Connect with us

LATEST NEWS

ಉಡುಪಿ : ಕಾಪು ಪೊಲೀಸರ ಕಾರ್ಯಾಚರಣೆ ಇಬ್ಬರು ಅಂತರ್‌ ಜಿಲ್ಲಾ ಸರಗಳ್ಳರ ಸೆರೆ..!

Published

on

ಕುಂಜಾರುಗಿರಿ ಸಮೀಪದ ಪಾಜಕದಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗಿ ಮರಳುತ್ತಿದ್ದ ಬ್ರಾಹ್ಮಣರತೋಟ ನಿವಾಸಿ ಶಕುಂತಳಾ ಜಿ. ಭಟ್‌ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ಪಡುಬಿದ್ರಿಯಲ್ಲಿ ಕಾಪು ಪೊಲೀಸರು ಬಂಧಿಸಿದ್ದಾರೆ.

ಉಡುಪಿ : ಕುಂಜಾರುಗಿರಿ ಸಮೀಪದ ಪಾಜಕದಲ್ಲಿ ಮದುವೆ ಕಾರ್ಯಕ್ರಮಕ್ಕೆ ಹೋಗಿ ಮರಳುತ್ತಿದ್ದ ಬ್ರಾಹ್ಮಣರತೋಟ ನಿವಾಸಿ ಶಕುಂತಳಾ ಜಿ. ಭಟ್‌ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ಪಡುಬಿದ್ರಿಯಲ್ಲಿ ಕಾಪು ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿ.ಸಿ.ರೋಡ್‌ ನಿವಾಸಿ ಮಹಮ್ಮದ್‌ ರಫೀಕ್‌ (33) ಮತ್ತು ಸುರತ್ಕಲ್‌ ಚೊಕ್ಕಬೆಟ್ಟು ನಿವಾಸಿ ತೌಸಿಫ್ ಸಾಧಿಕ್‌ (31)ಬಂಧಿತ ಆರೋಪಿಗಳಾಗಿದ್ದು, ಕೃತ್ಯಕ್ಕೆ ಬಳಸಿದ ಬೈಕ್‌, 3 ಮೊಬೈಲ್‌, 2,500 ರೂ. ನಗದು, ಬಟನ್‌ ಇದ್ದ ಎರಡು ಚೂರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳು ಅಂತರ್‌ ಜಿಲ್ಲಾ ಸರಗಳ್ಳರಾಗಿದ್ದಾರೆ. ಬಂದಿತರ ಪೈಕಿ ಮಹಮ್ಮದ್‌ ರಫೀಕ್‌ನ ವಿರುದ್ಧ ಬೆಂಗಳೂರು, ಮಂಗಳೂರು ಕಮಿಷನರೇಟ್‌ ವ್ಯಾಪ್ತಿ, ದ.ಕ. ಮತ್ತು ಉಡುಪಿ ಜಿಲ್ಲೆಯ 32 ಠಾಣೆಗಳಲ್ಲಿ ಸರಗಳ್ಳತನ ಪ್ರಕರಣ ದಾಖಲಾಗಿದ್ದು ಬೆಂಗಳೂರಿನಲ್ಲಿ ಒಮ್ಮೆ ಆರು ವರ್ಷ ಹಾಗೂ ಮತ್ತೂಮ್ಮೆ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ.

ಮಾರ್ಚ್‌ ತಿಂಗಳಲ್ಲಿ ಜಾಮೀನು ಪಡೆದು ಹೊರಬಂದಿದ್ದು ಮತ್ತೆ ಅದೇ ಮಾದರಿಯ ಕಳ್ಳತನ ನಡೆಸಿ ಪೊಲೀಸರ ಸೆರೆಯಾಗಿದ್ದಾನೆ.

ಮತ್ತೋರ್ವ ಆರೋಪಿ ತೌಸಿಫ್‌ ಸಾಧಿಕ್‌ ವಿರುದ್ಧ ಬೆಂಗಳೂರು, ಮಂಗಳೂರು ಮತ್ತು ಮೂಲ್ಕಿ ಠಾಣೆಗಳಲ್ಲಿ ನಾಲ್ಕು ಸರಗಳ್ಳತನ ಪ್ರಕರಣಗಳು ದಾಖಲಾಗಿವೆ.

