LATEST NEWS
Udupi: ಅನ್ನಭಾಗ್ಯ ವಿಚಾರದಲ್ಲಿ ಕೇಂದ್ರದಿಂದ ನಕಾರ ಆರೋಪ- ಕಾಂಗ್ರೆಸ್ ನಿಂದ ಪ್ರತಿಭಟನೆ
ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ನಕಾರ ಮಾಡಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸಿತು.
ಉಡುಪಿ: ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ನಕಾರ ಮಾಡಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸಿತು.
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರ ನೇತೃತ್ವದಲ್ಲಿ ಉಡುಪಿಯ ಬ್ರಹ್ಮಗಿರಿ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಬಿಜೆಪಿ ದ್ವೇಷದ ರಾಜಕಾರಣ ಮತ್ತು ಬಡವರ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
FILM
ದರ್ಶನ್ ‘ಡೆವಿಲ್’ಗೆ ಹೀರೋಯಿನ್ ಫಿಕ್ಸ್; ಡಿಬಾಸ್ ಗೆ ಜೊತೆಯಾದ್ರು ಕರಾವಳಿ ಬೆಡಗಿ!
ಬೆಂಗಳೂರು : ಚಾಲೆಂಜಿಂಗ್ ದರ್ಶನ್ ಸಿನಿಮಾಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಾರೆ. ಚಿತ್ರ ಬಿಡುಗಡೆಗೂ ಮುನ್ನ ಚಿತ್ರದ ಪ್ರತೀ ಅಪ್ಡೇಟ್ ಗಾಗಿ ತುದಿಗಾಲಲ್ಲಿ ನಿಂತಿರುತ್ತಾರೆ. ಹೊಸ ಚಿತ್ರ ಅನೌನ್ಸ್ ಆದಾಗಿನಿಂದ ಪ್ರತಿ ಸುದ್ದಿಗಾಗಿಯೂ ಅಭಿಮಾನಿಗಳು ಕುತೂಹಲದಿಂದ ನಿರೀಕ್ಷೆಯಲ್ಲಿರುತ್ತಾರೆ.
‘ಕಾಟೇರ’ ಚಿತ್ರದ ಯಶಸ್ಸಿನ ನಂತರ ದರ್ಶನ್ ‘ಡೆವಿಲ್’ ಚಿತ್ರವನ್ನು ಅನೌನ್ಸ್ ಮಾಡಿದ್ದರು. ಈಗಾಗಲೇ ಪೋಸ್ಟರ್, ಮೇಕಿಂಗ್ ವೀಡಿಯೋಗಳು ಸದ್ದು ಮಾಡುತ್ತಿವೆ. ಡಿ ಬಾಸ್ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ಕರಾವಳಿ ಬೆಡಗಿ ನಾಯಕಿ :
ದರ್ಶನ್ ಜೊತೆ ನಾಯಕಿಯಾಗಿ ಯಾರು ನಟಿಸಲಿದ್ದಾರೆ ಎಂಬ ಕುತೂಹಲಕ್ಕೂ ಈಗ ತೆರೆ ಬಿದ್ದಿದೆ, ಕರಾವಳಿಯ ಬೆಡಗಿ ದರ್ಶನ್ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಹೌದು, ಕರಾವಳಿ ಮೂಲದ ರಜನಾ ರೈ ‘ಡೆವಿಲ್’ ಚಿತ್ರದ ನಾಯಕಿ. ಈ ಹಿಂದೆಯೂ ರಚನಾ ಡೆವಿಲ್ ಗೆ ನಾಯಕಿ ಆಗಲಿದ್ದಾರೆ ಎಂಬ ಗಾಳಿ ಸುದ್ದಿಯೊಂದು ಹರಿದಾಡುತ್ತಿತ್ತು. ಇದೀಗ ಅದು ದೃಢವಾಗಿದೆ. ಪೋಸ್ಟರ್ ಕೂಡ ಬಿಡುಗಡೆಯಾಗಿದೆ.
ಸಿನಿಮಾದ ನಿರ್ಮಾಣ ಸಂಸ್ಥೆಯಾದ ಜೈ ಮಾತಾ ಕಂಬೈನ್ಸ್ ತನ್ನ ಸೋಶಿಯಲ್ ಮೀಡಿಯಾ ಪುಟದಲ್ಲಿ ಪೋಸ್ಟರ್ ಹಂಚಿಕೊಂಡಿದ್ದು, ‘ವೆಲ್ಕಮ್ ಆನ್ ಬೋರ್ಡ್, ಶುದ್ಧ ಕೌಶಲ್ಯಕ್ಕಾಗಿ ಗುರುತಿಸಲಾಗಿದೆ. ರಚನಾ ರೈ ಸ್ವಾಗತ’ ಎಂದುಬರೆದುಕೊಂಡಿದೆ. ಪೋಸ್ಟರ್ ನಲ್ಲಿ ನೆಲದ ಪ್ರತಿಭೆಗೆ ಮನ್ನಣೆ ಎಂದು ಬರೆಯಲಾಗಿದೆ.
ಪುತ್ತೂರು ಮೂಲದ ರಚನಾ ಈಗಾಗಲೇ ತುಳು, ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ರೂಪೇಶ್ ಶೆಟ್ಟಿ ಜೊತೆ ತುಳು ಚಿತ್ರ ‘ಸರ್ಕಸ್’ನಲ್ಲಿ ನಾಯಕಿಯಾಗಿ ಮಿಂಚಿದ್ದಾರೆ. ಕನ್ನಡದಲ್ಲಿ ಧನ್ವೀರ್ ಗೌಡ ಜೊತೆ ‘ವಾಮನ’ದಲ್ಲೂ ನಟಿಸಿದ್ದಾರೆ. ಬ್ಯಾಡ್ಮಿಂಟನ್ ಪ್ಲೇಯರ್ ಆಗಿರುವ ರಚನಾ ಮಾಡೆಲ್ ಕ್ಷೇತ್ರದಲ್ಲೂ ಮಿಂಚಿದ್ದಾರೆ. ಡ್ಯಾನ್ಸರ್ ಕೂಡಾ ಹೌದು. ‘ಓ ಮೈ ಡಾಗ್’ ಎಂಬ ಪುಸ್ತಕವನ್ನೂ ಅವರು ಬರೆದಿದ್ದಾರೆ.
ಇದನ್ನೂ ಓದಿ : ನಟಿ ಪವಿತ್ರಾ ಜಯರಾಂ ಸಾ*ವಿನ ಬೆನ್ನಲ್ಲೇ ಆತ್ಮಹ*ತ್ಯೆಗೆ ಶರಣಾದ ಸಹನಟ ಚಂದು!
‘ತಾರಕ್’ ಬಳಿಕ ‘ಡೆವಿಲ್’ ಚಿತ್ರದ ಮೂಲಕ ಮತ್ತೆ ಪ್ರಕಾಶ್ ವೀರ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಆರಂಭವಾಗಿದ್ದು, ದರ್ಶನ್ ಕೈಗೆ ಪೆಟ್ಟಾದ ಹಿನ್ನೆಲೆಯಲ್ಲಿ ಚಿತ್ರೀಕರಣ ಸ್ಥಗಿತವಾಗಿತ್ತು. ಸದ್ಯ ದರ್ಶನ್ ಗುಣಮುಖರಾಗಿದ್ದು, ಸದ್ಯದಲ್ಲೇ ಡೆವಿಲ್ ಶೂಟಿಂಗ್ನಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.
DAKSHINA KANNADA
ಅಡುಗೆ ಮನೆಯಲ್ಲಿರುವ ಈ ಒಂದು ವಸ್ತುವನ್ನು ಪ್ರತಿದಿನ ಲಕ್ಷ್ಮೀಗೆ ಅರ್ಪಿಸಿ
ಮಂಗಳೂರು: ಲಕ್ಷ್ಮೀ ನಿಮಗೆ ಒಲಿದರೆ ಆ ವ್ಯಕ್ತಿಗಳು ಐಶ್ವರ್ಯ ದೊರೆತು ಲಕ್ಷ್ಮೀ ಪುತ್ರ ಎನಿಸಿಕೊಳ್ಳುತ್ತಾರೆ. ಲಕ್ಷ್ಮೀಯನ್ನು ಮೆಚ್ಚಿಸಲು ನಿಮ್ಮ ಅಡುಗೆ ಮನೆಯಲ್ಲಿರುವ ಒಂದು ವಸ್ತುವನ್ನು ಆಕೆಗೆ ಅರ್ಪಿಸಿದರೆ ಸಾಕು.
