LATEST NEWS
Udupi: ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಸಾಗಾಟಗಾರರ ಮುಷ್ಕರ..!
ಉಡುಪಿ: ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಸಾಗಾಟಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾಡಳಿತ ಮತ್ತು ಸರಕಾರದ ನೀತಿಗಳನ್ನು ಖಂಡಿಸಿ ಲಾರಿ, ಟೆಂಪೋ ಚಾಲಕ, ಮಾಲಕರು ಕಟ್ಟಡ ಸಾಮಾಗ್ರಿ ಸಾಗಾಟವನ್ನು ಸ್ಥಗಿತಗೊಳಿಸಿ ಇಂದು ಅನಿರ್ದಿಷ್ಟವಾದಿ ಮುಷ್ಕರ ಕೈಗೊಂಡಿದ್ದಾರೆ.
ಈ ನಿಟ್ಟಿನಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಗಳಲ್ಲಿ ಲಾರಿಗಳನ್ನು ಪಾರ್ಕಿಂಗ್ ಮಾಡಲಾಗಿದೆ.
ಉದ್ಯಾವರ, ಕಟಪಾಡಿ, ಬ್ರಹ್ಮಾವರ,ಕೋಟ ಸಾಸ್ತಾನ, ಕುಂದಾಪುರ, ಬೈಂದೂರು ಭಾಗದಲ್ಲಿ ರಸ್ತೆ ಬದಿ ಲಾರಿ, ಟೆಂಪೋಗಳು ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡು ಬಂದಿದೆ.
ಒನ್ ಸ್ಟೇಟ್ ಒನ್ ಜಿಪಿಎಸ್, ಲಾರಿಗಳ ಮೇಲೆ ಅಕ್ರಮ ಸಾಗಾಟ ನೆಪದಲ್ಲಿ ಕೇಸ್, ಪರವಾನಿಗೆ ಅವ್ಯವಸ್ಥೆ ಮತ್ತು ಜಿಲ್ಲಾಡಳಿತದ ಏಕಾಏಕಿ ಹೊಸ ನಿಯಮಗಳ ಜಾರಿಯಿಂದ ಸಂಕಷ್ಟಕ್ಕೆ ಒಳಗಾಗಿರುವ ಲಾರಿ ಮಾಲಕರು ಸಮಸ್ಯೆ ಬಗೆ ಹರಿಯುವವರೆಗೆ ಮುಷ್ಕರ ಮುಂದುವರೆಸಲು ನಿರ್ಧಾರವನ್ನು ಮಾಡಿದ್ದಾರೆ.
ಪ್ರತಿಭಟನೆ ಹೀಗೆ ಮುಂದುವರಿದ್ರೆ ಕಟ್ಟಡ ನಿರ್ಮಾಣ ಕಾಮಗಾರಿಗೆ ದೊಡ್ಡ ಹೊಡೆತ ಬೀಳುವ ಸಾಧ್ಯತೆ ಕೂಡ ಇದೆ.
ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಸಾಗಾಟಗಾರರ ಸಂಘದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕಟಪಾಡಿ ಅವರು ಮಾತನಾಡಿ, ಇದು ಲಾರಿಯವರು ದಂಧೆ ಕೋರರು ಎನ್ನುವುದಾದರೆ ನೀವು ಯಾರು? ಈ ಹಿಂದೆ ಇದ್ದ ಅಧಿಕಾರಿಗಳು ಯಾಕೆ ಕ್ರಮ ಕೈಗೊಳ್ಳಲಿಲ್ಲ.
ನೀವು ಅನಾದಿ ಕಾಲದಿಂದಲೂ ಶಿಸ್ತು ಬದ್ದ ಪರವಾನಿಗೆ ವ್ಯವಸ್ಥೆ ಯಾಕೆ ಮಾಡಿಲ್ಲ. ಕೋಟಾ ನೋಟ್ ಪ್ರಿಂಟ್ ಮಾಡಿದ ಹಾಗೆ ನಾವು ಪರವಾನಿಗೆ ಪ್ರಿಂಟ್ ಮಾಡಲು ಆಗುತ್ತದಾ?
ನಮ್ಮನ್ನು ಯಾಕೆ ಬಲಿಪಶು ಮಾಡುತ್ತಿದ್ದೀರಿ? ಲಾರಿಯವರ ಮೇಲೆ ದೊಡ್ಡ ದೊಡ್ಡ ಕೇಸ್ ಹಾಕುತ್ತಿದ್ದಾರೆ.
