LATEST NEWS
Udupi: ಕುಸಿದು ಬಿದ್ದು ವ್ಯಕ್ತಿಗೆ ಗಂಭೀರ ಗಾಯ..!
ಅಂಬಲಪಾಡಿಯಲ್ಲಿ ಕುಸಿದು ಬಿದ್ದು ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ಉಡುಪಿ: ಉಡುಪಿ ಅಂಬಲಪಾಡಿಯಲ್ಲಿ ಕುಸಿದು ಬಿದ್ದು ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ಗಾಯಾಳು ವ್ಯಕ್ತಿಯನ್ನು ಡಿಸೋಜ ಕಡೇಕಾರು ಎಂದು ಗುರುತಿಸಲಾಗಿದೆ.
ಸಮೀಪದಲಿದ್ದ ದಾತ್ರಿ ಮೆಡಿಕಲ್ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದರು.
ಕೂಡಲೇ ಸ್ಥಳಕ್ಕೆ ಆಗಮಿಸಿದ ನಿತ್ಯಾನಂದ ಅವರು ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ಗಾಯಾಳು ಸಂಬಂಧಿಕರು ಕೂಡಲೇ ಉಡುಪಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸುವಂತೆ ಮಾಧ್ಯಮಗಳ ಮೂಲಕ ಒಳಕಾಡು ಅವರು ಮನವಿ ಮಾಡಿದ್ದಾರೆ.
LATEST NEWS
Watch : ಇಬ್ಬರು ಪುರುಷರೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಪತ್ನಿ; ಹಿಗ್ಗಾಮುಗ್ಗ ಥಳಿಸಿದ ಪತಿ
ಮಂಗಳೂರು/ಉತ್ತರ ಪ್ರದೇಶ : ವೈದ್ಯನೊಬ್ಬ ತನ್ನ ವೈದ್ಯ ಪತ್ನಿಯನ್ನು ಇಬ್ಬರು ಪುರುಷರ ಜೊತೆ ಹೊಟೇಲ್ ರೂಮಿನಲ್ಲಿ ಆಕ್ಷೇಪಾರ್ಹ ಸ್ಥಿತಿಯಲ್ಲಿ ರೆಡ್ ಹ್ಯಾಂಡ್ ಹಾಕಿ ಹಿಡಿದಿದ್ದಾನೆ. ಈ ವೇಳೆ ಪತ್ನಿ ಹಾಗೂ ಆ ಇಬ್ಬರು ಪುರಷರಿಗೆ ಹಿಗ್ಗಾಮುಗ್ಗ ಥಳಿಸಿದ್ದು, ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ನಲ್ಲಿ ನಡೆದಿದ್ದು, ವೈದ್ಯ ದಂಪತಿ ಜೊತೆಯಾಗಿ ವಾಸಿಸುತ್ತಿಲ್ಲ ಎಂದು ಗೊತ್ತಾಗಿದೆ. ಪತ್ನಿಯ ನಡವಳಿಕೆಯ ಬಗ್ಗೆ ಅನುಮಾನ ಮುಂದುವರೆಸಿದ್ದ ವೈದ್ಯ ತನ್ನ ಕುಟುಂಬ ಸದಸ್ಯರ ಜೊತೆ ಆಕೆಯನ್ನು ಹಿಂಬಾಲಿಸಿದ್ದಾನೆ. ಈ ವೇಳೆ ಹೊಟೇಲ್ ರೂಮಿಗೆ ದಾಳಿ ಮಾಡಿದಾಗ, ಆಕೆ ಇಬ್ಬರು ಪುರುಷರ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಹಾಕಿಕೊಂಡಿದ್ದಾಳೆ. ಈ ವೇಳೆ ಆಕ್ರೋಶದಲ್ಲಿ ಪತ್ನಿ ಹಾಗೂ ಆಕೆಯ ಜೊತೆಗೆ ಇದ್ದವರ ಮೇಲೂ ಹಲ್ಲೆ ನಡೆಸಿದ್ದಾರೆ.
