Connect with us

    LATEST NEWS

    ಕೃಷ್ಣ ನಗರಿ ಉಡುಪಿಯಲ್ಲಿ ಅಪರೂದ ಬುದ್ಧನ ಶಿಲ್ಪ ಪತ್ತೆ..! 

    Published

    on

    ಉಡುಪಿ : ಉಡುಪಿ ನಗರದ ಭಾಗವಾಗಿರುವ, 76 ಬಡಗಬೆಟ್ಟು ಪಂಚಾಯತು ವ್ಯಾಪ್ತಿಯ, ಅಲೆಂಬಿ ಎಂಬ ಸ್ಥಳದಲ್ಲಿ ಒಂದು ಪ್ರಾಚೀನ ಪಾಳುಬಿದ್ದ ದೇವಾಲಯದ ಪಕ್ಕದ ಬಾವಿಯಲ್ಲಿ ಕಳೆದ ಜನವರಿ 31 ರಂದು ಪ್ರಾಚೀನ ಜನಾರ್ಧನ ಶಿಲ್ಪವನ್ನು ಪತ್ತೆಯಾಗಿತ್ತು.

    ಆ ಸಂಧರ್ಭದಲ್ಲಿ ಹೊರತೆಗೆದ ಪ್ರಾಚೀನ ವಸ್ತು ಅವಶೇಷಗಳ ಜೊತೆ ಅತ್ಯಂತ ಅಪರೂಪದ ಬುದ್ಧನ ಶಿಲ್ಪವೊಂದು ಪತ್ತೆಯಾಗಿದ್ದು ತೀವ್ರ ಕುತೂಹಲವನ್ನು ಉಂಟುಮಾಡಿದೆ ಎಂದು ಪ್ರೊ. ಟಿ. ಮುರುಗೇಶಿ, ಸಹ ಪ್ರಾಧ್ಯಾಪಕ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗ, ಎಂ.ಎಸ್.ಆರ್.ಎಸ್ ಕಾಲೇಜು, ಶಿರ್ವ ಇವರು ಇಂದು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಬುದ್ಧನ ಶಿಲ್ಪ ಕ್ರಿ.ಶ. 5ನೇ ಶತಮಾನದ ಗುಪ್ತ ಶೈಲಿಯಲ್ಲಿದ್ದು, ಸುಮಾರು 9 ಸೆ.ಮೀ. ಎತ್ತರ, 5 ಸೆ.ಮೀ. ಅಗಲ ಮತ್ತು 2 ಸೆ.ಮೀ. ದಪ್ಪವಿದೆ. ಪದ್ಮ ಪೀಠದ ಮೇಲೆ ಪದ್ಮಾಸನ ಭಂಗಿಯಲ್ಲಿ ಕುಳಿತಿರುವ ಬುದ್ಧ, ತನ್ನ ಪ್ರಥಮ ಧರ್ಮೋಪದೇಶ ಮುದ್ರೆ ಅಥವಾ ಧರ್ಮ ಚಕ್ರ ಪ್ರವರ್ತನ ಮುದ್ರೆಯಲ್ಲಿದ್ದು, ಕಾವಿವಸ್ತ್ರ ಮತ್ತು ಕರ್ಣಕುಂಡಲಗಳನ್ನು ಧರಿಸಿದ್ದಾನೆ.

    ತಲೆಯ ಮೇಲ್ಭಾಗದಲ್ಲಿ ಉಷ್ಣೀಶವಿದೆ. ತಲೆಯ ಹಿಂಭಾಗದಲ್ಲಿ ದುಂಡನೆಯ ಪ್ರಭಾವಳಿಯಿದ್ದು, ಅದರಲ್ಲಿ ಹೂ-ಲತೆಗಳ ಚಿತ್ತಾಕರ್ಷಕ ಕುಸುರಿ ಕೆಲಸವಿದೆ. ಮೇಲ್ಭಾಗದ ಎರಡೂ ತುದಿಗಳಲ್ಲಿ ಕಿರು ಯಕ್ಷ ಶಿಲ್ಪಗಳಿವೆ, ಹಿಂಬದಿಯ ಒರಗಿನ ಎರಡೂ ಬದಿಗಳಲ್ಲಿ ರೆಕ್ಕೆಗಳನ್ನು ಹೊಂದಿರುವ ಕುದುರೆಗಳ ಶಿಲ್ಪಗಳಿವೆ. ಇದು ಸಾರನಾಥ ಬುದ್ಧ ಶಿಲ್ಪದ ಪ್ರತಿಕೃತಿಯಂತಿದೆ.

