Connect with us

LATEST NEWS

ಉಡುಪಿ ಜಿಲ್ಲೆಗಳಲ್ಲಿ ಮನೆಗಳು ಜಲಾವೃತ- ಅಗ್ನಿ ಶಾಮಕ ತಂಡದಿಂದ ರಕ್ಷಣೆ

Published

on

ರಾಜ್ಯದ ಕರಾವಳಿ ಭಾಗದಲ್ಲಿ ಮಳೆ ಬಿರುಸು ಪಡೆದಿದ್ದು, ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಬರುತ್ತಿದೆ. ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದ್ದು, ಹೆಚ್ಚಿನ ಮಳೆಯಾಗುವ ಸೂಚನೆ ನೀಡಿದೆ.

ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ಮಳೆ ಬಿರುಸು ಪಡೆದಿದ್ದು, ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಬರುತ್ತಿದೆ. ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದ್ದು, ಹೆಚ್ಚಿನ ಮಳೆಯಾಗುವ ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಇಂದು ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ.

ಬಲವಾದ ಗಾಳಿ ಬೀಸುತ್ತಿರುವುದರಿಂದ ಹಲವು ಕಡೆ ಮರಗಳು ಉರುಳಿ ಬಿದ್ದಿವೆ.

ಇದರಿಂದಾಗಿ ಕೆಲವೆಡೆ ರಸ್ತೆ ಸಂಪರ್ಕ ಕಡಿತ, ವಿದ್ಯುತ್‌ ಸಂಪರ್ಕ ಕಡಿತವಾಗಿದ್ದು, ಮನೆಗಳಿಗೂ ಹಾನಿಯಾಗಿದೆ.

ಕಾಪು, ಬೈಂದೂರು, ಗಂಗೊಳ್ಳಿ ಮುಂತಾದ ಕಡೆ ಕಡಲಕೊರೆತ ಜಾಸ್ತಿಯಾಗಿದೆ.

ಜಿಲ್ಲೆಯ ಕೊಡಂಕೂರು ಭಾಗದಲ್ಲಿ ಕೆಲವು ಮನೆಗಳು ಜಲಾವೃತಗೊಂಡು ದ್ವೀಪದಂತಾಗಿವೆ.

ಇದರಿಂದ ಹಲವು ಮನೆಗಳು ಅಪಾಯದಲ್ಲಿವೆ. ಅಗ್ನಿಶಾಮಕ ದಳದವರು ಮಕ್ಕಳು ಮತ್ತು ಮಹಿಳೆಯರನ್ನು ರಕ್ಷಿಸಿದ್ದಾರೆ.

ಕರಾವಳಿ ಬೈಪಾಸ್ ಪರಿಸರದಲ್ಲಿಯೂ ಹಲವಾರು ಮನೆಗಳ ಸುತ್ತ ನೀರು ತುಂಬಿದ್ದು, ಜನರು ನಡುಗಡ್ಡೆಯಲ್ಲಿ ಸಿಲುಕಿ ಅಪಾಯದಲ್ಲಿದ್ದಾರೆ.

ಕಾರ್ಕಳ ತಾಲೂಕಿನಲ್ಲಿ ಜಡಿಮಳೆಯಿಂದಾಗಿ ಸ್ವರ್ಣಾ ನದಿ ಉಕ್ಕಿ ಹರಿಯುತ್ತಿದೆ.

ಪಶ್ಚಿಮಘಟ್ಟದ ತಪ್ಪಲು ಪ್ರದೇಶವಾಗಿರುವ ಮಾಳ ಮಲ್ಲಾರುನಲ್ಲಿ ಉಗಮಿಸುವ ಸ್ವರ್ಣಾ ನದಿಯಲ್ಲಿ ಮಳೆಯಿಂದಾಗಿ ಒಳ ಹರಿವು ಹೆಚ್ಚಿದೆ.