ಇದನ್ನೂ ಓದಿ : ಈ ವೀಡಿಯೋವನ್ನು ವೈರಲ್ ಮಾಡುವ ಧೈರ್ಯ ನಿಮ್ಮಲ್ಲಿ ಇದ್ಯಾ ? ವೀಡಿಯೋವೊಂದನ್ನು ಹಂಚಿಕೊಂಡು ಸವಾಲೆಸೆದ ನಟಿ ಜ್ಯೋತಿ ರೈ
ಕಳೆದ ಒಂದು ವರ್ಷದಿಂದ ಇವರಿಬ್ಬರೂ ಬೇರೆ ಬೇರೆಯಾಗಿ ವಾಸ ಮಾಡಿಕೊಂಡಿದ್ದಾರೆ. ಪತ್ನಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾಳೆ. ಹಲ್ಲೆ ನಡೆಸಿದ ಪತಿ ಕೂಡಾ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯನಾಗಿ ಕೆಲಸ ಮಾಡ್ತಾ ಇದ್ದಾನೆ.
ಸದ್ಯ ವೈದ್ಯ ಪತ್ನಿಯ ವಿರುದ್ಧ ನೀಡಿದ ದುರ್ನಡತೆ ಆರೋಪದಲ್ಲಿ ಪತ್ನಿ ಹಾಗೂ ಆಕೆಯ ಜೊತೆಗಿದ್ದ ಗಾಜೀಯಾಬಾದ್ ಹಾಗೂ ಬುಲಂದ್ಶಹರ್ನ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ.
FILM
ಈ ವೀಡಿಯೋವನ್ನು ವೈರಲ್ ಮಾಡುವ ಧೈರ್ಯ ನಿಮ್ಮಲ್ಲಿ ಇದ್ಯಾ ? ವೀಡಿಯೋವೊಂದನ್ನು ಹಂಚಿಕೊಂಡು ಸವಾಲೆಸೆದ ನಟಿ ಜ್ಯೋತಿ ರೈ
ಜ್ಯೋತಿ ರೈ ಸದ್ಯ ಭಾರೀ ಸದ್ದು ಮಾಡುತ್ತಿರುವ ಹೆಸರು. ಇತ್ತೀಚೆಗೆ ಖ್ಯಾತ ಸೀರಿಯಲ್ ನಟಿ ಜ್ಯೋತಿ ರೈ ಖಾಸಗಿ ವೀಡಿಯೋವೊಂದು ಲೀಕ್ ಆಗಿತ್ತು. ಈ ಬಗ್ಗೆ ಆಕ್ರೋಶವನ್ನೂ ಹೊರ ಹಾಕಿದ್ದರು. ಇದೀಗ ತಾನೇ ವೀಡಿಯೋಗಳನ್ನು ಹಂಚಿಕೊಂಡು,ಈ ವೀಡಿಯೋವನ್ನು ವೈರಲ್ ಮಾಡುವ ಧೈರ್ಯ ನಿಮ್ಮಲ್ಲಿ ಇದ್ಯಾ ? ಎಂದು ಸವಾಲೆಸೆದಿದ್ದಾರೆ.
ವೀಡಿಯೋ ಹಂಚಿಕೊಂಡ ನಟಿ :
ತಮ್ಮ ಗ್ಲಾಮರಸ್ ಫೋಟೋಗಳನ್ನು ಹಂಚಿಕೊಂಡು ಪಡ್ಡೆಗಳ ನಿದ್ದೆಗೆಡಿಸುತ್ತಿದ್ದ ನಟಿ ಜ್ಯೋತಿ ರೈ ಅವರದ್ದೆನ್ನಲಾದ ಅಶ್ಲೀಲ ವೀಡಿಯೋ ವೈರಲ್ ಆಗಿತ್ತು. ಈ ವೀಡಿಯೋ ಬಗ್ಗೆ ಸ್ವತಃ ಜ್ಯೋತಿ ರೈ ಸ್ಪಷ್ಟನೆ ನೀಡಿದ್ದಾರೆ. ಆಘಾತಕ್ಕೊಳಗಾಗಿದ್ದೇನೆ ಎಂದಿದ್ದರು.
