LATEST NEWS
ಉಡುಪಿ: ಹೊಟೇಲ್ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ….
ಉಡುಪಿ: ಹೊಟೇಲ್ವೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಸಕಾಲಿಕ ಕಾರ್ಯಾಚರಣೆಯಿಂದ ಸಂಭಾವ್ಯ ಅವಘಡವೊಂದು ತಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್ ಟೌನ್ ಹೋಟೆಲ್ ನಲ್ಲಿ ಇಂದು ಬೆಳಗ್ಗೆ ಸುಮಾರು 7 ಗಂಟೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿತ್ತು. ಜೊತೆಗೆ ಕೆಲವು ಸುತ್ತುಗಳಿಗೆ ಹಾನಿ ಉಂಟಾಗಿತ್ತು.
ಗ್ಯಾಸ್ ಸೋರಿಕೆಯಾಗಿ ಹೊಟೇಲ್ ಸಿಬ್ಬಂದಿಗಳು ಹಾಗು ಗ್ರಾಹಕರು ಕ್ಷಣ ಕಾಲ ಗಾಬರಿಗೊಂಡ ಘಟನೆ ಕೂಡ ನಡೆಯಿತು.ತಕ್ಷಣ ಈ ಬಗ್ಗೆ ಅಗ್ನಿಶಾಮದಳಕ್ಕೆ ಮಾಹಿತಿಯನ್ನು ನೀಡಲಾಯಿತು.
ಈ ವೇಳೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿ, ದೊಡ್ಡ ದುರಂತವೊಂದನ್ನು ತಪ್ಪಿಸಿದರು.
DAKSHINA KANNADA
ಮಾರ್ಚ್ 25 ರ ವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುನ್ಸೂಚನೆ!
ಸುಡು ಬಿಸಿಲಿನಿಂದ ಕರ್ನಾಟಕವೇ ಸುಡುತ್ತಿದೆ. ಅದರಲ್ಲೂ ಕರಾವಳಿ ಭಾಗದ ಬಗ್ಗೆಯಂತೂ ಹೇಳತೀರದು. ಈ ನಡುವೆ ಕೆಲವೆಡೆ ಈಗಾಗಲೇ ಮಳೆ ತಂಪೆರೆದಿದೆ. ಮಾರ್ಚ್ 25ರ ವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆ ಆಗಲಿದೆ ಎಂದು ಭಾರತಿಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕಚೇರಿ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಪ್ರಕಾರ, ಇಂದಿನಿಂದ ಒಳನಾಡು, ಕರಾವಳಿ ಭಾಗದ ಜಿಲ್ಲೆಗಳಲ್ಲಿ ಪ್ರತ್ಯೇಕ ದಿನಗಳಲ್ಲಿ ಮಳೆ ಬರಲಿದೆ ಎಂದು ತಿಳಿಸಲಾಗಿದೆ. ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆ ಸಾಧ್ಯತೆ ಇದೆ.
ಹವಾಮಾನದಲ್ಲಿ ತೀವ್ರ ತರಹದ ಬದಲಾವಣೆಗಳು ಆಗಿವೆ. ಸಮುದ್ರ ಮೇಲ್ಮೈ ಸುಳಿಗಾಳಿಯ ತೀವ್ರತೆ ಹೆಚ್ಚಾದ ಪರಿಣಾಮ ಮಳೆಯಾಗುತ್ತಿದೆ. ಇಂದಿನಿಂದ (ಮಾರ್ಚ್ 19-21) ಮೂರು ದಿನ ಒಳನಾಡು ಜಿಲ್ಲೆಗಳಾದ ಬೀದರ್, ರಾಯಚೂರು ಮತ್ತು ಕೊಪ್ಪಳದ ಕೆಲವೆಡೆ ಮಳೆ ಸುರಿಯಲಿದೆ.
ಎಲ್ಲೆಲ್ಲಿ ಮಳೆ?
ಮಾರ್ಚ್ 22ರಂದು ಇಲ್ಲೆಲ್ಲಾ ವ್ಯಾಪಕ ಮಳೆ ಮಾರ್ಚ್ 22ರಂದು ಕೊಪ್ಪಳ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಮತ್ತು ಚಿತ್ರದುರ್ಗದಲ್ಲಿ ಮಳೆ ಆರ್ಭಟಿಸಲಿದೆ.
ಮಾರ್ಚ್ 23ರಿಂದ ಮಾರ್ಚ್ 25ರವರೆಗೆ ಮೂರು ದಿನ ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಜಿಲ್ಲೆಗಳು ಒಳಗೊಂಡಂತೆ ಒಂದು ದಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ವಿವಿಧೆಡೆ ವ್ಯಾಪಕ ಮಳೆ ಆಗುವ ನಿರೀಕ್ಷೆಗಳು ಇವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ತಾಪಮಾನ ಇಳಿಕೆ?