ಆರೋಪಿಗಳು ನೀಡಿರುವ ಮಾಹಿತಿಯಂತೆ ಜೂ. 12ರಂದು ಕಾಪುವಿನಲ್ಲಿ ಕಳವುಗೈದ ಎರಡು ಚಿನ್ನದ ಸರ, ಬ್ರಹ್ಮಾವರದಲ್ಲಿ ಕಳವಾಗಿರುವ ಚಿನ್ನದ ಸರ, ಮೇ 7ರಂದು ಬೆಂಗಳೂರಿನ ಮಹಾಲಕ್ಷ್ಮೀಪುರಂನಲ್ಲಿ ಕಳವಾಗಿರುವ ಚಿನ್ನದ ಸರ, ಮೇ 27ರಂದು ಮಲ್ಲೇಶ್ವರಂನಲ್ಲಿ ಕಳವಾಗಿರುವ ಎರಡು ಎಳೆಯ ಚಿನ್ನದ ಸರವನ್ನು ಸ್ವಾಧೀನಪಡಿಸಿಕೊಳ್ಳಲಾಗುವುದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ್‌ ಎಂ. ಹಾಕೆ ಮಚ್ಚೀಂದ್ರ ಅವರು ತಿಳಿಸಿದ್ದಾರೆ.

ಆರೋಪಿ ರಫೀಕ್‌ಗೆ ಬೈಕ್‌ ಚಾಲನೆ ಗೊತ್ತಿಲ್ಲವಾಗಿದ್ದು ಒಂದೊಂದು ಪ್ರಕರಣಕ್ಕೆ ಒಬ್ಬೊಬ್ಬರನ್ನು ಬೈಕ್‌ ಸವಾರರನ್ನಾಗಿ ಬಳಸಿಕೊಳ್ಳುತ್ತಿದ್ದನು.

ಜೂ. 12ರಂದು ಮಧ್ಯಾಹ್ನ 12.10ಕ್ಕೆ ಬ್ರಹ್ಮಾವರದಲ್ಲಿ ಮತ್ತು 2.15ರ ವೇಳೆಗೆ ಕಾಪುವಿನಲ್ಲಿ ಸರಗಳ್ಳತನ ನಡೆಸಿ ಪರಾರಿಯಾಗಿದ್ದರು.

ಆದರೆ ಕಾಪು ಪೊಲೀಸರು ನಡೆಸಿದ ಕ್ಷಿಪ್ರಗತಿಯ ಕಾರ್ಯಾಚರಣೆ, ವಿವಿಧೆಡೆಯ ಸಿಸಿ ಕೆಮರಾ ಪೂಟೇಜ್‌ಗಳು, ಟೋಲ್‌ಗೇಟ್‌ ಕೆಮರಾಗಳ ಸಹಕಾರದೊಂದಿಗೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಸಫಲರಾಗಿದ್ದು, ಕಾರ್ಕಳ ಮತ್ತು ಉಡುಪಿ ಪೊಲೀಸ್‌ ಉಪಾಧೀಕ್ಷಕರು, ಕಾಪು ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ ಅವರ ನೇತೃತ್ವದಲ್ಲಿ ಹಿರಿಯಡಕ ಎಸ್‌ಐ ಮಂಜುನಾಥ ಮರಬಂದ ಹಾಗೂ ಅಪರಾಧ ವಿಭಾಗದ ಸಿಬಂದಿಗಳಾದ ಪ್ರವೀಣ್‌ ಕುಮಾರ್‌, ರಾಜೇಶ್‌, ನಾರಾಯಣ್‌, ಸಂದೇಶ್‌,ಆರ್‌ಡಿಸಿ ವಿಭಾಗದ ದಿನೇಶ್‌ ಮತ್ತು ನಿತಿನ್‌ ಅವರ ಕಾರ್ಯಾಚರಣೆಯಿಂದಾಗಿ ಸರಗಳ್ಳರ ಬಂಧನವಾಗಿದ್ದು ಪೊಲೀಸರಿಗೆ ನಗದು ಮತ್ತು ಪ್ರಶಂಸಾ ಪತ್ರ ನೀಡಿ ಗೌರವಿಸಲಾಗುವುದು ಎಂದಿದ್ದಾರೆ.

FILM

ಸೋಶಿಯಲ್ ಮೀಡಿಯಾದಲ್ಲಿ ಗುಡ್ ನ್ಯೂಸ್ ಹಂಚಿಕೊಂಡ ಚಂದನ್ ಗೌಡ-ಕವಿತಾ ದಂಪತಿ

Published

on

ಚಂದನ್ ಗೌಡ – ಕವಿತಾ ದಂಪತಿ ಯಾರಿಗೆ ತಾನೇ ಗೊತ್ತಿಲ್ಲ. ಈ ಜೋಡಿ ‘ಲಕ್ಷ್ಮೀ ಬಾರಮ್ಮಾ’ ಮೂಲಕಾನೇ ಫೇಮಸ್. ಈ ಧಾರಾವಾಹಿಯಲ್ಲಿ ಕೆಲವು ಸಮಯ ನಟಿಸಿದ್ದ ಚಂದನ್ ಹೊರಬಂದಿದ್ದರು. ಕವಿತಾ ಕೂಡಾ ಅಷ್ಟೇ ಈ ಧಾರಾವಾಹಿ ಖ್ಯಾತಿ ನೀಡಿದ್ದರೂ, ನಂತರ ದಿನಗಳಲ್ಲಿ ಹೊರನಡೆದಿದ್ದರು. ಆದ್ರೆ, ಈ ಜೋಡಿ ರಿಯಲ್ ನಲ್ಲಿ ಒಂದಾಗಿ ಅಭಿಮಾನಿಗಳಿಗೆ ಖುಷಿ ಕೊಟ್ಟಿತ್ತು. ಇದೀಗ ಚಂದು – ಲಚ್ಚಿ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಖುಷಿ ಸುದ್ದಿ ಹಂಚಿಕೊಂಡ ದಂಪತಿ :

ನಟ ಚಂದನ್ ಕುಮಾರ್, ಕವಿತಾ ಗೌಡ ಅವರು ಬೇಬಿ ಸ್ಕ್ಯಾನ್ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಮೂಲಕ ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇರುವ ಸಂಭ್ರಮ ಹಂಚಿಕೊಂಡಿದ್ದಾರೆ. ನಟಿ ಕವಿತಾ ಗೌಡ ಚಂದನ್ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆಅಭಿಮಾನಿಗಳಿಂದ, ನಟ, ನಟಿಯರಿಂದ ಶುಭ ಹಾರೈಕೆ ಹರಿದು ಬರುತ್ತಿದೆ. ನೇಹಾ ಗೌಡ, ಗೀತಾ ಭಾರತೀ ಭಟ್, ಧನರಾಜ್, ವಿನಯ್ ಗೌಡ, ಪ್ರಿಯಾಂಕಾ ಚಿಂಚೋಳಿ ಮೊದಲಾದವರು ಶುಭಾಶಯ ತಿಳಿಸಿದ್ದಾರೆ. 2021 ಮೇ 14ರಂದು ಲಾಕ್ ಡೌನ್ ಸಂದರ್ಭದಲ್ಲಿ ಈ ಜೋಡಿ ಮದುವೆಯಾಗಿತ್ತು.

ಮುಂದೆ ಓದಿ..; ರಜನಿಕಾಂತ್-ಐಶ್ವರ್ಯ ರೈ ಸಂಬಂಧಪಟ್ಟ ವೀಡಿಯೋ ಈಗ ವೈರಲ್ ..!! ಅಮಿತಾಬಚನ್, ಅಭಿಷೇಕ್‌ಗೆ ಏನಾಗಿದೆ? ಎಂದು ಹೇಳಿದ್ಯಾಕೆ?

ಬ್ಯುಸಿ ಲೈಫ್ :

ಕೆಲ ತಿಂಗಳುಗಳಿಂದ ಕವಿತಾ ಗೌಡ ಅವರು ಉದ್ಯಮದ ಕಡೆಗೆ ಮುಖ ಮಾಡಿದ್ದರು. ಚಂದನ್ ಜೊತೆ ಸೇರಿ ಒಂದಾದ ಮೇಲೆ ಒಂದರಂತೆ ಹೋಟೆಲ್ ಬ್ರ್ಯಾಂಚ್ ಆರಂಭಿಸಿದ್ದಾರೆ. ಅಷ್ಟೇ ಅಲ್ಲದೆ ಮೇಕಪ್ ಸ್ಟುಡಿಯೋವನ್ನು ಕೂಡ ಆರಂಭಿಸಿದ್ದಾರೆ.

Continue Reading

FILM

ಬರ್ಬರ ಹತ್ಯೆಯಾದ ಬ್ಯೂಟಿ ಕ್ವೀನ್.!! ಮುಳುವಾಯಿತಾ ಇನ್ಸ್ಟಾಗ್ರಾಮ್ ಪೋಸ್ಟ್‌..! ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ

Published

on

ಬ್ಯೂಟಿ ಕ್ವೀನ್ ಎಂದು ಕಿರೀಟ ಮುಡಿಗೇರಿಸಿಕೊಂಡವಳು ಎರಡೇ ವರ್ಷಕ್ಕೆ ಹಂತಕರ ಗುಂಡೇಟಿಕೆ ಬಲಿಯಾಗಿದ್ದಾಳೆ. ರೆಸ್ಟೋರೆಂಟ್‌ನಲ್ಲಿ ಆರಾಮವಾಗಿ ವಿರಾಮಿಸಿ ಬಗೆ ಬಗೆಯ ಸೀಫುಡ್ ಆರ್ಡರ್ ಮಾಡಿದ್ರು.  ಇನ್ನೇನು ಫುಡ್‌ಅನ್ನು ಆಹ್ಲಾದಿಸಬೇಕು ಅನ್ನೋವಷ್ಟರಲ್ಲಿ ದುರಂತ ಅಂದ್ರೆ ಹಂತಕರ ಗುಂಡೇಟಿಗೆ ಈ ಸುಂದರಿ ಬಲಿಯಾಗಿದ್ದಾರೆ.

23ವರ್ಷಕ್ಕೆ ಬ್ಯೂಟಿ ಕ್ವೀನ್ ಆದ ಲ್ಯಾಂಡಿ

ಲ್ಯಾಂಡಿ ಪರ್ರಾಗಾ ಗೊಯ್ಬುರೊ ತನ್ನ 23 ವರ್ಷಕ್ಕೆ ಬ್ಯೂಟಿ ಕ್ವೀನ್ ಕಿರೀಟವನ್ನು ಮುಡಿಗೇರಿಸಿಕೊಂಡವಳು. 2022ರ ಮಿಸ್‌ ಈಕ್ವೆಡಾರ್ ಸ್ಪರ್ಧೆಯಲ್ಲಿ ಬ್ಯೂಟಿ ಕ್ವೀನ್ ಆಗಿ ಲಕ್ಷಾಂತರ ಅಭಿಮಾನಿಗಳನ್ನು ಗಿಟ್ಟಿಸಿಕೊಂಡಿದ್ದಾಳೆ.  ಬಿಕಿನಿ ಕ್ವೀನ್ ಎಂದೆನಿಸಿಕೊಂಡ ಈಕೆ ಇನ್ಸ್ಟಾಗ್ರಾಮ್‌ನಲ್ಲಿ ಲಕ್ಷಾಂತರ ಫಾಲೋವರ್ಸ್‌ಗಳನ್ನು ಹೊಂದಿದ್ದಾಳೆ. ಹಲವು ಉದ್ಯಮಗಳನ್ನು ಕೂಡ ಈಕೆ ನಡೆಸುತ್ತಿದ್ದಳು.  ಲ್ಯಾಂಡಿ ಪರ್ರಾಗಾ ಸಾವಿನ ಸುದ್ದಿ ಕೇಳಿ ಎಲ್ಲರೂ ಆಘಾತಕ್ಕೊಳಗಾಗಿದ್ದಾರೆ.