ನಟಿ ಜ್ಯೋತಿ ರೈ ಅಕ್ಷಯ ತೃತೀಯ ದಿನದಂದು ಕೆಲವೊಂದು ವಿಡಿಯೋಗಳನ್ನು ಅವರು ಹಂಚಿಕೊಂಡಿದ್ದಾರೆ. ಅದರೊಂದಿಗೆ ತಮ್ಮ ಅಶ್ಲೀಲ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ವ್ಯಕ್ತಿಗಳಿಗೆ ಸವಾಲೆಸೆದಿದ್ದಾರೆ.
‘ಈ ವೀಡಿಯೊವನ್ನು ವೈರಲ್ ಮಾಡುವ ಧೈರ್ಯ ನಿಮ್ಮಲ್ಲಿ ಇದ್ಯಾ? ಇದು ನಿಜವಾದ ವಿಡಿಯೋ’ ಎಂದು ಅವರು ಬರೆದುಕೊಂಡಿದ್ದಾರೆ.
ಕೆಲವು ಹತಾಶ, ಕೆಲಸವಿಲ್ಲದ ಅಶಿಕ್ಷಿತ ಟೈಂಪಾಸ್ ಚಿಲ್ರೆ ವ್ಯಕ್ತಿಗಳಿಗಾಗಿ, “ ಜಗತ್ತು ನೆರಳನ್ನು ಎಸೆದಾಗ, ನಾನು ಇನ್ನಷ್ಟು ಪ್ರಕಾಶಮಾನವಾಗಿ ಹೊಳೆಯುತ್ತೇನೆ. ಕತ್ತಲೆ ನನ್ನ ಬೆಳಕಿಗೆ ಇಂಧನ ತುಂಬಿಸುತ್ತದೆ. ನಿರಾಶಾವಾದದ ಬೂದಿಯಿಂದ ಸಾಧ್ಯತೆಯ ಫೀನಿಕ್ಸ್ ಏರುತ್ತದೆ. ನಕಾರಾತ್ಮಕ ಶಕ್ತಿಯು ಕೇವಲ ಮೆಟ್ಟಿಲು. ನಾನು ಅದರ ಮೇಲೆ ಸಕಾರಾತ್ಮಕತೆಯ ದಿಗಂತದ ಕಡೆಗೆ ಹಾರುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.
ಇದನ್ನೂ ಓದಿ : ಪ್ರಜ್ವಲ್ ಪ್ರಕರಣದ ನಡುವೆ ಖಾಸಗಿ ವೀಡಿಯೋ ವೈರಲ್; ಜ್ಯೋತಿ ರೈ ಹೇಳಿದ್ದೇನು?
ಪದ್ಮಶ್ರೀ ಪುರಸ್ಕೃತ ಕಲಾವಿದನಿಗೆ ಸಹಾಯಹಸ್ತ ಚಾಚಿದ ನಟಿ :
ಎರಡು ವರ್ಷಗಳ ಹಿಂದೆಯಷ್ಟೇ ಸಂಗೀತ ಸಾಧಕ ತೆಲಂಗಾಣದ ದರ್ಶನಂ ಮೊಗುಳಯ್ಯ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದರು. ಆದ್ರೆ, ಈಗ ಹೊಟ್ಟೆಪಾಡಿಗಾಗಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಅವರು ಕೆಲಸ ಮಾಡುತ್ತಿರುವ ಫೋಟೋ, ವೀಡಿಯೋ ವೈರಲ್ ಆಗಿದ್ದವು. ಇವರಿಗೆ ಜ್ಯೋತಿ ರೈ ಧನ ಸಹಾಯ ಮಾಡಿದ್ದಾರೆ. ಈ ಕುರಿತಾದ ವಿಡಿಯೋವನ್ನು ಅವರು ಇನ್ಟಾಗ್ರಾಂ ಪೇಜ್ನಲ್ಲಿ ಹಂಚಿಕೊಂಡಿದ್ದಾರೆ.
