chikkamagaluru
ಉಡುಪಿ ಚಿಕ್ಕಮಗಳೂರು ಲೋಕ ಸಮರ…! ಚಿಕ್ಕಮಗಳೂರಿನಲ್ಲಿ ಉಡುಪಿಯವರಿಗೆ ಗೋ ಬ್ಯಾಕ್ ಅಭಿಯಾನ..!
ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಬಹುತೇಕ ಕಡೆಗಳಲ್ಲಿ ಟಿಕೇಟ್ ಫೈಟ್ ಜೋರಾಗಿ ನಡೀತಾ ಇದೆ. ಸಾಮಾನ್ಯವಾಗಿ ಶಿಸ್ತಿಗೆ ಹೆಸರಾಗಿರುವ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಈ ಬಾರಿ ಎರಡೂ ಪಕ್ಷಗಳಲ್ಲೂ ಗೋ ಬ್ಯಾಕ್ ಅಭಿಯಾನ ಆರಂಭವಾಗಿದೆ.
ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಯನ್ನು ಒಳಗೊಂಡಿರುವ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಚಿಕ್ಕಮಗಳೂರಿನವರಿಗೆ ಟಿಕೇಟ್ ಕೊಡಬೇಕು ಅನ್ನೋದು ಎರಡೂ ರಾಷ್ಟ್ರೀಯ ಪಕ್ಷಗಳ ಬೇಡಿಕೆ. ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಉಡುಪಿಯ ಕಾರ್ಯಕರ್ತರಲ್ಲೂ ಅಸಮಾಧಾನವಿದ್ದರೂ ಶಿಸ್ತು ಕಾಪಾಡಿಕೊಂಡಿದ್ದಾರೆ.
ಇತ್ತೀಚೆಗೆ ಮೀನುಗಾರರ ಸಭೆಯಲ್ಲಿ ಸಂಸದೆಯನ್ನು ತರಾಟೆಗೆ ತೆಗೆದುಕೊಂಡಿದ್ದು ಬಿಟ್ಟರೆ ಶೋಭಾ ವಿರುದ್ಧ ಅಂತಹ ಆಕ್ರೋಶ ಕಂಡು ಬಂದಿಲ್ಲ. ಆದ್ರೆ, ಚಿಕ್ಕಮಗಳೂರು ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಮಾತ್ರ ಸೋಶಿಯಲ್ ಮೀಡಿಯಾ ವಾರ್ ಆರಂಭಿಸಿ ಗೋ ಬ್ಯಾಕ್ ಶೋಭಾ ಅಂತಿದ್ದಾರೆ.
ಇನ್ನು ಕಾಂಗ್ರೆಸ್ ಪಕ್ಷದಲ್ಲೂ ಗೋ ಬ್ಯಾಕ್ ಜೆ.ಪಿ .ಹೆಗ್ಡೆ ಅನ್ನೋ ಸೋಷಿಯಲ್ ಮೀಡಿಯಾ ವಾರ್ ಜೋರಾಗಿ ನಡೀತಾ ಇದೆ. ಈ ಎರಡೂ ಪಕ್ಷಗಳ ಕಾರ್ಯಕರ್ತರ ಈ ವಾರ್ ಹಿಂದೆ ಇರೋದು ‘ಚಿಕ್ಕಮಗಳೂರಿನವರಿಗೆ ಟಿಕೇಟ್ ಕೊಡಿ’ ಅನ್ನೋ ಆಗ್ರಹ.
ಸಂಸದೆಯಾದ ಬಳಿಕ ಚಿಕ್ಕಮಗಳೂರು ಉಡುಪಿ ಜಿಲ್ಲೆಯಲ್ಲಿ ಅಭಿವೃದ್ದಿ ಕಾರ್ಯ ಆಗಿದೆ ಅಂತ ಸಚಿವೆ ಶೋಭಾ ಕರಂದ್ಲಾಜೆ ಹೇಳ್ತಾರೆಯಾದ್ರೂ, ಕಾರ್ಯಕರ್ತರೇ ಈಗ ಅವರ ಅಭಿವೃದ್ದಿಯ ಕೆಲಸ ಏನು ಅನ್ನೋ ಬಗ್ಗೆ ಟ್ರೋಲ್ ಮಾಡ್ತಾ ಇದ್ದಾರೆ.
