (9) ಮೃ*ತ ಬಾಲಕಿ. ಮೊಬೈಲ್ನಲ್ಲಿ ಆಟವಾಡುತ್ತಿರುವ ವೇಳೆ ಚಾರ್ಜ್ ಖಾಲಿಯಾಗಿದ್ದು, ಅಂಜಲಿ ಮೊಬೈಲ್ ಚಾರ್ಜ್ ಮಾಡಲು ಹೋಗಿದ್ದಾಳೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿದ್ದು, ಬಾಲಕಿ ಕುಸಿದು ಬಿದ್ದಿದ್ದಾಳೆ.
ಕುಸಿದು ಬಿದ್ದು ಒದ್ದಾಡುತ್ತಿರುವ ಬಾಲಕಿಯನ್ನು ಗಮನಿಸಿದ ಆಕೆಯ ಪೋಷಕರು ತಕ್ಷಣ ಗ್ರಾಮದ ಖಾಸಗಿ ವೈದ್ಯರ ಬಳಿ ಕರೆದೊಯ್ದಿದ್ದಾರೆ. ಆದರೆ ಬಾಲಕಿ ಅದಾಗಲೇ ಮೃ*ತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಬಾಲಕಿ ಆಟವಾಡುತ್ತಿದ್ದಂತೆ ಒದ್ದೆ ಕೈಯಲ್ಲಿ ಹೋಗಿ ವಿದ್ಯುತ್ ಸ್ಪರ್ಶಿಸಿರುವುದೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ. ಕೆಲ ಹೊತ್ತಿನ ಹಿಂದೆ ಮನೆಯಲ್ಲಿ ಕುಣಿದು ಕುಪ್ಪಳಿಸುತ್ತಾ ಆಟವಾಡುತ್ತಿದ್ದ ಬಾಲಕಿ ಏಕಾಏಕಿ ಪ್ರಾ*ಣ ಕಳೆದುಕೊಂಡಿರುವುದನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಮೃ*ತ ಬಾಲಕಿ ಅಂಜಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿ. ತಂದೆ ರಾಮಕೃಷ್ಣ ದೂರಿನ ಮೇರೆಗೆ ಎಸ್ಎಸ್ಐ ನಾಗುಲ್ಮೀರ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