ಅಕ್ಷಯ ತೃತೀಯದ ಶುಭ ದಿನದಂದು, ಖ್ಯಾತಿಯ ಹೊರತಾಗಿಯೂ, ವೈಯಕ್ತಿಕ ಮತ್ತು ವೃತ್ತಿಪರವಾಗಿ ಆರ್ಥಿಕ ಸವಾಲುಗಳನ್ನು ಎದುರಿಸುತ್ತಿರುವ ಶ್ರೀ ಪದ್ಮಶ್ರೀ ಕಿನ್ನೇರ ಮೊಗಳಯ್ಯ ಅವರಿಗೆ ₹ 50,000 ಆರ್ಥಿಕ ನೆರವು ನೀಡಿದ್ದೇನೆ.
ನಿನ್ನೆ ಪತ್ರಿಕಾಗೋಷ್ಠಿ ನಡೆಸಿದ ಅವರ ಹೋರಾಟದ ಬಗ್ಗೆ ನನ್ನ ಪಿಆರ್ ನನಗೆ ಮಾಹಿತಿ ನೀಡಿದ್ದರು. ನಾನೂ ಕೂಡ ಪ್ರಸ್ತುತ ಸವಾಲಿನ ಅವಧಿಯನ್ನು ಎದುರಿಸುತ್ತಿದ್ದೇನೆಯಾದರೂ, ನನ್ನೊಳಗಿನ ಬೆಳಕು ಅವರನ್ನು ತಕ್ಷಣವೇ ತಲುಪಲು ಪ್ರೇರೇಪಿಸಿತು. ಊಟದ ವ್ಯವಸ್ಥೆ ಮಾಡಿ ದೇಣಿಗೆ ನೀಡಿದ್ದೆ. ಅವರ ಕಲೆಗೆ ಬೆಂಬಲವನ್ನೂ ನೀಡುತ್ತಿದ್ದೇನೆ. ನಾನು ಹೆಚ್ಚಿನ ಕೊಡುಗೆ ನೀಡಲು ಬಯಸುತ್ತೇನೆ. ಆದರೆ, ಈಗ ನನ್ನ ಕೈಲಾದಷ್ಟು ಮಾಡಿದ್ದೇನೆ. ಬೇರೆ ಯಾರಾದರೂ ಅವರನ್ನು ಬೆಂಬಲಿಸಲು ಬಯಸಿದರೆ, ನಾವು ಒಟ್ಟಾಗಿಯೇ ಸಹಾಯ ಮಾಡೋಣ’ ಎಂದು ಬರೆದುಕೊಂಡಿದ್ದಾರೆ.
ಮೊಗುಳಯ್ಯ ಅವರ ಕುಟುಂಬವನ್ನು ಭೇಟಿ ಮಾಡಿ ಅವರಿಗೆ ಹಣ ಸಹಾಯ ಮಾಡಿದ ವಿಡಿಯೋವನ್ನೂ ಕೂಡ ಜ್ಯೋತಿ ರೈ ಹಂಚಿಕೊಂಡಿದ್ದಾರೆ.
