ತಾರಕಕ್ಕೇರಿದ ಬಿ ಆರ್ ಶೆಟ್ಟಿ ಆಸ್ಪತ್ರೆ ವಿವಾದ: ಶಾಸಕ ರಘುಪತಿ ಭಟ್-ಬಿ,ಆರ್ ಶೆಟ್ಟಿ ಜಟಾಪಟಿ..
ತಾರಕಕ್ಕೇರಿದ ಬಿ ಆರ್ ಶೆಟ್ಟಿ ಆಸ್ಪತ್ರೆ ವಿವಾದ: ಶಾಸಕ ರಘುಪತಿ ಭಟ್-ಬಿ,ಆರ್ ಶೆಟ್ಟಿ ಜಟಾಪಟಿ..
ಉಡುಪಿ: ಉಡುಪಿಯ ಬಿ ಆರ್ ಶೆಟ್ಟಿ ಆಸ್ಪತ್ರೆ ವಿವಾದ ಇದೀಗ ತಾರಕಕ್ಕೇರಿದೆ.
ಈ ಮೊದಲು ಸರಕಾರಿ ಆಸ್ಪತ್ರೆಯನ್ನು ಗುತ್ತಿಗೆ ಆಧಾರದಲ್ಲಿ ಪಡೆದು ತಾನೆ ನಡೆಸುತ್ತೇನೆ ಎಂದಿದ್ದಲ್ಲದೆ, ಸುಸಜ್ಜಿತ ಹಾಸ್ಪಿಟಲ್ ಕೊಡುತ್ತೇನೆ ಎಂದು ರಾಜ್ಯದಾದ್ಯಂತ ಪ್ರಚಾರ ಪಡೆದಿದ್ದ ಬಿ. ಆರ್ ಶೆಟ್ಟಿ ಇದೀಗ ತನಗೆ ಹಾಸ್ಪಿಟಲ್ ನಡೆಸಲು ಸಾಧ್ಯವಿಲ್ಲ ಎಂದು ಏಕಾಏಕಿ ಕೈ ಎತ್ತಿದ್ದಾರೆ.
ಎಪ್ರಿಲ್ ನಂತರ ನಡೆಸಲು ಸಾಧ್ಯವಿಲ್ಲ ಎಂದು ಮುಖ್ಯ ಕಾರ್ಯದರ್ಶಿಗೆ ಪತ್ರ ಕೂಡ ಬರೆದಿದ್ದಾರಂತೆ. ಬಿ.ಆರ್.ಶೆಟ್ಟಿಯವರ ಈ ನಿಲುವಿನಿಂದ ಇದೀಗ ಉಡುಪಿ ಶಾಸಕ ರಘುಪತಿ ಭಟ್ ಕೆಂಡಾಮಂಡಲವಾಗಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ, ಡಾ.ಬಿ ಆರ್ ಶೆಟ್ಟಿ ಬ್ಲಾಕ್ ಮೇಲ್ ತಂತ್ರಕ್ಕೆ ಮಣಿಯುವ ಪ್ರಶ್ನೆಯೇ ಇಲ್ಲ.
ಬಿ ಆರ್ ಶೆಟ್ಟಿ ಸರಕಾರಿ ಆಸ್ಪತ್ರೆಯ ಪಕ್ಕದಲ್ಲಿ ಖಾಸಗಿ ಆಸ್ಪತ್ರೆ ತೆರೆದು ಉದ್ಯಮ ನಡೆಸಲು ಮುಂದಾಗಿದ್ದಾರೆ. ಆದ್ರೆ ಇದೀಗ ಹೊಸದಾಗಿ ಕಟ್ಟಲು ಹೊರಟಿರುವ 400 ಬೆಡ್ಡಿನ ಆಸ್ಪತ್ರೆ ಕಾನೂನು ಬದ್ಧವಾಗಿಲ್ಲ.
