LATEST NEWS
ಉಡುಪಿ ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಕೇಂದ್ರ ಅವ್ಯವಸ್ಥೆ- ಸಾರ್ವಜನಿಕರ ಆಗ್ರಹ..!
ಉಡುಪಿಯ ಅಜ್ಜರಕಾಡು ಎಂಬಲ್ಲಿರುವ ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಕೇಂದ್ರದ ಅವ್ಯವಸ್ಥೆ ಯಥಾ ಸ್ಥಿತಿಯಲ್ಲಿ ಮುಂದುವರಿದಿದೆ.
ಉಡುಪಿ: ಉಡುಪಿಯ ಅಜ್ಜರಕಾಡು ಎಂಬಲ್ಲಿರುವ ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಕೇಂದ್ರದ ಅವ್ಯವಸ್ಥೆ ಯಥಾ ಸ್ಥಿತಿಯಲ್ಲಿ ಮುಂದುವರಿದಿದೆ.
ಹತ್ತು ಡಯಾಲಿಸಿಸ್ ಯಂತ್ರಗಳ ಪೈಕಿ ಆರೇಳು ಯಂತ್ರಗಳು ಕೆಟ್ಟು ನಿಂತಿವೆ.
ಹೀಗಾಗಿ ಡಯಾಲಿಸಿಸ್ ಗಾಗಿ ಬರುವ ರೋಗಿಗಳ ಕೂಗು ಅರಣ್ಯರೋದನವಾಗುತ್ತಿದೆ.
ಮೂರು ತಿಂಗಳ ಹಿಂದೆ ಈ ಕೇಂದ್ರದ ಅವ್ಯವಸ್ಥೆ ವಿರುದ್ಧ ರೋಗಿಗಳು ಮತ್ತವರ ಸಂಬಂಧಿಕರು ಪ್ರತಿಭಟಿಸಿದ್ದರು.
ಆದರೆ ಮೂರು ತಿಂಗಳ ನಂತರವೂ ಪರಿಸ್ಥಿತಿ ಸುಧಾರಿಸಿಲ್ಲ. ಡಯಾಲಿಸಿಸ್ ಕೇಂದ್ರದಲ್ಲಿ ರೋಗಿಗಳು ಡಯಾಲಿಸಿಸ್ ಗಾಗಿ ಸರದಿಯಲ್ಲಿ ಕಾಯುತ್ತಿರುವ ದೃಶ್ಯ ಯಾವತ್ತೂ ಕಂಡು ಬರುತ್ತಿದೆ.
ಎಲ್ಲಾ ಡಯಾಲಿಸಿಸ್ ಯಂತ್ರಗಳು ಕಾರ್ಯ ನಿರ್ವಹಿಸದೆ ಇರುವುದು ಇದಕ್ಕೆ ಕಾರಣ.
ಯಂತ್ರಗಳು ಕೆಟ್ಟು ತಿಂಗಳುಗಳೇ ಕಳೆದರೂ ಗುತ್ತಿಗೆ ವಹಿಸಿಕೊಂಡ ಸಂಸ್ಥೆ ಅದನ್ನು ದುರಸ್ತಿ ಮಾಡಿಲ್ಲ.
ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಕೇಂದ್ರದ ಈ ಅವ್ಯವಸ್ಥೆ ಬಗ್ಗೆ ಸ್ಥಳೀಯ ಶಾಸಕರು ಮತ್ತು ಜಿಲ್ಲಾಡಳಿತದ ಗಮನಕ್ಕೆ ತರಲಾಗಿದೆ.
ಆದರೆ ಯಾವುದೇ ಪ್ರಯೋಜನವಾಗಿಲ್ಲ.
ಬಡಜನರ ಜೀವಗಳ ಜತೆ ಚೆಲ್ಲಾಟ ಆಡುವ ಈ ಪ್ರವೃತ್ತಿ ಕೊನೆಗೊಳ್ಳಬೇಕಿದೆ.