ರಜನಿಕಾಂತ್-ಐಶ್ವರ್ಯ ರೈ ಸಂಬಂಧಪಟ್ಟ ವೀಡಿಯೋ ಈಗ ವೈರಲ್ ..!! ಅಮಿತಾಬಚನ್, ಅಭಿಷೇಕ್‌ಗೆ ಏನಾಗಿದೆ? ಎಂದು ಹೇಳಿದ್ಯಾಕೆ?

ಸಾವಿಗೆ ಕಾರಣವಾದ ಇನ್ಸ್ಟಾಗ್ರಾಮ್ ಪೋಸ್ಟ್:

ಎ.28ರಂದು ಕ್ವೆವೆಡೊ ನಗರದ ರೆಸ್ಟೋರೆಂಟ್‌ವೊಂದಕ್ಕೆ ಲ್ಯಾಂಡಿ ತೆರಳಿದ್ದರು. ಈ ವೇಳೆ ವೆರೈಟಿ ಸೀ ಫುಡ್‌ಗಳನ್ನು ಆರ್ಡರ್ ಮಾಡಿದ್ದಾರೆ. ಫುಡ್‌ಗಳು ಟೇಬಲ್ ಮೇಲೆ ಬಂದ ಕೂಡಲೇ ಫೊಟೋ ಕ್ಲಿಕ್ಕಿಸಿ ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಫೊಟೋ ಲ್ಯಾಂಡಿಯ ಪ್ರಾಣಕ್ಕೆ ಕುತ್ತು ತಂದಿತ್ತು. ಹಂತಕರು ಪೋಸ್ಟ್ ಮಾಡಿದ್ದ ಫೊಟೋದ ಜಾಲವನ್ನು ಹಿಡಿದು ಹಿಂಬಾಲಿಸಿದ ಇಬ್ಬರು ದುಷ್ಕರ್ಮಿಗಳು ಲ್ಯಾಂಡಿ ಮೇಲೆ ಡೆಡ್ಲಿ ಅಟ್ಯಾಕ್ ಮಾಡಿದ್ದಾರೆ. ರೆಸ್ಟೋರೆಂಟ್‌ಗೆ ಬಂದ ದುಷ್ಕರ್ಮಿಗಳು ಲ್ಯಾಂಡಿ ಮೇಲೆ ಗನ್‌ನಿಂದ ಶೂಟ್ ಮಾಡಿ ಪರಾರಿಯಾಗಿದ್ದಾರೆ. ಈಕ್ವೆಡಾರ್‌ನ ಸುಂದರಿ ದುಷ್ಕರ್ಮಿಗಳ ಗುಂಡೇಟಿಗೆ ರಕ್ತದ ಮಡುವಿನಲ್ಲಿ ಬರ್ಬರವಾಗಿ  ಹತ್ಯೆಯಾಗಿದ್ದಾರೆ. ಹಂತಕರು ಈಕೆಯ ಇನ್ಸ್ಟಾಗ್ರಾಮ್‌ನ್ನು ಫಾಲೋ ಮಾಡಿ ಹತ್ಯೆ ಮಾಡಿದ್ದು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಈ ವೀಡಿಯೋ ರೆಸ್ಟೋರೆಂಟ್‌ನಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಹತ್ಯೆಗೆ ಕಾರಣವೇನು ಎಂಬುದನ್ನು ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದು ವಿಶೇಷ ತಂಡ ರಚನೆ ಮಾಡಿದ್ದಾರೆ. 2023ರಲ್ಲಿ ಅಟಾರ್ನಿ ಜನರಲ್ ಕಚೇರಿಯಲ್ಲಿ ನಡೆದ ಸಂಘಟಿತ ಅಪರಾಧ ಪ್ರಕರಣದಲ್ಲಿ, ಡ್ರಗ್ ಕಳ್ಳ ಸಾಗಾಣಿಕೆಯಲ್ಲಿ ಲ್ಯಾಂಡಿ ಹೆಸರು ಕೇಳಿಬಂದಿತ್ತು. ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದ ತನ್ನ ಬಾಯ್‌ಫ್ರೆಂಡ್‌ನಿಂದ ದೂರಾಗಿದ್ದ ಲ್ಯಾಂಡ್ರಿಯ ಈ ನಿಗೂಢ ಬರ್ಬರ ಹತ್ಯೆಗೆ ಕಾರಣ ತಿಳಿಯಲು ತನಿಖೆ ನಡೆಯುತ್ತಿದೆ.

