Connect with us

LATEST NEWS

ಉಡುಪಿ ಕೊಲೆ ಪ್ರಕರಣ: ಸಮಗ್ರ ತನಿಖೆ ನಡೆಸಿದ ಬಳಿಕ ಮಾಹಿತಿ ಬಹಿರಂಗ- ಎಸ್ಪಿ ಡಾ. ಅರುಣ್ 

Published

on

ಉಡುಪಿ: ಉಡುಪಿ ಮಲ್ಪೆಯ ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿದ ಬೆನ್ನಲ್ಲೇ ಪೊಲೀಸರು ಆರೋಪಿ ಪ್ರವೀಣ್‌ ಅರುಣ್‌ ಚೌಗಲೆ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ತನಿಖೆ ಕುರಿತಂತೆ ಉಡುಪಿಯಲ್ಲಿ ಮಾಧ್ಯಮಗಳಿಗೆ ಉಡುಪಿ ಎಸ್ ಪಿ ಡಾ. ಅರುಣ್ ಹೇಳಿಕೆ ನೀಡಿದ್ದಾರೆ. ನಾವು ಪ್ರಕರಣ ಸಂಬಂಧ ಹಲವಾರು ಆಯಾಮದಲ್ಲಿ ತನಿಖೆ ಮಾಡುತ್ತಿದ್ದೇವೆ. ಪ್ರವೀಣ್ ಅರುಣ್ ಚೌಗಲೆಯನ್ನು ವಶಕ್ಕೆ ಪಡೆದಿದ್ದೇವೆ. ಟೆಕ್ನಿಕಲ್ ಮತ್ತು ಹ್ಯೂಮನ್ ಇಂಟೆಲಿಜೆನ್ಸ್ ಮೇರೆಗೆ ಕರೆದುಕೊಂಡ ಬಂದಿದ್ದೇವೆ. ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ ಎಂದಿದ್ದಾರೆ. ಸದ್ಯ ಚೌಗಲೆಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದೇವೆ ಸಿಆರ್ ಪಿಎಫ್ ಅಲ್ಲ ಸಿವಿಲ್ ಪೊಲೀಸ್ ನಲ್ಲಿ ಇದ್ದಾನೆ ಎಂಬ ಮಾಹಿತಿ ಇದೆ. ಉಡುಪಿ ಜಿಲ್ಲೆ ಮತ್ತು ಬೆಳಗಾವಿ ಜಿಲ್ಲೆಯ ಪೊಲೀಸರ ಸಹಕಾರದಿಂದ ಆತನನ್ನು ಕಾರ್ಯಾಚರಣೆ ಮಾಡಿ ನಾವು ವಶಕ್ಕೆ ಪಡೆದುಕೊಂಡಿದ್ದೇನೆ. ಹಲವಾರು ಶಂಕಿತರ ವಿಚಾರಣೆ ಮಾಡುತ್ತಿದ್ದೇವೆ. ಜಿಲ್ಲೆಯ ಎಲ್ಲಾ ಕಡೆ ಬಿಗಿ ಬಂದೋಬಸ್ತ್ ಮಾಡಿದ್ದೇವೆ. ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ಬಂದೋಬಸ್ತ್ ಏರ್ಪಡಿಸಿದ್ದೇವೆ ಎಂದವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದೇವೆ ಎಂದರು.

Click to comment

Leave a Reply

Your email address will not be published. Required fields are marked *

LATEST NEWS

ಪ್ರಜ್ವಲ್ ರೇವಣ್ಣ ಪ್ರಕರಣ; ವೀಡಿಯೋ, ಫೋಟೋ ಅಪ್ಲೋಡ್ ಮಾಡಿದ್ದಾತ ಅರೆಸ್ಟ್

Published

on

ಚಿಕ್ಕಮಗಳೂರು : ಸದ್ಯ ಪ್ರಜ್ವಲ್ ಹೆಸರು ದೇಶದಾದ್ಯಂತ ಚಾಲ್ತಿಯಂತಿದೆ. ಆತ ಮಾಡಿರುವ ಕುಕೃತ್ಯಕ್ಕೆ ಆಕ್ರೋಶ ಕೇಳಿ ಬರುತ್ತಿದೆ. ಇದೀಗ ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪಿಯನ್ನು ಬಂಧಿಸಲಾಗಿದೆ.

ಮೂಡುಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಬಂಧಿತ. ಆರೋಪಿ ಪ್ರಜ್ವಲ್, ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಎಂದು ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್​ನಲ್ಲಿ ಅಪ್ಲೋಡ್​ ಮಾಡಿದ್ದನು. ಪ್ರಜ್ವಲ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಐಪಿಸಿ ಸೆಕ್ಷನ್​ 67,67 (ಎ) ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಪ್ರಜ್ವಲ್​ ಟ್ರೋಲ್ ಪೇಜ್ ಅಡ್ಮಿನ್ ಆಗಿದ್ದ. ಸದ್ಯ ಪ್ರಜ್ವಲ್ ರೇವಣ್ಣ ಲೈಂ*ಗಿಕ ದೌರ್ಜ*ನ್ಯ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಜ್ವಲ್ ರೇವಣ್ಣ ಜರ್ಮನಿಗೆ ಎಸ್ಕೇಪ್ ಆಗಿದ್ದಾರೆ. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಎಸ್ ಐಟಿ ತನಿಖೆ ಚುರುಕುಗೊಳಿಸಿದೆ.

ಎಚ್ಚರಿಕೆ ನೀಡಿದ್ದ ಬಿ.ಕೆ.ಸಿಂಗ್ :

ಈ ಬಗ್ಗೆ ಎಸ್ಐಟಿಯ ಮುಖ್ಯಸ್ಥ ಬಿ.ಕೆ. ಸಿಂಗ್ ಪ್ರಕಟಣೆ ನೀಡಿದ್ದರು. ಅಶ್ಲೀಲ ವಿಡಿಯೋಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್‌ನಲ್ಲಿ‌ ಇಟ್ಟುಕೊಳ್ಳುವುದು ಸಹ ಅಪರಾಧ. ಯಾವುದೇ ವ್ಯಕ್ತಿ ಸಂದೇಶಗಳನ್ನು ರೂಪಿಸುವ, ಇಟ್ಟುಕೊಳ್ಳುವ ಹಾಗೂ ಪ್ರಸಾರ ಮಾಡುವ ಕೆಲಸವನ್ನು ಮಾಡಿದರೇ, ಅಂಥ ವ್ಯಕ್ತಿಗಳ‌ನ್ನು ಸಂದೇಶ ರಚನೆಕಾರರು ಎಂದು ಪರಿಗಣಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ : ಶಾಲಾ ಬಾಲಕಿಗೆ ಆಟೋ ಚಾಲಕನಿಂದ ಲೈಂಗಿಕ ಕಿರುಕುಳ.! ಹೇಯ ಕೃತ್ಯ ಮೊಬೈಲ್‌ ನಲ್ಲಿ ಸೆರೆ

ಅಶ್ಲೀಲ ವಿಡಿಯೋ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಹೀಗೆ ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ಸೂಚನೆ ನೀಡಿದ್ದರು.

 

Continue Reading

LATEST NEWS

ಶಾಲಾ ಬಾಲಕಿಗೆ ಆಟೋ ಚಾಲಕನಿಂದ ಲೈಂಗಿಕ ಕಿರುಕುಳ.! ಹೇಯ ಕೃತ್ಯ ಮೊಬೈಲ್‌ ನಲ್ಲಿ ಸೆರೆ

Published

on

ನಾಗ್ಪುರ: ಬಾಲಕಿಯನ್ನು ಪ್ರತಿನಿತ್ಯ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋ ಚಾಲಕನೇ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಾಗ್ಪುರದಲ್ಲಿ ನಡೆದಿದೆ.