ಕಟ್ಟಡ ಸಾಮಾಗ್ರಿಗಳು ಇಲ್ಲದಿದ್ದರೆ ಎಲ್ಲರಿಗೂ ಸಮಸ್ಯೆ ಎಂದು ಸರ್ಕಾರದ ನಡೆ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
10ಸಾವಿರಕ್ಕೆ ಇದ್ದ ಒಂದು ಲೋಡ್ ಜಲ್ಲಿ ಕಲ್ಲು ಇವತ್ತು 20ಸಾವಿರಕ್ಕೆ ಹಾಕುತ್ತಿದ್ದಾರೆ.
ಇದಕ್ಕೆ ನೇರ ಕಾರಣ ಜಿಲ್ಲಾಡಳಿತ ನಿಮ್ಮ ಅಹಂಕಾರಕ್ಕೆ ನಮ್ಮ ಉತ್ತರ ನಮ್ಮ ಹೆಣ ಬೀಳುವುದು ಅಷ್ಟೇಮುಂದೆ ಏನೆಂದು ನಮಗೆ ದಾರಿ ಕಾಣುತ್ತಿಲ್ಲ.
ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳ ನಿರ್ಧಾರಗಳೇ ನಮಗೆ ಸಮಸ್ಯೆಯಾಗಿದೆ.
ಇದಕ್ಕೆ ನೇರ ಕಾರಣ ಜಿಲ್ಲಾಡಳಿತ ಎಂದು ಆರೋಪಿಸಿ ಅವರು ನಿಮ್ಮ ಅಹಂಕಾರಕ್ಕೆ ನಮ್ಮ ಉತ್ತರ ನಮ್ಮ ಹೆಣ ಬೀಳುವುದು ಅಷ್ಟೇ.
ಮುಂದೆ ಏನೆಂದು ನಮಗೆ ದಾರಿ ಕಾಣುತ್ತಿಲ್ಲ.
ಒಂದು ವೇಳೆ ಜಿಲ್ಲೆಯಲ್ಲಿ ಲಾರಿ ಮಾಲಕರ ಮೇಲೆ ದಬ್ಬಾಳಿಕೆ ನಡೆದರೆ, ಎಲ್ಲಾ ವಾಹನಗಳನ್ನು ಪೊಲೀಸ್ ಠಾಣೆಯ ಮುಂದೆ ನಿಲ್ಲಿಸಿ ನಮ್ಮನ್ನು ಬಂಧಿಸುವಂತೆ ಆಂದೋಲನ ನಡೆಸುತ್ತವೆ ಎಂದು ಎಚ್ಚರಿಕೆ ನೀಡಿದರು.
ಇಂದು ನಾವು ಬೀದಿಗೆ ಬರಲು ಸರಕಾರ ಮತ್ತು ಜಿಲ್ಲಾಡಳಿತ ಕಾರಣ.
ಈ ಪ್ರತಿಭಟನೆಯಲ್ಲಿ ನ್ಯಾಯ ಸಿಗದೆ ಇದ್ರೆ ನಮ್ಮ ಪ್ರಾಣ ಹೋಗುವ ತನಕ ಪ್ರತಿಭಟನೆ ನಡೆಸುತ್ತೇವೆ ಎಂದು ಪಟ್ಟು ಹಿಡಿದರು.
FILM
ಬದುಕಿನ ಕೊನೆಯವರೆಗೂ ನೋವು, ತಾತ್ಸಾರ, ಅಪವಾದಗಳೇ ಹೆಚ್ಚು-ಸ್ವರ್ಗದಲ್ಲಾದರೂ ನೆಮ್ಮದಿ ಸಿಗಲಿ ಅಮ್ಮಾ…
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಯೋಸಹಜ ಕಾಯಿಲೆಯಿಂದ ನಿನ್ನೆ ನಿಧನರಾಗಿದ್ದಾರೆ. ಇಂದು ನೆಲಮಂಗಲದ ಸೋಲದೇವನಹಳ್ಳಿ ತೋಟದ ಮನೆಯಲ್ಲಿ ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಜನಿಸಿದ ಲೀಲಾವತಿ ಕಲಿತದ್ದು ಕೇವಲ ಎರಡನೇ ತರಗತಿವರೆಗು ಮಾತ್ರ. 9ನೇ ವಯಸ್ಸಿಗೆ ತಂದೆ ಹಾಗೂ ತಾಯಿಯನ್ನು ಕಳೆದುಕೊಳ್ಳುತ್ತಾರೆ..
ಅವರನ್ನು ಕ್ರೈಸ್ತ ಕುಟುಂಬವೊಂದು ಆರೈಕೆ ಮಾಡಿದ್ದರು.
