LATEST NEWS
Udupi: ಟಾಯ್ಲೆಟ್ ನಲ್ಲಿ ಮೊಬೈಲ್ ಇರಿಸಿ ಚಿತ್ರೀಸಿದ ಪ್ರಕರಣ -ಎಸ್ಪಿ ಮಚ್ಚೀಂದ್ರ ಸ್ಪಷ್ಟೀಕರಣ
ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ಟಾಯ್ಲೆಟ್ ನಲ್ಲಿ ಮೊಬೈಲ್ ಇರಿಸಿ ಚಿತ್ರೀಕರಣ ಮಾಡಿದ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಉಡುಪಿ: ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ಟಾಯ್ಲೆಟ್ ನಲ್ಲಿ ಮೊಬೈಲ್ ಇರಿಸಿ ಚಿತ್ರೀಕರಣ ಮಾಡಿದ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಈ ಬಗ್ಗೆ ಯಾವುದೇ ದೂರು ದಾಖಲಾಗದಿದ್ದರೂ ಸೋಶಿಯಲ್ ಮೀಡಿಯಾಗಳಲ್ಲಿ ವದಂತಿಗಳನ್ನು ಹಬ್ಬಿಸಲಾಗುತ್ತಿದೆ.
ಈ ವಿಚಾರವಾಗಿ ಉಡುಪಿ ಎಸ್ಪಿ ಅಕ್ಷಯ್ ಹಾಕೆ ಮಚ್ಚೀಂದ್ರ ಅವರು ಸ್ಪಷ್ಟೀಕರಣ ನೀಡಿದ್ದಾರೆ.
‘ಕಳೆದ ವಾರ ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ವಿಚಾರ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದೆ.
ಈ ವಿಚಾರದ ಜತೆಗೆ ಬೇರೆ ಬೇರೆ ಉದ್ದೇಶದಿಂದ ಮಾಹಿತಿಗಳು ಶೇರ್ ಆಗುತ್ತಿವೆ.
ಆದರೆ ಹಿಡನ್ ಕ್ಯಾಮೆರಾ ಮೂಲಕ ಚಿತ್ರೀಕರಣ ಮಾಡಿದ ವಿಚಾರವನ್ನು ನಮ್ಮ ಗಮನಕ್ಕೆ ಯಾರೂ ತಂದಿಲ್ಲ.
ಬ್ಲ್ಯಾಕ್ ಮೇಲ್ ಮಾಡುವ ಸಾಧ್ಯತೆ ಬಗ್ಗೆ ಮತ್ತು ವೀಡಿಯೋ ಹರಿದಾಡಿದ ಬಗ್ಗೆ ನಾವು ಗಮನ ಹರಿಸುತ್ತಿದ್ದೇವೆ’ ಎಂದು ಉಡುಪಿ ಎಸ್ಪಿ ತಿಳಿಸಿದ್ದಾರೆ.
‘ಬೇರೆ ಕಡೆಯ ವಿಡಿಯೋ ಶೇರ್ ಆಗುತ್ತಿದೆ, ವಾಯ್ಸ್ ಎಡಿಟ್ ಮಾಡಲಾಗಿದೆ.
ಸತ್ಯಾಸತ್ಯತೆ ಗೊತ್ತಿಲ್ಲದೆ ಶೇರ್ ಮಾಡಿದರೆ ತಪ್ಪಾಗುತ್ತದೆ.
ವೈರಲ್ ಆಗಿರುವ ಬಗ್ಗೆ ಫೇಸ್ ಬುಕ್, ವಾಟ್ಸಾಪ್ ಮೇಲೆ ನಿಗಾ ಇರಿಸಲಾಗಿದೆ.
ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.
ದೂರು ದಾಖಲಾದರೆ ಕ್ರಮ ಕೈಗೊಳ್ಳುತ್ತೇವೆ.
ಯಾರೂ ಕೂಡಾ ಈ ಬಗ್ಗೆ ವದಂತಿ ಹಬ್ಬಿಸಬಾರದು’ ಎಂದು ಅವರು ಮನವಿ ಮಾಡಿದ್ದಾರೆ.
DAKSHINA KANNADA
ಮಂಗಳೂರು : ‘ಮಹೇಶ್’ ಬಸ್ ಮಾಲೀಕ ಆತ್ಮಹತ್ಯೆ..!
ಮಂಗಳೂರು: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರನ್ನು ಮಹೇಶ್ ಬಸ್ ಮಾಲೀಕ ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು ಕದ್ರಿ ಕಂಬಳ ಸಮೀಪ ಇರುವ ಅಪಾರ್ಟ್ ಮೆಂಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಹೇಶ್ ಹೆಸರಿನಲ್ಲಿ ಹಲವಾರು ಸಿಟಿ ಬಸ್ ಗಳು ದಿನನಿತ್ಯ ಸಂಚರಿಸುತ್ತಿದ್ದು, ಜನಮನ್ನಣೆ ಪಡೆದಿದೆ.
ಬಸ್ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ಆಪ್ತ ಬಳಗಕ್ಕೆ ಶಾಕ್ ನೀಡಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ಬೈಕ್ ಅಪಘಾತ: ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಲೆ ಹರಿದ ಲಾರಿ- ಮೂವರು ಸ್ಥಳದಲ್ಲೇ ಸಾವು..!
ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.
ಹಳೆ ಜಂಬರಗಟ್ಟ ನಿವಾಸಿ ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಮೃತ ದುರ್ದೈವಿಗಳು.
ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಸವಾರರ ರಸ್ತೆ ಮೇಲೆ ಬಿದ್ದಿದ್ದಾರೆ.
ಇದೇ ವೇಳೆ ರಭಸವಾಗಿ ಬಂದ ಲಾರಿ ಆ ವ್ಯಕ್ತಿಗಳ ಮೇಲೆ ಹರಿದಿದೆ.
ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
FILM
ಮೋದಿಗೆ ರಕ್ತದಲ್ಲಿ ಪತ್ರ ಬರೆದ ಚಿತ್ರ ನಟ ಪ್ರೇಮ್..!
ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.
‘ಕಾವೇರಿ ನಮ್ಮದು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು ಮನವಿ ಮಾಡಿದ್ದಾರೆ.
ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
- DAKSHINA KANNADA6 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- LATEST NEWS6 days ago
ವಾರವಿಡೀ ಕಾಡಿನಲ್ಲಿ ಸಿಲುಕಿದ್ದ ಯುವಕ- ಮನೆಗೆ ವಾಪಸ್ ಆಗುವಂತೆ ರಕ್ಷಣೆ ಮಾಡಿದ ಸಾಕುನಾಯಿ..!
- DAKSHINA KANNADA7 days ago
Puttur: ಕಾಲೇಜು ವಿದ್ಯಾರ್ಥಿನಿ ಜಿವಾಂತ್ಯ..!
- DAKSHINA KANNADA6 days ago
Ullala: ರೈಲಿನಡಿಗೆ ತಲೆಯಿಟ್ಟು ಅವಿವಾಹಿತ ವ್ಯಕ್ತಿ ಜೀವಾಂತ್ಯ..!