ಅಲ್ಲದೇ ಉಡುಪಿಯಲ್ಲಿ ತಳ ಮಟ್ಟದಲ್ಲಿ ಮೂರು ಮಹಡಿ ನಿರ್ಮಿಸಲು ಅನುಮತಿ ಕೂಡ ಇಲ್ಲ. ಆದರೂ ಬಿ.ಆರ್.ಶೆಟ್ಟಿ ಅವರು ಮೂರು ಮಹಡಿ ನಿರ್ಮಿಸಲು ಮುಂದಾಗಿದ್ದಾರೆ.
ಇದರಿಂದಾಗಿ ಅವರ ಮಲ್ಟಿ ಸ್ಪೆಷಲ್ ಆಸ್ಪತ್ರೆಗೆ ಅನುಮತಿ ನೀಡಿಲ್ಲ ಎಂದು ಶಾಸಕ ರಘುಪತಿ ಭಟ್ ಗರಂ ಆಗಿದ್ದಾರೆ.
ಇನ್ನು ಸರಕಾರಿ ಆಸ್ಪತ್ರೆಯಿಂದ, ಖಾಸಗಿ ಆಸ್ಪತ್ರೆಗೆ ಶಿಫಾರಸು ಮಾಡಿದ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಬೇಕು ಎಂದಿದ್ದರು, ಅದಕ್ಕೆ ಬಿ ಆರ್ ಶೆಟ್ಟಿ ಕಂಪನಿ ಈ ಕರಾರಿಗೆ ಒಪ್ಪಿಗೆ ಸೂಚಿಸಿಲ್ಲ.
ಅಲ್ಲದೇ ಹಿಂದಿನ ಸರಕಾರಿ ಆಸ್ಪತ್ರೆಯ ನೌಕರರನ್ನು ಹೊಸ ಆಸ್ಪತ್ರೆಯಲ್ಲಿ ಮುಂದುವರೆಸಿಲ್ಲ. ಮಾತ್ರವಲ್ಲದೇ ಆಸ್ಪತ್ರೆ ಮೇಲ್ವಿಚಾರಣಾ ಸಮಿತಿಯಲ್ಲಿ ಕೂಡ ಜನಪ್ರತಿನಿಧಿಗಳು ಇರಬೇಕು ಎಂದು ಬೇಡಿಕೆ ಇರಿಸಿದ್ದೆವು.
ಅದಕ್ಕೂ ಬಿ .ಆರ್ ಶೆಟ್ಟಿ ವಿರೋಧಿಸಿದ್ದಾರೆ ಎಂದು ಶಾಸಕ ರಘುಪತಿ ಭಟ್ ಫೈರ್ ಮಾಡಿದ್ದಾರೆ.
ಇನ್ನು 400 ಬೆಡ್ ಆಸ್ಪತ್ರೆಗೆ ಒಂದೇ ದಿನದಲ್ಲಿ ಲೈಸನ್ಸ್ ಕೊಡುತ್ತೇವೆ. ಆದರೆ ನಿಯಮ ಬದ್ಧವಾಗಿ ಕಟ್ಟಿದಲ್ಲಿ ಮಾತ್ರ.
ಆದ್ರೆ ಇವರು ಹೊಸ ಆಸ್ಪತ್ರೆ ನಿರ್ಮಿಸಲು ನಿಯಮಬಾಹಿರ ವಾಗಿ ಕೆಲಸ ಆರಂಭಿಸಿದ್ದು, ನಗರಾಭಿವೃದ್ಧಿ ಪ್ರಾಧಿಕಾರ ಅನುಮತಿ ಪಡೆಯದೇ ಮೂರು ತಳ ಮಳಿಗೆಯಷ್ಟು ಅಗೆದಿದ್ದಾರೆ.
ಅದೂ ಅಲ್ಲದೇ ತಳ ಮಾಳಿಗೆಯ ಮೂರು ಫ್ಲೋರ್ ಪಾರ್ಕಿಂಗ್ ಎಂದು ಬೇರೆ ಹೇಳುತ್ತಿದ್ದಾರೆ.