ತುತ್ತು ಅನ್ನಕ್ಕಾಗಿ ಬೇರೆಯವರ ಮನೆಯಲ್ಲಿ ಮುಸುರೆ ತಿಕ್ಕಿ, ಚಾಕರಿ ಮಾಡಿ ಆಕೆ ತನ್ನ ಬಾಲ್ಯವನ್ನು ಕಳೆದರು.
ತುಳು ಚಿತ್ರರಂಗದಲ್ಲಿ ಅಂದಿಗೆ ತುಳು ಸಿನಿಮಾಗಳು ಆರಂಭ ಆದವು. ಹೊಟ್ಟೆ ಹಸಿವನ್ನು ನೀಗಿಸಲು ಚಂದದ ಹೆಣ್ಣು ಮಗಳೋರ್ವಳು ಸಿನಿಮಾದಲ್ಲಿ ಅವಕಾಶ ಕೊಡುವಂತೆ ಅಂಗಲಾಚುತ್ತಾಳೆ. ಅವಳೇ ಮುದ್ದು ಮುದ್ದು ಲೀಲಾ ಕಿರಣ್ ಅಲಿಯಾಸ್ ಇಂದಿನ ಲೆಜೆಂಡೆರಿ ಆಕ್ಟ್ರೆಸ್ ಲೀಲಾವತಿ ಅಮ್ಮ. ಇದರ ಪರಿಣಾಮವಾಗಿ ‘ಸಾವಿರೊಡೊರ್ತಿ ಸಾವಿತ್ರಿ, ದಾರೆದ ಬುಡೆದಿ, ಬಿಸತ್ತಿ ಬಾಬು ಮೊದಲಾದ ತುಳು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.
ಬಣ್ಣದ ಬದುಕಿ ಕಟ್ಟಿಕೊಂಡು ಅವಕಾಶ ಪಡೆದು ಜೀವನ ಸಾಗಿಸಬಹುದು ಎಂಬ ಕನಸಿನೊಂದಿಗೆ ಬೆಂಗಳೂರಿಗೆ ಹೋದ ಲೀಲಮ್ಮ ಅಲ್ಲಿ ಬರಬಾರದ ಕಷ್ಟಗಳನ್ನು ಅನುಭವಿಸಿದ್ರು.
ಆಗ ಆಸರೆಯಾಗಿದ್ದೇ ಮಹಾನ್ ಕಲಾವಿದ ಆಗಿದ್ದ ಮಹಾಲಿಂಗ ಭಾಗವತರ್ ಅವರ ಪ್ರಸಿದ್ಧ ‘ಶ್ರೀ ಸಾಹಿತ್ಯ ಸಾಮ್ರಾಜ್ಯ ಡ್ರಾಮ ಕಂಪೆನಿ. ಯಾವ ಪಾತ್ರ ಕೊಟ್ಟರೂ ಲೀಲಾಜಾಲವಾಗಿ ಅವರು ಅಭಿನಯ ಮಾಡುತ್ತಿದ್ದರು ಲೀಲಾವತಿ ಅಮ್ಮ. ಸುಬ್ಬಯ್ಯ ನಾಯ್ಡು ಅವರ ಪರಿಚಯ ಆಗಿ ‘ಭಕ್ತ ಪ್ರಹ್ಲಾದ’ ಸಿನಿಮಾದಲ್ಲಿ ಒಂದು ಪಾತ್ರವನ್ನು ಗಿಟ್ಟಿಸಿಕೊಂಡರು.
ಅದೇ ಸಂದರ್ಭದಲ್ಲಿ ಮಹಾಲಿಂಗ ಭಾಗವತರ್ ಅವರನ್ನು ಮದುವೆ ಆದ ಲೀಲಾವತಿ ಆ ಮದುವೆಯನ್ನು ರಹಸ್ಯವಾಗಿ ಇಟ್ಟರು. ಆಗ ಹೆಚ್ಚಿನ ನಟಿಯರು ತಮ್ಮ ಬೇಡಿಕೆ ಉಳಿಸಿಕೊಳ್ಳಲು ಮದುವೆಯನ್ನು ಬಹಿರಂಗ ಮಾಡುತ್ತಿರಲಿಲ್ಲ. ಮುಂದೆ ಲೀಲಾವತಿ ಜೀವನದಲ್ಲಿ ಮಹಾಲಿಂಗ ಭಾಗವತರ್ ಅವರು ಬಹಳ ಮುಖ್ಯವಾದ ಪಾತ್ರವನ್ನು ವಹಿಸಿದರು.
