Connect with us

LATEST NEWS

Udupi: ಬಡಗಬೆಟ್ಟು ಸೊಸೈಟಿಯ ಮೊಬೈಲ್ ಆ್ಯಪ್, ಎಟಿಎಂ ಕಾರ್ಡ್ ಬಿಡುಗಡೆ

Published

on

ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಚೇತನಾ ಮೊಬೈಲ್ ಆ್ಯಪ್, ಪೇ-ಡೈರೆಕ್ಟ್ ಎಟಿಎಂ ಕಾರ್ಡ್, ಪಿಗ್ಮಿ ಕಲೆಕ್ಷನ್ ಮೊಬೈಲ್ ಆ್ಯಪ್ ಅನಾವರಣ ಕಾರ್ಯಕ್ರಮ ಸೆ.17ರಂದು ಅಜ್ಜರಕಾಡು ಪುರಭವನದಲ್ಲಿ ನಡೆಯಿತು.

ಉಡುಪಿ: ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಚೇತನಾ ಮೊಬೈಲ್ ಆ್ಯಪ್, ಪೇ-ಡೈರೆಕ್ಟ್ ಎಟಿಎಂ ಕಾರ್ಡ್, ಪಿಗ್ಮಿ ಕಲೆಕ್ಷನ್ ಮೊಬೈಲ್ ಆ್ಯಪ್ ಅನಾವರಣ ಕಾರ್ಯಕ್ರಮ ಸೆ.17ರಂದು ಅಜ್ಜರಕಾಡು ಪುರಭವನದಲ್ಲಿ ನಡೆಯಿತು.

ಚೇತನಾ ಮೊಬೈಲ್ ಆ್ಯಪ್‌ನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪೇ ಡೈರೆಕ್ಟ್ ಎಟಿಎಂ ಕಾರ್ಡ್‌ನ್ನು ಮಾಜಿ ಶಾಸಕ ರಘುಪತಿ ಭಟ್, ಪಿಗ್ಮಿ ಕಲೆಕ್ಷನ್ ಆ್ಯಪ್‌ನ್ನು ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಅನಾವರಣಗೊಳಿಸಿದರು.

ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಐಸಿಐಸಿಐ ಬ್ಯಾಂಕ್‌ನ ಡೆಪ್ಯುಟಿ ಜನರಲ್ ಮೆನೇಜರ್ ಅಭಿತಾಬ್ ದೀಕ್ಷಿತ್, ಸೊಸೈಟಿಯ ಶತಮಾನೋತ್ಸವ ಸಮಿತಿಯ ಸಂಚಾಲಕ ಪುರುಷೋತ್ತಮ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ  ಕ್ರೆಡಾ ಅಧ್ಯಕ್ಷ ಮನೋಹರ್ ಶೆಟ್ಟಿ, ಜೀವ ರಕ್ಷಕ ಈಶ್ವರ್ ಮಲ್ಪೆ, ಯೋಗಪಟು ತನುಶ್ರೀ ಪಿತ್ರೋಡಿ ಅವರನ್ನು ಸನ್ಮಾನಿಸಲಾಯಿತು.

ಶೇ.15 ಡಿವಿಡೆಂಡ್ ಘೋಷಣೆ:

ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 2022-23ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸಂಘದ ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಿಸಲಾಗಿದೆ.

ಉಡುಪಿ ಪುರಭವನದಲ್ಲಿ ನಡೆದ ಸಭೆಯಲ್ಲಿ ಸಂಘದ ಅಧ್ಯಕ್ಷ ಸಂಜೀವ ಕಾಂಚನ್ ವಾರ್ಷಿಕ ವರದಿ ಮತ್ತು ಪರಿಶೋಧಿತ ಲೆಕ್ಕಪತ್ರಗಳನ್ನು ಮಂಡಿಸಿದರು.

