LATEST NEWS
Udupi: ಪ್ರಶ್ನೆ ಪತ್ರಿಕೆ ತಿರುಚಿ ವೈರಲ್ – ಶಾಲಾ ಆಡಳಿತ ಮಂಡಳಿ ಸ್ಪಷ್ಟನೆ
ಎಸ್ಎಂಎಸ್ ಶಿಕ್ಷಣ ಸಂಸ್ಥೆಯ ಪ್ರಶ್ನೆ ಪತ್ರಿಕೆಯನ್ನು ಕಿಡಿಗೇಡಿಗಳು ವೈರಲ್ ಮಾಡುವ ಮೂಲಕ ಶಾಲೆಯಲ್ಲಿ ಧಾರ್ಮಿಕ ಶಿಕ್ಷಣ ನೀಡಲಾಗುತ್ತಿದೆ ಎಂದು ಅಪವಾದವನ್ನು ಹುಟ್ಟುಹಾಕಿದ್ದಾರೆ.
ಉಡುಪಿ: ಎಸ್ಎಂಎಸ್ ಶಿಕ್ಷಣ ಸಂಸ್ಥೆಯ ಪ್ರಶ್ನೆ ಪತ್ರಿಕೆಯನ್ನು ಕಿಡಿಗೇಡಿಗಳು ವೈರಲ್ ಮಾಡುವ ಮೂಲಕ ಶಾಲೆಯಲ್ಲಿ ಧಾರ್ಮಿಕ ಶಿಕ್ಷಣ ನೀಡಲಾಗುತ್ತಿದೆ ಎಂದು ಅಪವಾದವನ್ನು ಹುಟ್ಟುಹಾಕಿದ್ದಾರೆ.
ಎಸ್ಎಂಎಸ್ ಬ್ರಹ್ಮಾವರ ಶಿಕ್ಷಣ ಸಂಸ್ಥೆಗಳ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅಕ್ರೋಶ ವ್ಯಕ್ತವಾಗಿದೆ.
ಮೊದಲ ಕಿರುಪರೀಕ್ಷೆಯ ಸಮಾಜಶಾಸ್ತ್ರ ಪ್ರಶ್ನೆ ಪತ್ರಿಕೆಯನ್ನು ಕಿಡಿಗೇಡಿಗಳು ವೈರಲ್ ಮಾಡಿದ್ದಾರೆ.
ಇಲ್ಲಿ ಇಸ್ಲಾಂ ಮತ್ತು ಕ್ರಿಶ್ಚಿಯಾನಿಟಿ ಬಗೆಗೆ ಮಾತ್ರ ಕೇಳಲಾಗಿರುವ ಪ್ರಶ್ನೆಗೆ ಆಕ್ಷೇಪ ವ್ಯಕ್ತಪಡಿಸಲಾಗಿದೆ.
ಸಂಸ್ಥೆಯ ಆಡಳಿತ ಮಂಡಳಿಯ ಕೋಮಿಗೂ ಪ್ರಶ್ನೆ ಪತ್ರಿಕೆಗೂ ಸಂಬಂಧ ಕಲ್ಪಿಸಿ ವೈರಲ್ ಮಾಡಲಾಗಿದೆ.
ಇಲ್ಲಿ ಧಾರ್ಮಿಕ ಶಿಕ್ಷಣ ನೀಡಲಾಗುತ್ತಿದೆ ಎಂದು ಇದೀಗ ಸಾರ್ವಜನಿಕರು ಟೀಕಿಸತೊಡಗಿದ್ದಾರೆ. ಸಾಮಾಜಿಕ ಜಾಲತಾಣಗಳ ವೈರಲ್ ಕಂಟೆಂಟ್ ಗೆ ಎಸ್ಎಂಎಸ್ ಶಿಕ್ಷಣ ಮಂಡಳಿ ಸ್ಪಷ್ಡನೆ ನೀಡಿದ್ದು, ಸತ್ಯಾಂಶಗಳನ್ನು ತಿರುಚಿದ ಸಂದೇಶಗಳ ಬಗ್ಗೆ ಖಂಡನೆ ವ್ಯಕ್ತಪಡಿಸಿದೆ.
ಮಾಸಾಂತ್ಯದಲ್ಲಿ ನಡೆದ ಮೊದಲ ಕಿರುಪರೀಕ್ಷೆಯ ಪ್ರಶ್ನೆ ಪತ್ರಿಕೆ ಇದಾಗಿದ್ದು, ಮೊದಲ ಕಿರುಪರೀಕ್ಷೆಗೆ ಸಮಾಜಶಾಸ್ತ್ರದ ಎರಡು ಪಾಠಗಳನ್ನು ಆಧರಿಸಿ ಪ್ರಶ್ನೆ ಕೇಳಲಾಗಿತ್ತು.
