Connect with us

DAKSHINA KANNADA

Udupi: ಎನ್‌ಸಿಸಿ ನೇವಲ್ ಕೆಡೆಟ್‌ಗಳಿಗೆ ಓಶಿಯನ್‌ ಸೈಲಿಂಗ್‌ ಎಕ್ಸ್ಪೆಡಿಶನ್‌

Published

on

ಮಂಗಳೂರು ನೇವಲ್ ಎನ್‌ಸಿಸಿ ಗ್ರೂಪ್ ಆಶ್ರಯದಲ್ಲಿ ಕರ್ನಾಟಕ ಹಾಗೂ ಗೋವಾ ರಾಜ್ಯದ 72 ಎನ್‌ಸಿಸಿ ನೇವಲ್  ಕೆಡೆಟ್‌ಗಳಿಗೆ ಓಶಿಯನ್ ಸೈಮಲಿಂಗ್ ಎಕ್ಸ್ಪೆಡಿಶನ್ ಸೆ. 13ರಿಂದ 22ರವರೆಗೆ ಉಡುಪಿ ಉದ್ಯಾವರದ ಹಿನ್ನೀರಿನಲ್ಲಿ ನಡೆಯಿತು.

ಮಂಗಳೂರು: ಮಂಗಳೂರು ನೇವಲ್ ಎನ್‌ಸಿಸಿ ಗ್ರೂಪ್ ಆಶ್ರಯದಲ್ಲಿ ಕರ್ನಾಟಕ ಹಾಗೂ ಗೋವಾ ರಾಜ್ಯದ 72 ಎನ್‌ಸಿಸಿ ನೇವಲ್  ಕೆಡೆಟ್‌ಗಳಿಗೆ ಓಶಿಯನ್ ಸೈಮಲಿಂಗ್ ಎಕ್ಸ್ಪೆಡಿಶನ್ ಸೆ. 13ರಿಂದ 22ರವರೆಗೆ ಉಡುಪಿ ಉದ್ಯಾವರದ ಹಿನ್ನೀರಿನಲ್ಲಿ ನಡೆಯಿತು.

100 ವರ್ಷಕ್ಕೂ ಅಧಿಕ ಹಳೆಯ ಡಿಕೆ ವೇಲರ್ ಬೋಟ್‌ನಲ್ಲಿ  5 ಪುಲ್ಲರ್ ಹಾಗೂ ಅವರನ್ನು ನಿಯಂತ್ರಿಸುವ ಕ್ಯಾಪ್ಟನ್‌ಗಳು ಉದ್ಯಾವರದ 21ನೇ ಕರ್ನಾಟಕ ನೇವಲ್ ಎನ್‌ಸಿಸಿ ಯುನಿಟ್‌ನ ಬೋಟ್ ಪೂಲ್‌ನಲ್ಲಿ ಈ ಸೈಲಿಂಗ್ ತರಬೇತಿ ಪಡೆಯುತ್ತಿದ್ದಾರೆ.

72ಮಂದಿ ಕೆಡೆಟ್‌ಗಳು ಈ ತರಬೇತಿ ಪಡೆದರು.

ನೇವಲ್ ಎನ್‌ಸಿಸಿಯಲ್ಲಿ ವಿಶೇಷ ತರಬೇತಿ ಆಗಿರುವ ಈ ಓಶಿಯನ್ ಸೈಲಿಂಗ್ ಎಕ್ಸ್ಪೆಡಿಶನ್ ಶಿಬಿರದಲ್ಲಿ ರಾಜ್ಯದ ಉಡುಪಿ, ದ.ಕ., ಮೈಸೂರು, ಬೆಂಗಳೂರು, ಕಾರವಾರ ಹಾಗೂ ಗೋವಾದ 6 ನೇವಲ್ ಎನ್‌ಸಿಸಿ ಯುನಿಟ್‌ನ 36 ಮಂದಿ ಹುಡುಗಿಯರು ಹಾಗೂ 36 ಮಂದಿ ಹುಡುಗರು ಸೇರಿದಂತೆ ಒಟ್ಟು 72 ಮಂದಿ ಭಾಗವಹಿಸಿದ್ದಾರೆ.

ಅವಘಡ ಸಂಭವಿಸಿದಾಗ ಜೀವ ರಕ್ಷಣೆ, ಸಮುದ್ರದ ದೈತ್ಯ ಅಲೆಗಳನ್ನು ಬೇಧಿಸಿಕೊಂಡು ಬೋಟನ್ನು ನಡೆಸುವುದು, ದೈಹಿಕ ಹಾಗೂ ಮಾನಸಿಕ ಕ್ಷಮತೆಯನ್ನು ಬೆಳೆಸುವುದಲ್ಲದೆ ಈ ತರಬೇತಿ ಪಡೆದ ಕೆಡೆಟ್ ಇತರರಿಗಿಂತ ಹೆಚ್ಚಿನ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬಲ್ಲ ತರಬೇತಿ ನೀಡಲಾಗುತ್ತಿದೆ.

ಪ್ರಸ್ತುತ 10 ದಿನಗಳ ಈ ಶಿಬಿರದಲ್ಲಿ ಕೆಡೆಟ್‌ಗಳು ಸೈಲಿಂಗ್ ಅಲ್ಲದೆ ಇತರ ಸಾಮಾಜಿಕ ಕಾರ್ಯಕ್ರಮಗಳಲ್ಲೂ ಭಾಗವಹಿಸಲಿದ್ದಾರೆ.

ಬೀಚ್ ಸ್ವಚ್ಛತೆ, ಗ್ರಾಮಗಳಿಗೆ ತೆರಳಿ ಪರಿಸರ ಸ್ವಚ್ಛತೆ, ಟ್ರೆಕ್ಕಿಂಗ್, ಪ್ರಥಮ ಚಿಕಿತ್ಸೆ, ಅಗ್ನಿ ಆಕಸ್ಮಿಕ ಪ್ರಾತ್ಯಕ್ಷಿಕೆ, ರಸ್ತೆ ಸುರಕ್ಷತೆ, ಕಾಲೇಜುಗಳಿಗೆ ತೆರಳಿ ಮಾದಕ ದ್ರವ್ಯ ವಿರೋಧಿ ಅಭಿಯಾನ ನಡೆಸುವುದು, ಸೈಬರ್ ಕ್ರೈಂ, ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ, ಸಾಂಸ್ಕೃತಿಕ ವಿನಿಮಯ ಮೊದಲಾದ ಚಟುವಟಿಕೆಗಳನ್ನು ನಡೆಸಲಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಕಾರಿನಲ್ಲಿ ಮಗುವನ್ನು ಮರೆತು ಹೋದ ತಾಯಿ..! ಕಾರಿನಲ್ಲೇ ಮಗುವಿನ ಅಂತ್ಯ…!

Published

on

ಮಂಗಳೂರು ( ರಾಜಸ್ಥಾನ ) :  ಮಕ್ಕಳ ಬಗ್ಗೆ ಪೋಷಕರು ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳಬೇಕು. ಆದ್ರೆ, ತಂದೆ ಮತ್ತು ತಾಯಿಯ ನಿರ್ಲಕ್ಷಕ್ಕೆ ಮೂರು ವರ್ಷದ ಬಾಲಕಿ ಅಸುನೀಗಿದ್ದಾಳೆ. ಹೌದು, ಮಗು ಕಾರಿನಲ್ಲಿ ಉಸಿರುಗಟ್ಟಿ ಸಾ*ವನಪ್ಪಿದ ಘಟನೆ ರಾಜಸ್ಥಾನದ ಕೋಟದಲ್ಲಿ ನಡೆದಿದೆ. ಮೃ*ತ ಮಗುವನ್ನು ಕೋಟಾದ ಇಂದ್ರ ಕಾಲೋನಿಯ ನಿವಾಸಿ ಪ್ರದೀಪ್ ಅವರ ಮಗಳು ಗರ್ವಿ (3) ಎಂದು ಗುರುತಿಸಲಾಗಿದೆ.

ಮದುವೆ ಸಂಭ್ರಮದಲ್ಲಿ ಕಳೆದುಹೋದ ದಂಪತಿ :

ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಾಲಕಿ ತನ್ನ ಪೋಷಕರೊಂದಿಗೆ ಕಾರಿನಲ್ಲಿ ಬಂದಿದ್ದರು. ಈ ವೇಳೆ ತಾಯಿ ತನ್ನ ಇನ್ನೊಬ್ಬ ಮಗಳ ಜೊತೆ ಕಾರಿನಿಂದ ಇಳಿದಿದ್ದಾರೆ. ಆದರೆ, ಬಾಲಕಿ ಗರ್ವಿ ಮಾತ್ರ ಕಾರಿನಲ್ಲೇ ಇದ್ದಳು. ಇತ್ತ ತಂದೆ ಕಾರನ್ನು ಪಾರ್ಕ್ ಮಾಡಿ, ಮಗು ಗರ್ವಿ ಕೂಡ ಅವಳ ತಾಯಿಯ ಜೊತೆಗಿದ್ದಾಳೆ ಎಂದು ಭಾವಿಸಿ, ಕಾರನ್ನು ಲಾಕ್ ಮಾಡಿ ತೆರಳಿದ್ದರು.

