Connect with us

DAKSHINA KANNADA

Mangaluru: ನೇತ್ರ ಜ್ಯೋತಿ ಕಾಲೇಜಿನ ವಿಡಿಯೋ ಪ್ರಕರಣಕ್ಕೆ ಎಸ್‌ಐಟಿ ರಚಿಸುವ ಪ್ರಶ್ನೆಯೇ ಇಲ್ಲ- ಸಿಎಂ ಸಿದ್ಧರಾಮಯ್ಯ

Published

on

ಮುಖ್ಯಮಂತ್ರಿಯಾಗಿರುವ ಸಿದ್ಧರಾಮಯ್ಯ ಅವರು ಇಂದು ಮೊದಲ ಬಾರಿಗೆ ಕರಾವಳಿಗೆ ಆಗಮಿಸಿ ಪ್ರಗತಿ ಪರಿಶೀಲನಾ ಸಭೆಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಸಲಿದ್ದಾರೆ.

ಮಂಗಳೂರು: ಮುಖ್ಯಮಂತ್ರಿಯಾಗಿರುವ ಸಿದ್ಧರಾಮಯ್ಯ ಅವರು ಇಂದು  ಮೊದಲ ಬಾರಿಗೆ ಕರಾವಳಿಗೆ ಆಗಮಿಸಿ ಪ್ರಗತಿ ಪರಿಶೀಲನಾ ಸಭೆಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಸಲಿದ್ದಾರೆ.

ಆ.1ರ ಮಂಗಳವಾರ ಬೆಳಿಗ್ಗೆ ಮಂಗಳೂರು ಏರ್ಪೋರ್ಟ್ ಗೆ  ಬಂದಿಳಿದ ಸಿಎಂ ಮಾಧ್ಯಮದೊಂದಿಗೆ ಮಾತನಾಡಿ ಉಡುಪಿ ನೇತ್ರಜ್ಯೋತಿ ಕಾಲೇಜಿನ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು ಈ ಕೇಸ್ ನಲ್ಲಿ ಪೊಲೀಸರು ಸುಮೋಟೋ ಎಫ್ ಐ ಆರ್ ದಾಖಲು ಮಾಡಿದ್ದಾರೆ.

ಡಿವೈಎಸ್ಪಿ ಹಂತದ ತನಿಖೆ ಆಗ್ತಿದೆ. ಅದು ಮೊದಲು ನಡೆಯಲಿ. ರಾಷ್ಟ್ರೀಯ ಮಹಿಳಾ ಆಯೋಗವೇ ಅಲ್ಲಿ ಕ್ಯಾಮರಾ ಇಟ್ಟಿರಲಿಲ್ಲ ಎಂದಿದ್ದಾರೆ.

ತನಿಖಾ ವರದಿ ಬರಲಿ, ಆಮೇಲೆ ಈ ಬಗ್ಗೆ ಮಾತನಾಡುವ ಎಂದರು.

ಕಾಲೇಜಿನಲ್ಲಿ ಇರುವ ವಿದ್ಯಾರ್ಥಿಗಳು ತಮಾಷೆ ಮಾಡಿರಬಹುದು ಅಂತ ಹೋಂ ಮಿನಿಸ್ಟರ್ ಹೇಳಿರಬಹುದು.

ಎಫ್ಐಆರ್ ಆಗಿ ತನಿಖೆ ಆಗ್ತಿದೆ, ಡಿವೈಎಸ್ಪಿ ತನಿಖೆ ಮಾಡ್ತಾ ಇದ್ದಾರೆ.

ಡಿವೈಎಸ್ಪಿ ಲೆವೆಲ್ ತನಿಖೆ ಆಗ್ತಿರೋವಾಗ ಎಸ್ ಐಟಿ ಪ್ರಶ್ನೆ ಉದ್ಭವಿಸಲ್ಲ ಎಂದರು.

ಕರಾವಳಿಗೆ ಆಗಲೇ ಏನೇನು ಕೊಡಬಹುದು ಅಂತ ಹೇಳಿದ್ದೇವೆ ಎಂದ ಅವರು ಜುಲೈ ತಿಂಗಳ ಮಳೆ ಹಾನಿ ಬಗ್ಗೆ ಪರಿಶೀಲನೆಗೆ ಬಂದಿದ್ದೇನೆ ಎಂದರು.

ನೈತಿಕ ಪೊಲೀಸ್ ಗಿರಿ ಯಾರೇ ಮಾಡಿದ್ದರೂ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುವುದು. ಕಾನೂನು ಕೈಗೆತ್ತಿಕೊಳ್ಳಲು ಇಲ್ಲಿ ಯಾರಿಗೂ ಅವಕಾಶ ಇಲ್ಲ.

ಪೊಲೀಸರಿಗೆ ಇದಕ್ಕೆ ಅವಕಾಶ ಕೊಡಬೇಡಿ ಅಂದಿದ್ದೇನೆ.