ವರದಿ ಸಾಲಿನ ಅಂತ್ಯಕ್ಕೆ ಸಂಘವು ಒಟ್ಟು 20,147 ಸದಸ್ಯರಿಂದ 4.75 ಕೋಟಿ ಪಾಲು ಬಂಡವಾಳ ಹಾಗೂ 451.43ಕೋಟಿ ಠೇವಣಿ ಹೊಂದಿದೆ. 338.01ಕೋಟಿ ಹೊರಬಾಕಿ ಸಾಲ ಹೊಂದಿದ್ದು, ಸಂಘವು 2022-23ನೇ ಸಾಲಿನಲ್ಲಿ ಸುಮಾರು 2330 ಕೋಟಿ ವಾರ್ಷಿಕ ವಹಿವಾಟು ನಡೆಸಿದೆ.

ಸಂಘವು 14.01ಕೋಟಿ ನಿವ್ವಳ ಲಾಭವನ್ನು ಗಳಿಸಿದೆ ಎಂದರು.

ಕೋಡ್‌ಲಾಗ್ಸ್ ಟೆಕ್ನಾಲಜೀಸ್ ವ್ಯವಸ್ಥಾಪಕ ಶ್ರವಣ್ ರವಿರಾಜ್ ಮೊಬೈಲ್ ಆ್ಯಪ್ ಮತ್ತು ಐಸಿಐಸಿಐ ಬ್ಯಾಂಕಿನ ಹಿರಿಯ ಮುಖ್ಯ ವ್ಯವಸ್ಥಾಪಕ ಮಂಜುನಾಥ್ ಎಟಿಎಂ ಕುರಿತು ಮಾಹಿತಿನೀಡಿದರು.

ಸೊಸೈಟಿ ಪ್ರಾಯೋಜಕತ್ವದಲ್ಲಿ ಚೇತನಾ ನವೋದಯ ಸ್ವಸಹಾಯ ಗುಂಪುಗಳ ಅನಾವರಣವು ಗುಂಪಿನ ಪ್ರೇಕರ ಹರಿನಾಥ್ ಉಪಸ್ಥಿತಿಯಲ್ಲಿ ನಡೆಯಿತು.

ಸಂಘದ ಆಡಳಿತ ಮಂಡಳಿ ಸದಸ್ಯರಾದ ಹಾಜಿ ಸಯ್ಯದ್ ಅಬ್ದುಲ್ ರಜಾಕ್, ವಸಂತ ಕೆ.ಕಾಮತ್, ವಿನಯ ಕುಮಾರ್ ಟಿ.ಎ., ಜಯಾನಂದ ಸಿ.ಮೈಂದನ್, ಪದ್ಮನಾಭ ಕೆ.ನಾಯಕ್, ರಘುರಾಮ ಎಸ್.ಶೆಟ್ಟಿ, ಜಾರ್ಜ್ ಸ್ಯಾಮುವೆಲ್, ಸದಾಶಿವ ನಾಯ್ಕ್, ಜಯ ಶೆಟ್ಟಿ, ಗಾಯತ್ರಿ ಎಸ್. ಭಟ್ ಉಪಸ್ಥಿತರಿದ್ದರು.

ಸೊಸೈಟಿ ಅಧ್ಯಕ್ಷ ಸಂಜೀವ ಕಾಂಚನ್ ಸ್ವಾಗತಿಸಿದರು.

ಪ್ರಭಾರ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ.ಶೇರಿಗಾರ್ ವಂದಿಸಿದರು.

ಶಾಖಾ ವ್ಯವಸ್ಥಾಪಕ ನವೀನ್ ಕೆ. ಕಾರ್ಯಕ್ರಮ ನಿರೂಪಿಸಿದರು.

 

DAKSHINA KANNADA

ದ.ಕ.ಜಿಲ್ಲೆಯ 9 ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

Published

on

ಮಂಗಳೂರು: ದ.ಕ.ಜಿಲ್ಲೆಯ 9 ತಾಲೂಕಿನ 9 ಗ್ರಾಮಗಳು 2022-23ನೆ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಯಾಗಿದೆ.