ಆದರೆ ಪ್ಲಾನಿನಲ್ಲಿ ಎರಡು ಫ್ಲೋರ್ ಕಮರ್ಷಿಯಲ್ ಎಂದು ತೋರಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ಸಿಗುತ್ತಿತ್ತು.
ಆದ್ರೆ ಅಗ್ರಿಮೆಂಟ್ ಆಗುವ ಮೊದಲೇ ಸುಸಜ್ಜಿತ ಆಸ್ಪತ್ರೆಯನ್ನು ಬಿಚ್ಚಿದ್ದು ಯಾಕೆ.?. ವಾಪಸು ಕೊಡುವುದಿದ್ದರೆ ಮೊದಲಿನ ಆಸ್ಪತ್ರೆ ಕಟ್ಟಿ ಕೊಡಲಿ ಎಂದು ಶಾಸಕರು ಗುಡುಗಿದ್ದಾರೆ.
ಡಾ ಬಿ. ಆರ್ ಶೆಟ್ಟಿ ದೊಡ್ಡ ಷಡ್ಯಂತ್ರ ಮಾಡಿ ಆಸ್ಪತ್ರೆ ಒಳ ಹಾಕಿಕೊಂಡಿದ್ದಲ್ಲದೇ, ಈಗ ಸರಕಾರವನ್ನು ಬೆದರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಆರೋಪಿಸಿದ್ದಾರೆ.
LATEST NEWS
ಅಣ್ಣನ ಪ್ರೀತಿಗೆ ತಮ್ಮ ಬ*ಲಿ; ತಾಯಿಯ ಮುಂದೆಯೇ ಮಗನ ಕೊ*ಲೆ
ಮಂಗಳೂರು/ಕಲಬುರಗಿ: ಯುವ ಸಮಾಜದ ಪ್ರೀತಿಗೆ ಮನೆಯಲ್ಲಿ ವಿರೋಧ ಬರುವುದು ಸಹಜ. ಅದರಲ್ಲೂ ಹುಡುಗಿಯ ವಿಚಾರದಲ್ಲಿ ಇದು ಹೆಚ್ಚಾಗಿಯೇ ಕಾಣಬಹುದು. ವಿಪರ್ಯಾಸವೆಂದರೆ ಅಣ್ಣನ ಪ್ರೇಮದ ವಿಚಾರದಲ್ಲಿ ತಮ್ಮ ಬಲಿ*ಯಾದ ಘಟನೆ ನಡೆದಿದೆ.
ಕಲಬುರಗಿ ನಗರದ ಹೊರವಲಯದಲ್ಲಿರುವ ನಾಗನಹಳ್ಳಿ ಗ್ರಾಮದಲ್ಲಿ ಸುಮಿತ್ ಮಲ್ಲಾಬಾದ್ ಎಂಬ 19 ವರ್ಷದ ಯುವಕನನ್ನು ಭೀಕ*ರವಾಗಿ ಕೊ*ಲೆ ಮಾಡಲಾಗಿದೆ. ತಂದೆ-ತಾಯಿಯೊಂದಿಗೆ ಮುಂಬೈನಲ್ಲಿ ವಾಸವಾಗಿದ್ದ ಸುಮಿತ್, ಮುಂಬೈನಲ್ಲಿ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದ. ಕಳೆದ ವಾರವಷ್ಟೇ ತಾಯಿಯೊಂದಿಗೆ ಕಲಬುರಗಿಗೆ ಆಗಮಿಸಿದ್ದ. ಊರಲ್ಲಿ ಸುಮಿತ್ ಸಹೋದರ ಸಚಿನ್ ಮನೆಯಲ್ಲಿ ವಾಸವಾಗಿದ್ದ. ಸಚಿನ್ ನಾಗನಹಳ್ಳಿ ಗ್ರಾಮದ ತನ್ನದೆ ಏರಿಯಾದ ಯುವತಿಯನ್ನು