LATEST NEWS
ಉಡುಪಿ: ಒಂಟಿ ಮಹಿಳೆ ಮನೆಯಲ್ಲಿ ಹಾಡ ಹಗಲೇ ಕಳವು ಪ್ರಕರಣ-ಆರೋಪಿ ಸಹಿತ 10ಗ್ರಾಂ ಚಿನ್ನ ವಶ
ಉಡುಪಿ: ಒಂಟಿ ಮಹಿಳೆ ಇದ್ದ ಸಮಯದಲ್ಲಿ ದರೋಡೆಕೋರರು ಹಗಲು ಸಮಯದಲ್ಲೇ ಒಳಪ್ರವೇಶಿಸಿ ಆಭರಣವನ್ನು ದೋಚಿಕೊಂಡು ಹೋಗಿದ್ದ ಬಗ್ಗೆ ದೂರು ದಾಖಲಾಗಿದ್ದು ಆರೋಪಿಗಳನ್ನು ಪೊಲೀಸರು 24 ಗಂಟೆಯೊಳಗೆ ಪತ್ತೆ ಹಚ್ಚಿದ ಘಟನೆ ಘಟನೆ ಬ್ರಹ್ಮಾವರ ಚೇರ್ಕಾಡಿ ಗ್ರಾಮದ ಕನ್ನಾರು ಎಂಬಲ್ಲಿ ನಡೆದಿದೆ.
ಎಪ್ರಿಲ್ 1 ರಂದು ಮಧ್ಯಾಹ್ನ ಸುಮಾರು 1 ಗಂಟೆಗೆ ವಾಸು ಪೂಜಾರಿ ಮನೆಯಲ್ಲಿ ಅವರ ಹೆಂಡತಿ ಪ್ರೇಮ ಮನೆಯಲ್ಲಿ ಒಂಟಿಯಾಗಿದ್ದು ಮನೆಯ ಹೊರಗಡೆ ಪಾತ್ರೆ ತೊಳೆಯುವಾಗ ಮನೆ ಮನೆಯನ್ನು ಜಾಲಾಡಿ ಸುಮಾರು 10 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಅನ್ನು ಕಳವು ಮಾಡಿಕೊಂಡು ಹೋಗಿದ್ದಾರೆ.
ಇದನ್ನು ಪ್ರೇಮ ತನ್ನ ಗಂಡನಿಗೆ ತಿಳಿಸಿ ಅದರಂತೆ ಬ್ರಹ್ಮಾವರ ಠಾಣೆಯಲ್ಲಿ ಹಗಲು ಕನ್ನ ಕಳವು ಪ್ರಕರಣ ದಾಖಲಾಗಿತ್ತು.
ಪ್ರಕರಣದ ಬೆನ್ನು ಬಿದ್ದ ಪೊಲೀಸರು ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರಾದ ಅನಂತ ಪದ್ಮನಾಭ ರವರ ಮಾರ್ಗದರ್ಶನದಂತೆ ಪಿ.ಎಸ್.ಐ. ಶ್ರೀ ಗುರುನಾಥ ಬಿ ಹಾದಿಮನಿ ಹಾಗೂ ಪಿ.ಎಸ್.ಐ ಶ್ರೀಮತಿ ಮುಕ್ತಾಬಾಯಿ ರವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿದ್ದರು.
ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಯಾವುದೇ ತಾಂತ್ರಿಕ ಸಹಾಯವಿಲ್ಲದೆ ಕೇವಲ ಪೊಲೀಸ್ ಸಂಪ್ರದಾಯಿಕ ವಿಧಾನದಲ್ಲಿ ಸಾರ್ವಜನಿಕರಿಂದ ತಳಮಟ್ಟದ ಮಾಹಿತಿ ಸಂಗ್ರಹಿಸಿ ಆರೋಪಿಯು ಕಳವು ಮಾಡಿದ ದಿವಸ ಧರಿಸಿದ ಬಟ್ಟೆಯ ಜಾಡನ್ನು ಹಿಡಿದು ಕೊನೆಗೂ ಆರೋಪಿಯನ್ನು ಪತ್ತೆ ಮಾಡಿ 50,000/- ರೂ ಬೆಲೆಬಾಳುವ ಚಿನ್ನದ ನೆಕ್ಲೇಸ್ ನ್ನು ವಶಪಡಿಸಿಕೊಂಡಿದ್ದಾರೆ .
ಈ ಮೂಲಕ ಪ್ರಕರಣ ದಾಖಲಾಗಿ 24 ಗಂಟೆಯೊಳಗೆ ಪ್ರಕರಣ ಭೇಧಿಸಿದಂತಾಗಿದೆ.