LATEST NEWS
ನೇಣು ಬಿಗಿದ ಸ್ಥಿತಿಯಲ್ಲಿ ಕೆಎಎಸ್ ಅಧಿಕಾರಿಯ ಪತ್ನಿಯ ಶ*ವ ಪತ್ತೆ
ಬೆಂಗಳೂರು : ಕೆಎಎಸ್ ಅಧಿಕಾರಿಯ ಪತ್ನಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿರುವಂತಹ ಘಟನೆ ಸಂಜಯ್ನಗರದ ನಿವಾಸದಲ್ಲಿ ನಡೆದಿದೆ. ಚೈತ್ರಾ ಗೌಡ ಮೃ*ತ ಮಹಿಳೆ. ವೃತ್ತಿಯಲ್ಲಿ ವಕೀಲರಾಗಿದ್ದ ಚೈತ್ರಾ ಮನೆಯಲ್ಲಿ ಫ್ಯಾನ್ಗೆ ನೇ*ಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃ*ತದೇಹವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
3 ತಿಂಗಳ ಹಿಂದೆ ಬರೆದಿಟ್ಟಿದ್ದ ಡೆತ್ ನೋಟ್ ಪತ್ತೆ:
ಚೈತ್ರಾ ಶ*ವ ನೇ*ಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರ ಮನೆಯಲ್ಲಿ 3 ತಿಂಗಳ ಹಿಂದೆ ಬರೆದಿಟ್ಟಿದ್ದ ಡೆ*ತ್ ನೋಟ್ ಪತ್ತೆ ಆಗಿದೆ. ಮಾ.11 ರಂದು ಬರೆದಿದ್ದ ಡೆ*ತ್ ನೋಟ್ ಪತ್ತೆಯಾಗಿದೆ. ನನ್ನ ಗಂಡ ಒಳ್ಳೆಯವರು, ಜೀವನ ಎಂಜಾಯ್ ಮಾಡಿ. ಮಗಳನ್ನು ಚೆನ್ನಾಗಿ ನೋಡಿಕೊಳ್ಳಿ. ನಾನು ಡಿಪ್ರೆಶನ್ನಿಂದ ಬಳಲುತ್ತಿದ್ದೇನೆ. ಅದರಿಂದ ಹೊರ ಬರಲು ಸಾಕಷ್ಟು ಪ್ರಯತ್ನಿಸಿದೆ ಆಗಲಿಲ್ಲ, ಹಾಗಾಗಿ ನನ್ನ ಜೀವನ ಕೊನೆಗೊಳಿಸುತ್ತಿದ್ದೇನೆ. ಮಗುವನ್ನು ಚೆನ್ನಾಗಿ ನೋಡಿಕೊಂಡು ಲೈಫ್ ಎಂಜಾಯ್ ಮಾಡಿ. ನಾನು ಆತ್ಮಹ*ತ್ಯೆ ಮಾಡಿಕೊಳ್ಳುವುದು ತಪ್ಪು ಅಂತ ಗೊತ್ತಿದೆ. ಆದ್ರೂ ನನ್ನ ಜೀವನ ಅಂ*ತ್ಯ ಮಾಡುತ್ತಿದ್ದೇನೆ ಎಂದು ಬರೆಯಲಾಗಿದೆ.
ಪತಿಯೊಂದಿಗೆ ಮಾತನಾಡಿದ್ದ ಚೈತ್ರಾ:
ಚೈತ್ರಾ ಮೂರು ಅಂತಸ್ತಿನ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದರು. ಎರಡನೇ ಫ್ಲಾಟ್ನಲ್ಲಿ ಅವರ ಕುಟುಂಬಸ್ಥರು ವಾಸವಾಗಿದ್ದು, ಇನ್ನೊಂದು ಫ್ಲಾಟ್ನಲ್ಲಿ ಮೃ*ತಳ ತಮ್ಮ ವಾಸವಾಗಿದ್ದಾರೆ. ಬೆಳಗ್ಗೆ ಹತ್ತು ಘಂಟೆ ಸುಮಾರಿಗೆ ಪತಿ ಶಿವ ಕುಮಾರ್ ಜೊತೆಗೆ ಮಾತನಾಡಿದ್ದಾರೆ. ನಂತರ ತಮ್ಮನ ಜೊತೆಗೆ ಮಾತನಾಡಿದ್ದಾರೆ. ಹನ್ನೊಂದು ಘಂಟೆ ಸುಮಾರಿಗೆ ಮೃ*ತಳ ತಮ್ಮ ಕರೆದಾಗ ಸ್ಪಂದಿಸಿಲ್ಲ. ಈ ವೇಳೆ ಕಿಟಕಿಯಿಂದ ನೋಡಿದಾಗ ಫ್ಯಾನ್ಗೆ ನೇ*ಣು ಹಾಕಿಕೊಂಡು ಸಾ*ವನಪ್ಪಿರುವುದು ಕಂಡು ಬಂದಿದೆ. ತಕ್ಷಣ ಮೃ*ತಳ ತಮ್ಮ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸೀನ್ ಆಫ್ ಕ್ರೈಂ ಅಧಿಕಾರಿಗಳ ಸಮ್ಮುಖದಲ್ಲಿ ಪರಿಶೀಲನೆ ನಡೆಸಿ ಮೃ*ತದೇಹ ಇಳಿಸಲಾಗಿದೆ.