ಶೋಭಾ ಕರಂದ್ಲಾಜೆ ಬೇಡವೇ ಬೇಡ :
ಕಳೆದ ಚುನಾವಣೆಯ ಸಮಯದಲ್ಲೂ ಗೋ ಬ್ಯಾಕ್ ಅಭಿಯಾನ ನಡೆದಿದ್ದರೂ ಶೋಭಾ ಕರಂದ್ಲಾಜೆ ಟಿಕೇಟ್ ಗಿಟ್ಟಿಸಿ ಗೆದ್ದು ಸಚಿವೆಯಾಗಿದ್ರು. ಆದ್ರೆ ಸಚಿವೆ ಆದ ಬಳಿಕ ಕ್ಷೇತ್ರದತ್ತ ಮುಖ ಮಾಡದೆ ಇದ್ದ ಕಾರಣ ವಿಧಾನ ಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರಿನಲ್ಲಿ ಐದಕ್ಕೆ ಐದು ಸ್ಥಾನವನ್ನು ಬಿಜೆಪಿ ಕಳೆದುಕೊಂಡಿತ್ತು.
ಹೀಗಾಗಿ ಕ್ಷೇತ್ರದಲ್ಲಿ ಶಾಸಕರಿಲ್ಲ ಕನಿಷ್ಟ ಸಂಸದರಾಗಲು ನಮ್ಮ ಜಿಲ್ಲೆಗೆ ಅವಕಾಶ ಕೊಡಿ ಅನ್ನೋದು ಬಿಜೆಪಿ ಕಾರ್ಯಕರ್ತರ ಆಗ್ರಹ. ಹಾಗೊಂದು ವೇಳೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೇಟ್ ನೀಡೋದಾದ್ರೆ ಅವರನ್ನು ಸೊಲೀಸೋದೇ ನಮ್ಮ ಗುರಿ ಆಗಲಿದೆ ಎಂಬ ಎಚ್ಚರಿಕೆಯನ್ನೂ ಬಿಜೆಪಿ ಕಾರ್ಯಕರ್ತರು ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಸಾಮಾನ್ಯ ಕಾರ್ಯಕರ್ತನಿಗೆ ಟಿಕೇಟ್ ನೀಡಿ ಗೆಲ್ಲಿಸಿಕೊಡುತ್ತೇವೆ ಯಾವುದೇ ಕಾರಣಕ್ಕೂ ಶೋಭಾ ಕರಂದ್ಲಾಜೆ ಬೇಡವೇ ಬೇಡ ಎಂದು ಹಟಕ್ಕೆ ಬಿದ್ದಿದ್ದಾರೆ.
‘ಕೈ’ ಗೆ ಬೇಡ ಜೆ.ಪಿ ಹೆಗ್ಡೆ :
ಇನ್ನು ಅಭ್ಯರ್ಥಿಗಳೇ ಇಲ್ಲ ಅಂತಿದ್ದ ಕಾಂಗ್ರೆಸ್ ಪಕ್ಷಕ್ಕೆ ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೆ ಜಯಪ್ರಕಾಶ್ ಹೆಗ್ಡೆ ಅನಿವಾರ್ಯವಾಗಿದ್ದಾರೆ. ತೆರೆ ಮರೆಯಲ್ಲಿ ಕೆಲಸ ಮಾಡುತ್ತಿರುವ ಜಯಪ್ರಕಾಶ್ ಹೆಗ್ಡೆ ಕಳೆದ ಕೆಲವು ದಿನಗಳಿಂದ ಉಡುಪಿ ಚಿಕ್ಕಮಗಳೂರಿನಲ್ಲಿ ರಾಜಕೀಯವಾಗಿ ಸಕ್ರೀಯವಾಗುತ್ತಿದ್ದಾರೆ.
