LATEST NEWS
ಕಡೆಗೋಲು ಕೃಷ್ಣನ ರಥೋತ್ಸವಕ್ಕೆ ಲಕ್ಷ ಲಕ್ಷ ಹಣತೆ ಬೆಳಕಿನ ಚಿತ್ತಾರ..
ಕಡೆಗೋಲು ಕೃಷ್ಣನ ರಥೋತ್ಸವಕ್ಕೆ ಲಕ್ಷ ಲಕ್ಷ ಹಣತೆ ಬೆಳಕಿನ ಚಿತ್ತಾರ..!
ಉಡುಪಿ: ಅಪರೂಪದ ಸಂಪ್ರದಾಯಗಳಿಗೆ ಹೆಸರಾದ ಉಡುಪಿಯ ಕೃಷ್ಣಮಠದಲ್ಲಿ ಲಕ್ಷದೀಪಗಳಿಂದ ಸಂಭ್ರಮ. ಕಡಗೋಲು ಕೃಷ್ಣನ ಮೊದಲ ರಥೋತ್ಸವಕ್ಕೆ ಅಷ್ಟಮಠಗಳ ರಥಬೀದಿ ಅಲಂಕಾರಗೊಂಡು ಹಣತೆಯ ದೀಪಗಳಿಂದ ಕಂಗೊಳಿಸುತ್ತಿದೆ..ಮಠಾಧೀಶರ ಉಪಸ್ಥಿತಿಯಲ್ಲಿ ವೈಭವದ ನಡುವೆ ಕೃಷ್ಣನ ದೇವರ ಮೆರವಣಿಗೆ ನಡೆಸಲಾಯ್ತು. ರಥಬೀದಿಯಲ್ಲಿ ಲಕ್ಷದೀಪೋತ್ಸವ ಕಂಡು ಭಕ್ತರು ಪುಳಕಿತರಾದರು.
ಮಠಗಳ ರಥಬೀದಿ ದೀಪಗಳಿಂದ ಕಂಗೊಳಿಸುತ್ತಿದ್ದು, ಭಕ್ತರು ಕೃಷ್ಣನಿಗೆ ಹಣತೆಯಲ್ಲಿ ದೀಪ ಬೆಳಗಿ ಸಂಭ್ರಮಿಸಿದ್ರು .. ಕೃಷ್ಣ ದೇವರು ಯೋಗ ನಿದ್ರೆಯಲ್ಲಿರ್ತಾನೆ ಅನ್ನೋದು ನಂಬಿಕೆ.
ಉತ್ಥಾನ ದ್ವಾದಶಿಯ ದಿನ ಯೋಗ ನಿದ್ರೆ ಪೂರೈಸಿ ರಥಬೀದಿಗೆ ಬರುವ ದೇವರನ್ನು ಬರಮಾಡಿಕೊಳ್ಳಲು ನಡೆದಿರುವ ತಯಾರಿ ಇದು. ಈ ಮಹೋತ್ಸವವನ್ನು ಲಕ್ಷದೀಪೋತ್ಸವ ಎನ್ನುತ್ತಾರೆ.
ಇಳಿ ಹೊತ್ತಿನಲ್ಲಿ ಭಕ್ತರೆಲ್ಲರೂ ರಥಬೀದಿಯಲ್ಲಿ ಸೇರಿ ಸಾವಿರಾರು ದೀಪ ಬೆಳಗಿದರು. ಮಧ್ವ ಸರೋವರದಲ್ಲಿ ಕ್ಷೀರಾಬ್ದಿ ಪೂಜೆ ನಡೆಯಿತು.