ಇದನ್ನೂ ಓದಿ : ವಿದ್ಯಾರ್ಥಿನಿ ರುಂಡ ಕತ್ತರಿಸಿ ಕೊಲೆ ಪ್ರಕರಣ: ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು
ಡಿಸಿಪಿ ಏನು ಹೇಳಿದ್ರು?
ಪ್ರಕರಣದ ಬಗ್ಗೆ ಉತ್ತರ ವಿಭಾಗ ಡಿಸಿಪಿ ಸೈದುಲು ಅದಾವತ್ ಪ್ರತಿಕ್ರಿಯೆ ನೀಡಿದ್ದು, ಕೆಎಎಸ್ ಅಧಿಕಾರಿ ಪತ್ನಿ ಆತ್ಮಹ*ತ್ಯೆ ಮಾಡಿಕೊಂಡಿರುವ ಬಗ್ಗೆ ದೂರು ಬಂದಿದೆ. ಸೀರೆಯಿಂದ ಫ್ಯಾನ್ಗೆ ಹ್ಯಾಂಗ್ ಮಾಡ್ಕೊಂಡು ಆತ್ಮಹ*ತ್ಯೆ ಆಗಿದೆ. ಇದರ ಬಗ್ಗೆ ದೂರು ದಾಖಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ. ಒಂದು ಡೆತ್ ನೋಟ್ ಪತ್ತೆಯಾಗಿದೆ. ಅದರಲ್ಲಿ ನನ್ನ ಸಾವಿಗೆ ಯಾರು ಕಾರಣರಲ್ಲ ಅಂತಾ ಬರೆದಿರುವುದು ಗೊತ್ತಾಗಿದೆ. ಅದನ್ನ ಅವರೇ ಬರೆದಿದ್ದಾರಾ ಅಂತಾ ಪರಿಶೀಲನೆ ನಡೆದಿದೆ. ಮರಣೋತ್ತರ ಪರೀಕ್ಷೆಗೆ ಮೃ*ತದೇಹ ರವಾನೆ ಮಾಡಲಾಗಿದೆ. ತನಿಖೆ ಬಳಿಕ ವಿಚಾರ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.
- LATEST NEWS5 days ago
ಐವರು ಮೆಡಿಕಲ್ ವಿದ್ಯಾರ್ಥಿಗಳು ನೀರುಪಾಲು…!
- FILM6 days ago
ರಜನಿಕಾಂತ್-ಐಶ್ವರ್ಯ ರೈ ಸಂಬಂಧಪಟ್ಟ ವೀಡಿಯೋ ಈಗ ವೈರಲ್ ..!! ಅಮಿತಾಬಚನ್, ಅಭಿಷೇಕ್ಗೆ ಏನಾಗಿದೆ? ಎಂದು ಹೇಳಿದ್ಯಾಕೆ?
- DAKSHINA KANNADA5 days ago
ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!
- LATEST NEWS5 days ago
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ; ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ನಿರ್ಬಂಧ..!