ಮನೆಯ ವಾಸ್ತುವಿಗೂ ಮನೆಯಲ್ಲಿರುವ ವಸ್ತುಗಳಿಗೂ ಸಂಬಂಧ ಇದೆ. ವಿಶೇಷವಾಗಿ ಅಡುಗೆ ಮನೆಯಲ್ಲಿರುವ ವಸ್ತುಗಳಿಗೂ ವಾಸ್ತುವಿಗೂ ಸಂಬಂಧ ಇದೆ. ಅಡುಗೆ ಮನೆಯಲ್ಲಿರುವ ಕೆಲವು ವಸ್ತುಗಳನ್ನು ಜ್ಯೋತಿಷ್ಯದಲ್ಲಿ ಪರಿಹಾರವಾಗಿ ಬಳಸಲಾಗುತ್ತದೆ. ಅಂತಹ ಒಂದು ವಸ್ತು ಯಾವುದೆಂದರೆ ಅದು ಕೊತ್ತಂಬರಿ.
ಪ್ರಮುಖ ಸಂಬಾರ ಪದಾರ್ಥವಾದ ಕೊತ್ತಂಬರಿಯನ್ನು ವಾಸ್ತು ಪರಿಹಾರವಾಗಿಯೂ ಬಳಸುತ್ತಾರೆ. ಜೊತೆಗೆ ಕೊತ್ತಂಬರಿ ಸೊಪ್ಪನ್ನು ವಾಸ್ತು ಪರಿಹಾರದಲ್ಲಿ ಬಳಸಲಾಗುತ್ತದೆ. ಈ ವಸ್ತುಗಳನ್ನು ಸರಿಯಾಗಿ ಬಳಸಿದರೆ ನಿಮ್ಮ ಜೀವನ ಬದಲಾಗಬಹುದು
ಬಹಳಷ್ಟು ಕಡೆ ಲಕ್ಷ್ಮೀಗೆ ಧನಿಯಾ ಕಾಳನ್ನು ಅರ್ಪಿಸಲಾಗುತ್ತದೆ. ಲಕ್ಷ್ಮೀಗೆ ಧನಿಯಾ ಬಹಳ ಇಷ್ಟ ಎಂಬ ನಂಬಿಕೆ ಇದೆ. ದೀಪಾವಳಿ ಹಬ್ಬದಂದು ಲಕ್ಷ್ಮೀಗೆ ಈ ಧನಿಯಾವನ್ನು ಅರ್ಪಿಸಲಾಗುತ್ತದೆ. ಪೂಜೆಯ ನಂತರ ಲಕ್ಷ್ಮೀಗೆ ಅರ್ಪಿಸಿದ ಈ ಧನಿಯಾವನ್ನು ಸುರಕ್ಷಿತವಾಗಿ ಇಡಬೇಕು. ಹೀಗೆ ಪ್ರತಿದಿನ ಲಕ್ಷ್ಮೀ ದೇವಿಗೆ ಧನಿಯಾವನ್ನು ಇಟ್ಟರೆ ಮನೆಯಲ್ಲಿ ಸುಖ-ಶಾಂತಿ-ಸಮೃದ್ಧಿ ಆಗುತ್ತದೆ ಎನ್ನುವ ನಂಬಿಕೆ ಇದೆ.
LATEST NEWS
‘ಡುಮ್ಮಿ’ ಎಂದು ಹೀಯಾಳಿಸಿದಕ್ಕೆ ಪತ್ನಿ ಆತ್ಮಹ*ತ್ಯೆ..!
