Connect with us

ಕೊನೆಗೂ ಕೋರ್ಟಿಗೆ ಶರಣಾದ ಉಡುಪಿ ಡಬ್ಬಲ್ ಮರ್ಡರ್ ಆರೋಪಿ..!!

Published

on

ಕೊನೆಗೂ ಕೋರ್ಟಿಗೆ ಶರಣಾದ ಉಡುಪಿ ಡಬ್ಬಲ್ ಮರ್ಡರ್ ಆರೋಪಿ..!!

ಉಡುಪಿ : ಉಡುಪಿ ಜಿಲ್ಲೆಯ ಕೋಟದಲ್ಲಿ ನಡೆದ ಡಬ್ಬಲ್ ಮರ್ಡರ್ ಪ್ರಕರಣದ ಆರೋಪಿ, ಜಿಲ್ಲಾ ಪಂಚಾಯತ್ ಸದಸ್ಯ ಬಾರಿಕೆರೆ ರಾಘವೇಂದ್ರ ಕಾಂಚನ್ ಕೊನೆಗೂ ಪೊಲೀಸರಿಗೆ ಶರಣಾಗಿದ್ದಾನೆ.

ಕಳೆದ ವರ್ಷ ಕೋಟ ಸಮೀಪದ ಮಣೂರಿನಲ್ಲಿ ನಡೆದ ಭರತ್ ಮತ್ತು ಆತನ ಸ್ನೇಹಿತ ಯತೀಶ್ ಕೊಲೆ ಪ್ರಕರಣದಲ್ಲಿ ಕೊಲೆಯ ಸಂಚು ರೂಪಿಸಿದ ಆರೋಪ ಈತನ ಮೇಲಿತ್ತು.

ರಾಘವೇಂದ್ರ ಕಾಂಚನ್ ಪಡೆದ ಜಾಮೀನು ಸರ್ವೋಚ್ಚ ನ್ಯಾಯಾಲಯದಲ್ಲಿ ವಜಾಗೊಂಡಿತ್ತು. ಆದೇಶವಾಗಿ ಹದಿನೈದು ದಿನ ಕಳೆದರೂ ಪೊಲೀಸರು ಈತನನ್ನು ಬಂಧಿಸಿರಲಿಲ್ಲ. ಈ ಬಗ್ಗೆ ಮೃತರ ಮನೆಯವರು ಹೋರಾಟದ ಎಚ್ಚರಿಕೆ ನೀಡಿದ್ದರು.

ವಕೀಲರ ಮೂಲಕ ಆಗಮಿಸಿದ ರಾಘವೇಂದ್ರ ಕಾಂಚನ್ ಶರಣಾಗತಿಯಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದ್ದು ಹಿರಿಯಡಕ ಕಾರಾಗೃಹಕ್ಕೆ ರವಾನಿಸಲಾಗಿದೆ. ಕಳೆದ ವರ್ಷ ಜನವರಿ ೨೬ರಂದು ರಾತ್ರಿ ಸುಮಾರು ೧೦.೩೦ರ ಸುಮಾರಿಗೆ ಭರತ್ ಮತ್ತು ಆತನ ಸ್ನೇಹಿತ ಯತೀಶನನ್ನು ಕೊಲೆ ಮಾಡಲಾಗಿತ್ತು.