 

 

 

Continue Reading

FILM

ರಜನಿಕಾಂತ್-ಐಶ್ವರ್ಯ ರೈ ಸಂಬಂಧಪಟ್ಟ ವೀಡಿಯೋ ಈಗ ವೈರಲ್ ..!! ಅಮಿತಾಬಚನ್, ಅಭಿಷೇಕ್‌ಗೆ ಏನಾಗಿದೆ? ಎಂದು ಹೇಳಿದ್ಯಾಕೆ?

Published

on

ಮುಂಬೈ/ಮಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ಸಿನೆಮಾ ಲೋಕದಲ್ಲಿ ತಮ್ಮದೇ ಆದ ಸ್ಟಾಂಡ್‌ ಕ್ರಿಯೇಟ್ ಮಾಡಿದ್ದಾರೆ. ಕೇವಲ ತಮಿಳು ಭಾಷೆ ಅಲ್ಲದೇ ಎಲ್ಲಾ ಭಾಷೆಗಳಲ್ಲಿಯೂ ರಜನಿಗೆ ಫ್ಯಾನ್ಸ್ ಇದ್ದಾರೆ. ಇನ್ನು ಅವರ ಚಾರ್ಮ್ ಅಬ್ಬಾ…! ವಯಸ್ಸಲ್ಲಿ 73 ಆದರೂ ಚಿರ ಯುವಕನಂತೆ ಕಾಣಿಸುವ ಎನರ್ಜಿ ಇವರದು. ಇನ್ನು ಇವರ ಸಿನೆಮಾ ರಿಲೀಸ್ ಆದ್ರೆ ಸಾಕು ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತೆ. ಅದಕ್ಕೆ ಇತ್ತೀಚೆಗೆ ರಿಲೀಸ್ ಆದ ಜೈಲರ್ ಸಿನೆಮಾವೇ ಸಾಕ್ಷಿ. ಇದೀಗ ರಜನಿ ಹಾಗೂ ಐಶ್ವರ್ಯ ರೈ ಗೆ ಸಂಬಂಧಪಟ್ಟ ಹಳೆ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ.

rajani-aishwarya

14 ವರ್ಷಗಳ ಹಿಂದೆಯೇ ಕೆಲವರು ರಜನಿಕಾಂತ್ ಅವರನ್ನು ಹೀರೋ ಅಲ್ಲ ಎಂಬಂತೆ ವರ್ತಿಸಿದ್ದರಂತೆ. ಹೀಗಂತ ಖುದ್ದು ರಜನಿ ಅವರು ರೋಬೋ ಸಿನೆಮಾ ಪ್ರೆಸ್‌ಮೀಟ್‌ ನಲ್ಲಿ ಇಂಟ್ರಸ್ಟಿಂಗ್ ವಿಷಯವನ್ನು ಹಂಚಿಕೊಂಡಿದ್ದರು. ಇದೀಗ ಈ ವೀಡಿಯೋ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡ್ತಿದೆ.

ಐಶ್ವರ್ಯ ರೈ ಬಚ್ಚನ್‌ಗೆ, ಸೊಸೆಯ ‘ವಾಟ್‌ ದಿ ಹೆಲ್‌ ನವ್ಯಾ’ದಲ್ಲಿ ಡಿಮ್ಯಾಂಡ್‌…!