nagpura

ಈ ಕುರಿತ ವಿಡಿಯೋ ವೈರಲ್‌ ಆಗಿದೆ. ನಾಗ್ಪುರದ ಓಂಕಾರ್ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 10ನೇ ತರಗತಿಯ ವಿದ್ಯಾರ್ಥಿನಿಗೆ ಆಟೋ ಚಾಲಕ ಲೈಂಗಿಕ ಕಿರುಕುಳ ನೀಡುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ಶಾಲೆಯಿಂದ ಮನೆಗೆ ಕರೆದುಕೊಂಡು ಬರುತ್ತಿರುವ ಸಮಯದಲ್ಲಿ ಏಕಾಂತ ಸ್ಥಳದಲ್ಲಿ ಆಟೋ ನಿಲ್ಲಿಸಿದ ಚಾಲಕ ಹಿಂದೆ ಕುಳಿತಿದ್ದ ಬಾಲಕಿಗೆ ಕಿರುಕುಳ ಕೊಡಲು ಆರಂಭಿಸಿದ್ದಾನೆ. ಬಾಲಕಿಯ ಮೈ ಕೈ ಮುಟ್ಟಿ ಆಕೆಯ ಜತೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಆಘಾತಕಾರಿ ಘಟನೆಯನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಇದೀಗ ಈ ವೀಡಿಯೋ ವೈರಲ್‌ ಆಗಿದೆ.

ಮುಂದೆ ಓದಿ..; ಇವಿಎಂ ತಿರುಚಲು 2.5 ಕೋಟಿ ಬೇಡಿಕೆ; ಆರೋಪಿ ಅರೆಸ್ಟ್

ವಿಡಿಯೋ ವೈರಲ್‌ ಆಗುತ್ತಿದ್ದಂತೆ ಆಕೆಯ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಿರುಕುಳ ನೀಡಿದ ಆಟೋ ಚಾಲಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ. ಪೊಲೀಸರು ಚಾಲಕನನ್ನು ಹುಡುಕಿ ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ. ವೈರಲ್​ ಆಗಿರುವ ವಿಡಿಯೋದಲ್ಲಿ ಆಟೋ ರಿಕ್ಷಾದ ಹೊರಗೆ ನಿಂತಿರುವ ಚಾಲಕ ಮತ್ತು ಅಪ್ರಾಪ್ತ ಬಾಲಕಿ ಕುಳಿತಿದ್ದ ಹಿಂದಿನ ಸೀಟಿನಲ್ಲಿ ನುಸುಳುತ್ತಿರುವ ದೃಶ್ಯವು ಸೆರೆಯಾಗಿದೆ. ಆಟೋ ಚಾಲಕನ ಹೀನಾ ಕೃತ್ಯವನ್ನು ದೂರದಿಂದ ಮೊಬೈಲ್​ನಲ್ಲಿ ಸೆರೆಹಿಡಿಯಲಾಗಿದೆ. ಕೆಲವು ತಿಂಗಳ ಹಿಂದೆ ಮೈಸೂರಿನಲ್ಲೂ ಇಂತಹದ್ದೇ ಒಂದು ಘಟನೆ ವರದಿಯಾಗಿತ್ತು. ನಾಲ್ಕನೇ ತರಗತಿಯ ಬಾಲಕಿಗೆ ನ್ಯಾಯಾಲಯದ ಗುಮಾಸ್ತನೊಬ್ಬ ಲೈಂಗಿಕ ಕಿರುಕುಳ ನೀಡಿದ್ದನು. ಆರೋಪಿಯನ್ನು ಪೊಲೀಸರು ಬಳಿಕ ಬಂಧಿಸಿದ್ದರು.

 

 

Continue Reading

FILM

ನಟಿಗೆ ದುಬಾರಿ IPL ಟಿಕೆಟ್ ಖರೀದಿ ಮಾಡಿದ ‘ದಳಪತಿ ವಿಜಯ್’.! ಆ ನಟಿ ಯಾರು ಗೊತ್ತಾ?

Published

on

ಚೆನ್ನೈ/ಮಂಗಳೂರು: ದಳಪತಿ ವಿಜಯ್ ಸಿನೆಮಾ ಬಂದ್ರೆ ಸಾಕು ಜನರು ಥಿಯೇಟರ್‌ಗೆ ಮುಗಿ ಬೀಳ್ತಾರೆ. ಸಾಲು ಸಾಲು ಸೂಪರ್ ಹಿಟ್ ಮೂವಿಗಳನ್ನು ನೀಡಿರುವ ಈ ನಟ ಈಗ ಕೆಲವೊಂದು ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇನ್ನು ರಾಜಕೀಯದತ್ತ ಒಲವು ಮಾಡಿರುವ ವಿಜಯ್ ರಾಜಕೀಯಕ್ಕೆ ಸೇರುವುದಾಗಿ ಈಗಾಗಲೇ ಘೋಷಣೆ ಮಾಡಿದ್ದಾರೆ. ಇನ್ನೇನು ಚಿತ್ರರಂಗಕ್ಕೆ ಫುಲ್‌ಸ್ಟಾಪ್‌ ಇಟ್ಟು ರಾಜಕೀಯದತ್ತ ಮುಖ ಮಾಡಲಿದ್ದಾರೆ.  ಈ ಮಧ್ಯೆ ವಿಜಯ್ ನಟಿಯೊಬ್ಬರಿಗೆ ದುಬಾರಿ ಐಪಿಎಲ್‌ ಟಿಕಿಟ್ ಖರೀದಿ ಮಾಡಿದ್ದಾರೆ.

vijay

ಈ ನಟಿ ಯಾರು ಗೊತ್ತಾ?

ವಿಜಯ್ ನಟಿ ಒಬ್ಬರಿಗೆ ಐಪಿಎಲ್‌ನ ದುಬಾರಿ ಟಿಕಿಟ್ ಖರೀದಿ ಮಾಡಿಕೊಟ್ಟಿದ್ದಾರೆ. ಈ ಮ್ಯಾಚ್ ಚೆನ್ನೈನಲ್ಲಿ ನಡಿದಿತ್ತು. ಆರ್‌ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆದ ಹಾಟ್ ಮ್ಯಾಚ್‌ ಇದಾಗಿತ್ತು. ಇನ್ನು ಈ ನಟಿ ಬೇರೆ ಯಾರೂ ಅಲ್ಲ ಮಾಣಿಕ್ಯ ಸಿನೆಮಾದ “ವರಲಕ್ಷ್ಮೀ ಶರತ್ ಕುಮಾರ್”. ಈ ವಿಚಾರವನ್ನುಖುದ್ದು ವರಲಕ್ಷ್ಮೀ ಸಂದರ್ಶನವೊಂದರಲ್ಲಿ ರಿವೀಲ್ ಮಾಡಿದ್ದಾರೆ.  ‘ನಾನು ಐಪಿಎಲ್‌ ನ ಎರಡು ಮ್ಯಾಚ್‌ ವೀಕ್ಷಣೆ ಮಾಡಿದ್ದು ನನಗೆ ವಿಜಯ್ ಅವರು ಟಿಕೆಟ್ ಖರೀದಿ ಮಾಡಿಕೊಟ್ಟಿದ್ದರು’ ಎಂದು ಹೇಳಿದ್ದಾರೆ.

“ನಿವೇದಿತಾಜೈನ್”ಗೆ ಸಾವಿನ ಸುಳಿವು ಮೊದಲೇ ಇತ್ತಾ.!? ಈಬಗ್ಗೆ ನಿವೇದಿತಾ ತಾಯಿ ಹೇಳಿದ್ದೇನು ಗೊತ್ತಾ?

ವರಲಕ್ಷ್ಮೀ ಶರತ್ ಕುಮಾರ್ ಕನ್ನಡ, ತೆಲುಗು, ಮಲಯಾಳಂ, ತಮಿಳು ಸಿನೆಮಾಗಳಲ್ಲಿ ನಟಿಸಿದ್ದಾರೆ. ಇನ್ನು ‘ಮಾಣಿಕ್ಯ’ ಸಿನೆಮಾದಲ್ಲಿ ಸುದೀಪ್‌ಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ‘ರನ್ನ’, ವಿಸ್ಮಯ’ ಕನ್ನಡ ಸಿನೆಮಾಗಳಲ್ಲಿ ಕಾಣಿಸಿಕೊಂಡಿದ್ದರು. ಅದಲ್ಲದೇ ಇತ್ತೀಚಿಗೆ ಯಾವ ಕನ್ನಡ ಸಿನೆಮಾದಲ್ಲೂ ಕಾಣಿಸಿಕೊಂಡಿಲ್ಲ. ‘ಹನುಮಾನ್’ ಸಿನೆಮಾದಲ್ಲಿ ನಟಿಸಿದ್ದಾರೆ. ಇನ್ನು ಆರ್ಟ್‌ ಗ್ಯಾಲರಿ ಓನರ್‌ ನಿಕೋಲೈ ಸಹದೇವ್‌ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

Continue Reading

LATEST NEWS

Trending