ಮದುವೆ ಸಮಾರಂಭದಲ್ಲಿ ಗಂಡ ಹೆಂಡತಿ ಇಬ್ಬರು ಮೈಮರೆತಿದ್ದರು. ಬ್ಯುಸಿಯಲ್ಲಿ ಯಾರೂ ತಮ್ಮ ಇನ್ನೊಂದು ಮಗುವಿನ ಬಗ್ಗೆ ಆಲೋಚಿಸಲೇ ಇದೆ. ಸುಮಾರು ಎರಡು ಗಂಟೆಗಳ ಬಳಿಕ ಪೋಷಕರಿಗೆ ಮಗು ಇಲ್ಲದ ಬಗ್ಗೆ ತಿಳಿದು ಬಂದಿದೆ. ಈ ವೇಳೆ ಇಡೀ ಮದುವೆ ಸಭಾಂಗಣ ಹುಡುಕಾಡಿದ್ದಾರೆ. ಬಳಿಕ ಕಾರಿನ ಬಳಿ ಬಂದಾಗ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಮಗು ಅಷ್ಟರಲ್ಲೇ ಸಾ*ವನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ. ತಮ್ಮ ಸಂಭ್ರಮದಲ್ಲಿ ಮೈಮರೆತ ತಂದೆ – ತಾಯಿಯಿಂದಾಗಿ ಪುಟ್ಟ ಜೀವವೊಂದು ಬ*ಲಿಯಾಗಿದೆ.

Continue Reading

DAKSHINA KANNADA

ಪುಷ್ಪ 2 ರಿಲೀಸ್ ಡೇಟ್ ಬದಲು…? ಸ್ಪಷ್ಟನೆ ನೀಡಿದ ಚಿತ್ರ ತಂಡ

Published

on

ಮಂಗಳೂರು  : ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಕಾಂಬಿನೇಷನ್ ನ ಬಹು ನಿರೀಕ್ಷಿತ ಪುಷ್ಪ 2 ಚಿತ್ರ ಯಾವಾಗ ತೆರೆಗೆ ಬರುತ್ತೆ ಅಂತ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ನಡುವೆ ಸಿನೆಮಾ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ. ಆಗಸ್ಟ್‌ 15 ರಂದು ನಿಗದಿಯಾಗಿದ್ದ ಬಿಡುಗಡೆಯ ದಿನವನ್ನು ಬದಲಾಯಿಸಲಾಗಿದೆ. ಹೀಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದ್ದು ಅಭಿಮಾನಿಗಳು ನಿರಾಶೆಗೊಂಡಿದ್ದಾರೆ.

ಎಡಿಟಿಂಗ್ ಸಮಸ್ಯೆಯಿಂದ ಪುಷ್ಪ 2 ರಿಲೀಸ್ ವಿಳಂಬವಾಗಲಿದೆ ಎಂಬ ಊಹಾಪೋಹಗಳು ಹರಡಿದೆ. ಪತ್ರಿಕೆಯೊಂದು ಈ ಬಗ್ಗೆ ವರದಿ ಮಾಡಿದ್ದು, ಆಂಟೋನಿ ರೂಬೆನ್‌ ಪುಷ್ಪ 2 ತಂಡದಿಂದ ಹೊರಬಂದಿದ್ದಾರೆ ಎಂದು ಹೇಳಿತ್ತು.
ಆಂಟೋನಿ ರೂಬೆನ್‌ ಜಾಗಕ್ಕೆ ನವೀನ್ ನೂಲಿ ಬರಲಿದ್ದು, ಪುಷ್ಪ 2 ಬಿಡುಗಡೆ ವಿಳಂಬವಾಗಲಿದೆ ಎಂದು ಹೇಳಿತ್ತು. ಇದು ಎಲ್ಲೆಡೆ ಸುದ್ದಿಯಾಗಿದ್ದು, ಸಿನೆಮಾ ರಿಲೀಸ್‌ನ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.
ಆದ್ರೆ, ಇದೊಂದು ಸುಳ್ಳು ಸುದ್ದಿಯಾಗಿದ್ದು, ನಿಗದಿತ ದಿನಾಂಕ ಆಗಸ್ಟ್‌ 15 ರಂದೇ ಸಿನೆಮಾ ರಿಲೀಸ್ ಆಗಲಿದೆ ಎಂದು ಸಿನೆಮಾ ತಂಡ ಸ್ಪಷ್ಟನೆ ನೀಡಿದೆ. ಅಲ್ಲೂ ಅರ್ಜುನ್‌ ಅವರ ಭಾಗದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಈ ಜೂನ್ ಅಂತ್ಯಕ್ಕೆ ಚಿತ್ರೀಕರಣ ಪೂರ್ಣಗೊಳ್ಳಲಿದೆ. ಹೀಗಾಗಿ ಎಡಿಟಿಂಗ್ ಕೂಡಾ ನಿರಾಂತಕವಾಗಿ ನಡೆಯಲಿದ್ದು, ಈಗಾಗಲೇ ಟೀಸರ್‌ ಕೂಡಾ ಭಾರೀ ಸದ್ದು ಮಾಡಿದೆ. ರಿಲೀಸ್ ಜೊತೆಗೆ ಬಾಕ್ಸ್‌ ಆಫೀಸಿನಲ್ಲಿ ಚಿಂದಿ ಉಡಾಯಿಸಲಿರುವ ಪುಷ್ಪಾ 2 ನಿಗದಿಯಾದ ದಿನದಂತೆ ಬಿಡುಗಡೆ ಆಗಲಿದೆ ಅಂತ ಸ್ಪಷ್ಟನೆ ನೀಡಿದ್ದಾರೆ.