ತನ್ನ ಸಾಧನೆಗಳನ್ನು ಸಾರುವ ಬ್ಯಾನರ್ಗಳು ಹಾಗೂ ಸೋಷಿಯಲ್ ಮೀಡಿಯಾ ಪೋಸ್ಟ್ಗಳನ್ನ ಹಾಕುತ್ತಿದ್ದಾರೆ. ಚಿಕ್ಕಮಗಳೂರಿಗೆ ಭೇಟಿ ನೀಡಿ ಅಲ್ಲೂ ಸಭೆಗಳನ್ನು ನಡೆಸಿದ್ದಾರೆ. ಆದ್ರೆ, ಜಯಪ್ರಕಾಶ್ ಹೆಗ್ಡೆ ಎಂಟ್ರಿಗೆ ಚಿಕ್ಕಮಗಳೂರಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಅವಕಾಶವಾದಿ ಜೆ.ಪಿ.ಹೆಗ್ಡೆ ಅಂತ ಗೋಬ್ಯಾಕ್ ಅಭಿಯಾನ ನಡೆಸಿದ್ದಾರೆ.
ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಮುಂಚೂಣಿಯಲ್ಲಿರುವ ಸುಧೀರ್ ಕುಮಾರ್ ಮುರೊಳ್ಳಿ ಅವರಿಗೆ ಟಿಕೇಟ್ ನೀಡಬೇಕು ಅಂತ ಕೈ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಪಕ್ಷ ಬಿಟ್ಟು ಹೋಗಿ ಬಿಜೆಪಿ ಸೇರಿ ಈಗ ಮತ್ತೆ ಚುನಾವಣೆಗೆ ಸ್ಪರ್ಧೆ ಮಾಡಲು ಕಾಂಗ್ರೆಸ್ ಗೆ ವಾಪಾಸಾಗುತ್ತಿರುವ ಜೆ.ಪಿ ಹೆಗ್ಡೆ ಬೇಡವೇ ಬೇಡ ಅಂತ ಕೈ ಕಾರ್ಯಕರ್ತರೂ ಅಭಿಯಾನ ನಡೆಸ್ತಾ ಇದ್ದಾರೆ.
ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆಯ ದಿನಾಂಕ ನಿಗಧಿಯಾಗಲಿದ್ದು, ಈಗಾಗಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕೂಡಾ ಮಾಡಲಾಗುತ್ತಿದೆ. ಗೊಂದಲ ಇರುವ ಕ್ಷೇತ್ರಗಳಲ್ಲಿ ಮಾತ್ರ ಎರಡೂ ಪಕ್ಷಗಳು ಅಳೆದು ತೂಗಿ ಅಭ್ಯರ್ಥಿಯ ಆಯ್ಕೆ ನಡೆಸಲಿದೆ. ಆದ್ರೆ ಮಂಗಳೂರು ಹಾಗೂ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಈ ಬಾರಿ ಎರಡೂ ಪಕ್ಷಗಳಿಗೆ ಅಭ್ಯರ್ಥಿಯ ಆಯ್ಕೆ ದೊಡ್ಡ ತಲೆನೋವಾಗಿದೆ. ದಕ್ಷಿಣ ಕನ್ನಡ ಲೋಕಸಭೆಗೆ ಸದ್ಯಕ್ಕಂತೂ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಹೆಸರು ಚಾಲ್ತಿಯಲ್ಲಿದೆಯಾದ್ರೂ ಟಿಕೇಟ್ ಕೈ ತಪ್ಪಲಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಗಳಾಗುತ್ತಿದೆ. ಆದ್ರೆ ಹಾಲಿಗೆ ಟಿಕೇಟ್ ಕೈ ತಪ್ಪಿದ್ರೆ ಯಾರು ಅಭ್ಯರ್ಥಿ ಅನ್ನೋ ಪ್ರಶ್ನೆಗೆ ಸದ್ಯಕ್ಕಂತೂ ಉತ್ತರ ಸಿಕ್ಕಿಲ್ಲ. ಇನ್ನು ಕೈ ಪಾಳಯದಲ್ಲಿ ಅಭ್ಯರ್ಥಿಗಳಾಗಿ ಬಿಲ್ಲವ ನಾಯಕ ಪದ್ಮರಾಜ್ , ಹಾಗೂ ವಿನಯ ಕುಮಾರ್ ಸೊರಕೆ ಹೆಸರು ಕೇಳಿ ಬರ್ತಾ ಇದೆ.