ಮೊದಲ ಪಾಠ ಮೇಜರ್ ಡೆವಲಪ್ಮೆಂಟ್ಸ್ ಇನ್ ದ ವರ್ಲ್ಡ್ ಹಾಗೂ ಎರಡನೇ ಪಾಠ ಬಿಗಿನಿಂಗ್ ಆಫ್ ಮಾರ್ಡನ್ ಏಜ್. ಇದರಲ್ಲಿ ಕ್ರಿಶ್ಚಿಯಾನಟಿ, ಇಸ್ಲಾಂ, ಕ್ರೊಸೆಡ್, ದ ಮಂಗೋಲ್ಸ್, ಟರ್ಕಿಸ್ ಕಲಿಸಬೇಕಾದ ಪಾಠಗಳು ಇದದು, ಈ ಪಠ್ಯಾಂಶವನ್ನೇ ಆಕರವಾಗಿಟ್ಟುಕೊಂಡು ರಚಿತಗೊಂಡಿದ್ದ ಪ್ರಶ್ನೆ ಪತ್ರಿಕೆ ನೀಡಲಾಗಿದೆ.
ಪ್ರಶ್ನೆ ಪತ್ರಿಕೆಯಲ್ಲಿ ಯಾವುದೇ ದುರುದ್ದೇಶ ಇಲ್ಲ. ಪಠ್ಯಾಂಶಗಳ ಕುರಿತೆ ಪ್ರಶ್ನೆ ಪತ್ರಿಕೆ ರಚಿಸಿದ್ದೇವೆ. ನಮ್ಮಲ್ಲಿ ಯಾವುದೇ ಧರ್ಮ ಶಿಕ್ಷಣ ನೀಡುತ್ತಿಲ್ಲ.
ಮುಂದಿನ ಪಠ್ಯಗಳಲ್ಲಿ ಹಿಂದೂ ಧರ್ಮ, ದಾಸ ಪರಂಪರೆ ಇತ್ಯಾದಿ ಪಠ್ಯಗಳು ಬರಲಿವೆ.
ಆಡಳಿತ ಮಂಡಳಿಯ ಕೋಮಿಗೂ ಪ್ರಶ್ನೆ ಪತ್ರಿಕೆಗೂ ಯಾವುದೇ ಸಂಬಂಧವಿಲ್ಲ.
ಆದರೆ ನಮ್ಮ ಸಂಸ್ಥೆಯ ತೇಜೋವದೆ ಮಾಡಿ ಪೋಷಕರಲ್ಲಿ ಆತಂಕ ಮೂಡಿಸಲಾಗಿದೆ ಎಂದು ಶಾಲಾ ಆಡಳಿತ ಮಂಡಳಿ ಆಕ್ಷೇಪ ವ್ಯಕ್ತಪಡಿಸಿದೆ.
DAKSHINA KANNADA
ಮಂಗಳೂರು : ‘ಮಹೇಶ್’ ಬಸ್ ಮಾಲೀಕ ಆತ್ಮಹತ್ಯೆ..!
ಮಂಗಳೂರು: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರನ್ನು ಮಹೇಶ್ ಬಸ್ ಮಾಲೀಕ ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು ಕದ್ರಿ ಕಂಬಳ ಸಮೀಪ ಇರುವ ಅಪಾರ್ಟ್ ಮೆಂಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಹೇಶ್ ಹೆಸರಿನಲ್ಲಿ ಹಲವಾರು ಸಿಟಿ ಬಸ್ ಗಳು ದಿನನಿತ್ಯ ಸಂಚರಿಸುತ್ತಿದ್ದು, ಜನಮನ್ನಣೆ ಪಡೆದಿದೆ.
ಬಸ್ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ಆಪ್ತ ಬಳಗಕ್ಕೆ ಶಾಕ್ ನೀಡಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ಬೈಕ್ ಅಪಘಾತ: ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಲೆ ಹರಿದ ಲಾರಿ- ಮೂವರು ಸ್ಥಳದಲ್ಲೇ ಸಾವು..!
ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.
ಹಳೆ ಜಂಬರಗಟ್ಟ ನಿವಾಸಿ ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಮೃತ ದುರ್ದೈವಿಗಳು.
ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಸವಾರರ ರಸ್ತೆ ಮೇಲೆ ಬಿದ್ದಿದ್ದಾರೆ.
ಇದೇ ವೇಳೆ ರಭಸವಾಗಿ ಬಂದ ಲಾರಿ ಆ ವ್ಯಕ್ತಿಗಳ ಮೇಲೆ ಹರಿದಿದೆ.
ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
FILM
ಮೋದಿಗೆ ರಕ್ತದಲ್ಲಿ ಪತ್ರ ಬರೆದ ಚಿತ್ರ ನಟ ಪ್ರೇಮ್..!
ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.
‘ಕಾವೇರಿ ನಮ್ಮದು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು ಮನವಿ ಮಾಡಿದ್ದಾರೆ.
ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
- DAKSHINA KANNADA7 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- LATEST NEWS7 days ago
ವಾರವಿಡೀ ಕಾಡಿನಲ್ಲಿ ಸಿಲುಕಿದ್ದ ಯುವಕ- ಮನೆಗೆ ವಾಪಸ್ ಆಗುವಂತೆ ರಕ್ಷಣೆ ಮಾಡಿದ ಸಾಕುನಾಯಿ..!
- DAKSHINA KANNADA7 days ago
Puttur: ಕಾಲೇಜು ವಿದ್ಯಾರ್ಥಿನಿ ಜಿವಾಂತ್ಯ..!
- DAKSHINA KANNADA7 days ago
Ullala: ರೈಲಿನಡಿಗೆ ತಲೆಯಿಟ್ಟು ಅವಿವಾಹಿತ ವ್ಯಕ್ತಿ ಜೀವಾಂತ್ಯ..!