DAKSHINA KANNADA
Udupi: ಎನ್ಸಿಸಿ ನೇವಲ್ ಕೆಡೆಟ್ಗಳಿಗೆ ಓಶಿಯನ್ ಸೈಲಿಂಗ್ ಎಕ್ಸ್ಪೆಡಿಶನ್
ಮಂಗಳೂರು ನೇವಲ್ ಎನ್ಸಿಸಿ ಗ್ರೂಪ್ ಆಶ್ರಯದಲ್ಲಿ ಕರ್ನಾಟಕ ಹಾಗೂ ಗೋವಾ ರಾಜ್ಯದ 72 ಎನ್ಸಿಸಿ ನೇವಲ್ ಕೆಡೆಟ್ಗಳಿಗೆ ಓಶಿಯನ್ ಸೈಮಲಿಂಗ್ ಎಕ್ಸ್ಪೆಡಿಶನ್ ಸೆ. 13ರಿಂದ 22ರವರೆಗೆ ಉಡುಪಿ ಉದ್ಯಾವರದ ಹಿನ್ನೀರಿನಲ್ಲಿ ನಡೆಯಿತು.
ಮಂಗಳೂರು: ಮಂಗಳೂರು ನೇವಲ್ ಎನ್ಸಿಸಿ ಗ್ರೂಪ್ ಆಶ್ರಯದಲ್ಲಿ ಕರ್ನಾಟಕ ಹಾಗೂ ಗೋವಾ ರಾಜ್ಯದ 72 ಎನ್ಸಿಸಿ ನೇವಲ್ ಕೆಡೆಟ್ಗಳಿಗೆ ಓಶಿಯನ್ ಸೈಮಲಿಂಗ್ ಎಕ್ಸ್ಪೆಡಿಶನ್ ಸೆ. 13ರಿಂದ 22ರವರೆಗೆ ಉಡುಪಿ ಉದ್ಯಾವರದ ಹಿನ್ನೀರಿನಲ್ಲಿ ನಡೆಯಿತು.
100 ವರ್ಷಕ್ಕೂ ಅಧಿಕ ಹಳೆಯ ಡಿಕೆ ವೇಲರ್ ಬೋಟ್ನಲ್ಲಿ 5 ಪುಲ್ಲರ್ ಹಾಗೂ ಅವರನ್ನು ನಿಯಂತ್ರಿಸುವ ಕ್ಯಾಪ್ಟನ್ಗಳು ಉದ್ಯಾವರದ 21ನೇ ಕರ್ನಾಟಕ ನೇವಲ್ ಎನ್ಸಿಸಿ ಯುನಿಟ್ನ ಬೋಟ್ ಪೂಲ್ನಲ್ಲಿ ಈ ಸೈಲಿಂಗ್ ತರಬೇತಿ ಪಡೆಯುತ್ತಿದ್ದಾರೆ.
72ಮಂದಿ ಕೆಡೆಟ್ಗಳು ಈ ತರಬೇತಿ ಪಡೆದರು.
ನೇವಲ್ ಎನ್ಸಿಸಿಯಲ್ಲಿ ವಿಶೇಷ ತರಬೇತಿ ಆಗಿರುವ ಈ ಓಶಿಯನ್ ಸೈಲಿಂಗ್ ಎಕ್ಸ್ಪೆಡಿಶನ್ ಶಿಬಿರದಲ್ಲಿ ರಾಜ್ಯದ ಉಡುಪಿ, ದ.ಕ., ಮೈಸೂರು, ಬೆಂಗಳೂರು, ಕಾರವಾರ ಹಾಗೂ ಗೋವಾದ 6 ನೇವಲ್ ಎನ್ಸಿಸಿ ಯುನಿಟ್ನ 36 ಮಂದಿ ಹುಡುಗಿಯರು ಹಾಗೂ 36 ಮಂದಿ ಹುಡುಗರು ಸೇರಿದಂತೆ ಒಟ್ಟು 72 ಮಂದಿ ಭಾಗವಹಿಸಿದ್ದಾರೆ.
ಅವಘಡ ಸಂಭವಿಸಿದಾಗ ಜೀವ ರಕ್ಷಣೆ, ಸಮುದ್ರದ ದೈತ್ಯ ಅಲೆಗಳನ್ನು ಬೇಧಿಸಿಕೊಂಡು ಬೋಟನ್ನು ನಡೆಸುವುದು, ದೈಹಿಕ ಹಾಗೂ ಮಾನಸಿಕ ಕ್ಷಮತೆಯನ್ನು ಬೆಳೆಸುವುದಲ್ಲದೆ ಈ ತರಬೇತಿ ಪಡೆದ ಕೆಡೆಟ್ ಇತರರಿಗಿಂತ ಹೆಚ್ಚಿನ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬಲ್ಲ ತರಬೇತಿ ನೀಡಲಾಗುತ್ತಿದೆ.
ಪ್ರಸ್ತುತ 10 ದಿನಗಳ ಈ ಶಿಬಿರದಲ್ಲಿ ಕೆಡೆಟ್ಗಳು ಸೈಲಿಂಗ್ ಅಲ್ಲದೆ ಇತರ ಸಾಮಾಜಿಕ ಕಾರ್ಯಕ್ರಮಗಳಲ್ಲೂ ಭಾಗವಹಿಸಲಿದ್ದಾರೆ.
ಬೀಚ್ ಸ್ವಚ್ಛತೆ, ಗ್ರಾಮಗಳಿಗೆ ತೆರಳಿ ಪರಿಸರ ಸ್ವಚ್ಛತೆ, ಟ್ರೆಕ್ಕಿಂಗ್, ಪ್ರಥಮ ಚಿಕಿತ್ಸೆ, ಅಗ್ನಿ ಆಕಸ್ಮಿಕ ಪ್ರಾತ್ಯಕ್ಷಿಕೆ, ರಸ್ತೆ ಸುರಕ್ಷತೆ, ಕಾಲೇಜುಗಳಿಗೆ ತೆರಳಿ ಮಾದಕ ದ್ರವ್ಯ ವಿರೋಧಿ ಅಭಿಯಾನ ನಡೆಸುವುದು, ಸೈಬರ್ ಕ್ರೈಂ, ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ, ಸಾಂಸ್ಕೃತಿಕ ವಿನಿಮಯ ಮೊದಲಾದ ಚಟುವಟಿಕೆಗಳನ್ನು ನಡೆಸಲಿದ್ದಾರೆ.
DAKSHINA KANNADA
Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!
ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.
ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ
DAKSHINA KANNADA
Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು
ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.
ನವೀನ್ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.
DAKSHINA KANNADA
ಕಟೀಲು ಕ್ಷೇತ್ರಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ
ಕಿನ್ನಿಗೋಳಿ: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ ನೀಡಿದರು.
ದೇವಳದ ವತಿಯಿಂದ ಶ್ರೀ ರಾಮುಲು ಅವರನ್ನು ಗೌರವಿಸಲಾಯಿತು.
ಈ ಸಂದರ್ಭ ವೆಂಕಟರಮಣ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು ಉಪಸ್ಥಿತರಿದ್ದರು.
ಕ್ಷೇತ್ರದಲ್ಲಿ ಅವರು ಅನ್ನಪ್ರಸಾದವನ್ನು ಸ್ವೀಕರಿಸಿ ಸರಳತೆ ಮೆರೆದರು. ಬಳಿಕ ಕ್ಷೇತ್ರದ ಕುರಿತಂತೆ ಹೆಚ್ಚಿನ ಮಾಹಿತಿ ಪಡೆದುಕೊಂಡರು.
- FILM4 days ago
ಆಲಿಯಾ ಭಟ್ ಡೀಫ್ ಫೇಕ್ ವಿಡಿಯೋ ವೈರಲ್ – ವಿಡಿಯೋ ನೋಡಿದ್ರಾ..?
- bangalore4 days ago
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?
- bangalore6 days ago
ಬೆಂಗಳೂರು ಕಂಬಳಕ್ಕೆ ಚಾಲನೆ ನೀಡಿದ ಅಶ್ವಿನಿ ಪುನಿತ್ ರಾಜ್ ಕುಮಾರ್
- DAKSHINA KANNADA7 days ago
Puttur: ಮಹಿಳೆಗೆ ಅಮಲು ಬರಿಸುವ ಪಾನೀಯ ಕುಡಿಸಿ ಅತ್ಯಾಚಾರ..!