chikkamagaluru
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!
ಚಿಕ್ಕಮಗಳೂರು: ಶಾರ್ಟ್ ಸರ್ಕ್ಯೂಟ್ನಿಂದಾಗಿ ಎಟಿಎಂ ಮೆಷಿನ್ಗೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಸುಟ್ಟು ಕರಕಲಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ನಗರದ ಐ.ಜಿ ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್ ನ ಎಟಿಎಂ ಗೆ ಭಾನುವಾರ(ಎ.21) ಮಧ್ಯರಾತ್ರಿ ಬೆಂಕಿ ತಗುಲಿದೆ.
ಎಟಿಎಂ ಕೊಠಡಿಯಲ್ಲಿ ಅಳವಡಿಸಿದ್ದ ಎಸಿಯಲಲ್ಲಿ ವಿದ್ಯುತ್ ಸರ್ಕ್ಯೂಟ್ ಸಂಭವಿಸಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಇದರಿಂದ ಎಟಿಎಂ ಮೆಷಿನ್ ಹಾಗೂ ಹಣ ತುಂಬಿಸುವ ಮೆಷಿನ್ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಘಟನೆಯಿಂದ ಮೆಷಿನ್ನಲ್ಲಿದ್ದ 5.ಲಕ್ಷ ರೂಪಾಯಿ ಸುಟ್ಟು ಕರಕಲಾಗಿ ಹೋಗಿದೆ. ಎಟಿಎಂ ಮೆಷಿನ್ ಮೇಲಿನ ಭಾಗದಲ್ಲಿ ಕರ್ನಾಟಕ ಬ್ಯಾಂಕ್ ಇದ್ದು ಅದೃಷ್ಟವಶಾತ್ ಭಾರೀ ಅಪಾಯ ತಪ್ಪಿದಂತಾಗಿದೆ.
READ MORE..; ಮಲ್ಪೆ ಬೀಚ್ನಲ್ಲಿ ಮುಳುಗಿ ಯುವಕ ಮೃತ್ಯು.. ಮಂಡ್ಯ ಯುವಕನ ದುರಂತ ಅಂತ್ಯ..!
ಎಟಿಎಂಗೆ ಬೆಂಕಿ ಹೊತ್ತಿಕೊಂಡ ವಿಚಾರವನ್ನು ಹೈದರಾಬಾದ್ ಬ್ಯಾಂಕ್ ಕಂಟ್ರೋಲ್ ರೂಮ್ ಅಗ್ನಿಶಾಮಕ ದಳಕ್ಕೆ ತಿಳಿಸಿದೆ. ಮಾಹಿತಿ ಬಂದ ಕೂಡಲೆ ಸ್ಥಳಕ್ಕೆ ಧಾವಿಸಿದ ಚಿಕ್ಕಮಗಳೂರು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
chikkamagaluru
ರಾಜ್ಯದ ಹಲವೆಡೆ ಮಳೆಯ ಸಿಂಚನ.. ಸಿಡಿಲಿನ ಅಬ್ಬರಕ್ಕೆ ಇಬ್ಬರ ಬ*ಲಿ..!!
ಮಂಗಳೂರು : ಬಿಸಿಲಿನ ಬೇಗೆಯಿಂದ ಭೂಮಿಯೇ ಬಾಯಿಬಿಟ್ಟಂತಾಗಿದ್ದು, ನೀರಿಗಾಗಿ ಜನರ ಹಾಹಾಕಾರ ಮುಗಿಲು ಮುಟ್ಟಿತ್ತು. ಜಾನುವಾರುಗಳು ಪ್ರಾಣಿ ಪಕ್ಷಿಗಳದ್ದಂತು ಹೇಳ ತೀರದ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಳೆದೊಂದು ವಾರದಿಂದ ಇದಕ್ಕೆ ಬ್ರೇಕ್ ನೀಡಿ ವರುಣನ ಸಿಂಚನದಿಂದ ಕೆಲವೊಂದೆಡೆ ಜನರು ನೆಮ್ಮದಿ ಕಂಡಿದ್ರು. ಆದ್ರೆ ಗುರುವಾರ (ಎ.11) ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ವಿಜಯಪುರ, ಕಲಬುರಗಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಿದೆ.
ಸು*ಟ್ಟು ಕರಕಲಾಗುವಂತ ಪರಿಸ್ಥಿತಿಯಲ್ಲಿದ್ದ ಕಲಬುರಗಿಯಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಿದೆ ಇನ್ನು ವಿಜಯಪುರ ತಾಲೂಕಿನಲ್ಲೂ ಧಾರಕಾರ ಮಳೆ ಸುರಿದಿದ್ದು, ಒಂದೇ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಸಿಡಿಲಿನ ಅರ್ಭಟಕ್ಕೆ ಜನ ಮನೆಯಿಂದ ಹೊರ ಬಾರದೆ ಮನೆಯಲ್ಲೇ ಆಶ್ರಯ ಪಡೆದುಕೊಂಡಿದ್ದಾರೆ. ಆದ್ರೂ 16 ವರ್ಷ ಬಾಲಕ ಹಾಗೂ ಇಂಡಿ ತಾಲೂಕಿನ ಮಸಳಿ ಗ್ರಾಮದಲ್ಲಿ ಜಮೀನು ಕೆಲಸ ಮಾಡುತ್ತಿದ್ದ 45 ವರ್ಷದ ರೈತ ಸೋಮಶೇಖರ್ ಪಟ್ಟಣಶೆಟ್ಟಿ ಸಿಡಿಲು ಬಡಿದು ಮೃ*ತಪಟ್ಟಿದ್ದಾರೆ.
ಇದನ್ನೂ ಓದಿ..; ‘ಬಿಗ್ ಬಾಸ್’ ಮತ್ತೆ ಆರಂಭ.. ಇಲ್ಲಿದೆ ಸ್ಪರ್ಧಿಗಳ ಲಿಸ್ಟ್..!
ಇನ್ನು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಗುಡುಗು ಸಹಿತ ಮಳೆಯಾಗಿದೆ. ಜಿಲ್ಲೆಯ ಕೆರಮಕ್ಕಿ, ಬೈಗೂರು,ಹಂರವಳ್ಳಿ, ಆವುತಿ ಪರಿಸರದಲ್ಲಿ ಭಾರಿ ಮಳೆಯಾಗಿದೆ. ಮಳೆಯಿಂದ ಕಾಫಿ ಬೆಳೆಗಾರರು ಸಂತಸಗೊಂಡಿದ್ದಾರೆ.