    ಕರ್ನಾಟಕದಲ್ಲಿ ಮತ್ತು ಉಡುಪಿ ಜಿಲ್ಲೆಯಲ್ಲಿ ಈ ಶೈಲಿಯಲ್ಲಿ ದೊರೆತ ಮೊಟ್ಟ ಮೊದಲ ಪ್ರಾಚೀನ ಬೌದ್ಧ ಶಿಲ್ಪವಾಗಿದೆ. ಪರಂಪಾಗತ ನಂಬಿಕೆಯ ಪ್ರಕಾರ ತುಳುನಾಡು ಪ್ರಾಚೀನ ಕಾಲದಲ್ಲಿ ಕದಂಬರ ಆಳ್ವಿಕೆಗೆ ಒಳಪಟ್ಟ ಪ್ರದೇಶವೆಂಬ ಗಾಢ ನಂಬಿಕೆಯಿದೆ. ಕದಂಬರಿಗೂ ಗುಪ್ತರಿಗೂ ವೈವಾಹಿಕ ಸಂಬಂಧಗಳಿದ್ದುದು ಚಾರಿತ್ರಿಕವಾಗಿ ದಾಖಲಾಗಿದೆ. ಅಲೆಂಬಿಯ ಸಮೀಪದಲ್ಲಿಯೇ ಕ್ರಿ.ಶ. 4-5ನೇ ಶತಮಾನದ ಬ್ರಾಹ್ಮಿ ಲಿಪಿಯ ಶಾಸನ ಈ ಮೊದಲೇ ಪತ್ತೆಯಾಗಿರುವುದರಿಂದ ಕ್ರಿ.ಶ. 5ನೇ ಶತಮಾನದ ಶಿಲ್ಪ ಶೈಲಿಯ ಬುದ್ಧನ ಶಿಲ್ಪ ಉಡುಪಿಯಲ್ಲಿ ದೊರೆತಿರುವುದು ಅಸಂಭವವೇನಲ್ಲ. ಆದರೆ, ಕರ್ನಾಟಕ ಮತ್ತು ಉಡುಪಿ ಜಿಲ್ಲೆಯ ಬೌದ್ಧ ಅಧ್ಯಯನದಲ್ಲಿ ಈ ಶಿಲ್ಪ ಶೋಧ ಹೊಸ ಕುತೂಹಲವನ್ನು ಸೃಷ್ಠಿ ಮಾಡಿದೆ.
    ಈ ಸಂಶೋಧನೆಯಲ್ಲಿ  ಗಣೇಶ್‍ರಾಜ್ ಸರಳೇಬೆಟ್ಟು, ನಮ್ಮ ಕಾಲೇಜಿನ ವಿದ್ಯಾರ್ಥಿಗಳಾದ ಶ್ರೇಯಸ್, ನಾಗರಾಜ್, ಗೌತಮ್, ರಾಜೇಶ್, ಹರ್ಷಿತಾ, ಕಾವ್ಯ, ಭವ್ಯ ಮತ್ತು ಗಣೇಶ್  ಭಾಗಿಯಾಗಿದ್ದರು ಎಂದು ಪ್ರೊ. ಟಿ. ಮುರುಗೇಶಿ ಹೇಳಿಕೆ ನೀಡಿದ್ದಾರೆ.

    Click to comment

    Leave a Reply

    Your email address will not be published. Required fields are marked *

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending