DAKSHINA KANNADA
ಉಡುಪಿ: ನಡು ರಸ್ತೆಯಲ್ಲೇ ಗ್ಯಾಂಗ್ ವಾರ್..! ಹೊಡೆದಾಟದ ವೀಡಿಯೋ ವೈರಲ್
ಉಡುಪಿ: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು ಜಗಳ ಮಾಡಿಕೊಂಡು ಕಾರಿನಲ್ಲಿಯೇ ಹೊಡೆದಾಟ ಮಾಡಿಕೊಂಡಿದ್ದಾರೆ. ಮೇ 18ರಂದು ಉಡುಪಿ ಕುಂಜಿಬೆಟ್ಟುವಿನಲ್ಲಿ ನಡೆದಿರುವ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉಡುಪಿ ಶಾರದಾ ಕಲ್ಯಾಣ ಮಂಟಪಕ್ಕೆ ತೆರಳುವ ರಸ್ತೆಯ ಬಳಿ ನಡೆದ ಘಟನೆ ನಡೆದಿದ್ದು, ಒಂದು ಕಾರಿಗೆ ಇನ್ನೊಂದು ಕಾರು ಮೂಲಕ ಡಿಕ್ಕಿ ಹೊಡೆದಿದ್ದು, ತಂಡದ ಓರ್ವ ಸದಸ್ಯನಿಗೂ ಡಿಕ್ಕಿ ಹೊಡೆಯಲಾಗಿದೆ. ಅಲ್ಲದೆ ಕೈಗೆ ಸಿಕ್ಕ ವಸ್ತುಗಳಿಂದ ಹಲ್ಲೆಗೆ ಮುಂದಾಗಿದ್ದಾರೆ.
Read More..; ನಾಲ್ವರನ್ನು ಬಲಿ ಪಡೆದ ರಸ್ತೆ ಅಪಘಾತ..! ಧರ್ಮಸ್ಥಳದಿಂದ ವಾಪಾಸಾಗುವಾಗ ಘಟನೆ..!
ಈ ದೃಶ್ಯವನ್ನು ಸಮೀಪದ ಕಟ್ಟಡ ಮೇಲಿಂದ ಸ್ಥಳೀಯರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಇಷ್ಟೊಂದು ಕ್ರೂರವಾಗಿ ನಗರದಲ್ಲಿ ಗ್ಯಾಂಗ್ ವಾರ್ ನಡೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗರುಡ ಗ್ಯಾಂಗ್ನ ಆಶಿಕ್ ಮತ್ತು ರಾಕಿಬ್ ಹೆಸರಿನ ಯುವಕರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಆಶಿಕ್ ಕಾಪು ಮೂಲದವರು ಮತ್ತು ರಾಕಿಬ್ ಗುಜ್ಜರಬೆಟ್ಟದವನೆಂದು ಪೊಲೀಸರು ಹೇಳಿದ್ದಾರೆ. ಇದೇ ವಿಡಿಯೋ ಆಧರಿಸಿ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸ್ ಎರಡು ಗುಂಪುಗಳ ನಡುವೆ ನಡೆದ ಹೊಡೆದಾಟದಲ್ಲಿ ಬಳಕೆಯಾಗಿದ್ದ 2 ಕಾರು, ಒಂದು ಬೈಕ್, ತಲ್ವಾರ್ ಹಾಗೂ ಡ್ಯಾಗರ್ಗಳನ್ನು ವಶಪಡಿಸಿಕೊಂಡಿದ್ದಾರೆ.. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ರಾಜ್ಯದಲ್ಲಿ ಐದು ದಿನಗಳ ಕಾಲ ಭರ್ಜರಿ ಮಳೆಯ ಎಚ್ಚರಿಕೆ
ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಭಾಗಗಳಲ್ಲೂ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ ಐದು ದಿನಗಳ ಕಾಲ ನಿರಂತರ ಮಳೆಯಾಗಲಿದ್ದು, ಎಚ್ಚರದಿಂದ ಇರುವಂತೆ ಸೂಚಿಸಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಒಳನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಆರೆಂಜ್ ಅಲರ್ಟ್?
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಮಂಡ್ಯ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಬೆಂಗಳೂರು ಗ್ರಾಮಾಂತರ
ಎಲ್ಲೆಲ್ಲಿ ಯೆಲ್ಲೋ ಅಲರ್ಟ್?
ಬಾಗಲಕೋಟೆ, ಗದಗ, ಬೀದರ್, ರಾಯಚೂರು, ಬಳ್ಳಾರಿ, ಯಾದಗಿರಿ
DAKSHINA KANNADA
ಕುಂಬಳೆ: ಪತ್ನಿಯ ಸೀಮಂತಕ್ಕಾಗಿ ವಿದೇಶದಿಂದ ಊರಿಗೆ ಬಂದಿದ್ದ ಯುವಕ ಬೈಕ್ ಅಪಘಾತದಲ್ಲಿ ಮೃತ್ಯು
ಕಾಸರಗೋಡು: ಎರಡು ದಿನಗಳ ಹಿಂದೆಯಷ್ಟೇ ಪತ್ನಿಯ ಸೀಮಂತ ಕಾರ್ಯಕ್ರಮಕ್ಕಾಗಿ ಕೊಲ್ಲಿಯಿಂದ ಊರಿಗೆ ಬಂದಿದ್ದ ಯುವಕ ಬೈಕ್ ಅಪಘಾತದಲ್ಲಿ ಸಾವಿಗೀಡಾದ ಘಟನೆ ನಡೆದಿದೆ. ಬಂಬ್ರಾಣ ಉಜಾರು ನಿವಾಸಿ ದಿ|ಅಮ್ಮು ಶೆಟ್ಟಿ ಅವರ ಪುತ್ರ ಅಜಿತ್ ಶೆಟ್ಟಿ(32) ಸಾವಿಗೀಡಾದವರು.