chikkamagaluru
ಉಡುಪಿ-ದ.ಕ ಜಿಲ್ಲೆಯಲ್ಲಿ ಸಂಭ್ರಮದ ರಂಜಾನ್ ಆಚರಣೆ: ಇಂದೇ ಸರ್ಕಾರಿ ರಜೆ ಘೋಷಸಿದ ಜಿಲ್ಲಾಡಳಿತ
ಮಂಗಳೂರು: ಕೇರಳದ ಪೊನ್ನಾನಿಯಲ್ಲಿ ನಿನ್ನೆ(ಎ.9) ಚಂದ್ರದರ್ಶನವಾಗಿದ್ದ ಹಿನ್ನಲೆಯಲ್ಲಿ ದ.ಕ.ಜಿಲ್ಲೆ, ಉಡುಪಿ ಸೇರಿದಂತೆ ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎ.10ರಂದು ರಮ್ಜಾನ್ ಆಚರಿಸಲು ದ.ಕ ಜಿಲ್ಲಾ ಖಾಝಿ ಹಾಗೂ ಹಾಸನ ಚಿಕ್ಕಮಗಳೂರು ಜಿಲ್ಲೆಯ ಸಂಯುಕ್ತ ಖಾಘಿ ಅವರು ಕರೆ ನೀಡಿದ್ದರು. ಈ ಹಿನ್ನಲೆಯಲ್ಲಿ ಇಂದು ಈ ಜಿಲ್ಲೆಗಳಲ್ಲಿ ರಮ್ಜಾನ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ.
ಮಂಗಳೂರಿನ ಬಾವುಟ ಗುಡ್ಡದ ಈದ್ಗಾದಲ್ಲಿ ಸಾಮೂಹಿಕ ನಮಾಜ್ ಮಾಡುವ ಮೂಲಕ ಹಬ್ಬದ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಸೇರಿದಂತೆ ಹಲವಾರು ಪ್ರಮುಖರು ಈದ್ಗಾದ ನಮಾಜ್ನಲ್ಲಿ ಪಾಲ್ಗೊಂಡಿದ್ದಾರೆ. ಇದೇ ವೇಳೆ ಮಾತನಾಡಿದ ಸ್ಪೀಕರ್ ಖಾದರ್ ಅವರು ಎಲ್ಲಾ ಜನತೆಗೆ ರಮ್ಜಾನ್ ಹಬ್ಬದ ಶುಭಾಶಯ ತಿಳಿಸಿದ್ದಾರೆ. ವಿಶೇಷವಾಗಿ ಈಸ್ಟರ್, ಯುಗಾದಿ ಹಾಗೂ ರಮ್ಜಾನ್ ಮೂರು ಹಬ್ಬಗಳು ಒಟ್ಟೊಟ್ಟಿಗೆ ಬಂದಿರುವ ಕಾರಣ ಇದೊಂದು ವಿಶೇಷ ಸನ್ನಿವೇಶವಾಗಿ ಅವರು ಪರಿಗಣಿಸಿದ್ದಾರೆ. ಎಲ್ಲಾ ಹಬ್ಬಗಳ ಸಂದೇಶ ಸಾಮರಸ್ಯವನ್ನು ಸಾರಿದ್ದು, ನಮ್ಮ ಜಿಲ್ಲೆಯಿಂದ ಅಂತಹ ಸಾಮರಸ್ಯ ಇಡೀ ದೇಶಕ್ಕೆ ಸಾರುವಂತಾಗಲಿ ಎಂದು ಹೇಳಿದ್ದಾರೆ.
ಇನ್ನು ಅಧಿಕೃತವಾಗಿ ರಮ್ಜಾನ್ ಹಬ್ಬದ ಸರ್ಕಾರಿ ರಜೆ ನಾಳೆ ಇದ್ದು , ಇಂದು ಹಬ್ಬ ಆಚರಿಸುತ್ತಿರುವ ಕಡೆಗಳಲ್ಲಿ ಇಂದೇ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಸ್ಪೀಕರ್ ಖಾದರ್ ಅವರ ಮನವಿ ಪುರಸ್ಕರಿಸಿ ಈ ರಜೆ ಘೋಷಣೆ ಮಾಡಲಾಗಿದೆ. ಹೀಗಾಗಿ ಇಂದು ಹಬ್ಬ ಆಚರಿಸುತ್ತಿರುವ ಜಿಲ್ಲೆಗಳಲ್ಲಿ ಸರ್ಕಾರಿ ರಜೆ ಇರಲಿದೆ.
- FILM6 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM6 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM6 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru5 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!