Thursday, March 23, 2023

ಮಣಿಪಾಲದಲ್ಲಿ ಫುಲ್‌ ಟೈಟಾಗಿ ಯರ್ರಾಬಿರ್ರಿ ಕಾರು ಚಲಾಯಿಸಿದಾತ ಅರೆಸ್ಟ್

ಉಡುಪಿ: ಕಂಠಪೂರ್ತಿ ಕುಡಿದು ಕಾರು ಚಲಾಯಿಸಿದ ಚಾಲಕನನ್ನು ಪೊಲೀಸರು ಬಂಧಿಸಿರುವ ಘಟನೆ ಉಡುಪಿಯ ಮಣಿಪಾಲ ಕಾಯಿನ್ ಸರ್ಕಲ್ ಬಳಿ ತಡರಾತ್ರಿ ನಡೆದಿದೆ.

ಶಿವಮೊಗ್ಗದ ಕಾರು ಚಾಲಕ ಸುಹಾಸ್ ಎಂಬಾತ ಬಂಧಿತ ಆರೋಪಿ.


ಇಲ್ಲಿನ ಪಬ್ಬೊಂದರಲ್ಲಿ ಕುಡಿದು ಮತ್ತೇರಿದ 5 ಜನರಿದ್ದ ತಂಡ ಪಬ್‌ನಿಂದ ಹೊರಬಂದು ಕಾರಿನಲ್ಲಿ ಹೊರಟಿದೆ.

ಈ ವೇಳೆ ನಿಯಂತ್ರಣ ತಪ್ಪಿದ ಚಾಲಕ ಒಟ್ಟಾರೆಯಾಗಿ ಕಾರು ಚಲಾಯಿಸಿದ್ದಾನೆ. ಗಾಬರಿಗೊಂಡ ಜನ ಬೊಬ್ಬೆ ಹೊಡೆದಿದ್ದಾರೆ.

ಇದರಿಂದ ಗೊಂದಲಕ್ಕೀಡಾಗಿ ಚಾಲಕ ಕಾರು ಚಲಾಯಿಸಿಕೊಂಡು ಪರಾರಿಯಾಗುವ ವೇಳೆ ಎರಡು ಕಾರುಗಳು ಜಖಂಗೊಂಡಿದೆ.

ಇನ್ನು ಸುಹಾಸ್ ಜೊತೆ ಕಾರಿನಲ್ಲಿ ನಾಲ್ಕು ಮಂದಿ ಕಾರಿನಲ್ಲಿ ಇದ್ದರು ಎಂದು ತಿಳಿದು ಬಂದಿದೆ.

ಇಲ್ಲಿನ ಪೆರಂಪಳ್ಳಿ ರಸ್ತೆಯಲ್ಲಿ ಕಾರು ವಶಕ್ಕೆ ಪಡೆದ ಪೊಲೀಸರು ಚಾಲಕನನ್ನು ಬಂಧಿಸಿದ್ದಾರೆ.
ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

40 ವರ್ಷಗಳಿಂದ ಅದೇ ಪೊಳ್ಳು ಭರವಸೆ : ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಸುಳ್ಯ ಅರಮನೆಗಾಯದ ಜನತೆ..!

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಈ ಗ್ರಾಮದ ಜನ ಕಳೆದ 40 ವರ್ಷಗಳಿಂದ ಬಿದಿರಿನ ತೂಗು ಸೇತುವೆಯ ಮುಖಾಂತರ ಜೀವ ಭಯದಲ್ಲಿ ಜೀವನ ನಡೆಸುತಿದ್ದಾರೆ.ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ...

ಚಿಕ್ಕಮಗಳೂರು : ಬೈಕಿಗೆ ಬಸ್ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು...

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದಿದ್ದ ಕುಮಟಾದ ಯುವತಿ ಡಿಡೀರ್ ನಾಪತ್ತೆ..! 

ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರಗಳನ್ನು ಸಂದರ್ಶಿಸಲು ಬಂದಿದ್ದ ಹದಿ ಹರೆಯದ ಯುವತಿ ನಾಪತ್ತೆಯಾಗಿದ್ದಾಳೆ.ಬೆಳ್ತಂಗಡಿ : ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರಗಳನ್ನು...