ಇದರಲ್ಲಿ ಭಾಗಿಯಾದ ೧೮ ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಕೆಲವು ಆರೋಪಿಗಳು ನ್ಯಾಯಾಲಯದಲ್ಲಿ ಜಾಮೀನು ಪಡೆದಿದ್ದರು. ಅಲ್ಲದೇ ಜಿಲ್ಲಾ ಪಂಚಾಯತ್ ಸದಸ್ಯನಾದ ರಾಘವೇಂದ್ರ ಕಾಂಚನ್ ಉಚ್ಛ ನ್ಯಾಯಾಲಯದಲ್ಲಿ ಜಾಮೀನು ಪಡೆದಿದ್ದು, ಈ ಬಗ್ಗೆ ಭರತ್ ತಾಯಿ ಪಾರ್ವತಿ ಸರ್ವೋಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಇದನ್ನು ಪುರಸ್ಕರಿಸಿದ ಸರ್ವೋಚ್ಚ ನ್ಯಾಯಾಲಯವು ಹೈಕೋರ್ಟ್ ನೀಡಿದ ಜಾಮೀನು ವಜಾಗೊಳಿಸಿ ಆದೇಶಿಸಿತ್ತು. ಅದರಂತೆ ಇಂದು ವಕೀಲ ರವಿಕಿರಣ್ ಮುರ್ಡೇಶ್ವರ ಅವರ ಮೂಲಕ ಕೋರ್ಟಿಗೆ ಹಾಜರಾಗಿ ನ್ಯಾಯಾಂಗ ಬಂಧನಕ್ಕೊಳಗಾಗಿದ್ದಾನೆ.

ವಿಡಿಯೋಗಾಗಿ

Click to comment

Leave a Reply

Your email address will not be published. Required fields are marked *

LATEST NEWS

ತ್ರಿಬಲ್ ಮರ್ಡ*ರ್ ಪ್ರಕರಣ: ಏಳು ದಿನಗಳ ಬಳಿಕ ಮನೆಗಳಿಗೆ ತಲುಪಿದ ಮೃ*ತದೇಹ

Published

on

ಬೆಳ್ತಂಗಡಿ: ತುಮಕೂರಿನಲ್ಲಿ ನಡೆದ ತ್ರಿಬಲ್ ಮರ್ಡ*ರ್‌ ಪ್ರಕರಣಕ್ಕೆ ಸಂಬಂಧಿಸಿ ಮೃ*ತಪಟ್ಟ ಮೂವರ ಮೃ*ತ ದೇಹವನ್ನು ಶುಕ್ರವಾರ (ಮಾ.29) ಮುಂಜಾನೆ ಬೆಳ್ತಂಗಡಿಗೆ ತರಲಾಗಿದೆ.

ನಿಧಿ ಆಸೆಗೆ ಮಾ.22ರಂದು ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಹಾಕಿ ಬೆಂಕಿ ಹಚ್ಚಿ ಸುಡಲಾಗಿತ್ತು. ತನಿಖೆ ಬಳಿಕ ಮೃತದೇಹವನ್ನು ಡಿಎನ್‌ಎ ಪರೀಕ್ಷೆ ಮೂಲಕ ಪತ್ತೆ ಹಚ್ಚಲಾಗಿದೆ. ಘಟನೆ ನಡೆದ ಏಳು ದಿನಗಳ ಬಳಿಕ ಸಂಬಂಧಪಟ್ಟವರಿಗೆ ಮೃತದೇಹವನ್ನು ತಲುಪಿಸಲಾಗಿದೆ.

ಮೃತಪಟ್ಟ ಶಾಹುಲ್ ಹಮೀದ್ ಹಾಗೂ ಇಸಾಕ್ ಅವರ ಮೃತದೇಹ ಮೊಯ್ಯುದ್ದೀನ್ ಜುಮಾ ಮಸೀದಿ ಹಳೆಪೇಟೆಗೆ ಮತ್ತು ಸಿದ್ದೀಕ್ ಅವರ ಮೃತದೇಹ ಶಿರ್ಲಾಲ್ ಮಸೀದಿಗೆ ತಲುಪಿದ್ದು, ಅಲ್ಲಿ ಅಂತಿಮ ದರ್ಶನ ಹಾಗೂ ವಿಧಿ ವಿಧಾನ ನೆರವೇರಲಿದೆ.

