Connect with us

    DAKSHINA KANNADA

    ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ 16.85 ಕೋ.ರೂ ಲಾಭ

    Published

    on

    ಉಡುಪಿ : ರಾಜ್ಯದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾದ ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು 2023- 24 ನೇ ಸಾಲಿನಲ್ಲಿ 2,378.78 ಕೋಟಿ ರೂಪಾಯಿ ವಾರ್ಷಿಕ ವಹಿವಾಟು ನಡೆಸಿ 16.85 ಕೋಟಿ ರೂಪಾಯಿ ಲಾಭ ಗಳಿಸಿದೆ.

    ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ ಸಹಕಾರ ಕ್ಷೇತ್ರದಲ್ಲಿ 106 ವರ್ಷಗಳ ಸಾರ್ಥಕ ಸೇವೆಯನ್ನು ಸಲ್ಲಿಸಿರುವ ಸಂಘವು 2023- 24 ನೇ ಆರ್ಥಿಕ ವರ್ಷಾಂತ್ಯಕ್ಕೆ 18,307 ಸದಸ್ಯರಿದ್ದು, 4.77 ಕೋ.ರೂ. ಪಾಲು ಬಂಡವಾಳ ಹೊಂದಿದೆ ಎಂದರು.

    506.64 ಕೋ.ರೂ ಠೇವಣಿ, 400.68 ಕೋ.ರೂ ಸಾಲ

    ವರದಿ ವರ್ಷಾಂತ್ಯಕ್ಕೆ ಸಂಘವು ಒಟ್ಟು 506.64 ಕೋಟಿ ರೂ. ಠೇವಣಿ ಸಂಗ್ರಹಿಸಿದ್ದು, ಕಳೆದ ಸಾಲಿಗಿಂತ ಶೇ.12.23 ಏರಿಕೆ ಕಂಡಿದೆ. ಸದಸ್ಯರಿಗೆ ಗೃಹ ನಿರ್ಮಾಣ, ವಾಹನ ಖರೀದಿ, ಜಮೀನು ಖರೀದಿ ಮತ್ತು ಅಭಿವೃದ್ಧಿಯ, ವಾಣಿಜ್ಯ ಸಂಕೀರ್ಣ ಹಾಗೂ ವಸತಿ ಸಮುಚ್ಚಯ ನಿರ್ಮಾಣ, ಸ್ವಉದ್ಯೋಗ, ವಿದ್ಯಾಭ್ಯಾಸ, ಮದುವೆ, ಚಿನ್ನಾಭರಣಗಳ ಈಡಿನ ಮೇಲೆ ಹಾಗೂ ಇತರ ಗೃಹ ಕೃತ್ಯಗಳಿಗೆ ಸಂಬಂಧಿಸಿ ಸೂಕ್ತ ದಾಖಲೆಗಳನ್ನು ಪಡೆದುಕೊಂಡು ಸಾಲವನ್ನು ನೀಡುತ್ತಿದೆ. ವರದಿ ವರ್ಷಾಂತ್ಯಕ್ಕೆ 400.68 ಕೋ.ರೂ ಸದಸ್ಯರ ಹೊರ ಬಾಕಿ ಸಾಲ ಇದೆ. 84.40 ಕೋ.ರೂ ನಿಧಿಗಳು ಇದ್ದು, 591.05 ಕೋಟಿ ರೂ. ದುಡಿಮೆ ಬಂಡವಾಳ ಇರುತ್ತದೆ. ಉಡುಪಿ ಜಿಲ್ಲೆಯಾದ್ಯಂತ 11 ಶಾಖೆಗಳಿದ್ದು ಈ ಪೈಕಿ 8 ಶಾಖೆಗಳು ಸ್ವಂತ ನಿವೇಶನ ಹೊಂದಿವೆ ಎಂದು ವಿವರಿಸಿದರು.

    ಸತತವಾಗಿ 2 ಬಾರಿ ರಾಷ್ಟ್ರ ಪ್ರಶಸ್ತಿ, 8 ಬಾರಿ ರಾಜ್ಯ ಮಟ್ಟದ ಪ್ರಶಸ್ತಿ, 17 ಬಾರಿ ಅವಿಭಜಿತ ದ.ಕ ಜಿಲ್ಲಾ ಪ್ರಶಸ್ತಿಗಳನ್ನು ಪಡೆದು ಯಶಸ್ವೀ ಕ್ರೆಡಿಟ್ ಸೊಸೈಟಿಯಾಗಿ ಸಂಘವು ಗುರುತಿಸಿಕೊಂಡಿದೆ. ಕೇವಲ ವ್ಯವಹಾರ ಮಾಡಿ ಲಾಭ ಗಳಿಸುವ ದೃಷ್ಟಿಯನ್ನು ಮಾತ್ರ ಹೊಂದಿರದೆ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಂಡು ಬರುತ್ತಿದೆ. ವಾರ್ಷಿಕ ಸುಮಾರು  20 ಲಕ್ಷ ರೂ. ಗಳನ್ನು ಶಿಕ್ಷಣ, ಆರೋಗ್ಯ ಮತ್ತು ಇತರ ಸಾಮಾಜಿಕ ಕಾರ್ಯಕ್ರಮಗಳಿಗೆ ತೊಡಗಿಸುತ್ತಾ ಬಂದಿದೆ. ಪ್ರಸ್ತುತ ಉಡುಪಿ ಜಿಲ್ಲೆಯಾದ್ಯಂತ 11 ಶಾಖೆಗಳನ್ನು ಹೊಂದಿ ವ್ಯವಹರಿಸುತ್ತಿದೆ ಎಂದರು.

    ಚೇತನಾ ಮೊಬೈಲ್ ಆಪ್

    ಡಿಜಿಟಲೀಕರಣದ ಹೆಜ್ಜೆಯಾಗಿ ಅಭಿವೃದ್ಧಿಪಡಿಸಿದ “ಚೇತನಾ ಮೊಬೈಲ್ ಆಪ್” ಮೂಲಕ ಗ್ರಾಹಕರು ತಾವಿರುವಲ್ಲಿಯೇ ತಮ್ಮ ಖಾತೆಯಿಂದ ಐಎಂಪಿಎಸ್‌/ ನೆಫ್ಟ್‌/ಆರ್.ಟಿ.ಜಿ.ಎಸ್‌ ಮೂಲಕ ಮೊಬಲಗು ವರ್ಗಾವಣೆ, ಆರ್‌.ಡಿ. ಹಾಗೂ ಸಾಲ ಖಾತೆಗಳಿಗೆ ಮೊಬಲಗು ವರ್ಗಾವಣೆ, ಸಂಘದ ನೂತನ ಯೋಜನೆಯ ಕುರಿತಾದ ಮಾಹಿತಿಗಳನ್ನೂ ಪಡೆಯ ಬಹುದಾಗಿದೆ. ಈ ಆಪ್ ಬಗ್ಗೆ ಬಳಕೆದಾರರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಗೂಗಲ್ ಪ್ಲೇ-ಸ್ಟೋರ್‌ನಲ್ಲಿ ಲಭ್ಯವಿರುವ ಈ ಆಪ್‌ನ ಪ್ರಯೋಜನ ಪಡೆಯುವ ಬಗ್ಗೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ಶಾಖೆಗೆ ತೆರಳಿ ಮಾಹಿತಿ ಪಡೆಯ ಬಹುದೆಂದು ತಿಳಿಸಿದರು.