ಸರಕಾರ ಮತ್ತು ಸಂಬಂಧಪಟ್ಟ ಇಲಾಖೆ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸ ಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ರೋಗಿ ಶಿವರಾಮ್ ಮತ್ತು ಇನ್ನೋರ್ವ ರೋಗಿಯ ಸಂಬಂಧಿ ಚಂದ್ರ ಪೂಜಾರಿ ಅವರು ಡಯಾಲಿಸಿಸ್ ಕೇಂದ್ರದ ಅವ್ಯವಸ್ಥೆ, ಕೆಟ್ಟು ನಿಂತಿರುವ ಯಂತ್ರಗಳು ಮತ್ತು ರೋಗಿಗಳು ಅನುಭವಿಸುತ್ತಿರುವ ಯಾತನೆಯನ್ನು ಮಾಧ್ಯಮದ ಜತೆ ಹಂಚಿಕೊಂಡಿದ್ದಾರೆ.
DAKSHINA KANNADA
ಮಂಗಳೂರು : ‘ಮಹೇಶ್’ ಬಸ್ ಮಾಲೀಕ ಆತ್ಮಹತ್ಯೆ..!
ಮಂಗಳೂರು: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರನ್ನು ಮಹೇಶ್ ಬಸ್ ಮಾಲೀಕ ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು ಕದ್ರಿ ಕಂಬಳ ಸಮೀಪ ಇರುವ ಅಪಾರ್ಟ್ ಮೆಂಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಹೇಶ್ ಹೆಸರಿನಲ್ಲಿ ಹಲವಾರು ಸಿಟಿ ಬಸ್ ಗಳು ದಿನನಿತ್ಯ ಸಂಚರಿಸುತ್ತಿದ್ದು, ಜನಮನ್ನಣೆ ಪಡೆದಿದೆ.
ಬಸ್ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ಆಪ್ತ ಬಳಗಕ್ಕೆ ಶಾಕ್ ನೀಡಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ಬೈಕ್ ಅಪಘಾತ: ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಲೆ ಹರಿದ ಲಾರಿ- ಮೂವರು ಸ್ಥಳದಲ್ಲೇ ಸಾವು..!
ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.
ಹಳೆ ಜಂಬರಗಟ್ಟ ನಿವಾಸಿ ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಮೃತ ದುರ್ದೈವಿಗಳು.
ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಸವಾರರ ರಸ್ತೆ ಮೇಲೆ ಬಿದ್ದಿದ್ದಾರೆ.
ಇದೇ ವೇಳೆ ರಭಸವಾಗಿ ಬಂದ ಲಾರಿ ಆ ವ್ಯಕ್ತಿಗಳ ಮೇಲೆ ಹರಿದಿದೆ.
ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
FILM
ಮೋದಿಗೆ ರಕ್ತದಲ್ಲಿ ಪತ್ರ ಬರೆದ ಚಿತ್ರ ನಟ ಪ್ರೇಮ್..!
ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.
‘ಕಾವೇರಿ ನಮ್ಮದು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು ಮನವಿ ಮಾಡಿದ್ದಾರೆ.
ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
- DAKSHINA KANNADA7 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- LATEST NEWS7 days ago
ವಾರವಿಡೀ ಕಾಡಿನಲ್ಲಿ ಸಿಲುಕಿದ್ದ ಯುವಕ- ಮನೆಗೆ ವಾಪಸ್ ಆಗುವಂತೆ ರಕ್ಷಣೆ ಮಾಡಿದ ಸಾಕುನಾಯಿ..!
- DAKSHINA KANNADA7 days ago
Puttur: ಕಾಲೇಜು ವಿದ್ಯಾರ್ಥಿನಿ ಜಿವಾಂತ್ಯ..!
- DAKSHINA KANNADA7 days ago
Ullala: ರೈಲಿನಡಿಗೆ ತಲೆಯಿಟ್ಟು ಅವಿವಾಹಿತ ವ್ಯಕ್ತಿ ಜೀವಾಂತ್ಯ..!