ಪ್ರೆಸ್‌ಮೀಟ್‌ನಲ್ಲಿ ಮಾತು ಆರಂಭಿಸಿದ ರಜನಿ ‘ನನ್ನ ಜೊತೆ ಹೀರೋಯಿನ್‌ ಆಗಿ ನಟಿಸಿರುವುದಕ್ಕೆ ಐಶ್ವರ್ಯಾಗೆ ಧನ್ಯವಾದಗಳು. ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿರುವ ನನ್ನ ಸಹೋದರನ ಮನೆಗೆ ಹೋಗಿದ್ದೆ. ಪಕ್ಕದ ಮನೆ ರಾಜಸ್ಥಾನ ಕುಟುಂಬದವರು ನನ್ನನ್ನು ನೋಡಲು ಬಂದರು. ಅದರಲ್ಲಿ ನಂದುಲಾಲ್ ಎಂಬವರು ನನ್ನನ್ನು ಮಾತನಾಡಿಸಿದರು. ಅವರಿಗೆ 60 ವರ್ಷ ವಯಸ್ಸಾಗಿತ್ತು. ಸರ್ ನಿಮ್ಮ ತಲೆ ಕೂದಲಿಗೆ ಏನಾಗಿದೆ ಎಂದು ಕೇಳಿದರು. ಬಿಡಿ ಎಲ್ಲಾ ಉದುರಿ ಹೋಗಿದೆ ಎಂದು ಹೇಳಿದೆ. ನಿಮ್ಮ ನಿವೃತ್ತಿ ಜೀವನ ಹೇಗಿದೆ. ಲೈಫ್ ಎಂಜಾಯ್ ಮಾಡ್ತಿದ್ದೀರಾ ಎಂದು ಕೇಳಿದರು. ಇಲ್ಲಾ ನಾನೊಂದು ಸಿನೆಮಾ ಮಾಡ್ತಾ ಇದ್ದೇನೆ. ಐಶ್ವರ್ಯ ರೈ ಹೀರೋಯಿನ್ ಅಂದೆ. ‘ಹೀರೋ ಯಾರು ಸರ್’ ಎಂದು ಮರು ಪ್ರಶ್ನಿಸಿದರು.  ಅವರ ಜೊತೆ ಇದ್ದವರು ಡ್ಯಾಡಿ ಇವರೇ ಹೀರೋ ಎಂದು ಮೆಲುಧ್ವನಿಯಲ್ಲಿ ಹೇಳ್ತಾರೆ. ನಂದುಲಾಲ್  ಮೌನವಾಗಿ ನನ್ನನ್ನೇ ದಿಟ್ಟಿಸಿ ನೋಡಿ ಏನೂ ಮಾತನಾಡದೆ ಹೊರಟು ಬಿಟ್ಟರು. ಅಷ್ಟರಾಗಲೇ ಮನೆ ಒಳಗಡೆಯಿಂದು ಒಂದು ಧ್ವನಿ ಬರುತ್ತೆ. ಐಶ್ವರ್ಯ ರೈ ಗೆ ಏನಾಗಿದೆ..? ಅಲ್ಲಾ ಅಭಿಷೇಕ್ ಹೇಗೆ ಒಪ್ಪಿದ್ರು..? ಅಮಿತಾಬಚನ್‌ಗಾದ್ರು ಎನಾಗಿದೆ.. ಐಶ್ವರ್ಯಾಳನ್ನು ಇವರ ಜೊತೆ ಹೀರೋಯಿನ್ ಮಾಡಲು ಒಪ್ಪಿದ್ದಾರಲ್ಲ  ಎಂಬ ಮಾತು ಕೇಳಿ ಬಂತು ಎಂದು ರಜನಿಕಾಂತ್ ಸಿನೆಮಾ ಪ್ರೆಸ್ ಮೀಟ್‌ನಲ್ಲಿ ನಡೆದ ಘಟನೆಯನ್ನು ಮೆಲುಕು ಹಾಕಿದ್ದರು.

Continue Reading

LATEST NEWS

Trending