ಪ್ರಕರಣದ ಹಿನ್ನೆಲೆ:

ತುಮಕೂರು ಜಿಲ್ಲೆಯಲ್ಲಿ  ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೂವರ ಶ*ವ ಪತ್ತೆಯಾಗಿತ್ತು. ಇದೊಂದು ವ್ಯವಸ್ಥಿತ ಕೊ*ಲೆ ಎಂಬುದು ತನಿಖೆಯಿಂದ ಹೊರಬಂದಿತ್ತು.  ಈಗಾಗಲೇ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಈ ಪ್ರಕರಣದ ತನಿಖೆ ನಡೆಸಿದ ಕೋರಾ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಮುಖ ಆರೋಪಿ ಪಾತರಾಜ ಹಾಗೂ ಗಂಗರಾಜು ಎಂಬವರನ್ನು ಬಂಧಿಸಲಾಗಿದೆ. ನಿಧಿಯ ಆಸೆಗೆ ತುಮಕೂರಿಗೆ ಹೋಗಿದ್ದ ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಹಾಕಿ ಬೆಂಕಿ ಹಾಕಿ ಸುಡಲಾಗಿತ್ತು.

ಮೃತರಿಗೆ ಪಾತರಾಜ ಎಂಬಾತ ಆರು ತಿಂಗಳ ಹಿಂದೆ ಪರಿಚಿತವಾಗಿದ್ದು, ನಿಧಿ ವಿಚಾರವಾಗಿ ಮೃತರಿಂದ 6 ಲಕ್ಷ ಹಣ ಪಡೆದುಕೊಂಡಿದ್ದ. ಆದರೆ ಆರು ತಿಂಗಳಾದ್ರೂ ಹಣ ವಾಪಾಸು ನೀಡದ ಕಾರಣ ಮೂವರೂ ಕೂಡಾ ಆತನ ಹಿಂದೆ ಬಿದ್ದಿದ್ದರು. ಹೀಗಾಗಿ ಈ ಮೂವರನ್ನು ಮುಗಿಸಲು ಪ್ಲಾನ್ ರೂಪಿಸಿದ್ದ ಪಾತರಾಜ ಸತ್ಯಮಂಗಲ ನಿವಾಸಿ ಗಂಗರಾಜು ಎಂಬಾತನ ಸಹಾಯ ಪಡೆದಿದ್ದ. ಆತನಿಗೆ 3 ಕೆ.ಜಿ ಚಿನ್ನಕೊಡುವುದಾಗಿ ನಂಬಿಸಿ ತನ್ನ ಕೆಲಸ ಮಾಡಿಸಿದ್ದ.

ಗಂಗರಾಜು ಕೂಡಾ ಚಿನ್ನದ ಆಸೆಗೆ ತನ್ನ ಸಹಚರರ ಮೂಲಕ ಇಸಾಕ್, ಹಮೀದ್ ಹಾಗೂ ಸಿದ್ದಿಕ್ ಅವರನ್ನು ಕೊಲೆ ಮಾಡಿಸಿದ್ದ. ತುಮಕೂರಿನ ಬೀರನಕಲ್ಲು ಬೆಟ್ಟದ ಬಳಿ ಬರಲು ಹೇಳಿ ಅಲ್ಲಿ ಮಚ್ಚು ಲಾಂಗ್‌ನಿಂದ ಹಲ್ಲೆ ಮಾಡಿ ಮೂವರನ್ನು ಕೊಲೆ ಮಾಡಲಾಗಿತ್ತು. ಬಳಿಕ ಅಲ್ಲಿಂದ ಅವರದೇ ಕಾರಿನಲ್ಲಿ ಮೃತದೇಹ ಇರಿಸಿ ಕುಚ್ಚಂಗಿ ಕೆರೆ ಬಳಿ ತಂದು ಕಾರಿಗೆ ಬೆಂಕಿ ಹಚ್ಚಿದ್ದಾರೆ. ಇನ್ನು ಪ್ರಕರಣ ಸಂಬಂಧ ತಲೆ ಮರೆಸಿಕೊಂಡಿರುವ ಪ ಮಧುಸೂದನ್ ನವೀನ್,  ಕೃಷ್ಣ,  ಗಣೇಶ್,  ಕಿರಣ್,  ಸೈಮನ್ ಗಾಗಿ ಪೊಲೀಸರು ಬಲೆ ಬೀಸಿದ್ದಾರೆ..

Continue Reading

FILM

ಯಶ್ ಅಭಿನಯದ “ಟಾಕ್ಸಿಕ್” ಗೆ ಹಿರೋಯಿನ್‌ ಫಿಕ್ಸ್..!!

Published

on

ಕೆಜಿಎಫ್ ಹಿಟ್ ಬಳಿಕ ಯಶ್ ಸ್ಯಾಂಡಲ್ ವುಡ್ ನಿಂದ ಬಾಲಿವುಡ್ ತನಕ ಫ್ಯಾನ್ ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ. ಯಶ್ ಜೊತೆ ತೆರೆ ಹಂಚಿಕೊಳ್ಳಲು ಹೀರೋಯಿನ್‌ಗಳು ತುದಿಗಾಲಿನಲ್ಲಿದ್ದಾರೆ. ಯಶ್ ಅಭಿನಯದ ಕೆಜಿಎಫ್-1, ಕೆಜಿಎಫ್-2 ಭಾರೀ ಮಟ್ಟದಲ್ಲಿ ಸದ್ದು ಮಾಡಿತ್ತು. ಘಟಾನುಘಟಿ ಆ್ಯಕ್ಟರ್ಸ್ ಗಳನ್ನು ಹೊಂದಿದ್ದ ಸಿನೆಮಾ ದಾಖಲೆಯನ್ನೇ ನಿರ್ಮಿಸಿತ್ತು.

ಕೆಜಿಎಫ್‌ನಲ್ಲಿ ಯಶ್ ಗೆ ಕರಾವಳಿ ಬೆಡಗಿ ಶ್ರೀನಿಧಿ ಶೆಟ್ಟಿ ಹಿರೋಯಿನ್‌ ಆಗಿದ್ದರು. ಬಳಿಕ ಅವರ ಸ್ಟಾರ್ ಬದಲಾಗಿದ್ದು, ಅನೇಕ ಸಿನೆಮಾ ಆಫರ್‌ಗಳು ಕೂಡಾ ಒಲಿದು ಬಂತು. ಇದೀಗ ಯಶ್ ರವರ ‘ಟಾಕ್ಸಿಕ್’ ಸಿನಿಮಾಕ್ಕೆ ಹೀರೋಯಿನ್ ಯಾರಾಗಲಿದ್ದಾರೆ..? ಎಂಬುದು ಚಂದನವನದಲ್ಲಿ ಭಾರೀ ಕುತೂಹಲ ಉಂಟುಮಾಡಿದೆ.

ಯಶ್ ಗೆ ಜೋಡಿಯಾಗಲಿದ್ದಾರ ಸೌತ್ ಸಿನೆಮಾ ನಟಿ..!!

ಟಾಕ್ಸಿಕ್ ಸಿನೆಮಾ ಸಿನಿ ಪ್ರಿಯರಲ್ಲಿ ಭಾರಿ ನಿರೀಕ್ಷೆಯನ್ನುಂಟು ಮಾಡಿದೆ.ಯಶ್ ಸಿನೆಮಾ ಅಂದ್ರೆ ಹಾಗೆನೆ.. ಇವರು ಅಭಿನಯಿಸಿರುವ ಎಲ್ಲಾ ಸಿನೆಮಾಗಳು ಸೂಪರ್ ಹಿಟ್. ಟಾಕ್ಸಿಕ್ ನಲ್ಲಿ ಬಾಲಿವುಡ್ ಹಿರೋಯಿನ್‌ ಗಳ ಹೆಸರು ಕೇಳಿಬರುತ್ತಿದೆ. ಹೌದು, ಟಾಕ್ಸಿಕ್ ಸಿನೆಮಾದಲ್ಲಿ ನಾನಿರುವುದಾಗಿ ಸಂದರ್ಶನವೊಂದರಲ್ಲಿ  ಕರೀನಾ ಕಪೂರ್ ರವರು ಖುದ್ದಾಗಿ ಮಾಹಿತಿ ನೀಡಿದ್ದಾರೆ. ಆದ್ರೆ ಹಿರೋಯಿನ್ ಆಗಿ ಅಲ್ಲ. ಸಿನೆಮಾದಲ್ಲಿ ಯಶ್ ರವರ ತಂಗಿಯಾಗಿ ನಟನೆ ಮಾಡಲಿದ್ದಾರೆ.

