ಉಡುಪಿ:ವಿದ್ಯಾರ್ಥಿಗಳ ಹಣ,ಮೊಬೈಲ್ ಸುಲಿಗೆ: ಇಬ್ಬರು ಆರೋಪಿಗಳ ಬಂಧನ..!
udupi-student-money-mobile-extortion-arrest-of-two-accused..!
ಮಣಿಪಾಲ: ಇತ್ತೀಚೆಗೆ ಮಣಿಪಾಲದ ಕೆ.ಎಫ್ಸಿ ಹೋಟೆಲ್ ಬಳಿ ರಾತ್ರಿ ವೇಳೆಯಲ್ಲಿ ನಡೆದುಕೊಂಡು ಬರುತ್ತಿದ್ದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯನ್ನು ಕಾರ್ನಲ್ಲಿ ಅಡ್ಡಗಟ್ಟಿ ಚಾಕು ತೋರಿಸಿ ಬೆದರಿಸಿ ಮೊಬೈಲ್, ವಾಚ್ ನಗದು ಹಣವನ್ನು ಸುಲಿಗೆ ಮಾಡಿದ ಆರೋಪಿಗಳನ್ನು ಬಂಧಿಸುವಲ್ಲಿ ಮಣಿಪಾಲ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಘಟನೆ ಮಣಿಪಾಲದ ವಿದ್ಯಾರ್ಥಿ ಮತ್ತು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು.
ದಿನಾಂಕ 31.01.2021 ರಂದು ರಾತ್ರಿ ಸುಮಾರು 12:15 ಗಂಟೆ ಸಮಯದಲ್ಲಿ ಮಣಿಪಾಲದ ಕೆ.ಎಫ್.ಸಿ ಬಿಲ್ಡಿಂಗ್ ಬಳಿ ಕುಳಿತು ಮಾತನಾಡುತ್ತಿದ್ದ
ಒಬ್ಬ ವಿದ್ಯಾರ್ಥಿ ಮತ್ತು ಒಬ್ಬ ವಿದ್ಯಾರ್ಥಿನಿಯನ್ನು ನೋಡಿದ ಮೂವರು ಆರೋಪಿಗಳು ದೂರದಲ್ಲಿ ಕಾರ್ ನಿಲ್ಲಿಸಿ ಸಿಗರೇಟ್ ಕೇಳುವ ನೆಪದಲ್ಲಿ ವಿದ್ಯಾರ್ಥಿನಿಯ ಬಳಿ ಬಂದು ಅವಳ ಕುತ್ತಿಗೆಗೆ ಚಾಕು ಹಿಡಿದು ಬೆದರಿಸಿ ಅವರ ಬಳಿಯಿದ್ದ 2 ಮೊಬೈಲ್ ಗಳು 250 ರೂಪಾಯಿ ನಗದು ಹಣ ಹಾಗೂ ಇಯರ್ ಫೋನ್ಗಳನ್ನು ಸುಲಿಗೆ ಮಾಡಿ ಪರಾರಿಯಾಗಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಉಡುಪಿ ಎಸ್ಪಿ ಎನ್.ವಿಷ್ಣುವರ್ಧನ, ಆರೋಪಿಗಳ ಪತ್ತೆಗೆ ಅಡಿಷನಲ್ ಎಸ್ಪಿ ಕುಮಾರಚಂದ್ರ ಮತ್ತು ಡಿವೈಎಸ್ಪಿ ಸುಧಾಕರ ನಾಯಕ್ ಮೇಲುಸ್ತುವಾರಿಯಲ್ಲಿ ಆರೋಪಿಗಳನ್ನು ಪತ್ತೆ ಮಾಡಲು ಮಣಿಪಾಲ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ನಾಯಕತ್ವದಲ್ಲಿ ತಂಡವನ್ನು ರಚನೆ ಮಾಡಿದ್ದರು.
ತನಿಖಾ ತಂಡದ ಸದಸ್ಯರಾದ ಪಿಎಸ್ಐ ರಾಜ್ಶೇಖರ ವಂದಲಿ, ಪ್ರೊ.ಪಿ.ಎಸ್ಐ ನಿರಂಜನ್ ಗೌಡ ಮತ್ತು ದೇವರಾಜ ಬಿರದಾರ, ಎಎಸ್ಐ ಶೈಲೇಶ್ಕುಮಾರ್ , ಹೆಚ್ ಸಿ ಮಹೇಶ್ , ಅಬ್ದುಲ್ ರಾಜಾಕ್, ಥಾಮ್ಸನ್, ಪ್ರಸನ್ನ , ವಿಶ್ವಜಿತ್ , ಪಿಸಿ ಮೊಹಮ್ಮದ್ ರಫೀಕ್, ಆದರ್ಶ ನಾಯ್ಕ ರವರು ಹಾಗೂ ಸಿಡಿಆರ್ ಘಟಕದ ದಿನೇಶ್ ರವರು ಮುಂಬೈ, ಥಾಣೆ, ಬೆಂಗಳೂರು, ಶಿವಮೊಗ್ಗಗಳಲ್ಲಿ ತಿರುಗಾಡಿ
ಆರೋಪಿಗಳಾದ ಶಿವಮೊಗ್ಗದ ಆಶಿಫ್ ಮತ್ತು ದಸ್ತಗೀರ್ ಬೇಗ್ ರನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ಹೋಂಡಾ ಸಿವಿಕ್ MH-04-CT-1339 ಕಾರ್, 2 Android Mobile Phone ಮತ್ತು ಚಾಕುವನ್ನು ವಶಪಡಿಸಿಕೊಂಡಿರುತ್ತಾರೆ.
ಇನ್ನೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು ಪತ್ತೆ ಕಾರ್ಯ ಮುಂದುವರಿದಿದೆ