ಸೌಜನ್ಯ ಪ್ರಕರಣ ಸಿಬಿಐಗೆ ಕೊಟ್ಟಿತ್ತು, ಅವರ ಪೋಷಕರು ‌ಈಗ ಮರು ತನಿಖೆಗೆ ಮನವಿ ಮಾಡಿದ್ದಾರೆ.

ಕಾನೂನು ಪ್ರಕಾರ ಏನಾಗಬೇಕು ಅಂತ ನೋಡಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು.

ನಾನು ಲಾಯರ್ ಆಗಿ ಹೇಳೋದಾದ್ರೆ ಇದರ ಬಗ್ಗೆ ಹೈಕೋರ್ಟ್ ಗೆ ಅಪೀಲ್ ಹೋಗಬೇಕು.

ನಾನು ಸಿಬಿಐ ಕೋರ್ಟ್ ಜಡ್ಜ್ ಮೆಂಟ್ ನೋಡಿಲ್ಲ.

ಅದರ ಜಡ್ಜ್ ಮೆಂಟ್ ಓದಿ ನೋಡ್ತೇನೆ, ಅಪೀಲ್ ಗೆ ಅವಕಾಶ ಇದ್ಯಾ ನೋಡ್ತೀನಿ.

ಅವರ ಪೋಷಕರು ಜಡ್ಜ್ ಮೆಂಟ್ ಕಾಪಿ ತಂದು ಕೊಟ್ಟಿದ್ದಾರೆ ಎಂದರು.

ಸಾಮಾಜಿಕ ತಾಣಗಳಲ್ಲಿ ಸುಳ್ಳು ಸುದ್ದಿ ಮಾಡಿದ್ರೆ ಕಠಿಣ ಕಾನೂನು ಕ್ರಮ ವಹಿಸಲಾಗುವುದು.

ಟೀಕೆ ಮಾಡಿದರೆ ಕ್ರಮ ತೆಗೋಳಲ್ಲ ಆದರೆ ಸುಳ್ಳು ಸುದದಿ ಮಾಡುವುದನ್ನು ಸಹಿಸಲ್ಲ.

ಫ್ಯಾಮಿಲಿ ಬಗ್ಗೆ ಹೇಳೋದು ಟೀಕೇನಾ ? ಏನು ಬೇಕಾದರೂ ಹೇಳಬಹುದಾ ? ನಿಮ್ಮ ಫ್ಯಾಮಿಲಿ ಬಗ್ಗೆ ಯಾರಾದ್ರೂ ಏನು ಬೇಕಾದರೂ ಹೇಳಬಹುದು.

ಟೀಕೆ ಬೇರೆ, ಸುಳ್ಳು ಸುದ್ದಿ ಹಬ್ಬಿಸೋದು ಬೇರೆ.

ವೈಯಕ್ತಿಕವಾಗಿ ತೇಜೋವಧೆ ಮಾಡೋದು ಕೂಡ ಬೇರೆ ಎಂದರು.

ಬಿಟ್ ಕಾಯಿನ್‌ ವಿಚಾರದಲ್ಲಿ ಮಾತನಾಡಿದ ಅವರು ಎಸ್ ಐಟಿ ತನಿಖೆ ಆಗ್ತಿದೆ.

ಅವರಿಗೆ ಸ್ವಾತಂತ್ರ್ಯ ಕೊಡಬೇಕು, ಅದು ಆಗ್ತಾ ಇದೆ ಎಂದರು.

Click to comment

Leave a Reply

Your email address will not be published. Required fields are marked *

DAKSHINA KANNADA

Moodabidri: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್..!

Published

on

ಮೂಡುಬಿದಿರೆ: ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ತಂಡವು ಬುಧವಾರ ವಶಕ್ಕೆ ಪಡೆದಿದೆ.

ಬೆಳುವಾಯಿ ನಿವಾಸಿಗಳಾದ ಮಹಮ್ಮದ್ ಅಯಾನ್ (22), ಫರ್ಹಾನ್ ಖಾನ್ (18) ಹಾಗೂ ಶೇಖ್ ಮುಹಮ್ಮದ್ ಜುಬೈರ್ (19) ಬಂಧಿತ ಆರೋಪಿಗಳು.

ಮೂವರು ಆರೋಪಿಗಳು ಬೆಳುವಾಯಿ ಕಾಂತಾವಾರ ದ್ವಾರದ ಬಳಿ ಸ್ಕೂಟರ್ ನಲ್ಲಿ ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದಾರೆಂದ ಖಚಿತ ಮಾಹಿತಿಯನ್ನು ಮೇರೆಗೆ ಸ್ಥಳಕ್ಕೆ ಧಾವಿಸಿದ್ದಾರೆ.

ಬಳಿಕ ಮೂವರು ವ್ಯಕ್ತಿಗಳ ಸಹಿತ 800 ಗ್ರಾಂ ಗಾಂಜಾ ಮತ್ತು ಸ್ಕೂಟರನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ.

ಈ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ 62,000 ಆಗಿರಬಹುದೆಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

Continue Reading

DAKSHINA KANNADA

Mangaluru: ಸೋಮೇಶ್ವರ ಉಚ್ಚಿಲದಲ್ಲಿ ಬಲೆಗೆ ಬಿದ್ದ ದೈತ್ಯ ಪಿಲಿ ತೊರಕೆ..!

Published

on

ಮಂಗಳೂರು: ಮಂಗಳೂರಿನ ಉಳ್ಳಾಲ ಸಮೀಪದ ಸೋಮೇಶ್ವರ ಉಚ್ಚಿಲದ ನಾಡದೋಣಿ ಮೀನುಗಾರರಿಗೆ ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಲಭಿಸಿದೆ.

ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ನಿನ್ನೆ ಸಂಜೆ ಸಮುದ್ರ ತೀರದಲ್ಲಿ ಮೀನಿಗಾಗಿ ಬಲೆ ಹಾಕಿದ್ದು, ಸುಮಾರು 75 ಕೆ.ಜಿ. ತೂಕದ ಮೀನು ಅವರ ಬಲೆಗೆ ಬಿದ್ದಿದೆ.

ಈ ವರ್ಷದ ತಮ್ಮ ಮೀನುಗಾರಿಕೆ ಅವಧಿಯಲ್ಲಿ ಸಿಕ್ಕ ಅತಿದೊಡ್ಡ ಮೀನು ಇದಾಗಿದೆ ಎಂದವರು ಅಭಿಪ್ರಾಯ ಪಟ್ಟಿದ್ದಾರೆ.

ಪ್ರತಿವರ್ಷದಂತೆ ಈ ಬಾರಿಯೂ ಸಮುದ್ರದಲ್ಲಿ ಕೆಸರಿನಂತೆ ಅಲೆಗಳು ಬರುತ್ತವೆ.

ಈ ನೀರಿಗೆ ಮೀನುಗಾರಿಕೆಯಲ್ಲಿ ಅತ್ಯಂತ ಪಾವಿತ್ರ್ಯತೆಯೂ ಇದೆ.

ಅದರಲ್ಲಿ ಹಲವು ಬಗೆಯ ಮೀನುಗಳು ಬರುವ ಐತಿಹ್ಯವಿದೆ.
ಈ ಬಾರಿ ದೊಡ್ಡ ಗಾತ್ರದ ಪಿಲಿತೊರಕೆ ಬಂದಿರುವುದು ಮೀನುಗಾರರಲ್ಲಿ ಉತ್ಸಾಹ ಮೂಡಿಸಿದೆ.

ಮಾರಾಟ ಮಾಡುವುದಾದರೆ ಈ ಮೀನಿಗೆ ಕೆ.ಜಿ.ಗೆ 200 ರೂಪಾಯಿ ಬೆಲೆ ಇದೆ.

ಆದರೆ ಸಿಕ್ಕ ಮೀನನ್ನು ವ್ಯಾಪಾರ ಮಾಡದೆ ಈದ್ ಹಬ್ಬ ಇರುವುದರಿಂದ ತಮ್ಮೊಳಗೆ ಹಂಚಿಕೊಂಡಿದ್ದಾರೆ.

Continue Reading

DAKSHINA KANNADA

ದ.ಕ.ಜಿಲ್ಲೆಯ 9 ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

Published

on

ಮಂಗಳೂರು: ದ.ಕ.ಜಿಲ್ಲೆಯ 9 ತಾಲೂಕಿನ 9 ಗ್ರಾಮಗಳು 2022-23ನೆ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಯಾಗಿದೆ.

ಅಕ್ಟೋಬರ್ 2ರ ಗಾಂಧಿಜಯಂತಿ ದಿನದಂದು ರಾಜ್ಯ ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

ಮಂಗಳೂರು ತಾಲೂಕಿನ ಉಳಾಯಿಬೆಟ್ಟು, ಉಳ್ಳಾಲ ತಾಲೂಕಿನ ಬೆಳ್ಮ, ಮುಲ್ಕಿ ತಾಲೂಕಿನ ಕೆಮ್ರಾಲ್, ಮೂಡುಬಿದಿರೆ ತಾಲೂಕಿನ ಪುತ್ತಿಗೆ, ಬಂಟ್ವಾಳ ತಾಲೂಕಿನ ಅಮ್ಮುಂಜೆ, ಪುತ್ತೂರು ತಾಲೂಕಿನ ಉಪ್ಪಿನಂಗಡಿ, ಕಡಬ ತಾಲೂಕಿನ ಸವಣೂರು, ಬೆಳ್ತಂಗಡಿ ತಾಲೂಕಿನ ಬಳಂಜ, ಸುಳ್ಯ ತಾಲೂಕಿನ ಮರ್ಕಂಜ ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿವೆ.

Continue Reading

LATEST NEWS

Trending