    ಸಂಘದ ಎಲ್ಲಾ ಶಾಖೆಗಳಲ್ಲಿ  ಗ್ರಾಹಕರಿಗೆ ವಿವಿಧ ರೀತಿಯ ಸೇವೆ ನೀಡುವ ಸಲುವಾಗಿ ಈಗಾಗಲೇ ಸೇಫ್ ಲಾಕರ್ ಸೌಲಭ್ಯ, ಇ-ಸ್ಟಾಂಪಿಂಗ್, ಪಾನ್ ಕಾರ್ಡ್, ನೆಫ್ಟ್‌/ಆರ್‌.ಟಿ.ಜಿ.ಎಸ್‌ ಸೇವಾ ಸೌಲಭ್ಯ, ಮನಿ ಟ್ರಾನ್ಸ್‌ಫರ್ ಸೌಲಭ್ಯ, ಲಂಬಾರ್ಡ್ ಆರೋಗ್ಯ ಕಾರ್ಡ್, ಮಣಿಪಾಲ ಆರೋಗ್ಯ ಕಾರ್ಡ್, ಆರೋಗ್ಯ ವಿಮೆ, ಸಾಮಾನ್ಯ ವಿಮೆ, “೦” ಬ್ಯಾಲೆನ್ಸ್ ವಿದ್ಯಾನಿಧಿ ಖಾತೆ, ಮಿಸ್ಡ್‌ಕಾಲ್ ಸರ್ವಿಸ್, ಉಚಿತ ಎಸ್.ಎಂ.ಎಸ್ ಸೌಲಭ್ಯ ನೀಡುತ್ತಿದ್ದು ಸದಸ್ಯ ಗ್ರಾಹಕರು ಈ ಎಲ್ಲಾ ಸೌಲಭ್ಯಗಳ ಪ್ರಯೋಜನ ಪಡೆಯುವಂತೆ ತಿಳಿಸಿದ್ದಾರೆ.

     

    ಮುಂದಿನ ಯೋಜನೆಗಳು

    ಮುಂದಿನ ವರ್ಷದಲ್ಲಿ 600  ಕೋಟಿ ರೂ. ಠೇವಣಿ, 500 ಕೋಟಿ ರೂ. ಹೊರಬಾಕಿ ಸಾಲ ನೀಡುವ ಯೋಜನೆ ಇದ್ದು, ಉಡುಪಿಯ ಹೃದಯ ಭಾಗದಲ್ಲಿ ಖರೀದಿಸಿರುವ 1 ಎಕರೆ ಆಸ್ತಿಯಲ್ಲಿ ಅಂದಾಜು 10 ಕೋಟಿ ರೂ. ವೆಚ್ಚದಲ್ಲಿ “ಸಹಕಾರ ಸೌಧ” ನಿರ್ಮಾಣದ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಸಂಘದ ಸದಸ್ಯ ಗ್ರಾಹಕರಿಗೆ ಉಪಯುಕ್ತವಾಗುವ ಹೊಸ ಹೊಸ ಯೋಜನೆಗಳನ್ನು ಮುಂದಿನ ದಿನಗಳಲ್ಲಿ ಅನುಷ್ಠಾನ ಮಾಡುವ ಚಿಂತನೆಯನ್ನು ಹೊಂದಲಾಗಿದೆ. ಸಂಘವು ರಾಜ್ಯದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿ ಮುಂದುವರಿಸಲು ಸರ್ವರ ಸಹಕಾರವನ್ನು ಯಾಚಿಸಿದರು.

    ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಜಾರ್ಜ್ ಸಾಮ್ಯುಯೆಲ್, ಆಡಳಿತ ಮಂಡಳಿಯ ಸದಸ್ಯರಾದ ಸಂಜೀವ ಕಾಂಚನ್, ಪುರುಷೋತ್ತಮ ಪಿ. ಶೆಟ್ಟಿ, ಉಮಾನಾಥ ಎಲ್, ವಿನಯ ಕುಮಾರ್ ಟಿ.ಎ, ಪದ್ಮನಾಭ ನಾಯಕ್, ಸೈಯದ್ ಅಬ್ದುಲ್ ರಜಾಕ್, ಸದಾಶಿವ ನಾಯ್ಕ್, ಮನೋಹರ ಎಸ್. ಶೆಟ್ಟಿ, ಸಾಧು ಸಾಲ್ಯಾನ್, ಜಯಾ ಶೆಟ್ಟಿ, ಗಾಯತ್ರಿ ಎಸ್. ಭಟ್, ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ. ಶೇರಿಗಾರ್ ಉಪಸ್ಥಿತರಿದ್ದರು.

     

     

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending