Connect with us

    LATEST NEWS

    ಹಿರಿಯಡ್ಕ: ಉದ್ಯಮಿ ಪ್ರಸನ್ನ ಶೆಟ್ಟಿ ತೀರ್ಥಹಳ್ಳಿಯ ವಸತಿ ಗೃಹದಲ್ಲಿ ಆತ್ಮಹ*ತ್ಯೆ

    Published

    on

    ಹಿರಿಯಡ್ಕ: ಕೊಂಡಾಡಿ ಮೂಲದ ಪ್ರಸನ್ನ ಶೆಟ್ಟಿ (45) ತೀರ್ಥಹಳ್ಳಿಯ ವಸತಿ ಗೃಹದಲ್ಲಿ ಶುಕ್ರವಾರ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

    ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಅವರು 3 ದಿನಗಳ ಹಿಂದೆ ತೀರ್ಥಳ್ಳಿಗೆ ಆಗಮಿಸಿ ವಸತಿಗೃಹದಲ್ಲಿ ವಾಸ್ತವಾವಿದ್ದರು ಎಂದು ಹೇಳಲಾಗಿದ್ದು ನಿನ್ನೆ ಕೊಠಡಿಯಿಂದ ಯಾವುದೇ ಶಬ್ದ ಕೇಳಿಸದ ಕಾರಣ ಅನುಮಾನ ಗೊಂಡ ಸಿಬ್ಬಂದಿ ಬಾಗಿಲು ತೆರೆದು ನೋಡಿದಾಗ ಆತ್ಮಹ*ತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.

    ಫ್ಯಾನ್‌ಗೆ ಸೀರೆಯಿಂದ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಪ್ರಸನ್ನ ಬೆಂಗಳೂರಿನಿಂದ ಮಡದಿಯ ಸೀರೆಯೊಂದನ್ನು ತಂದಿದ್ದು ಹೊರಡುವ ಮೊದಲೇ ಆತ್ಮಹ*ತ್ಯೆಯ ಬಗ್ಗೆ ಯೋಚಿಸಿದ್ದರು ಎಂದು ತಿಳಿದು ಬಂದಿದೆ. ಅಂತ್ಯ*ಕ್ರಿಯೆಯನ್ನು ಇಂದು ಅವರ ಹಿರಿಯರ ಮನೆಯಾದ ಕೊಂಡಾಡಿಯಲ್ಲಿ ನೆರವೇರಿಸಲಾಗಿದೆ. ಮೃ*ತರು ಪತ್ನಿ, ಎರಡು ವರ್ಷದ ಪುತ್ರಿ, ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.

    ಸುಮಾರು ಆರು ಪುಟಗಳ ಡೆತ್ ನೋಟ್ ಬರೆದಿಟ್ಟು ಸಾ*ವಿನ ಕಾರಣ ವಿವರಿಸಿದ್ದಾರೆ. ಕೆಲವೊಂದು ಹೆಸರುಗಳನ್ನು ಬರೆದಿದ್ದು ಮತ್ತೆ ಕೆಲವು ತನ್ನ ವ್ಯವಹಾರದ ವಿಷಯಗಳನ್ನು ಬರೆದಿಟ್ಟಿದ್ದರು ಎಂದು ಪೊಲೀಸ್ ಮೂಲದಿಂದ ಮಾಹಿತಿ ಲಭ್ಯವಾಗಿದೆ. ಪ್ರಸನ್ನ ಶೆಟ್ಟಿ, ಬೆಂಗಳೂರಿನಲ್ಲಿ ರೆಸ್ಟೋರೆಂಟ್, ಬೇಕರಿ ಮತ್ತು ಹಣದ ವ್ಯವಹಾರವನ್ನು ನಡೆಸುತ್ತಿದ್ದರು.

    LATEST NEWS

    ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು ಪ*ಲ್ಟಿ; ಓರ್ವ ಸಾ*ವು, ಹಲವರ ಸ್ಥಿತಿ ಗಂಭೀ*ರ

    Published

    on

    ಶಿವಮೊಗ್ಗ: ಶಿವಮೊಗ್ಗದ ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರೊಂದು ಪ*ಲ್ಟಿಯಾಗಿರುವ ಘಟನೆ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ಬೆಂಗಳೂರು ಮೂಲದ ಯುವಕ ಮೃ*ತಪಟ್ಟಿದ್ದಾನೆ. ನೆಲಮಂಗಲದ ಚಂದನ್‌ (26) ಮೃ*ತ ಯುವಕ.

    ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಕೆರೆಕೋಡಿ ಬಳಿ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಭತ್ತದ ಗದ್ದೆಗೆ ಪ*ಲ್ಟಿಯಾಗಿದೆ.  ಕೊಡುಗು ಮೂಲದ ನಂದನ್‌, ಕೋಲಾರದ ಕೋದಂಡ, ಹಾಸನದ ಭರತ್‌, ಮಂಡ್ಯ ಜಿಲ್ಲೆಯ ಯೋಗೇಶ್‌ ಎಂಬವರಿಗೆ ಗಂ*ಭೀರ ಗಾ*ಯವಾಗಿದೆ.

    ಇದನ್ನೂ ಓದಿ : ನಟಿ ಓವಿಯಾ ಖಾಸಗಿ ವಿಡಿಯೋ ಲೀಕ್​? ನಿಜಾನಾ ಎಂದು ಕೇಳಿದ್ದಕ್ಕೆ ಎಂಜಾಯ್​ ಮಾಡಿ ಎಂದ ಕಿರಾತಕ ಬೆಡಗಿ

    ಯುವಕರ ತಂಡ ಬೆಂಗಳೂರಿನಿಂದ ಸಿಗಂದೂರಿಗೆ ಪ್ರವಾಸಕ್ಕೆ ಬಂದಿತ್ತು. ಸ್ಥಳಕ್ಕೆ ಕುಂಸಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃ*ತದೇಹವನ್ನು ಮ*ರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

    Continue Reading

    LATEST NEWS

    ಪೊಳಲಿ ಸೇತುವೆ ಬಂದ್: ಮಂಗಳವಾರ ಗ್ರಾಮಸ್ಥರಿಂದ ಪ್ರತಿಭಟನೆ

    Published

    on

    ಮಂಗಳೂರು: ಘನ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿದ್ದ ಸೇತುವೆಯ ಬಗ್ಗೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

    ಪೊಳಲಿ – ಅಡ್ಡೂರಿನ ಪಲ್ಗುಣಿ ನದಿಯ ಸೇತುವೆ ಬಿರುಕು ಬಿಟ್ಟ ಕಾರಣಕ್ಕೆ ಘನ ವಾಹನ ಸಂಚಾರ ಸ್ಥಗಿತ ಮಾಡಲಾಗಿತ್ತು. ಸಂಬಂಧಪಟ್ಟ ಇಲಾಖೆ ಸೇತುವೆಯ ಸಾಮರ್ಥ್ಯವನ್ನು ಯಂತ್ರದ ಮೂಲಕ ಪರಿಶೀಲನೆ ನಡೆಸಿ ಎರಡು ತಿಂಗಳಾದ್ರೂ ಏನಾಗಿದೆ ಎಂಬ ಬಗ್ಗೆ ಜನರಿಗೆ ಮಾಹಿತಿಯೇ ಇಲ್ಲ. ಇದರಿಂದ ತೊಂದರೆಗೆ ಒಳಗಾಗಿರುವ ಅಮ್ಮುಂಜೆ , ಕರಿಯಂಗಳ, ಬಡಗಬೆಳ್ಳೂರು, ತೆಂಕಬೆಳ್ಳೂರು ಮತ್ತು ಸುತ್ತಮುತ್ತಲಿನ ಜನ ಸಭೆ ನಡೆಸಿದ್ದಾರೆ. ಜನರ ಸಮಸ್ಯೆಗೆ ಸ್ಪಂದನೆಯೇ ನೀಡದ ಜನಪ್ರತಿಧಿಗಳು, ಹಾಗೂ ಅಧಿಕಾರಿಗಳ ವಿರುದ್ಧ ಅಕ್ಟೋಬರ್ 15 ರಂದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