ಕರಾವಳಿ ಸೇರಿದಂತೆ ಒಳನಾಡು ಭಾಗದಲ್ಲಿ ಉಂಟಾಗಿದ್ದ ಶಾಖ ಅಲೆಯ ವಾತಾವರಣ ತುಸು ಇಳಿಕೆ ಆಗಲಿದೆ. ಆಗಾಗ ಬಿಸಿಲು ಕಂಡರೂ ಸಹಿತ ಅಷ್ಟಾಗಿ ಗರಿಷ್ಠ ತಾಪಮಾನ ಇರಲಾರದು ಎನ್ನಲಾಗಿದೆ.
ಮಳೆಯ ಆಗಮನದಿಂದಾಗಿ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಇಳಿಕೆ ಆಗಲಿದೆ. ಒಂದೆರಡು ದಿನಗಳಿಂದ ಬೀದರ್, ಕಲಬುರಗಿ, ಕೊಡಗು ಜಿಲ್ಲೆಗಳ ಹಲವೆಡೆ ಜೋರು ಮಳೆ ದಾಖಲಾಗಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನ, ಜಾನುವಾರುಗಳಿಗೆ ಈ ತಾತ್ಕಾಲಿಕ ಮಳೆಯಿಂದ ಕೊಂಚ ಸುಧಾರಿಸಿಕೊಳ್ಳುವಂತಾಗಿದೆ.
FILM
ತಮಿಳು ಚಿತ್ರರಂಗದತ್ತ ರೂಪೇಶ್ ಶೆಟ್ಟಿ…ಸಂಭ್ರಮ ಹಂಚಿಕೊಂಡ ನಟ!
ಕರಾವಳಿಯ ಪ್ರತಿಭೆ ರೂಪೇಶ್ ಶೆಟ್ಟಿ ತುಳು ಚಿತ್ರರಂಗ, ಕನ್ನಡ ಚಿತ್ರರಂಗದಲ್ಲಿ ಮಿನುಗುತ್ತಿದ್ದಾರೆ. ಅಲ್ಲದೇ ಬಿಗ್ ಬಾಸ್ ನಲ್ಲೂ ಹವಾ ಸೃಷ್ಟಿಸಿ ವಿಜೇತರಾಗಿ ಹೊರಹೊಮ್ಮಿದ್ದಾರೆ. ಇದೀಗ ತಮಿಳು ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.
ಇಂದು ತುಂಬಾ ಖುಷಿಯ ದಿವಸ ನಿಮ್ಮೆಲ್ಲರ ಆಶೀರ್ವಾದ ಹಾಗೂ ಪ್ರೋತ್ಸಾಹದಿಂದ ಇಂದು ಒಂದು ಅದ್ಭುತ ತಂಡದ ಜತೆಗೆ “ಸನ್ನಿಧಾನಮ್ P. O” ಎನ್ನುವ ನನ್ನ ಮೊದಲ ತಮಿಳು ಚಿತ್ರ ಮಾಡುವ ಅವಕಾಶ ದೊರಕಿದೆ ಎಂದು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಫೋಟೋಗಳೊಂದಿಗೆ ಹಂಚಿಕೊಂಡಿದ್ದಾರೆ.
ತಮಿಳಿನ ಸೂಪರ್ ಸ್ಟಾರ್ ಹಾಸ್ಯ ನಟರಾದ ಯೋಗಿ ಬಾಬು ಅವರ ಜತೆ ನಟಿಸುವ ಅವಕಾಶ ನನ್ನ ಪಾಲಿಗೆ ದೊಡ್ಡ ಹೆಮ್ಮೆ ನಿಮ್ಮ ಆಶೀರ್ವಾದ ಸದಾ ಇರಲಿ ಎಂದು ಬರೆದುಕೊಂಡಿದ್ದಾರೆ.
ಅಂದಹಾಗೆ ರೋಜಾ ಸಿನಿಮಾ ಖ್ಯಾತಿಯ ನಟಿ ಮಧು ಈ ಸಿನಿಮಾಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಸಾರಥಿ ನಿರ್ದೇಶನ ಮಾಡುತ್ತಿದ್ದಾರೆ.
ರೂಪೇಶ್ ಶೆಟ್ಟಿ – ಗೀತಾ ಭಾರತಿ ಭಟ್ ನಟಿಸಿರುವ ಮಂಕು ಭಾಯ್ ಫಾಕ್ಸಿ ರಾಣಿ ಸಿನಿಮಾ ಒಒಟಿಟಿಗೆ ಬರಲು ಸಿದ್ಧವಾಗಿದೆ.
DAKSHINA KANNADA
ದೈವದ ಕಾರ್ಯಕ್ಕೆ ಮುಸ್ಲೀಮರಿಗೆ ಆಹ್ವಾನ…!