ಅಕ್ಟೋಬರ್ 2ರ ಗಾಂಧಿಜಯಂತಿ ದಿನದಂದು ರಾಜ್ಯ ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

ಮಂಗಳೂರು ತಾಲೂಕಿನ ಉಳಾಯಿಬೆಟ್ಟು, ಉಳ್ಳಾಲ ತಾಲೂಕಿನ ಬೆಳ್ಮ, ಮುಲ್ಕಿ ತಾಲೂಕಿನ ಕೆಮ್ರಾಲ್, ಮೂಡುಬಿದಿರೆ ತಾಲೂಕಿನ ಪುತ್ತಿಗೆ, ಬಂಟ್ವಾಳ ತಾಲೂಕಿನ ಅಮ್ಮುಂಜೆ, ಪುತ್ತೂರು ತಾಲೂಕಿನ ಉಪ್ಪಿನಂಗಡಿ, ಕಡಬ ತಾಲೂಕಿನ ಸವಣೂರು, ಬೆಳ್ತಂಗಡಿ ತಾಲೂಕಿನ ಬಳಂಜ, ಸುಳ್ಯ ತಾಲೂಕಿನ ಮರ್ಕಂಜ ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿವೆ.

Continue Reading

LATEST NEWS

Baindoor: ರೈಲ್ವೆ ಸುರಂಗ ಮಾರ್ಗದಲ್ಲಿ ಕೋಮಾ ಸ್ಥಿತಿಯಲ್ಲಿದ್ದ ವ್ಯಕ್ತಿಯ ರಕ್ಷಣೆ..!

Published

on

ಬೈಂದೂರು: ಬೈಂದೂರು- ಶಿರೂರು ನೆರೆಗುದ್ದೆ ರೈಲ್ವೆ ಸುರಂಗ ಮಾರ್ಗದಲ್ಲಿ ಕೋಮಾ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದ ಯುವಕನೊಬ್ಬನನ್ನು ಆರೋಗ್ಯ ಕವಚ 108 ಆ್ಯಂಬುಲೆನ್ಸ್ ಸಿಬಂದಿ ರಕ್ಷಿಸಿ ಪ್ರಾಣ ಉಳಿಸಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಗಾಯಾಳು ವ್ಯಕ್ತಿಯನ್ನು ರಾಜೇಶ್  (25)ಎಂದು ಗುರುತಿಸಲಾಗಿದೆ.

ಮಂಗಳವಾರ ರಾತ್ರಿ 10 ಗಂಟೆಗೆ ರೈಲ್ವೆ ಇಲಾಖೆ ನೀಡಿದ ಮಾಹಿತಿಯ ಮೇರೆಗೆ ಆರೋಗ್ಯ ಕವಚ 108 ಸಿಬಂದಿ ಕಾರ್ಯಚರಣೆ ನಡೆಸಿದರು.

ರೈಲ್ವೇ ಸುರಂಗ ಮಾರ್ಗದೊಳಗೆ ಸುಮಾರು 3 ಕಿ.ಮೀ ನಡೆದು ಕೊಂಡು ಹೋಗಿ ಹಳಿಯ ಪಕ್ಕದಲ್ಲಿ ಮುಗುಚಿ ಬಿದ್ದಿದ್ದ ವ್ಯಕ್ತಿಯನ್ನು ಸ್ಟ್ರೆಚರ್ ನಲ್ಲಿ ಹಾಕಿ ಹೊತ್ತು ಹೊರತಂದು ಬೈಂದೂರು ಆಸ್ಪತ್ರೆಗೆ ದಾಖಲಿಸಿದರು.

ಅಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಅಲ್ಲಿಂದ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ‌.

ಆ್ಯಂಬುಲೆನ್ಸ್‌ನ ಪೈಲೆಟ್ ಶರಣ ಬಸವ ಮತ್ತು ಇ ಎಂ ಟಿ ಪ್ರತಿಭಾ ಅವರು ಅಸ್ವಸ್ಥ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲು ಮಾಡಿ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.