    ಪೊಳಲಿಯ ರಾಮಕೃಷ್ಣ ತಪೋವನ ರಾಜರಾಜೇಶ್ವರಿ ಸಭಾಂಗಣದಲ್ಲಿ ಸಭೆ ನಡೆಸಲಾಗಿದ್ದು, ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ರಾಮಕೃಷ್ಣ ತಪೋವನದ ಸ್ವಾಮಿ ವಿವೇಕಾಚೈತನ್ಯನಂದ ಸ್ವಾಮೀಜಿ , ಪೊಳಲಿ ಅಡ್ಡೂರು ಫಲ್ಗುಣಿ ಹೋರಾಟ ಸಮಿತಿಯ ಅಧ್ಯಕ್ಷ ವೆಂಕಟೇಶ್ ನಾವುಡ, ಚಂದ್ರಹಾಸ್ ಪಲ್ಲಿಪಾಡಿ, ಜಯರಾಮಕೃಷ್ಣ ಪೊಳಲಿ, ನೂಯಿ ಬಾಲಕೃಷ್ಣ ರಾವ್, ಅಬೂಬಕ್ಕರ್ ಅಮ್ಮುಂಜೆ ಉಪಸ್ಥಿತರಿದ್ದು ಹೋರಾಟದ ಬಗ್ಗೆ ಜನಾಭಿಪ್ರಾಯ ಪಡೆದುಕೊಂಡಿದ್ದಾರೆ.

    Continue Reading

    LATEST NEWS

    ಮದರಸ ಹಾಸ್ಟೇಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ

    Published

    on

    ಬ್ರಹ್ಮಾವರ: ಹೇರಾಡಿ ಖಾಸಗಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಯೊಬ್ಬ ಮದರಸ ಹಾಸ್ಟೇಲ್‌ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
    ಮೃತ ವಿದ್ಯಾರ್ಥಿಯು ಮೊಹಮ್ಮದ್ ಜಹೀದ (12) ಎಂದು ಗುರುತಿಸಲಾಗಿದೆ.


    ಕಳೆದ 4 ತಿಂಗಳಿನಿಂದ ಬ್ರಹ್ಮಾವರ ತಾಲೂಕಿನ ರಂಗನಕೆರೆಯ ಮಾಲಿಕ್ ದಿನಾರ್ ಮದರಸ ಹಾಸ್ಟೇಲ್‌ನಲ್ಲಿ ಉಳಿದು ವಿದ್ಯಾಭ್ಯಾಸ ಮಾಡುತ್ತಿದ್ದು, ರಜೆಯನ್ನು ಮುಗಿಸಿ ಅ.11 ರಂದು ಹಾಸ್ಟೇಲ್‌ಗೆ ಮರಳಿದ್ದಾನೆ.

    ರಾತ್ರಿ 9 ಗಂಟೆಗೆ ಊಟಕ್ಕೆ ಬಾರದಿದ್ದನ್ನು ಗಮನಿಸಿ ಹಾಡುಕಿದಾಗ ಹಾಸ್ಟೇಲ್‌ನ ಬಾತ್‌ರೂಮ್‌ನಲ್ಲಿ ಸರಳಿಗೆ ಬೈರಾಸ್‌ನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವುದು ತಿಳಿದು ಬಂದಿದೆ.

    ಕೂಡಲೇ ಆತನನ್ನು ಚಿಕಿತ್ಸೆಗಾಗಿ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು, ವೈದ್ಯರು ರಾತ್ರಿ 10.40 ರ ಸುಮಾರಿಗೆ ಆತನನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತನ ಮರಣದಲ್ಲಿ ಸಂಶಯವಿರುವುದಾಗಿ ಬಾಲಕನ ತಾಯಿ ರಿಹಾನ ಬೇಗಂ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬಾಲಕನಿಗೆ ಹಾಸ್ಟೇಲ್‌ಗೆ ಹೋಗಲು ಮನಸ್ಸಿಲ್ಲವೆಂದು, ಹಾಸ್ಟೇಲ್‌ನ ಇತರ ವಿದ್ಯಾರ್ಥಿಗಳೊಂದಿಗೆ ಸಣ್ನ ಮಟ್ಟಿನ ಜಗಳ ಆಗಿತ್ತು ಎಂದು ತಿಳಿದು ಬಂದಿದದೆ.

    Continue Reading

    LATEST NEWS

    Trending