ಆ ಬಳಿಕ ಮಠದಿಂದ ಹೊರ ಬರುವ ಕೃಷ್ಣ ದೇವರ ಉತ್ಸವ ಮೂರ್ತಿಯನ್ನು ಮಧ್ವ ಸರೋವರಕ್ಕೆ ಕೊಂಡೊಯ್ಯಲಾಯ್ತು . ಸಾಲು ಸಾಲು ದೀಪಗಳ ನಡುವೆ ಕೃಷ್ಣ ದೇವರ ಮೆರವಣಿಗೆ ನಡೆಯಿತು. ರಥದ ಮುಂಭಾಗದಲ್ಲಿ ಚಂಡೆಗಳ ನಾದ ವೈಭವ ಮೇಳೈಸಿತು.
ಈ ಬಾರಿಯ ಲಕ್ಷ ದೀಪೋತ್ಸವದಲ್ಲಿ ಪರ್ಯಾಯ ಅದಮಾರು ಶ್ರೀಗಳ ಸಹಿತ ಉಳಿದ ಮಠಗಳ ಯತಿಗಳು ಭಾಗವಹಿಸಿದ್ರು.. ನೂರಾರು ಭಕ್ತರು ಸೇರಿ ಎರಡೂ ರಥಗಳನ್ನು ಎಳೆದರು. ಕೋವಿಡ್ ಕಾರಣದಿಂದ ಅಷ್ಟಮಿಯಂದು ಕೃಷ್ಣ ಮಠಕ್ಕೆ ಬರಲು ಸಾಧ್ಯವಾಗದ ಭಕ್ತರು ಲಕ್ಷದೀಪೋತ್ಸವದಲ್ಲಿ ಪಾಲ್ಗೋಂಡು ಸಂತೋಷಗೊಂಡರು.
ಮುಂದಿನ ಮೂರು ದಿನಗಳ ಕಾಲ ಸಮಾನ ವೈಭವದಿಂದ ಲಕ್ಷ ದೀಪೋತ್ಸವ ನಡೆಯುತ್ತೆ. ಲಕ್ಷದೀಪೋತ್ಸವದೊಂದಿಗೆ ಆರಂಭವಾಗುವ ಕೃಷ್ಣ ದೇವರ ರಥೋತ್ಸವ ಮುಂದಿನ ಮಳೆಗಾಲದವರೆಗೆ ನಡೆಯುತ್ತದೆ.
ಅಷ್ಟಮಠಗಳ ರಥಬೀದಿಯಲ್ಲಿ ಸೇವಾರೂಪದಲ್ಲಿ ನಡೆಯುವ ಉತ್ಸವದಿಂದ ದಿನವೂ ಹಬ್ಬದ ವಾತಾವರಣ ಇರಲಿದೆ..
DAKSHINA KANNADA
Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!
ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.
ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ
DAKSHINA KANNADA
Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು
ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.
ನವೀನ್ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.
LATEST NEWS
ಕೋಟಿಯ ಒಡೆಯನಾದ 8ನೇ ತರಗತಿ ಪೋರ..!!
ನವದೆಹಲಿ: ಕೌನ್ ಬನೇಗಾ ಕರೋಡ್ ಪತಿ ಎಂಬ ಹಿಂದಿ ಶೋ ನಲ್ಲಿ ಕೋಟಿ ಗೆದ್ದ 14ವರ್ಷದ ಪೋರ ಸಣ್ಣ ವಯಸ್ಸಿನಲ್ಲೇ ದಾಖಲೆ ಬರೆದಿದ್ದಾನೆ.
ಬಾಲಿವುಡ್ ಸ್ಟಾರ್ ಅಮಿತಾಭ್ ಬಚ್ಚನ್ ನಡೆಸಿಕೊಡುವಂತಹ ಹಿಂದಿಯ ಕೌನ್ ಬನೇಗಾ ಕರೋಡ್ ಪತಿ ಎಂಬ ಶೋ ನಲ್ಲಿ ಹರಿಯಾಣದ ಮಹೇಂದ್ರಗಢ್ ಮೂಲದ 8ನೇ ತರಗತಿ ವಿದ್ಯಾರ್ಥಿ ಮಯಾಂಕ್ ಭಾಗವಹಿಸಿ 15 ಪ್ರಶ್ನೆಗಳಿಗೆ ಉತ್ತರಿಸಿ ಒಂದು ಕೋಟಿ ಗೆದ್ದು ದಾಖಲೆ ಬರೆದಿದ್ದಾನೆ. ಕೌನ್ ಬನೇಗಾ ಕರೋಡ್ ಪತಿಯಲ್ಲಿ ನಡೆಯುವ ಜನಪ್ರಿಯ ಪ್ರಶ್ನೆಗಳಿಗೆ ಉತ್ತರಿಸಿದ 14 ವರ್ಷದ ಕಿರಿಯ ಪೋರ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.