ಮಂಗಳೂರು : ಕರಾವಳಿಯಲ್ಲಿ ಅದೆಷ್ಟೇ ಹಿಂದೂ ಮುಸ್ಲಿಂ ಅನ್ನೋ ಸಂಘರ್ಷಗಳು ನಡೆದರೂ ಬಹುತೇಕ ಕಡೆಗಳಲ್ಲಿ ಎರಡೂ ಧರ್ಮದವರು ಸಾಮರಸ್ಯದಿಂದಲೇ ಇದ್ದಾರೆ. ಇಂತಹ ಒಂದು ಸಾಮರಸ್ಯಕ್ಕೆ ಸಾಕ್ಷಿಯಾಗಿ ಮಂಗಳೂರು ತಾಲೂಕಿನ ತೆಂಕ ಎಡಪದವು ಗ್ರಾಮ ಸುದ್ದಿಯಾಗಿದೆ. ಇಲ್ಲಿ ಮಾರ್ಚ್ 24 ರಿಂದ 27 ರ ವರೆಗೆ ನಡೆಯುವ ದೈವಗಳ ಕಾರ್ಯಕ್ರಮಕ್ಕೆ ಪದರಂಗಿ ಮಸೀದಿಯವರಿಗೆ ಆಹ್ವಾನ ನೀಡಿದ್ದಾರೆ.
ತೆಂಕ ಎಡಪದವಿನ ಕೊಂದೋಡಿ ಗಡುಸ್ಥಳ ವ್ಯಾಘ್ರ ಚಾಮುಂಡಿ ಮೈಸಂದಾಯ ದೈವಗಳ ಗರ್ಭಕುಂಡ ಹಾಗೂ ಮಹಮ್ಮಾಯಿ ಅಮ್ಮನವರ ಶಿಲಾಮಯ ಕಟ್ಟಯ ಪುನರ್ ಪ್ರತಿಷ್ಠೆ ಹಾಗೂ ನೇಮೋತ್ಸವಕ್ಕೆ ಈ ಆಹ್ವಾನ ನೀಡಲಾಗಿದೆ. ರಂಝಾನ್ ಪ್ರಯುಕ್ತ ನಮಾಜ್ ನಡೆಸುತ್ತಿದ್ದ ಮುಸ್ಲಿಂ ಬಾಂದವರ ನಮಾಜ್ ಮುಗಿಯುವರೆಗೂ ಕಾದೂ ಆಹ್ವನಾ ಪತ್ರ ನೀಡಿ ಸಾಮರಸ್ಯ ಮೆರೆಯಲಾಗಿದೆ. ಇವತ್ತಿನ ದಿನಗಳಲ್ಲಿ ಹಿಂದೂ-ಮುಸ್ಲಿಮರ ನಡುವೆ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ಕೋಮು ಸೌಹಾರ್ದತೆ ಹದಗೆಡುತ್ತಿರುವ ದಿನಗಳಲ್ಲಿ ಇವರ ಸಾಮರಸ್ಯದ ನಡೆ ಇತರರಿಗೆ ಮಾದರಿಯಾಗಿದೆ. ಸಮಿತಿಯ ಪದಾಧಿಕಾರಿಗಳಾದ ಸುದರ್ಶನ್ ಪ್ರಭು.ಕೆ, ಇವರ ಮುಂದಾಳತ್ವದಲ್ಲಿ ಪದರಂಗಿಯ ಮುಸ್ಲಿಂ ಬಾಂದವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಗ್ರಾಮದ ಮುಖಂಡರು ಈ ವೇಳೆ ಉಪಸ್ಥಿತರಿದ್ದರು.
- FILM7 days ago
ಡೀಪ್ಫೇಕ್ ಮೂಲಕ ಮತ್ತೊಮ್ಮೆ ಸುದ್ದಿಯಾದ ರಶ್ಮಿಕಾ ಮಂದಣ್ಣ…!
- LATEST NEWS3 days ago
ಡಿವಿಜಿ ಸಾಲು ಹಂಚಿಕೊಂಡು ವಿರೋಧಿಗಳಿಗೆ ಟಾಂಗ್ ಕೊಟ್ಟ ಪ್ರತಾಪ್ ಸಿಂಹ!
- DAKSHINA KANNADA6 days ago
Vitla ; 1400 ಕೋಟಿ ಅನುದಾನ ತಂದಿರುವ ಬಗ್ಗೆ ನಾನು ಲೆಕ್ಕ ಕೊಡ್ತೇನೆ ಬನ್ನಿ : ಪುತ್ತೂರು ಶಾಸಕ ರೈ ಸವಾಲು
- LATEST NEWS6 days ago
ಮಗನಿಗೆ ಟಿಕೆಟ್ ಸಿಕ್ಕಿ ಗೆಲ್ಲಲಿ ಎಂದು ಕೊಲ್ಲೂರಿನಲ್ಲಿ ಪ್ರಾರ್ಥನೆ : ಮಾಜಿ ಸಚಿವ ಈಶ್ವರಪ್ಪ