ದುರ್ಗ ಗ್ರಾಮದ ಬಲ್ಮಗುಂಡಿಯ ಅಣೆಕಟ್ಟಿನ ಎಲ್ಲಾ ಬಾಗಿಲುಗಳನ್ನು ತೆರೆಯಲಾಗಿದ್ದು, ಇದರಿಂದ ಕೃತಕ ನೆರೆಗೆ ಅವಕಾಶ ಸಿಗದೆ  ಸ್ವರ್ಣಾ ನದಿಯ ನೀರು ಉಡುಪಿಯ ಹಿರಿಯಡ್ಕದ ಬಜೆ ಅಣೆಕಟ್ಟಿಗೆ ಸೇರುತ್ತಿದೆ. ಸದ್ಯ ಉಡುಪಿ ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆ ಬರುತ್ತಿದೆ.

ಉಡುಪಿ ಜಿಲ್ಲೆಯ 7 ತಾಲೂಕುಗಳಲ್ಲಿ ಇಂದು ಬೆಳಗ್ಗೆ 8.30 ವರೆಗಿನ 24 ತಾಸುಗಳಲ್ಲಿ ಸರಾಸರಿ 198 ಮಿಲಿ ಮೀಟರ್ ಮಳೆಯಾಗಿದೆ.

ಕಾಪು ಮತ್ತು ಕಾರ್ಕಳ ತಾಲೂಕುಗಳಲ್ಲಿ ಗರಿಷ್ಠ ಮಳೆ ಬಂದಿದೆ.

ಕಾಪು 242  ಮಿಲಿ ಮೀಟರ್‌, ಕಾರ್ಕಳ 228 ಮಿಲಿ ಮೀಟರ್‌, ಬ್ರಹ್ಮಾವರ 206 ಮಿಲಿ ಮೀಟರ್‌, ಉಡುಪಿ 196 ಮಿಲಿ ಮೀಟರ್‌, ಹೆಬ್ರಿ 179 ಮಿಲಿ ಮೀಟರ್‌, ಕುಂದಾಪುರ 170 ಮಿಲಿ ಮೀಟರ್‌, ಬೈಂದೂರು 164 ಮಿಲಿ ಮೀಟರ್‌ ಮಳೆ ಬಂದಿದೆ.

 

 

Click to comment

Leave a Reply

Your email address will not be published. Required fields are marked *

DAKSHINA KANNADA

Moodabidri: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್..!

Published

on

ಮೂಡುಬಿದಿರೆ: ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ತಂಡವು ಬುಧವಾರ ವಶಕ್ಕೆ ಪಡೆದಿದೆ.

ಬೆಳುವಾಯಿ ನಿವಾಸಿಗಳಾದ ಮಹಮ್ಮದ್ ಅಯಾನ್ (22), ಫರ್ಹಾನ್ ಖಾನ್ (18) ಹಾಗೂ ಶೇಖ್ ಮುಹಮ್ಮದ್ ಜುಬೈರ್ (19) ಬಂಧಿತ ಆರೋಪಿಗಳು.

ಮೂವರು ಆರೋಪಿಗಳು ಬೆಳುವಾಯಿ ಕಾಂತಾವಾರ ದ್ವಾರದ ಬಳಿ ಸ್ಕೂಟರ್ ನಲ್ಲಿ ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದಾರೆಂದ ಖಚಿತ ಮಾಹಿತಿಯನ್ನು ಮೇರೆಗೆ ಸ್ಥಳಕ್ಕೆ ಧಾವಿಸಿದ್ದಾರೆ.

ಬಳಿಕ ಮೂವರು ವ್ಯಕ್ತಿಗಳ ಸಹಿತ 800 ಗ್ರಾಂ ಗಾಂಜಾ ಮತ್ತು ಸ್ಕೂಟರನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ.

ಈ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ 62,000 ಆಗಿರಬಹುದೆಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

Continue Reading

DAKSHINA KANNADA

Mangaluru: ಸೋಮೇಶ್ವರ ಉಚ್ಚಿಲದಲ್ಲಿ ಬಲೆಗೆ ಬಿದ್ದ ದೈತ್ಯ ಪಿಲಿ ತೊರಕೆ..!

Published

on

ಮಂಗಳೂರು: ಮಂಗಳೂರಿನ ಉಳ್ಳಾಲ ಸಮೀಪದ ಸೋಮೇಶ್ವರ ಉಚ್ಚಿಲದ ನಾಡದೋಣಿ ಮೀನುಗಾರರಿಗೆ ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಲಭಿಸಿದೆ.

ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ನಿನ್ನೆ ಸಂಜೆ ಸಮುದ್ರ ತೀರದಲ್ಲಿ ಮೀನಿಗಾಗಿ ಬಲೆ ಹಾಕಿದ್ದು, ಸುಮಾರು 75 ಕೆ.ಜಿ. ತೂಕದ ಮೀನು ಅವರ ಬಲೆಗೆ ಬಿದ್ದಿದೆ.

ಈ ವರ್ಷದ ತಮ್ಮ ಮೀನುಗಾರಿಕೆ ಅವಧಿಯಲ್ಲಿ ಸಿಕ್ಕ ಅತಿದೊಡ್ಡ ಮೀನು ಇದಾಗಿದೆ ಎಂದವರು ಅಭಿಪ್ರಾಯ ಪಟ್ಟಿದ್ದಾರೆ.

ಪ್ರತಿವರ್ಷದಂತೆ ಈ ಬಾರಿಯೂ ಸಮುದ್ರದಲ್ಲಿ ಕೆಸರಿನಂತೆ ಅಲೆಗಳು ಬರುತ್ತವೆ.

ಈ ನೀರಿಗೆ ಮೀನುಗಾರಿಕೆಯಲ್ಲಿ ಅತ್ಯಂತ ಪಾವಿತ್ರ್ಯತೆಯೂ ಇದೆ.

ಅದರಲ್ಲಿ ಹಲವು ಬಗೆಯ ಮೀನುಗಳು ಬರುವ ಐತಿಹ್ಯವಿದೆ.
ಈ ಬಾರಿ ದೊಡ್ಡ ಗಾತ್ರದ ಪಿಲಿತೊರಕೆ ಬಂದಿರುವುದು ಮೀನುಗಾರರಲ್ಲಿ ಉತ್ಸಾಹ ಮೂಡಿಸಿದೆ.

ಮಾರಾಟ ಮಾಡುವುದಾದರೆ ಈ ಮೀನಿಗೆ ಕೆ.ಜಿ.ಗೆ 200 ರೂಪಾಯಿ ಬೆಲೆ ಇದೆ.

ಆದರೆ ಸಿಕ್ಕ ಮೀನನ್ನು ವ್ಯಾಪಾರ ಮಾಡದೆ ಈದ್ ಹಬ್ಬ ಇರುವುದರಿಂದ ತಮ್ಮೊಳಗೆ ಹಂಚಿಕೊಂಡಿದ್ದಾರೆ.

Continue Reading

DAKSHINA KANNADA

ದ.ಕ.ಜಿಲ್ಲೆಯ 9 ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

Published

on

ಮಂಗಳೂರು: ದ.ಕ.ಜಿಲ್ಲೆಯ 9 ತಾಲೂಕಿನ 9 ಗ್ರಾಮಗಳು 2022-23ನೆ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಯಾಗಿದೆ.

ಅಕ್ಟೋಬರ್ 2ರ ಗಾಂಧಿಜಯಂತಿ ದಿನದಂದು ರಾಜ್ಯ ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

ಮಂಗಳೂರು ತಾಲೂಕಿನ ಉಳಾಯಿಬೆಟ್ಟು, ಉಳ್ಳಾಲ ತಾಲೂಕಿನ ಬೆಳ್ಮ, ಮುಲ್ಕಿ ತಾಲೂಕಿನ ಕೆಮ್ರಾಲ್, ಮೂಡುಬಿದಿರೆ ತಾಲೂಕಿನ ಪುತ್ತಿಗೆ, ಬಂಟ್ವಾಳ ತಾಲೂಕಿನ ಅಮ್ಮುಂಜೆ, ಪುತ್ತೂರು ತಾಲೂಕಿನ ಉಪ್ಪಿನಂಗಡಿ, ಕಡಬ ತಾಲೂಕಿನ ಸವಣೂರು, ಬೆಳ್ತಂಗಡಿ ತಾಲೂಕಿನ ಬಳಂಜ, ಸುಳ್ಯ ತಾಲೂಕಿನ ಮರ್ಕಂಜ ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿವೆ.

Continue Reading

LATEST NEWS

Trending