ಜನಪ್ರಿಯ ರಸಪ್ರಶ್ನೆ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ಪತಿಯಲ್ಲಿ 1 ಕೋಟಿ ರೂ.ಗೆದ್ದ ಹೆಗ್ಗಳಿಕೆಗೆ ಹರಿಯಾಣದ ಮಹೇಂದ್ರಗಢ್ನ 8 ನೇ ತರಗತಿಯ ವಿದ್ಯಾರ್ಥಿ ಮಯಾಂಕ್ ಪಾತ್ರನಾಗಿದ್ದಾನೆ. 14 ವರ್ಷದ ಈ ಬಾಲಕ 1 ಕೋಟಿ ರೂ.ಗೆದ್ದ ಅತ್ಯಂತ ಕಿರಿಯ ಸ್ಪರ್ಧಿಯಾಗಿದ್ದು, ಹೊಸ ಇತಿಹಾಸ ನಿರ್ಮಿಸಿದ್ದಾನೆ. 15 ಪ್ರಶ್ನೆಗಳಿಗೆ ಉತ್ತರ ಕೊಟ್ಟು, 1 ಕೋಟಿ ರೂ ಗೆದ್ದು, 16ನೇ ಪ್ರಶ್ನೆಗೂ ಸರಿಯಾದ ಉತ್ತರ ನೀಡಿದ್ದಾನೆ. ಈತನ ಗುರಿ ಕೇವಲ ಒಂದು ಕೋಟಿ ಆಗಿರಲಿಲ್ಲ. ಏಳು ಕೋಟಿಯನ್ನು ಗುರಿಯಾಗಿಸಿಟ್ಟುಕೊಂಡಿದ್ದ. ಏಳು ಕೋಟಿಯ ಪ್ರಶ್ನೆಗೆ ಉತ್ತರಿಸೋಕೆ ಆಗದೇ ಆಟದಿಂದ ವಾಪಸ್ಸಾಗಿದ್ದಾನೆ. ಈತನ ಸಾಧನೆಗೆ ಹರಿಯಾಣ ಸಿಎಂ ಮನೊಹರ್ ಲಾಲ್ ಖಟ್ಟರ್ ಅಭಿನಂದಿಸಿದ್ದಾರೆ. ಇದು ಮೊದಲ ಬಾರಿ 14 ವರ್ಷದ ಪೋರ ಕೋಟಿಗೆದ್ದ ಇತಿಹಾಸವಾಗಿದೆ.
- FILM3 days ago
ಆಲಿಯಾ ಭಟ್ ಡೀಫ್ ಫೇಕ್ ವಿಡಿಯೋ ವೈರಲ್ – ವಿಡಿಯೋ ನೋಡಿದ್ರಾ..?
- bangalore4 days ago
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?
- bangalore6 days ago
ಬೆಂಗಳೂರು ಕಂಬಳಕ್ಕೆ ಚಾಲನೆ ನೀಡಿದ ಅಶ್ವಿನಿ ಪುನಿತ್ ರಾಜ್ ಕುಮಾರ್
- DAKSHINA KANNADA6 days ago
Puttur: ಮಹಿಳೆಗೆ ಅಮಲು ಬರಿಸುವ ಪಾನೀಯ ಕುಡಿಸಿ ಅತ್ಯಾಚಾರ..!