ಸುರೇಶ್ (31) ಅಲಿಯಾಸ್ ಸೂರ್ಯ ಅಲಿಯಾಸ್ ಕಪಿ ಬಂಧಿತ ಆರೋಪಿ.
ಈತ ಮೂಲತಃ ಪೆಜಮಂಗೂರು ಗ್ರಾಮ ಪ್ರಗತಿ ನಗರ ಬ್ರಹ್ಮಾವರ ತಾಲೂಕುನವನಾಗಿದ್ದು, ಈ ಮೊದಲೇ ಈತ ತಾಮ್ರ , ಚಿನ್ನದ ಕಿವಿಯೋಲೆ , ಉಂಗುರ ಕಳವು ಮಾಡಿದ್ದು ಈತನ ಮೇಲೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಕಳ್ಳತನದ ಪ್ರಕರಣದ ದಾಖಲಾಗಿತ್ತು.
ಆರೋಪಿಯು ಕಾನೂನು ಸಂಘರ್ಷಗೊಳಗಾದ ಬಾಲಕನಾಗಿ 07 ವರ್ಷ ರಿಮ್ಯಾಂಡ್ ಹೋಮ್ ನಲ್ಲಿ ಶಿಕ್ಷೆ ಅನುಭವಿಸಿರುವುದು ತನಿಖೆಯಲ್ಲಿ ಕಂಡುಬಂದಿರುತ್ತದೆ. ಪ್ರಸ್ತುತ ಆರೋಪಿ ಬೆಂಗಳೂರಿನ ಬಿ.ಬಿಎಂ.ಪಿ.ಯಲ್ಲಿ ಕಸ ಗುಡಿಸುವ ಕೆಲಸ ಮಾಡಿಕೊಂಡಿದ್ದಾನೆ.
ಬ್ರಹ್ಮಾವರ ಪೊಲೀಸ್ ಠಾಣಾ ಮೇಲಿನ ಪ್ರಕರಣದಲ್ಲಿ ಉಡುಪಿ ಜಿಲ್ಲಾ ಮಾನ್ಯ ಪೊಲೀಸ್ ಅಧೀಕ್ಷಕರಾದ ವಿಷ್ಣುವರ್ಧನ ಐಪಿಎಸ್, ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಸಿದ್ದಲಿಂಗಪ್ಪ ಕೆ.ಎಸ್.ಪಿ.ಎಸ್ ರವರ ಮಾರ್ಗದರ್ಶನದಂತೆ ಶ್ರೀ ಸುಧಾಕರ ನಾಯ್ಕ, ಪೊಲೀಸ್ ಉಪಾಧೀಕ್ಷಕರು,
ಉಡುಪಿ ಉಪವಿಭಾಗ ಹಾಗೂ ಶ್ರೀ ಅನಂತ ಪದ್ಮನಾಭ, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರರವರ ನಿರ್ದೇಶನದಂತೆ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಬ್ರಹ್ಮಾವರ ಪೊಲೀಸ್ ಉಪನಿರೀಕ್ಷಕರಾದ ಗುರುನಾಥ ಬಿ ಹಾದಿಮನಿ
ಹಾಗೂ ತನಿಖೆ ಪಿ.ಎಸ್.ಐ ಶ್ರೀಮತಿ ಮುಕ್ತಾಬಾಯಿ ಹಾಗೂ ಪ್ರೊಬೆಷನರಿ ಪಿ.ಎಸ್.ಐ. ಸುಬ್ರಹ್ಮಣ್ಯ ದೇವಾಡಿಗ ಹಾಗೂ ಸಿಬ್ಬಂದಿಗಳಾದ ವೆಂಕಟರಮಣ ದೇವಾಡಿಗ , ಪ್ರವೀಣ್ ಶೆಟ್ಟಿಗಾರ್ , ರಾಘವೇಂದ್ರ ಕಾರ್ಕಡ , ದಿಲೀಪ್ ಕುಮಾರ್ , ಅಜ್ಮಲ್ ಮತ್ತು ಚಾಲಕ ಅಣ್ಣಪ್ಪ ಇವರ ಕಾರ್ಯವನ್ನು ಶ್ಲಾಘಿಸಿದ್ದಾರೆ.