ಡಾ. ರಾಜ್ ಕುಮಾರ್ ಹಾಗೂ ಲೀಲಾವತಿ ಅವರದ್ದು ಸೂಪರ್ ಡೂಪರ್ ಕಾಂಬಿನೇಷನ್. ಇವರಿಬ್ಬರ ಅದ್ಭುತ ಅಭಿನಯವನ್ನು ಕಂಡು ರಾಜ್ – ಲೀಲಾವತಿ ಅವರನ್ನು ಗಂಡ ಹೆಂಡತಿ ಎಂದೇ ಕರೆಯಲು ಆರಂಭಿಸಿದರು.
ಆದ್ರೆ ಲೀಲಾವತಿ ಅಮ್ಮ ರಾಜ್ ಅವರನ್ನು ಭಕ್ತಿಯಿಂದ ‘ದೊಡ್ಡೋರು’ ಎಂದೇ ಭಕ್ತಿಯಿಂದ ಕರೆಯುತ್ತಿದ್ದರು. ಡಾ. ರಾಜ್ ಅವರಿಗೆ ಮಾತ್ರ ಲೀಲಾವತಿ ಅಂದರೆ ಬಹಳ ಪ್ರೀತಿ..ಅವರೇ ಲೀಲಾವತಿಯವರಿಗರ ಬರೆದ ಪತ್ರಗಳು ವೈರಲ್ ಆಗಿದ್ದವು.ಇದೀಗ ಲೀಲಾವತಿ ಅಮ್ಮ ನಮ್ಮನೆಲ್ಲಾ ಬಿಟ್ಟು ಬಾರದ ಊರಿಗೆ ತೆರಳಿದ್ದಾರೆ. ಇಂದು ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆದಿದೆ. ಬದುಕಿದ್ದಾಗ ಅಷ್ಟೇನೂ ಸುಖ ಕಾಣದ ಲೀಲಾವತಿ ಅಮ್ಮನವರಿಗೆ ಸ್ವರ್ಗದಲ್ಲಾದರೂ ಸುಖ ನೆಮ್ಮದಿ ಸಿಗಲಿ.
DAKSHINA KANNADA
ಡಿ. 14ರಿಂದ 17 ರವರೆಗೆ “ಆಳ್ವಾಸ್ ವಿರಾಸತ್”
ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ವರ್ಷದ ‘ಆಳ್ವಾಸ್ ವಿರಾಸತ್ 2023’ ಡಿ.14ರಿಂದ 17ರವರೆಗೆ ಮೂಡಬಿದಿರೆಯ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಶುಭಾಶೀರ್ವಾದೊಂದಿಗೆ ನಡೆಯುವ ವಿರಾಸತ್ ಅನ್ನು ದೇಶಕ್ಕಾಗಿ ದೇಹತ್ಯಾಗ ಮಾಡಿದ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರಿಗೆ ಅರ್ಪಣೆ ಮಾಡಲಾಗಿದೆ ಎಂದು ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಡಿ.14ರಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ವಿರಾಸತ್ ಉದ್ಘಾಟಿಸಲಿದ್ದು,ಈ ಬಾರಿಯ ವಿರಾಸತ್ ನಲ್ಲಿ ಬೆನ್ನಿದಯಾಲ್, ವಿಜಯಪ್ರಕಾಶ್, ಶ್ರೇಯಾ ಘೋಷಾಲ್ ಸ್ವರ ಮಾಧುರ್ಯ, ಪ್ರತಿನಿತ್ಯ 13 ಗಂಟೆಗಳ ಕಾಲ 750 ಮಳಿಗೆಗಳಲ್ಲಿ ಪ್ರದರ್ಶನ ಹಾಗೂ ಮಾರಾಟಗಳು ನಡೆಯಲಿವೆ. ಭವ್ಯ ಸಾಂಸ್ಕೃತಿಕ ಮೆರವಣಿಗೆ ಬಳಿಕ ಸಾಂಸ್ಕೃತಿಕ ರಥ ಸಂಚಲನ ಮತ್ತು ರಥಾರತಿ, ಕೃಷಿ ಮೇಳ, ಆಹಾರ ಮೇಳ, ಫಲಪುಷ್ಪ ಮೇಳ, ಕರಕುಶಲ ಮತ್ತು ಪ್ರಾಚ್ಯವಸ್ತು ಪದರ್ಶನ ಮೇಳ, ಚಿತ್ರಕಲಾ ಮೇಳಗಳು ಕಲಾಕೃತಿಗಳ ಪ್ರದರ್ಶನ ನಡೆಯಲಿದೆ. ಸ್ಕೌಟ್ಸ್ ಗೈಡ್ಸ್ ಸಾಹಸಮಯ ಚಟುವಟಿಕೆ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಪತ್ರಿಕಾ ಗೋಷ್ಠಿಯಲ್ಲಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.
BELTHANGADY
ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ವೇದಿಕೆ ಬೆಳ್ತಂಗಡಿ ಇದರ 2023-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ವಾಣಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ, ಕೋಶಾಧಿಕಾರಿಯಾಗಿ ರಂಜಿತ್ ಕಳೆಂಜ, ಜೊತೆ ಕಾರ್ಯದರ್ಶಿಯಾಗಿ ತೀಕ್ಷಿತ್ ಕೆ.ಕಲ್ಬೆಟ್ಟು ದಿಡುಪೆ, ಉಪಾಧ್ಯಕ್ಷರುಗಳಾಗಿ ನಿತಿನ್ ಕಲ್ಮಂಜ ಮತ್ತು ಪ್ರಶಾಂತ್ ಅಂತರ ಕಡಿರುದ್ಯಾವರ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಮೋದ್ ದಿಡುಪೆ, ಕಾನೂನು ಸಲಹೆಗಾರರಾಗಿ ನವೀನ್ ಬಿ.ಕೆ.ಕಲ್ಮಂಜ, ಯಶವಂತ್ ಬನಂದೂರು ಮತ್ತು ಜಯಾನಂದ ಗೌಡ ಬೆಳ್ತಂಗಡಿ ಆಯ್ಕೆಯಾದರು.
ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಯಶವಂತ ಗೌಡ ಪುದುವೆಟ್ಟು, ಮಂಜುನಾಥ ಗೌಡ ಚಾರ್ಮಾಡಿ, ವಿಕ್ರಮ್ ಧರ್ಮಸ್ಥಳ, ಸತೀಶ್ ಬೆಳಾಲು, ಪ್ರಸಾದ್ ಅಡಿಮಾರ್ ಚಾರ್ಮಾಡಿ, ಹೇಮಂತ್ ಕಳಿಯ, ದಿನೇಶ್ ದೇಂತ್ಯಾರು ಕೊಯ್ಯೂರು, ಪ್ರದೀಪ್ ನಾಗಾಜೆ ನಾವೂರು, ಭರತ್ ಗೌಡ ಪುದುವೆಟ್ಟು, ನಿತೇಶ್ ಬೆಳ್ತಂಗಡಿ, ಅಕ್ಷಯ್ ಕುಮಾರ್ ಮಾಚಾರ್, ಕರುಣಾಕರ ಗೌಡ ಉಜಿರೆ, ಗಿರೀಶ್ ನಿಡ್ಲೆ ಮತ್ತು ಕಿಶಾನ್ ಗೌಡ ಸವಣಾಲು ಇವರನ್ನು ಆಯ್ಕೆ ಮಾಡಲಾಯಿತು. ಈ ಸಂಧರ್ಭದಲ್ಲಿ ತಾಲೂಕು ಸಂಘದ ನಿಕಟ ಪೂರ್ವ ಕಾರ್ಯದರ್ಶಿ ಮೋಹನ್ ಗೌಡ ಕೊಯ್ಯೂರು ಉಪಸ್ಥಿತರಿದ್ದರು. ಯಶವಂತ್ ಬನಂದೂರು ಸ್ವಾಗತಿಸಿದರು.ಕಾರ್ಯದರ್ಶಿ ಸುರೇಶ್ ಕೌಡಂಗೆ ವಂದಿಸಿದರು.
- bangalore6 days ago
ಆಸ್ಟ್ರೇಲಿಯಾ ಬೀಚ್ ನಲ್ಲಿ ಮಂಗ್ಳೂರು ಬೆಡಗಿ ಅನುಶ್ರೀ…
- bangalore6 days ago
“ಎಂಚ ಉಲ್ಲಾರ್ ಮರ್ರೆ”…. ಎಂದು ತುಳುವಿನಲ್ಲಿ ಮಾತನಾಡಿದ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್
- LATEST NEWS7 days ago
ಪ್ರಿಯತಮೆಯ ಕೊಂದು ಆಕೆಯ ಮೃತದೇಹವನ್ನು ಸ್ಟೇಟಸ್ ಹಾಕಿದ ಕ್ರೂರಿ..!
- DAKSHINA KANNADA7 days ago
Mangaluru: 4 ತಿಂಗಳ ಮಗುವನ್ನು ಉಸಿರುಕಟ್ಟಿಸಿ ಕೊಂದ ತಾಯಿ ಕೂಡ ಜೀವಾಂತ್ಯ..!