ಜೂ.24 ರಂದು ರಾತ್ರಿ 9.30ಕ್ಕೆ ಆರಿಕ್ಕಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಈ ಸಾವು ಸಂಭವಿಸಿದೆ.
ಅವರು ಕತಾರ್ನಲ್ಲಿ ಉದ್ಯೋಗದಲ್ಲಿದ್ದರು. ಜೂ. 22ರಂದು ಊರಿಗೆ ಬಂದಿದ್ದರು. ಜೂ. 23ರಂದು ಪತ್ನಿಯ ಸೀಮಂತ ಕಾರ್ಯಕ್ರಮ ನಡೆದಿತ್ತು. ಜೂ. 24ರಂದು ರಾತ್ರಿ ಕುಂಬಳೆ ಪೇಟೆಗೆ ಬಂದ ಅಜಿತ್ ಶೆಟ್ಟಿ ಆಹಾರ ವಸ್ತುಗಳನ್ನು ಖರೀದಿಸಿ ಬುಲೆಟ್ನಲ್ಲಿ ಮನೆಗೆ ಮರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ ಆರಿಕ್ಕಾಡಿ ಶ್ರೀ ಹನುಮಾನ್ ದೇವಸ್ಥಾನ ಸಮೀಪ ಬೈಕ್ ರಸ್ತೆಯ ಡಿವೈಡರ್ಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರು ಹಾಗು ಇತರ ಪ್ರಯಾಣಿಕರು ಕುಂಬಳೆಯ ಜಿಲ್ಲಾ ಸರಕಾರಿ ಆಸ್ಪತ್ರೆಗೆ ತಲುಪಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದಾಗ ದಾರಿ ಮಧ್ಯೆ ಸಾವನ್ನಪ್ಪಿದರು. ಮೃತರು ತಾಯಿ, ಪತ್ನಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.
DAKSHINA KANNADA
ಮಿಥುನ್ ಕೊಡೆತ್ತೂರ್ಗೆ ‘ಬ್ರ್ಯಾಂಡ್ ಮಂಗಳೂರು” ಪ್ರಶಸ್ತಿ
ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ್ಯಾಂಡ್ ಮಂಗಳೂರು” ಪ್ರಶಸ್ತಿಗೆ ಹೊಸದಿಗಂತ ದಿನಪತ್ರಿಕೆಯ ಮೂಲ್ಕಿ ವರದಿಗಾರ ಮಿಥುನ್ ಕೊಡೆತ್ತೂರ್ ಆಯ್ಕೆಯಾಗಿದ್ದಾರೆ.
ಹೊಸದಿಗಂತ ಪತ್ರಿಕೆಯಲ್ಲಿ 2023 ನವೆಂಬರ್ 7ರಂದು ಪ್ರಕಟವಾದ ಮಿಥುನ್ ಅವರ “ಬಾರಾಡಿಯಲ್ಲಿ ಬೆಳೆದಿದೆ 840 ತಳಿ ಭತ್ತʼ’ ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು 5,001 ರು., ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ಒಳಗೊಂಡಿದೆ. ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಮಂಗಳೂರು ಸುದ್ದಿವಿಭಾಗ ಮುಖ್ಯಸ್ಥ ಹರ್ಷ ಮತ್ತು ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ನೇತೃತ್ವದ ಸಮಿತಿಯು ಈ ವರದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸದಿಗಂತ ದೈನಿಕದಲ್ಲಿ ಬಿಡಿ ಸುದ್ದಿ ಸಂಗ್ರಹಕಾರರಾಗಿ, ಹಾಯ್ ಬೆಂಗಳೂರ್ ಪತ್ರಿಕೆಯಲ್ಲಿ ವರದಿಗಾರರಾಗಿ, ಅನಂತ ಪ್ರಕಾಶ ಮಾಸಪತ್ರಿಕೆಯಲ್ಲಿ ಉಪಸಂಪಾದಕರಾಗಿ ಕಾರ್ಯನಿರ್ವಹಿಸುವ ಮಿಥುನ್, 2022ರ ಪಗೋ ಪ್ರಶಸ್ತಿ ಪುರಸ್ಕೃತರು, ಕನ್ನಡ ಸಾಹಿತ್ಯ ಪರಿಷತ್ತು ಮೂಲ್ಕಿ ತಾಲೂಕು ಘಟಕದ ಅಧ್ಯಕ್ಷರು.
ಪ್ರಶಸ್ತಿ ಪ್ರದಾನ ಸಮಾರಂಭ: ಜೂ.27ರಂದು ಬೆಳಗ್ಗೆ 11 ಗಂಟೆಗೆ ಪತ್ರಿಕಾಭವನದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಪ್ರಶಸ್ತಿ ಪ್ರದಾನ ಮಾಡುವರು. ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಕ್ರೆಡೈ ಅಧ್ಯಕ್ಷ ವಿನೋದ್ ಪಿಂಟೊ, ಜಿಲ್ಲಾ ಆಯುಷ್ ಅಧಿಕಾರಿ ಇಕ್ಬಾಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸುವರು. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿರುವರು.
Pingback: ಪೊಲೀಸ್ ತಂದೆಗೆ ಹೆದರಿ ಕಿಡ್ನಾಪ್ ಕಥೆ ಕಟ್ಟಿದ್ದ ಮಗ..!! ಮುಂದೆ ಆಗಿದ್ದೇನು? - NAMMAKUDLA NEWS - ನಮ್ಮಕುಡ್ಲ ನ್ಯೂಸ್