LATEST NEWS
ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಉಡುಪಿ : ಪ್ರಧಾನಿ ಮೋದಿ ಚಿಕ್ಕಬಳ್ಳಾಪುರ ಬೆಂಗಳೂರು ಪ್ರವಾಸ ಮಾಡ್ತಿದ್ದಾರೆ. ಮೂರು ಬಾರಿ ಕಾರಣಾಂತರದಿಂದ ಉಡುಪಿಗೆ ಬರಲು ಸಾಧ್ಯವಾಗಿರಲಿಲ್ಲ. ಪ್ರಧಾನಮಂತ್ರಿ ಕಚೇರಿಯಿಂದ ಅನುಮತಿ ಪಡೆದು ಉಡುಪಿ ಬಂದಿದ್ದೇನೆ. ಕರಾವಳಿ ಜನರ ರಕ್ತದಲ್ಲಿ ಹಿಂದುತ್ವ ಇದೆ. ಮೋದಿಯ 10 ವರ್ಷದ ಆಡಳಿತವನ್ನು ಜಗತ್ತು ಕೊಂಡಾಡಿದೆ. ಎಲ್ಲಾ ಅಸಾಧ್ಯಗಳನ್ನು ಪ್ರಧಾನಿ ಮೋದಿ ಸಾಧ್ಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿದ್ದಾರೆ.
ಉಡುಪಿಯಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಡೀ ದೇಶದ ಜನರಲ್ಲಿ ವಿಶ್ವಾಸ -ಭರವಸೆ ಮೂಡಿಸಿದ್ದು ಮೋದಿ. ರಾಮಮಂದಿರ, ಆರ್ಟಿಕಲ್ 370 ರದ್ದು, ಅಭಿವೃದ್ಧಿ ಎಲ್ಲವೂ ಮೋದಿ ಕಾಲದಲ್ಲಿ ಆಗಿದೆ. ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತೆ. ನಾವು ರಕ್ಷಣೆ ಮಾಡ್ತೇವೆ ಎಂದು ಖರ್ಗೆ ಹೇಳ್ತಾರೆ. ಮೋದಿ ಮತ್ತೆ ಪ್ರಧಾನಿ ಆಗಬಾರದು ಅಂತ ಖರ್ಗೆ ಕರೆ ಕೊಡ್ತಾರೆ. ಕಾಂಗ್ರೆಸ್ಸಿಗರು ಅಂಬೇಡ್ಕರ್ ಅವರನ್ನು ಬದುಕಿದ್ದಾಗಲೇ ಕಗ್ಗೊ*ಲೆ ಮಾಡಿದ್ದಾರೆ. ಅಂಬೇಡ್ಕರ್ ರನ್ನು ಸೋಲಿಸಿದ್ದು ಕಾಂಗ್ರೆಸ್ ಪಕ್ಷ. ಬಾಬಾ ಸಾಹೇಬರ ಅಂತ್ಯ ಸಂಸ್ಕಾರಕ್ಕೂ ಅವಕಾಶ ಕೊಟ್ಟಿಲ್ಲ. ಅಂಬೇಡ್ಕರ್ ರ ಪಂಚ ತೀರ್ಥಕ್ಷೇತ್ರ ಅಭಿವೃದ್ಧಿ ಮಾಡಿದ್ದು ಮೋದಿ – ಬಿಜೆಪಿ ಸರಕಾರ ಎಂದರು.
ಇದನ್ನೂ ಓದಿ : ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್
DAKSHINA KANNADA
ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!
ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.
ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.
Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!
ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
DAKSHINA KANNADA
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್
ಬಂಟ್ವಾಳ : ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಪೋರೇಟರ್ ಆಗಿ ಮೇಯರ್ ಆಗಿದ್ದ ಕವಿತಾ ಸನಿಲ್ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದ ಕವಿತಾ ಸನಿಲ್ ವಿಧಾನ ಸಭಾ ಚುನಾವಣೆಯಲ್ಲೂ ಸಾಕಷ್ಟು ಪ್ರಚಾರ ಮಾಡಿದ್ರು. ಸಿಎಂ ಸಿದ್ದರಾಮಯ್ಯ ಅವರಿಗೂ ಉತ್ತಮ ಒಡನಾಟ ಇಟ್ಟುಕೊಂಡಿದ್ದ ಕವಿತಾ ಸನಿಲ್ ಸದ್ಯ ಪಕ್ಷದ ನಾಯಕರ ಬಗ್ಗೆ ಅಸಮಾಧಾನಗೊಂಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ತನಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ಪಕ್ಷ ಚಟುವಟಿಕೆಯಿಂದ ದೂರ ಉಳಿದಿದ್ದರು. ಯಾವುದಾದರು ಒಂದು ನಿಗಮ ಸಿಗಬಹುದು ಎಂಬ ಅವರ ನಿರೀಕ್ಷೆ ಹುಸಿಯಾದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಂಟ್ವಾಳಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಂದ ಬಿಜೆಪಿ ಬಾವುಟ ಪಡೆದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಇದನ್ನೂ ಓದಿ : ಸೂಪರ್ ಹಿಟ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಡೇಟ್ ಫಿಕ್ಸ್!