HomeLATEST NEWSಮಗಳ ಜೊತೆ 74 ನೇ ಸ್ವಾತಂತ್ರ್ಯೋತ್ಸವ ಸಂಭ್ರಮಿಸಿದ ಉಡುಪಿ ಡಿಸಿ ಜಗದೀಶ್..!

ಮಗಳ ಜೊತೆ 74 ನೇ ಸ್ವಾತಂತ್ರ್ಯೋತ್ಸವ ಸಂಭ್ರಮಿಸಿದ ಉಡುಪಿ ಡಿಸಿ ಜಗದೀಶ್..!

ಮಗಳ ಜೊತೆ 74 ನೇ ಸ್ವಾತಂತ್ರ್ಯೋತ್ಸವ ಸಂಭ್ರಮಿಸಿದ ಉಡುಪಿ ಡಿಸಿ ಜಗದೀಶ್..!

ಉಡುಪಿ : ಸ್ವಾತಂತ್ರ್ಯ ದಿನಾಚರಣೆ ಎಂದ ತಕ್ಷಣ ಎಲ್ಲರಿಗೂ ಅವರ ಬಾಲ್ಯದ ನೆನಪು ತೆರೆದುಕೊಳ್ಳುತ್ತೆ. ಮುಂಜಾನೆ ಎದ್ದು ಬಿಳಿ ಯೂನಿಫಾರಂ ತೊಟ್ಟದ್ದು, ಸೆಲ್ಯೂಟ್ ಹೊಡೆದು ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದು, ದೊಡ್ಡ ದೊಡ್ಡ ಬಾವುಟಗಳು ಹಾರುವುದನ್ನು ನೋಡಿದ್ದು, ಲಡ್ಡು ತಿಂದದ್ದು …ಹೀಗೆ ನೆನಪಿನ ಬುತ್ತಿ ಬಿಚ್ಚಿಕೊಳ್ಳುತ್ತದೆ.

ಸ್ವಾತಂತ್ರ್ಯ ದಿನಾಚರಣೆಯ ಕ್ರೇಜ್ ಇವತ್ತಿಗೂ ಮಕ್ಕಳಲ್ಲಿ ಕಡಿಮೆಯಾಗಿಲ್ಲ. ಕೊರೋನಾ ಬಂದ ಕಾರಣಕ್ಕೆ ಅತ್ಯಂತ ಸರಳವಾಗಿ ಉಡುಪಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

ಆಚರಣೆ ಎಷ್ಟೇ ಸರಳವಾಗಿದ್ದರೂ ಮಕ್ಕಳ ಹುಮ್ಮಸ್ಸು ಕಡಿಮೆಯಾಗಿರಲಿಲ್ಲ. ಅಜ್ಜರಕಾಡು ಮೈದಾನದಲ್ಲಿ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಧ್ವಜಾರೋಹಣ ಮಾಡಿದರು. ಜಿಲ್ಲಾಧಿಕಾರಿಗಳಿಗೆ ಧ್ವಜಾರೋಹಣ ಮಾಡುವ ಅವಕಾಶ ಸಿಗುವುದೇ ಅಪರೂಪ.

ಜಿಲ್ಲಾಧಿಕಾರಿ ಜಗದೀಶ್ ಅವರು ಟಿಪ್ ಟಾಪ್ ಕೋಟು ಧರಿಸಿ ಬಂದಿದ್ರು. ಇತ್ತ ಜಿಲ್ಲಾಧಿಕಾರಿಗಳ ಮಗಳ ಪಾಲಿಗಂತೂ ಅಪ್ಪನೇ ಹೀರೋ,  ಸೆಲೆಬ್ರಿಟಿಯಾಗಿ ಕಂಡಿದ್ರು…

ಸಭಾ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಓಡಿಹೋಗಿ ವೇದಿಕೆ ಹತ್ತಿ ತಂದೆ ಜೊತೆ ಮಗಳು ಫೋಟೋ ತೆಗೆಸಿಕೊಳ್ಳಲು ಚಡಪಡಿಸುತ್ತಿದ್ದಳು.

ಹಾಗೂ ಹೀಗೂ ಕೊನೆಗೂ ಫೋಟೋ ತೆಗೆಸಿಕೊಂಡು ಖುಷಿಪಟ್ಟಳು.  ಜಿಲ್ಲಾಧಿಕಾರಿಗಳ ತಮ್ಮನ ಮಗಳು ಕೂಡ ಜೊತೆಗಿದ್ದಳು.

ಅಜ್ಜರಕಾಡು ಮೈದಾನ ಪ್ರವೇಶಿಸುತ್ತಿದ್ದಂತೆಯೇ ಅಪ್ಪನ ಹಿಂಬಾಲಿಸಿಕೊಂಡು ಬಂದ ಪುತ್ರಿ,  ತಂದೆ ಭಾಷಣ ಮಾಡುವಾಗ ಮುಂದಿನ ಕುರ್ಚಿಯಲ್ಲಿ ಕೂತು ತಂದೆಯ ಭಾಷಣವನ್ನು ಆಲಿಸಿದರು.

ಅಪ್ಪನ ಜೊತೆಗೆ 74ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮಿಸಿದರು.

 

Latest articles

ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಎಫೆಕ್ಟ್- ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ..!

ಜೂನ್ ಎರಡನೇ ವಾರಕ್ಕೆ ಕಾಲಿಟ್ಟರೂ ಮುಂಗಾರು ಮಳೆಯ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಹವಾಮಾನ ಇಲಾಖೆಯ ಪ್ರಕಾರ ಈ ಬಾರಿ...

ಮಂಗಳೂರು: ಮಹಿಳಾ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿ ಮಂಗಳೂರಿನಲ್ಲಿ ಪ್ರತಿಭಟನೆ-ಬೃಜ್‌ ಭೂಷಣ್‌ ಬಂಧನಕ್ಕೆ ಆಗ್ರಹ

ಮಹಿಳಾ ಕುಸ್ತಿ ಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅರೋಪ ಹೊತ್ತ ಎಸಗಿದ ಉತ್ತರ ಪ್ರದೇಶದ ಬಿಜೆಪಿ ಸಂಸದ...

ಮಂಗಳೂರು: ಬೀದಿಬದಿ ವ್ಯಾಪಾರಿಗಳ ಮೇಲಿನ ಕಿರುಕುಳ, ಕೇಸುಗಳಿಗೆ ಖಂಡನೆ – ಸುಳ್ಳು ಮೊಕದ್ದಮೆ ವಾಪಾಸ್ ಪಡೆಯಲು ಒತ್ತಾಯಿಸಿ ಪ್ರತಿಭಟನೆ

ಜನಪರ ಹೋರಾಟಗಾರ, ಬೀದಿ ವ್ಯಾಪಾರಿಗಳ ಮುಂದಾಳು ಬಿ ಕೆ ಇಮ್ತಿಯಾಝ್‌ ಮತ್ತು ಮುಖಂಡರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ವಾಪಾಸ್...

ರಾಮನಗರ: ಟೋಲ್ ವಿಚಾರಕ್ಕೆ ಸಂಬಂಧಿಸಿ ಗಲಾಟೆ- ಯುವಕರ ತಂಡದಿಂದ ಸಿಬಂದಿ ಹತ್ಯೆ..!

ಟೋಲ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ಯುವಕರ ತಂಡವೊಂದು ಗಲಾಟೆ ಮಾಡಿದ ಹಿನ್ನಲೆಯಲ್ಲಿ ಟೋಲ್ ಸಿಬ್ಬಂದಿಯ ಕೊಲೆಯಾಗಿದೆ. ಈ ಘಟನೆ...