ಬೆಂಗಳೂರು: ಡುಮ್ಮಿ ಎಂದು ಹೀಯಾಳಿಸಿದಕ್ಕೆ ಪತ್ನಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬಸವೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಜುನಾಥ ನಗರ ನಿವಾಸಿ ಸಂಧ್ಯಾ(31 ವ) ಆತ್ಮಹ*ತ್ಯೆಗೆ ಶರಣಾದವರು. ಈಕೆ ಖಾಸಗಿ ಪ್ರೌಢ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಪತಿ ಡುಮ್ಮಿ ಎಂದು ಹೀಯಾಳಿಸಿ ಜಗಳ ಮಾಡುತ್ತಿದ್ದರು. ಇದರಿಂದ ನೊಂದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಬಾಲಕನ ಹ*ತ್ಯೆ ಪ್ರಕರಣಕ್ಕೆ ಟ್ವಿಸ್ಟ್: ತಮ್ಮನನ್ನೇ ಕೊಂದ ಅಣ್ಣ; ಮೊಬೈಲ್ ನಿಂದ ಹೋಯ್ತು ಪ್ರಾಣ!
ಸಂಧ್ಯಾ, ಜಯಪ್ರಕಾಶ್ ದಂಪತಿಗೆ ನಾಲ್ಕು ವರ್ಷದ ಪುತ್ರನಿದ್ದಾನೆ. ಮಗನ ಅನಾರೋಗ್ಯ ಸಮಸ್ಯೆಯಿಂದಾಗಿ ವೈದ್ಯಕೀಯ ಚಿಕಿತ್ಸೆಗೆ ಸಾಕಷ್ಟು ಹಣ ವ್ಯಯಿಸಿದ್ದರು. ಇದರಿಂದಾಗಿ ದಂಪತಿ ಮಧ್ಯೆ ಮನಸ್ತಾಪಗಳು ಉಂಟಾಗಿತ್ತು. ಈ ಮಧ್ಯೆ ಜಯಪ್ರಕಾಶ್ ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿದ್ದರು. ಈ ಸಮಯದಲ್ಲಿ ಸಂಧ್ಯಾರವರಿಗೆ ಗರ್ಭಪಾತವಾಗಿದೆ. ಇದಾದ ಬಳಿಕ ಸಂಧ್ಯಾರವರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿ ದೇಹದ ತೂಕವು ಹೆಚ್ಚಾಗಿತ್ತು. ಗಂಡ ಹೆಂಡತಿಯ ನಡುವೆ ಜಗಳ ನಡೆಯುತ್ತಿತ್ತು. ಇನ್ನು ಸಂಧ್ಯಾಳನ್ನು ಪತಿ ಜಯಪ್ರಕಾಶ್ ಡುಮ್ಮಿ ಎಂದು ಹೀಯಾಳಿಸುತ್ತಿದ್ದರು. ಇದರಿಂದ ನೊಂದ ಮಹಿಳೆ ಗುರುವಾರ ಸಂಜೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಡಲೇ ಆಕೆಯನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಆ ವೇಳೆಗೆ ಸಂಧ್ಯಾ ಕೊನೆಯುಸಿರು ಚೆಲ್ಲಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
- LATEST NEWS6 days ago
ಖಾಲಿ ಬಿಯರ್ ಬಾಟಲಿಗಳಿಂದ ಲಕ್ಷಾಧಿಪತಿಯಾದ ವ್ಯಕ್ತಿ..!
- LATEST NEWS6 days ago
ಪ್ರೇಯಸಿಯ ಜೊತೆ ಗೋವಾ ಟೂರ್..! ಕ್ಷೌರಿಕನಿಗೆ ದುಬಾರಿಯಾದ ಟೂರ್..!
- LATEST NEWS7 days ago
Watch : ಇಬ್ಬರು ಪುರುಷರೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಪತ್ನಿ; ಹಿಗ್ಗಾಮುಗ್ಗ ಥಳಿಸಿದ ಪತಿ
- DAKSHINA KANNADA6 days ago
ದೇವರಿಗೆ ಇಟ್ಟ ಹೂವುಗಳನ್ನು ಒಣಗಿದ ನಂತರ ಹೀಗೆ ಮಾಡಿ..!