ಹಿರೋಯಿನ್ ಆಗಿ ಒಂದೆರಡು ಹೆಸರು ಚಂದನವನದಲ್ಲಿ ಓಡಾಡ್ತ ಇದೆ. ಸೌತ್ ಸಿನಿಮಾದ ನ್ಯಾಚುರಲ್ ಬ್ಯೂಟಿ ಕ್ವೀನ್, ಪಡ್ಡೆ ಹೈಕಳ ಮನಕದ್ದ ಮಲರ್ ಯಶ್ ಗೆ ಜೋಡಿಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡ್ತಾ ಇದೆ. ಹೌದು, ಟಾಕ್ಸಿಕ್‌ ಸಿನೆಮಾದ ರಾಣಿಯಾಗಲಿದ್ದಾರಂತೆ ಸಾಯಿ ಪಲ್ಲವಿ. ಯಶ್ 19ನೇ ಸಿನಿಮಾ ಟಾಕ್ಸಿಕ್​. ಮಲಯಾಳಂ ಡೈರೆಕ್ಟರ್ ಗೀತು ಮೋಹನ​ ದಾಸ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರವನ್ನು ಕೆವಿಎನ್ ಸಂಸ್ಥೆ ನಿರ್ಮಾಣ ಮಾಡುತ್ತಿದೆ. ಸದ್ಯ ಸಿನಿ ಅಂಗಳದಲ್ಲಿ ಬಿಸಿ ಬಿಸಿ ಚರ್ಚೆಯಲ್ಲಿರುವ ಸಿನಿಮಾವಾಗಿದೆ.

 

Continue Reading

BELTHANGADY

ರಸ್ತೆ ದಾಟುವ ವೇಳೆ ದ್ವಿಚಕ್ರ ವಾಹನ ಡಿ*ಕ್ಕಿ..!! ಪಾದಾಚಾರಿ ಮೃ*ತ್ಯು

Published

on

ಬೆಳ್ತಂಗಡಿ: ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ನಗರದ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ಮಾವ ಶೇಖರ್ ಬಂಗೇರ ಹೇರಾಜೆ(65 ವ) ಮೃ*ತಪಟ್ಟವರು.

ಗುರುವಾರ (ಮಾ.28) ರಾತ್ರಿ ಶೇಖರ್ ಬಂಗೇರ ರವರು ಹೋಟೆಲ್ ನಿಂದ ಪಾರ್ಸಲ್ ತೆಗೆದುಕೊಂಡು ರಸ್ತೆ ದಾಟುತ್ತಿದ್ದ ವೇಳೆ ದ್ವಿಚಕ್ರ ವಾಹನ ಡಿ*ಕ್ಕಿ ಹೊಡೆದಿದೆ. ಪರಿಣಾಮ ಗಂಭೀ*ರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಬಂಟ್ವಾಳದಲ್ಲಿ ಅವರು ಸಾವನ್ನಪ್ಪಿದ್ದಾರೆ.  ಸ್ಕೂಟರ್ ನಲ್ಲಿದ್ದ ಬೆಳ್ತಂಗಡಿಯ ಗೇರುಕಟ್ಟೆ ನಿವಾಸಿ ಅನುಷಾ(19ವ) ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಮೃತಪಟ್ಟ ಶೇಖರ್ ಬಂಗೇರ ಹೇರಾಜೆ ವಿಜಯ ಬ್ಯಾಂಕ್  ಮಾಜಿ ಉದ್ಯೋಗಿ, ಮುಗ್ಗ ಗುತ್ತು ಮನೆತನದ ಟ್ರಸ್ಟ್ ಕೋಶಾಧಿಕಾರಿ, ರಾಘವೇಂದ್ರ ಮಠದ ಕೋಶಾಧಿಕಾರಿ, ಗುರುನಾರಾಯಣ ಸಂಘದ ಮಾಜಿ ಉಪಾಧ್ಯಕ್ಷರಾಗಿದ್ದರು.

ಈ ಕುರಿತು ಬೆಳ್ತಂಗಡಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

 

Continue Reading

LATEST NEWS

Trending