Continue Reading

LATEST NEWS

ಕೊರಗಜ್ಜನ ಪವಾಡ- ವಾರವಿಡೀ ಕಾಡಿನಲ್ಲಿ ಸಿಲುಕಿದ ಯುವಕನ ರಕ್ಷಣೆ ಮಾಡಿದ ನಾಯಿಯ ಅದ್ದೂರಿ ಮೆರವಣಿಗೆ

Published

on

ಕುಂದಾಪುರ: ತುಳುನಾಡಿನಲ್ಲಿ ಕೊರಗಜ್ಜನ ದೈವದ ಕಾರ್ಣಿಕದ ಶಕ್ತಿ ಅಪಾರವಾದದ್ದು. ಹಾಗಾಗಿ ನಂಬುವ ಜನರಿಗೆ ಕೊರಗಜ್ಜ ಯಾವತ್ತೂ ಕೈ ಬಿಡುದಿಲ್ಲ ಎಂಬ ನಂಬಿಕೆ ಇದೆ.

ಆ ನಂಬಿಕೆಯಂತೆ ಉಡುಪಿ ಜಿಲ್ಲೆಯಲ್ಲೊಂದು ಅಚ್ಚರಿ ಘಟನೆ ನಡೆದಿದೆ.

ಕುಂದಾಪುರದ ಯುವಕನೋರ್ವ ಕಾಣೆಯಾಗಿದ್ದಾನೆ ಎಂದು ತಿಳಿದ ಮನೆಯವರು ದೈವದ ಮೊರೆ ಹೋದ ಬೆನ್ನಲೇ ಆತ ನಾಯಿಯೊಂದಿಗೆ ವಾಪಸು ಮನೆಗೆ ಮರಳಿದ್ದಾನೆ.

ಇದು ನಂಬಿದ ದೈವವೇ ಯುವಕನನ್ನು ಮರಳಿ ಮನೆಗೆ ಕರೆಸಿದೆ ಎಂದು ಗ್ರಾಮಸ್ಥರು ನಂಬಬಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮಚ್ಚೆಟ್ಟು ವ್ಯಾಪ್ತಿಯ ವಿವೇಕಾನಂದ ಎಂಬ ಯುವಕನು ಕಾಡಿಗೆ ಕಟ್ಟಿಗೆ ತರಲು ಎಂದು ಹೋದವನು 8 ದಿನವಾದರೂ ಮನೆಗೆ ವಾಪಸು ಬಂದಿರಲಿಲ್ಲ.

ಹಾಗಾಗಿ ಮನೆಯವರು ದೈವದ ಮೊರೆ ಹೋಗಿದ್ದಾರೆ.

ಈ ವೇಳೆ ಆತ ಜೀವಂತವಾಗಿರುವುದು ತಿಳಿದು ಬಂದ ಕೂಡಲೇ ದೈವದ ಭರವಸೆಯಂತೆ ಪೊಲೀಸರು, ಎಎನ್‌ಎಫ್‌ ಪಡೆಯೊಂದಿಗೆ ಗ್ರಾಮಸ್ಥರು ಹಗಲು ರಾತ್ರಿ ಇಡೀ ಆತನ ಪತ್ತೆಗೆ ಹುಡುಕಾಡಿದ್ದಾರೆ.

ಆದರೆ ಆತನ ಸುಳಿವು ಸಿಕ್ಕಿರದ ಕಾರಣ ಮನೆಯವರು ಮುಳ್ಳುಗುಡ್ಡೆ ಕೊರಗಜ್ಜ ಸನ್ನಿಧಾನಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿದರು.

“ಆತ ಹಂದಿಯೊಂದನ್ನು ಓಡಿಸಿಕೊಂಡು ಹೋಗುವಾಗ ದಾರಿ ತಪ್ಪಿದ್ದಾನೆ.  ಹಕ್ಕಿಯೊಂದು ದಾರಿ ತೋರಿಸಿದೆ.

ಹಳದಿ ಬಣ್ಣದ ಅಂಗಿ ಹಾಕಿ ಕಾಡಿನಲ್ಲಿ ಅಡಗಿ ಕುಳಿತ್ತಿದ್ದಾನೆ.

5 ಜನ ಸೇರಿ ಅಲ್ಲಿ ಹೋಗಿ ಹುಡುಕಿ. ಆಗಲಿಲ್ಲವಾದರೆ ಇನ್ನು ಎರಡು ದಿನದ ಒಳಗೆ ಆತ ಮನೆಗೆ ಬರುತ್ತಾನೆ” ಎಂದು ಕ್ಷೇತ್ರದ ಧಮ೯ದಶಿ೯ ಪುನೀತ್ ಅವರು ಹೇಳಿದ್ದರು.

ಅದರಂತೆ ಮಗನ ಬರುವಿಕೆಗೆ ಮನೆಯವರು ಕಾಯುತ್ತಿದ್ದರು.

ಇದೀಗ ಮನೆಯವರಿಗೆ ಹಾಗೂ ಗ್ರಾಮಸ್ಥರಿಗೆ ಕೊರಗಜ್ಜನ ದೈವದ ಶಕ್ತಿ ಅಚ್ಚರಿಯನ್ನುಂಟು ಮಾಡಿದೆ.

ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ಪುನೀತ್ ಅವರ ನುಡಿಯಂತೆ ಎಂಟು ದಿನಗಳ ಬಳಿಕ ಆತ ನಾಯಿಯೊಂದಿಗೆ ಮರಳಿ ಬರುತ್ತಾನೆ.

ಆದರೆ ಆತನಿಗೆ ತಾನೂ ಎಲ್ಲಿ ಹೋಗಿದ್ದೆ ಎಂದು ಗೊತ್ತಿಲ್ಲ. ಕಾಡಿನಲ್ಲಿ ಸಿಲುಕಿದ ಕಾರಣ ಆಹಾರವಿಲ್ಲದೆ ವಿವೇಕಾನಂದನು ನಿತ್ರಾಣಗೊಂಡಿದ್ದ.

ಆತನ ಜೊತೆಗಿದ್ದದ್ದು ಮಾತ್ರ  ಮನೆಯ ಸಾಕು ನಾಯಿ, ಆತನ ಮರಳಿ ಬರುವಂತೆ ದಾರಿ ತೋರಿಸಿ ರಕ್ಷಿಸಿದೆ.

ಹಾಗಾಗಿ ಆತನ ಜೀವ ಉಳಿಸಿದ ನಾಯಿಯನ್ನು ಗ್ರಾಮಸ್ಥರು ಸೇರಿ ಅದ್ದೂರಿಯಾಗಿ  ತೆರೆದ ಪಿಕಪ್ ವಾಹನದಲ್ಲಿ ಕುಳ್ಳಿರಿಸಿ ಮೆರವಣಿಗೆ ನಡೆಸಿದರು.

50ಕ್ಕಿಂತ ಹೆಚ್ಚು ಬೈಕ್ ಟೆಂಪೋ ಆಟೋರಿಕ್ಷಾಗಳ ಜೊತೆಗೆ ತೆರೆದ ವಾಹನದಲ್ಲಿ ಚಿಂಟು ಮತ್ತು ವಿವೇಕಾನಂದ ಕುಟುಂಬಸ್ಥರು ಆಪ್ತರನ್ನು ಗೆಳೆಯರ ಬಳಗ ಮೆರವಣಿಗೆ ಮಾಡಿದೆ.

ನಂತರ ಮನೆಯಲ್ಲಿ ಕೇಕ್ ಕತ್ತರಿಸಿ ಹುಟ್ಟು ಹಬ್ಬದ ರೀತಿಯಲ್ಲೇ ವಿವೇಕಾನಂದ ವಾಪಾಸ್ ಬಂದ ಖುಷಿಯನ್ನು ಆಚರಿಸಿದರು.

ಸುತ್ತಮುತ್ತಲ ಮನೆಯವರಿಗೆ ಗೆಳೆಯರ ಬಳಗಕ್ಕೆ ಹುಡುಕಾಡಲು ಸಹಾಯ ಮಾಡಿದ ಎಲ್ಲರಿಗೆ ಶೀನಾ ನಾಯ್ಕ ಕುಟುಂಬ ಸಿಹಿಯೂಟ ಹಾಕಿಸಿದೆ.

Continue Reading

LATEST NEWS

Trending