Continue Reading

DAKSHINA KANNADA

ನಿಮ್ಮ ಆಫೀಸ್ ಡೆಸ್ಕ್ ಮೇಲೆ ಈ ವಸ್ತುಗಳನ್ನು ಇಟ್ಟರೆ ಶುಭ

Published

on

ಮಂಗಳೂರು: ವಾಸ್ತುಶಾಸ್ತ್ರಕ್ಕೆ ವಿಶೇಷ ಪ್ರಾಮುಖ್ಯತೆ ಇದೆ. ಅದನ್ನು ಪಾಲಿಸಿದರೆ ಅದೃಷ್ಟ ನಿಮ್ಮದಾಗುತ್ತದೆ. ಕಚೇರಿಗೆ ಸಂಬಂಧಿಸಿದ ಅನೇಕ ವಿಚಾರಗಳನ್ನು ವಾಸ್ತುವಿನಲ್ಲಿ ಉಲ್ಲೇಖಿಸಲಾಗಿದೆ. ಅದನ್ನು ಅನುಸರಿಸಿ ಕೆಲಸದಲ್ಲಿ ಪ್ರಗತಿ ಹೊಂದಬಹುದು. ಈ ವಾಸ್ತುಗಳನ್ನು ಅನುಸರಿಸಿದರೆ ನಿಮಗೆ ಬಡ್ತಿ ದೊರೆಯುವುದಲ್ಲದೆ, ಸಂಬಳ ಕೂಡ ಹೆಚ್ಚಾಗುತ್ತದೆ.

ಸ್ಫಟಿಕ ಲೋಹ

ವಾಸ್ತು ಪ್ರಕಾರ ನಿಮ್ಮ ಆಫೀಸ್ ಡೆಸ್ಕ್ ಮೇಲೆ ಸ್ಫಟಿಕ ಲೋಹವನ್ನು ಇಟ್ಟರೆ ಅದು ನಿಮ್ಮ ಕೆಲಸವನ್ನು ಸುಲಭಗೊಳಿಸುತ್ತದೆ.

ಬಿದಿರಿನ ಗಿಡ

ವಾಸ್ತು ಪ್ರಕಾರ ಬಿದಿರಿನ ಗಿಡವನ್ನು ನೀವು ಡೆಸ್ಕ್ ಮೇಲೆ ಇಡುವುದು ಬಹಳ ಮಂಗಳಕರ. ಇದು ನಿಮಗೆ ಚೈತನ್ಯ ತುಂಬುತ್ತದೆ.

ಬುದ್ಧನ ಪ್ರತಿಮೆ

ಬುದ್ಧನ ಪ್ರತಿಮೆಯನ್ನು ಡೆಸ್ಕ್ ಮೇಲಿಟ್ಟರೆ ಅದು ನಿಮ್ಮನ್ನು ಶಾಂತಿಯುತವಾಗಿ ಕೆಲಸ ಮಾಡಲು ಪ್ರೇರೇಪಿಸುತ್ತದೆ.

ಹಡಗು ಚಿತ್ರವಿರುವ ನಾಣ್ಯ

ನಿಮಗೆ ಉದ್ಯೋಗದಲ್ಲಿ ಬಡ್ತಿ ಬೇಕಾದರೆ ವಾಸ್ತುಪ್ರಕಾರ ನಿಮ್ಮ ಟೇಬಲ್ ಮೇಲೆ ಹಡಗು ಚಿತ್ರವಿರುವ ನಾಣ್ಯ ಇಟ್ಟುಕೊಳ್ಳಬೇಕು.

ಗಣೇಶ ಮೂರ್ತಿ

ಇವಿಷ್ಟೇ ಅಲ್ಲದೆ ನೀವು ಮೇಜಿನ ಮೇಲೆ ಗಣೇಶ ಮೂರ್ತಿಯನ್ನು ಇಟ್ಟುಕೊಂಡರೆ ನಿಮಗೆ ಎಂದಿಗೂ ಯಾವ ವಿಘ್ನಗಳೂ ಬರುವುದಿಲ್ಲ.

Continue Reading

LATEST NEWS

Trending