ಪ್ರೀತಿಸುತ್ತಿದ್ದನಂತೆ. ಈ ವಿಚಾರ ಯುವತಿಯ ಮನೆಯವರಿಗೆ ಗೊತ್ತಾಗಿ ಸಾಕಷ್ಟು ಭಾರಿ ನ್ಯಾಯ ಪಂಚಾಯಿತಿ ಮಾಡಿದ್ದರಂತೆ. ಆದರೆ ಅದು ಬಗೆಹರೆದಿರಲಿಲ್ಲ. ನಿನ್ನೆ ಸಂಜೆ (ಸೆ.21) ಸಚಿನ್ ಮನೆಗೆ ಯುವತಿಯ ಸಹೋದರ ಮತ್ತು ಆತನ ಕೆಲ ಸ್ನೇಹಿತರು ಬಂದಿದ್ದಾಗ ಸಚಿನ್ ಮನೆಯಲ್ಲಿರದ ಕಾರಣ ಆತನ ತಾಯಿ ಮತ್ತು ಸಹೋದರನ ಜೊತೆ ಗಲಾಟೆ ತೆಗೆದಿದ್ದಾರೆ. ಬಳಿಕ ಗಲಾಟೆ ವಿಕೋಪಕ್ಕೆ ತೆರಳಿ ಸುಮಿತ್ನನ್ನ ಚಾ*ಕುವಿನಿಂದ ಚು*ಚ್ಚಿ ಎಸ್ಕೇಪ್ ಆಗಿದ್ದಾರೆ.
ಇತ್ತ ಸುಮಿತ್ಗೆ ಚಾ*ಕು ಚುಚ್ಚಿ*ದ್ದನ್ನು ಕಂಡ ತಾಯಿ, ಮಗನನ್ನ ಉಳಿಸಿಕೊಳ್ಳಲು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹನ್ನೆರೆಡು ಗಂಟೆಗಳ ಕಾಲ ನಡೆದ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬೆಳಗ್ಗೆ (ಸೆ.22) ಸಾವನ್ನ*ಪ್ಪಿದ್ದಾನೆ.
ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಅದೇನೆ ಆಗಲಿ ಯುವತಿಯ ವಿಚಾರದಲ್ಲಿ ಏನು ಮಾಡದ ಅಮಾಯಕ ಯುವಕ ಬಲಿಯಾಗಿರೋದು ನಿಜಕ್ಕೂ ದುರಂತವೆ ಸರಿ.
LATEST NEWS
ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ತುಪ್ಪ ಸಾಗಿಸುವ ಟ್ಯಾಂಕರ್ಗಳಿಗೆ ಜಿಪಿಎಸ್ ಅಳವಡಿಕೆ
ಆಂಧ್ರಪ್ರದೇಶ/ಮಂಗಳೂರು: ತಿರುಪತಿ ತಿರುಮಲದಲ್ಲಿ ಲಡ್ಡು ವಿವಾದ ಉಂಟಾದ ಬಳಿಕ ಸರಕಾರ ನಂದಿನಿ ತುಪ್ಪಕ್ಕೆ ಬೇಡಿಕೆ ಇಟ್ಟಿದೆ. ಒಂದು ತಿಂಗಳ ಹಿಂದೆ ಟಿಟಿಡಿ ಕೆಎಂಎಫ್ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಹೇಳಿದ್ದಾರೆ.
ತಿರುಪತಿ ಲಡ್ಡು ವಿವಾದದ ಬಳಿಕ ಕೆಎಮ್ಎಫ್ ಹೈ ಅಲರ್ಟ್:
“ನಾವು ಒಂದು ತಿಂಗಳ ಹಿಂದೆ ತುಪ್ಪವನ್ನು(ಟಿಟಿಡಿಗೆ) ಸರಬರಾಜು ಮಾಡುತ್ತಿದ್ದೇವೆ. ನಾವು ವಾಹನಗಳಿಗೆ ಜಿಪಿಎಸ್ ಸಿಸ್ಟಮ್ ಮತ್ತು ಜಿಯೋ ಲೊಕೇಶನ್ ಸಾಧನಗಳನ್ನು ಅಳವಡಿಸಿದ್ದೇವೆ. ಇದರಿಂದ ವಾಹನ ಎಲ್ಲಿ ನಿಲ್ಲುತ್ತವೆ ಎಂಬುದನ್ನು ನಾವು ಕಂಡುಹಿಡಿಯಬಹುದು. ಇದು ಎಲ್ಲಿಯೂ ಕಲಬೆರಕೆ ಮಾಡದಂತೆ ನೋಡಿಕೊಳ್ಳಲು ಸಹಾಯಕವಾಗುತ್ತದೆ” ಎಂದು ಜಗದೀಶ್ ತಿಳಿಸಿದ್ದಾರೆ.
ಕೆಎಂಎಫ್, ಟಿಟಿಡಿಗೆ 350 ಟನ್ ತುಪ್ಪ ಪೂರೈಸುವ ಗುತ್ತಿಗೆ ಪಡೆದುಕೊಂಡಿದೆ. ಅಗತ್ಯ ಬಿದ್ದಾಗ ತುಪ್ಪ ಪೂರೈಕೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು. ಅಲ್ಲದೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.
LATEST NEWS
ಪಂಚೆ ಉಟ್ಟು ದೇಸೀ ಸ್ಟೈಲ್ ಅಡುಗೆ ಮಾಡಿದ ಬ್ರಿಟಿಷ್ ಬಾಣಸಿಗ..! ಫಿದಾ ಆದ ನೆಟ್ಟಿಗರು
ಹೆಲ್ಸ್ ಕಿಚನ್ ಹಾಗೂ ಮಾಸ್ಟರ್ ಚೆಫ್ ನಂತಹ ಜನಪ್ರಿಯ ಕಾರ್ಯಕ್ರಮಗಳ ನಿರೂಪಕ ಗಾರ್ಡನ್ ರಾಮ್ಸೆ ಇದೀಗ ತನ್ನ ವೇಷಭೂಷಣದ ಮೂಲಕ ಗಮನ ಸೆಳೆದಿದ್ದಾರೆ. ಬ್ರಿಟಿಷ್ ಸೆಲೆಬ್ರಿಟಿ ಬಾಣಸಿಗ ಗಾರ್ಡನ್ ಜೇಮ್ಸ್ ರಾಮ್ಸೆ ಅವರು ತಮ್ಮ ಡಿಫರೆಂಟ್ ಶೈಲಿಯ ಕುಕಿಂಗ್ ಗಳಿಗೆ ಹೆಸರುವಾಸಿಯಾಗಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೊಸ ಹೊಸ ಅವತಾರದಲ್ಲಿ ಅಡುಗೆ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಸ್ಟೈಲ್ಆಗಿ ಪಂಚೆ ತೊಟ್ಟು ದಕ್ಷಿಣ ಕನ್ನಡ ಭಾರತೀಯ ಶೈಲಿಯ ಅಡುಗೆಗಳನ್ನು ಮಾಡಿದ್ದು ಈ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನೆಯ ರೈಲನ್ನು ಸ್ಫೋಟಿಸಲು ಯತ್ನ
ಈ ಕುರಿತ ವಿಡಿಯೋವನ್ನು historyinmemes(ಹಿಸ್ಟೋರಿ ಇನ್ ಮೀಮ್ಸ್) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಸ್ಥಳೀಯ ಭಾರತೀಯ ಉಡುಗೆ ತೊಟ್ಟು ಅಡುಗೆ ಮಾಡಿದ ಗಾರ್ಡನ್ ರಾಮ್ಸೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಸೆ.20ರದು ಹಂಚಿಕೊಂಡಿದ್ದ ವೀಡಿಯೋ 12 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ.